TOP STORIES:

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು ಹಾರ ಹಾಕುವ ಮೂಲಕ ಹೆಸರು ಗಳಿಸುವ ಮುಂದಾಳೊಚನೆಯಿಂದ ಸಮಾಜದಲ್ಲಿ ನಾಯಕರಾಗಿ ಗುರುತಿಸಲ್ಪಡುವವರೇ ಹೆಚ್ಚು….

ಆದರೆ ಇಲ್ಲೊಬ್ಬ ವ್ಯಕ್ತಿ ಕಾರ್ಕಳ   ಪ್ರತೀಷ್ಠಿತ ಮನೆಯೊಂದರಲಿ ಜನಿಸಿ, ತಂದೆಯಂತೆ, ಸಮಾಜಕ್ಕಾಗಿ ಹತ್ತು ಹಲವಾರು ಸೇವೆಗಳನ್ನು ನೀಡಿರುವ ಒರ್ವ ಶ್ರೇಷ್ಠ ಸೇವಕರ ಬಗೆಗಿನ ಪುಟ್ಟ ಪರಿಚಯ…

ಸಂದೀಪ್ ಕೋಟ್ಯಾನ್, ಭಾರತೀಯ ಸಂಸ್ಕ್ರತಿಯ ಬಗ್ಗೆ ಅಪಾರವಾದ ಗೌರವ ಹೊಂದಿರುವ ಒರ್ವ ವ್ಯಕ್ತಿ, ಉದ್ಯೋಗಕ್ಕಾಗಿ ದುಬೈ ದೇಶಕ್ಕಾಗಿ ಬಂದು ತನ್ನ ವಯಕ್ತಿಕ ಶ್ರಮದಿಂದ ಯಾರೊಬ್ಬರ ಹಂಗಿಲ್ಲದೆ ದುಡಿಯುತ್ತ ನಂತರದಲ್ಲಿ ತನ್ನದೇ ಆದ ಸ್ವಂತ ಉದ್ಯಮವನ್ನು ಪ್ರಾರಂಭಿಸಿದರು, ಪ್ರಾರಂಭದಲ್ಲಿ ಅನೇಕ ರೀತಿಯ ಕಷ್ಟದ ದಿನಗಳನ್ನು ಧೈರ್ಯದಿಂದ ಎದುರಿಸಿ, ಯಾವ ಸಂಘಟನೆ ಸಹಾಯವನ್ನು ಪಡೆಯದೆ, ತನ್ನ ಆತ್ಮಸ್ತೈರ್ಯದ ಮೂಲಕ ತಾನು ಕಲಿತಂತಹ ಕೆಲಸ ಹಾಗೂ ತಾನು ನಂಬಿರುವ ದೇವರ ಮೇಲೆ‌ ಬಾರವನ್ನು ಹಾಕಿ ದುಬೈ ದೇಶದಲ್ಲಿ ಯಶಸ್ವಿ ಉದ್ಯಮಿಯಾಗಿ ಇಂದು ನಿಂತಿರುವ ವ್ಯಕ್ತಿ ಸಂದೀಪ್‌ ಕೋಟ್ಯಾನ್…

ಯಾವ ವ್ಯಕ್ತಿಗೂ ಮೋಸ ವಂಚನೆಯನ್ನು ಮಾಡದೆ ತನ್ನಲ್ಲಿರುವ ಅಪಾರವಾದ ಮಾನವೀಯತೆಯನ್ನು ಬಳಸಿ, ತಂದೆಯಂತೆ ಬಿಲ್ಲವ ಸಂಘಟನೆ ಹಾಗೂ ಬಿರುವೆರ್ ಕುಡ್ಲ ದುಬೈ ಘಟಕದ ಜೊತೆ ತಾನು ಒಬ್ಬರಾಗಿ ಪ್ರತಿಯೊಂದು ವಿಚಾರದಲ್ಲೂ ಸೇವೆಯನ್ನು ನೀಡುತ್ತಿರುವಂತಹ‌ ವ್ಯಕ್ತಿ‌ ಇವರು. ಇಷ್ಟೇ ಅಲ್ಲದೆ ಉದ್ಯೋಗ ಕ್ಷೇತ್ರದಲ್ಲಿ ತನ್ನಿಂದಾಗುವಂತಹ ಯಾವುದೇ ಸಹಕಾರ ವಿದ್ದರೂ ತಕ್ಷಣವೇ ಸ್ಪಂದಿಸುವಂತವರು. ಇವರ ಜೊತೆಗೆ ಬೆಂಬಲವಾಗಿ ನಿಂತಿರುವ ಶ್ರೀಮತಿ ಶ್ವೇತ ಸಂದೀಪ್ ಕೋಟ್ಯಾನ್ ಹಾಗೂ ಇಬ್ಬರು ಮಕ್ಕಳ ಜೊತೆಗಿರುವ ಇವರು ತನ್ನ ಹಿರಿಯ ಮಗನನ್ನು ಬಾಲ್ಯದಿಂದಲೇ ತುಳುಮಾತೃ ಭೂಮಿಯ ಸಂಸ್ಕ್ರತಿಯ ಯನ್ನು ಅರಿಯಲು ಯಕ್ಷಗಾನ ಅಭ್ಯಾಸ‌ ಕೇಂದ್ರಕ್ಕೆ ಸೇರ್ಪಡಿಸಿ, ಯಕ್ಷಗಾನದ ಹಾಗೂ ತುಳು ಮತ್ತು ಕನ್ನಡ ಭಾಷೆಯ ಮಹತ್ವವನ್ನು ತಮ್ಮ ಮಕ್ಕಳಿಗೂ ತಿಳಿಸಿಕೊಡುವಂತಹ ತುಳುನಾಡಿನ‌ ಮಗ ಇವರು…

ಯಾವತ್ತೂ ಯಾವ ವೇದಿಕೆಗೂ ಆಸೆಯನ್ನು ಪಡದೆ, ಯಾವ ಆಮಂತ್ರಣ ಬ್ಯಾನರಿನಲ್ಲೂ‌ ಹೆಸರಿನ ಆಸೆಯನ್ನಿಡದೆ, ಯಾವ ಸಾಮಾಜಿಕ ಜಾಲತಾಣದಲ್ಲೂ ಪ್ರಚಾರದ ಹಂಬಲವನ್ನಿಡದೆ ಸೇವೆಯನ್ನು ನೀಡುತ್ತಿರುವ ಅದ್ಭುತ ಸೇವಕ ಸಂದೀಪ್ ಕೋಟ್ಯಾನ್ ಕಾರ್ಕಳ.

ಇವರಿಗೆ ಇನ್ನಷ್ಟು ಸೇವೆ ಮಾಡುವ ಶಕ್ತಿ ಆ ದೇವರು ಅನುಗ್ರಹಿಸಲಿ ಎಂದು ಈ ಮೂಲಕ ದೇವರಲ್ಲಿ ಪ್ರಾರ್ಥಿಸುತ್ತೇವೆ🙏🏻

ಅಧ್ಯಕ್ಷರು ಹಾಗೂ ಸರ್ವಸದಸ್ಯರು      

ಯೂತ್ ಬಿಲ್ಲವ (ರಿ) ಕಾರ್ಕಳ


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »