TOP STORIES:

ವಿವಾಹ ಆರತಕ್ಷತೆಯ ವೇದಿಕೆಯಲ್ಲಿ ಮಾನವೀಯ ಮೌಲ್ಯ ಮೆರೆದ ಅರುಣ್ ಉಳ್ಳಾಲ್


ಅರುಣ್ ಉಳ್ಳಾಲ್ ಫೇಸ್ ಬುಕ್ ವಾಲ್ನ್ ನಲ್ಲಿ

ಬೆಂಜನಪದವಿನ ಯಮುನಕ್ಕನಿಗೆ ವಿವಾಹ ಕಾಣಿಕೆ

ನಮ್ಮ ಗೃಹಪ್ರವೇಶ ಡಿಜೆಮುಕ್ತವಾಗಿ ನಡೆದಾಗ ಅದನ್ನು ಮೆಚ್ಚಿಕೊಂಡರ ಮಧ್ಯೆ ಕೆಲವು ಅಮಲುಪ್ರಿಯರಲ್ಲಿ ‘ಆಹಾ ಒಳ್ಳೆಯ ತಂತ್ರ..ಸಂಸ್ಕೃತಿ ಕುಟುಂಬ ಈ ಮೂಲಕ ಸಾಕಷ್ಟು ಹಣ ಉಳಿಸಿತು’ ಎಂಬ ಅಗ್ಗದ ಮಾತುಗಳು ಕೇಳಿಬಂದಿತ್ತಂತೆ.‌ ಹೌದು, ಹಣ ಉಳಿಸಿದ್ದು ಸತ್ಯ. ಯಾರ್ಯಾಯ ಮನೆಮಕ್ಕಳಿಗೆ ಕುಡಿಸಿ ನಮ್ಮ ಹಣ ಸಾರ್ಥಕತೆ ಪಡೆಯಬೇಕೆ?

ದುಂದುವೆಚ್ಚ ಅಂದು ಮಾತ್ರವಲ್ಲ ಇಂದೂ ಇಲ್ಲವೇ ಇಲ್ಲ. ಆದರೆ ಇದು ಹಣ ಉಳಿಸುವ ಉದ್ದೇಶವಲ್ಲ.‌ ಡಿಜೆ ಅಮಲಿನ ದುಷ್ಪರಿಣಾಮ ತಪ್ಪಿಸುವ ಆರೋಗ್ಯಕರ ಆಲೋಚನೆ. ನಮ್ಮ ಮದುವೆಯಲ್ಲೂ ಮದ್ಯವೂ ಇಲ್ಲ, ಸಿಗರೇಟಿನ ಹೊಗೆಯಿಲ್ಲ, ಡಿಜೆಯ ಅಬ್ಬರವಿಲ್ಲ. ಹೋ ಈ ಬಾರಿಯೂ ಸಾಕಷ್ಟು ಹಣ ಉಳಿಸಿದ ಜಿಪುಣರು ಎನ್ನುವವರಿಗೆ ಒಂದು ಉತ್ತರ.‌ ಅಲ್ಲದೆ ನಮ್ಮ ಕುಟುಂಬದ ಬಹುದಿನಗಳ ಆಕಾಂಕ್ಷೆ.

ವಿವಾಹ ಆರತಕ್ಷತೆಯ ವೇದಿಕೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಂಜನಪದವಿನಲ್ಲಿ ಗಂಡನನ್ನು ಕಳೆದುಕೊಂಡು ಮಕ್ಕಳ ಭಾಗ್ಯವಿಲ್ಲದೆ, ಕುಟುಂಬದ ಯಾವೊಂದು ಸಹಕಾರವಿಲ್ಲದೆ ಮೇಲಾಗಿ ಕಾಯಿಲೆಯ ನೋವಿನಲ್ಲಿ ಆರ್ಥಿಕ ಸಂಕಷ್ಟದಲ್ಲಿ ದಿನೇ ದಿನೇ ಬಳಲುತ್ತಿರುವ ಯಮುನಕ್ಕನಿಗೆ ಡಿಜೆವಿರೋಧದ ‘ಜಿಪುಣತನ’ದಲ್ಲಿ ಉಳಿಸಿಕೊಂಡ ಮೊತ್ತವನ್ನು ನೀಡಿ ಆಶೀರ್ವಾದ ಪಡೆದುಕೊಂಡೆವು. ಮನೆಯಿಲ್ಲದೆ ಬೀದಿಪಾಲಾಗಿದ್ದ ಯಮುನಕ್ಕನಿಗೆ ಅಂದದ ಮನೆ ಕಟ್ಟಿಸಿಕೊಟ್ಟ ಪುಣ್ಯಾತ್ಮ Padmaraj Ramaiah  ಅಣ್ಣ ಮತ್ತು ಅವರ ಗುರುಬೆಳದಿಂಗಳು ಟ್ರಸ್ಟ್‌ನ ಔದಾರ್ಯವನ್ನು ಕೊಂಡಾಡಿ ದಣಿಯದು. ಈ ಪ್ರಯತ್ನಕ್ಕೆ ಕೈಜೋಡಿಸಿದ ಪಡೀಲಿನ ಮಡಿಲು ಸೇವಾ ಟ್ರಸ್ಟ್ (ರಿ.) ಇದರ ಅಧ್ಯಕ್ಷರಾದ ಪ್ರೀತಿಯ ಅಣ್ಣ ಶ್ರೀ ಗಜೇಂದ್ರ ಪೂಜಾರಿ ಮತ್ತು ಸರ್ವಸದಸ್ಯರಿಗೆ ಹೃತ್ಪೂರ್ವಕ ಧನ್ಯವಾದಗಳು.

ಈ ಸಂದರ್ಭದಲ್ಲಿ ಯಮುನಕ್ಕನ ಮುಖದಲ್ಲಿ ಕಂಡ ನಗು, ತುಂಬಿ ಬಂದ ಕಣ್ಣುಗಳು ನಮ್ಮ ದಾಂಪತ್ಯದ ಬಹುದೊಡ್ಡ ಸೌಭಾಗ್ಯ.‌ ಅದು ಅಕ್ಷಯ ಭಗವದನುಗ್ರಹ.


Related Posts

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ


Share        ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ


Read More »