TOP STORIES:

ವಿವಾಹ ಆರತಕ್ಷತೆಯ ವೇದಿಕೆಯಲ್ಲಿ ಮಾನವೀಯ ಮೌಲ್ಯ ಮೆರೆದ ಅರುಣ್ ಉಳ್ಳಾಲ್


ಅರುಣ್ ಉಳ್ಳಾಲ್ ಫೇಸ್ ಬುಕ್ ವಾಲ್ನ್ ನಲ್ಲಿ

ಬೆಂಜನಪದವಿನ ಯಮುನಕ್ಕನಿಗೆ ವಿವಾಹ ಕಾಣಿಕೆ

ನಮ್ಮ ಗೃಹಪ್ರವೇಶ ಡಿಜೆಮುಕ್ತವಾಗಿ ನಡೆದಾಗ ಅದನ್ನು ಮೆಚ್ಚಿಕೊಂಡರ ಮಧ್ಯೆ ಕೆಲವು ಅಮಲುಪ್ರಿಯರಲ್ಲಿ ‘ಆಹಾ ಒಳ್ಳೆಯ ತಂತ್ರ..ಸಂಸ್ಕೃತಿ ಕುಟುಂಬ ಈ ಮೂಲಕ ಸಾಕಷ್ಟು ಹಣ ಉಳಿಸಿತು’ ಎಂಬ ಅಗ್ಗದ ಮಾತುಗಳು ಕೇಳಿಬಂದಿತ್ತಂತೆ.‌ ಹೌದು, ಹಣ ಉಳಿಸಿದ್ದು ಸತ್ಯ. ಯಾರ್ಯಾಯ ಮನೆಮಕ್ಕಳಿಗೆ ಕುಡಿಸಿ ನಮ್ಮ ಹಣ ಸಾರ್ಥಕತೆ ಪಡೆಯಬೇಕೆ?

ದುಂದುವೆಚ್ಚ ಅಂದು ಮಾತ್ರವಲ್ಲ ಇಂದೂ ಇಲ್ಲವೇ ಇಲ್ಲ. ಆದರೆ ಇದು ಹಣ ಉಳಿಸುವ ಉದ್ದೇಶವಲ್ಲ.‌ ಡಿಜೆ ಅಮಲಿನ ದುಷ್ಪರಿಣಾಮ ತಪ್ಪಿಸುವ ಆರೋಗ್ಯಕರ ಆಲೋಚನೆ. ನಮ್ಮ ಮದುವೆಯಲ್ಲೂ ಮದ್ಯವೂ ಇಲ್ಲ, ಸಿಗರೇಟಿನ ಹೊಗೆಯಿಲ್ಲ, ಡಿಜೆಯ ಅಬ್ಬರವಿಲ್ಲ. ಹೋ ಈ ಬಾರಿಯೂ ಸಾಕಷ್ಟು ಹಣ ಉಳಿಸಿದ ಜಿಪುಣರು ಎನ್ನುವವರಿಗೆ ಒಂದು ಉತ್ತರ.‌ ಅಲ್ಲದೆ ನಮ್ಮ ಕುಟುಂಬದ ಬಹುದಿನಗಳ ಆಕಾಂಕ್ಷೆ.

ವಿವಾಹ ಆರತಕ್ಷತೆಯ ವೇದಿಕೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಂಜನಪದವಿನಲ್ಲಿ ಗಂಡನನ್ನು ಕಳೆದುಕೊಂಡು ಮಕ್ಕಳ ಭಾಗ್ಯವಿಲ್ಲದೆ, ಕುಟುಂಬದ ಯಾವೊಂದು ಸಹಕಾರವಿಲ್ಲದೆ ಮೇಲಾಗಿ ಕಾಯಿಲೆಯ ನೋವಿನಲ್ಲಿ ಆರ್ಥಿಕ ಸಂಕಷ್ಟದಲ್ಲಿ ದಿನೇ ದಿನೇ ಬಳಲುತ್ತಿರುವ ಯಮುನಕ್ಕನಿಗೆ ಡಿಜೆವಿರೋಧದ ‘ಜಿಪುಣತನ’ದಲ್ಲಿ ಉಳಿಸಿಕೊಂಡ ಮೊತ್ತವನ್ನು ನೀಡಿ ಆಶೀರ್ವಾದ ಪಡೆದುಕೊಂಡೆವು. ಮನೆಯಿಲ್ಲದೆ ಬೀದಿಪಾಲಾಗಿದ್ದ ಯಮುನಕ್ಕನಿಗೆ ಅಂದದ ಮನೆ ಕಟ್ಟಿಸಿಕೊಟ್ಟ ಪುಣ್ಯಾತ್ಮ Padmaraj Ramaiah  ಅಣ್ಣ ಮತ್ತು ಅವರ ಗುರುಬೆಳದಿಂಗಳು ಟ್ರಸ್ಟ್‌ನ ಔದಾರ್ಯವನ್ನು ಕೊಂಡಾಡಿ ದಣಿಯದು. ಈ ಪ್ರಯತ್ನಕ್ಕೆ ಕೈಜೋಡಿಸಿದ ಪಡೀಲಿನ ಮಡಿಲು ಸೇವಾ ಟ್ರಸ್ಟ್ (ರಿ.) ಇದರ ಅಧ್ಯಕ್ಷರಾದ ಪ್ರೀತಿಯ ಅಣ್ಣ ಶ್ರೀ ಗಜೇಂದ್ರ ಪೂಜಾರಿ ಮತ್ತು ಸರ್ವಸದಸ್ಯರಿಗೆ ಹೃತ್ಪೂರ್ವಕ ಧನ್ಯವಾದಗಳು.

ಈ ಸಂದರ್ಭದಲ್ಲಿ ಯಮುನಕ್ಕನ ಮುಖದಲ್ಲಿ ಕಂಡ ನಗು, ತುಂಬಿ ಬಂದ ಕಣ್ಣುಗಳು ನಮ್ಮ ದಾಂಪತ್ಯದ ಬಹುದೊಡ್ಡ ಸೌಭಾಗ್ಯ.‌ ಅದು ಅಕ್ಷಯ ಭಗವದನುಗ್ರಹ.


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »