TOP STORIES:

ವಿವಾಹ ಆರತಕ್ಷತೆಯ ವೇದಿಕೆಯಲ್ಲಿ ಮಾನವೀಯ ಮೌಲ್ಯ ಮೆರೆದ ಅರುಣ್ ಉಳ್ಳಾಲ್


ಅರುಣ್ ಉಳ್ಳಾಲ್ ಫೇಸ್ ಬುಕ್ ವಾಲ್ನ್ ನಲ್ಲಿ

ಬೆಂಜನಪದವಿನ ಯಮುನಕ್ಕನಿಗೆ ವಿವಾಹ ಕಾಣಿಕೆ

ನಮ್ಮ ಗೃಹಪ್ರವೇಶ ಡಿಜೆಮುಕ್ತವಾಗಿ ನಡೆದಾಗ ಅದನ್ನು ಮೆಚ್ಚಿಕೊಂಡರ ಮಧ್ಯೆ ಕೆಲವು ಅಮಲುಪ್ರಿಯರಲ್ಲಿ ‘ಆಹಾ ಒಳ್ಳೆಯ ತಂತ್ರ..ಸಂಸ್ಕೃತಿ ಕುಟುಂಬ ಈ ಮೂಲಕ ಸಾಕಷ್ಟು ಹಣ ಉಳಿಸಿತು’ ಎಂಬ ಅಗ್ಗದ ಮಾತುಗಳು ಕೇಳಿಬಂದಿತ್ತಂತೆ.‌ ಹೌದು, ಹಣ ಉಳಿಸಿದ್ದು ಸತ್ಯ. ಯಾರ್ಯಾಯ ಮನೆಮಕ್ಕಳಿಗೆ ಕುಡಿಸಿ ನಮ್ಮ ಹಣ ಸಾರ್ಥಕತೆ ಪಡೆಯಬೇಕೆ?

ದುಂದುವೆಚ್ಚ ಅಂದು ಮಾತ್ರವಲ್ಲ ಇಂದೂ ಇಲ್ಲವೇ ಇಲ್ಲ. ಆದರೆ ಇದು ಹಣ ಉಳಿಸುವ ಉದ್ದೇಶವಲ್ಲ.‌ ಡಿಜೆ ಅಮಲಿನ ದುಷ್ಪರಿಣಾಮ ತಪ್ಪಿಸುವ ಆರೋಗ್ಯಕರ ಆಲೋಚನೆ. ನಮ್ಮ ಮದುವೆಯಲ್ಲೂ ಮದ್ಯವೂ ಇಲ್ಲ, ಸಿಗರೇಟಿನ ಹೊಗೆಯಿಲ್ಲ, ಡಿಜೆಯ ಅಬ್ಬರವಿಲ್ಲ. ಹೋ ಈ ಬಾರಿಯೂ ಸಾಕಷ್ಟು ಹಣ ಉಳಿಸಿದ ಜಿಪುಣರು ಎನ್ನುವವರಿಗೆ ಒಂದು ಉತ್ತರ.‌ ಅಲ್ಲದೆ ನಮ್ಮ ಕುಟುಂಬದ ಬಹುದಿನಗಳ ಆಕಾಂಕ್ಷೆ.

ವಿವಾಹ ಆರತಕ್ಷತೆಯ ವೇದಿಕೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಂಜನಪದವಿನಲ್ಲಿ ಗಂಡನನ್ನು ಕಳೆದುಕೊಂಡು ಮಕ್ಕಳ ಭಾಗ್ಯವಿಲ್ಲದೆ, ಕುಟುಂಬದ ಯಾವೊಂದು ಸಹಕಾರವಿಲ್ಲದೆ ಮೇಲಾಗಿ ಕಾಯಿಲೆಯ ನೋವಿನಲ್ಲಿ ಆರ್ಥಿಕ ಸಂಕಷ್ಟದಲ್ಲಿ ದಿನೇ ದಿನೇ ಬಳಲುತ್ತಿರುವ ಯಮುನಕ್ಕನಿಗೆ ಡಿಜೆವಿರೋಧದ ‘ಜಿಪುಣತನ’ದಲ್ಲಿ ಉಳಿಸಿಕೊಂಡ ಮೊತ್ತವನ್ನು ನೀಡಿ ಆಶೀರ್ವಾದ ಪಡೆದುಕೊಂಡೆವು. ಮನೆಯಿಲ್ಲದೆ ಬೀದಿಪಾಲಾಗಿದ್ದ ಯಮುನಕ್ಕನಿಗೆ ಅಂದದ ಮನೆ ಕಟ್ಟಿಸಿಕೊಟ್ಟ ಪುಣ್ಯಾತ್ಮ Padmaraj Ramaiah  ಅಣ್ಣ ಮತ್ತು ಅವರ ಗುರುಬೆಳದಿಂಗಳು ಟ್ರಸ್ಟ್‌ನ ಔದಾರ್ಯವನ್ನು ಕೊಂಡಾಡಿ ದಣಿಯದು. ಈ ಪ್ರಯತ್ನಕ್ಕೆ ಕೈಜೋಡಿಸಿದ ಪಡೀಲಿನ ಮಡಿಲು ಸೇವಾ ಟ್ರಸ್ಟ್ (ರಿ.) ಇದರ ಅಧ್ಯಕ್ಷರಾದ ಪ್ರೀತಿಯ ಅಣ್ಣ ಶ್ರೀ ಗಜೇಂದ್ರ ಪೂಜಾರಿ ಮತ್ತು ಸರ್ವಸದಸ್ಯರಿಗೆ ಹೃತ್ಪೂರ್ವಕ ಧನ್ಯವಾದಗಳು.

ಈ ಸಂದರ್ಭದಲ್ಲಿ ಯಮುನಕ್ಕನ ಮುಖದಲ್ಲಿ ಕಂಡ ನಗು, ತುಂಬಿ ಬಂದ ಕಣ್ಣುಗಳು ನಮ್ಮ ದಾಂಪತ್ಯದ ಬಹುದೊಡ್ಡ ಸೌಭಾಗ್ಯ.‌ ಅದು ಅಕ್ಷಯ ಭಗವದನುಗ್ರಹ.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »