TOP STORIES:

ವಿವಾಹ ಆರತಕ್ಷತೆಯ ವೇದಿಕೆಯಲ್ಲಿ ಮಾನವೀಯ ಮೌಲ್ಯ ಮೆರೆದ ಅರುಣ್ ಉಳ್ಳಾಲ್


ಅರುಣ್ ಉಳ್ಳಾಲ್ ಫೇಸ್ ಬುಕ್ ವಾಲ್ನ್ ನಲ್ಲಿ

ಬೆಂಜನಪದವಿನ ಯಮುನಕ್ಕನಿಗೆ ವಿವಾಹ ಕಾಣಿಕೆ

ನಮ್ಮ ಗೃಹಪ್ರವೇಶ ಡಿಜೆಮುಕ್ತವಾಗಿ ನಡೆದಾಗ ಅದನ್ನು ಮೆಚ್ಚಿಕೊಂಡರ ಮಧ್ಯೆ ಕೆಲವು ಅಮಲುಪ್ರಿಯರಲ್ಲಿ ‘ಆಹಾ ಒಳ್ಳೆಯ ತಂತ್ರ..ಸಂಸ್ಕೃತಿ ಕುಟುಂಬ ಈ ಮೂಲಕ ಸಾಕಷ್ಟು ಹಣ ಉಳಿಸಿತು’ ಎಂಬ ಅಗ್ಗದ ಮಾತುಗಳು ಕೇಳಿಬಂದಿತ್ತಂತೆ.‌ ಹೌದು, ಹಣ ಉಳಿಸಿದ್ದು ಸತ್ಯ. ಯಾರ್ಯಾಯ ಮನೆಮಕ್ಕಳಿಗೆ ಕುಡಿಸಿ ನಮ್ಮ ಹಣ ಸಾರ್ಥಕತೆ ಪಡೆಯಬೇಕೆ?

ದುಂದುವೆಚ್ಚ ಅಂದು ಮಾತ್ರವಲ್ಲ ಇಂದೂ ಇಲ್ಲವೇ ಇಲ್ಲ. ಆದರೆ ಇದು ಹಣ ಉಳಿಸುವ ಉದ್ದೇಶವಲ್ಲ.‌ ಡಿಜೆ ಅಮಲಿನ ದುಷ್ಪರಿಣಾಮ ತಪ್ಪಿಸುವ ಆರೋಗ್ಯಕರ ಆಲೋಚನೆ. ನಮ್ಮ ಮದುವೆಯಲ್ಲೂ ಮದ್ಯವೂ ಇಲ್ಲ, ಸಿಗರೇಟಿನ ಹೊಗೆಯಿಲ್ಲ, ಡಿಜೆಯ ಅಬ್ಬರವಿಲ್ಲ. ಹೋ ಈ ಬಾರಿಯೂ ಸಾಕಷ್ಟು ಹಣ ಉಳಿಸಿದ ಜಿಪುಣರು ಎನ್ನುವವರಿಗೆ ಒಂದು ಉತ್ತರ.‌ ಅಲ್ಲದೆ ನಮ್ಮ ಕುಟುಂಬದ ಬಹುದಿನಗಳ ಆಕಾಂಕ್ಷೆ.

ವಿವಾಹ ಆರತಕ್ಷತೆಯ ವೇದಿಕೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಂಜನಪದವಿನಲ್ಲಿ ಗಂಡನನ್ನು ಕಳೆದುಕೊಂಡು ಮಕ್ಕಳ ಭಾಗ್ಯವಿಲ್ಲದೆ, ಕುಟುಂಬದ ಯಾವೊಂದು ಸಹಕಾರವಿಲ್ಲದೆ ಮೇಲಾಗಿ ಕಾಯಿಲೆಯ ನೋವಿನಲ್ಲಿ ಆರ್ಥಿಕ ಸಂಕಷ್ಟದಲ್ಲಿ ದಿನೇ ದಿನೇ ಬಳಲುತ್ತಿರುವ ಯಮುನಕ್ಕನಿಗೆ ಡಿಜೆವಿರೋಧದ ‘ಜಿಪುಣತನ’ದಲ್ಲಿ ಉಳಿಸಿಕೊಂಡ ಮೊತ್ತವನ್ನು ನೀಡಿ ಆಶೀರ್ವಾದ ಪಡೆದುಕೊಂಡೆವು. ಮನೆಯಿಲ್ಲದೆ ಬೀದಿಪಾಲಾಗಿದ್ದ ಯಮುನಕ್ಕನಿಗೆ ಅಂದದ ಮನೆ ಕಟ್ಟಿಸಿಕೊಟ್ಟ ಪುಣ್ಯಾತ್ಮ Padmaraj Ramaiah  ಅಣ್ಣ ಮತ್ತು ಅವರ ಗುರುಬೆಳದಿಂಗಳು ಟ್ರಸ್ಟ್‌ನ ಔದಾರ್ಯವನ್ನು ಕೊಂಡಾಡಿ ದಣಿಯದು. ಈ ಪ್ರಯತ್ನಕ್ಕೆ ಕೈಜೋಡಿಸಿದ ಪಡೀಲಿನ ಮಡಿಲು ಸೇವಾ ಟ್ರಸ್ಟ್ (ರಿ.) ಇದರ ಅಧ್ಯಕ್ಷರಾದ ಪ್ರೀತಿಯ ಅಣ್ಣ ಶ್ರೀ ಗಜೇಂದ್ರ ಪೂಜಾರಿ ಮತ್ತು ಸರ್ವಸದಸ್ಯರಿಗೆ ಹೃತ್ಪೂರ್ವಕ ಧನ್ಯವಾದಗಳು.

ಈ ಸಂದರ್ಭದಲ್ಲಿ ಯಮುನಕ್ಕನ ಮುಖದಲ್ಲಿ ಕಂಡ ನಗು, ತುಂಬಿ ಬಂದ ಕಣ್ಣುಗಳು ನಮ್ಮ ದಾಂಪತ್ಯದ ಬಹುದೊಡ್ಡ ಸೌಭಾಗ್ಯ.‌ ಅದು ಅಕ್ಷಯ ಭಗವದನುಗ್ರಹ.


Related Posts

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »