TOP STORIES:

ಗೆಜ್ಜೆಗಿರಿ ನಂದನ ಬಿತ್ತಿಲಿನ ಆನುವಂಶಿಕ ಮೊಕ್ತೇಸರರಾದ, ಹಿರಿಯ ನಾಟಿ ವೈದ್ಯೆ ಲೀಲಾವತಿ ಪೂಜಾರಿ ಅವರಿಗೆ ಕರ್ನಾಟಕ ಜಾನಪದ ಪ್ರಶಸ್ತಿ..


ಪುತ್ತೂರು, ನ. 4 : ಕಾರಣಿಕ ಶಕ್ತಿಗಳಾದ ಕೋಟಿ-ಚೆನ್ನಯ, ದೇಯಿಬೈದೇತಿ ಮೂಲಸ್ಥಾನ ಗೆಜ್ಜೆಗಿರಿ ನಂದನಬಿತ್ತಿಲು ನಿವಾಸಿ ನಾಟಿವೈದ್ಯೆ ಲೀಲಾವತಿ ಬೈದೇತಿ (77) ಅವರು ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಪಡುಮಲೆಯಲ್ಲಿನ ಪ್ರತಿ ಮರ-ಗಿಡ-ಬಳ್ಳಿಗಳಲ್ಲಿ ಸಂಜೀವಿನಿಯಂತಹ ಔಷಧೀಯ ದೃವ್ಯಗುಣಗಳಿವೆ ಎಂಬ ನಂಬಿಕೆ ಇದೆ. ಈ ಪರಿಸರದ ಲೀಲಾವತಿ ನಾಟಿ ವೈದ್ಯರಾಗಿ ಚಿರಪರಿಚಿತರು.

ಸಾವಿರಾರು ಮಂದಿಯ ಬದುಕಿನಲ್ಲಿ ಅಶಾ ಕಿರಣ ಮೂಡಿಸಿರುವುದರೊಂದಿಗೆ ನಾಟಿ

ವೈದ್ಯವನ್ನು ಸೇವಾ ಯಜ್ಞದಂತೆ ನಡೆಸಿಕೊಂಡು ಬರುತ್ತಿದ್ದಾರೆ. ಮುಖ್ಯವಾಗಿ ಸರ್ಪಸುತ್ತು, ಕೆಂಪು, ದೃಷ್ಟಿ, ಬೆಸುರುಪು, ಸೊರಿಯಾಸಿಸ್-ಚರ್ಮ ರೋಗವನ್ನೂ ಪರಿಹರಿಸುವ ಚಿಕಿತ್ಸೆ ನೀಡುವಲ್ಲಿ ಪ್ರಖ್ಯಾತರು.

ಮಕ್ಕಳ ಚಿಕಿತ್ಸೆ, ಸಂಧಿವಾತ, ನೋವಿನ ತೈಲ ಅಲ್ಲದೆ ಇವರು ತಯಾರಿಸಿ ಕೊಡುವ ದೇಸೀ ಔಷಧಗಳಿಗೆ ಮತ್ತು ಕೇಶಕಾಂತಿ ತೈಲ, ದೇಯಿ-ಬೈದ್ಯೆತಿ ತೈಲಕ್ಕೆ ಹಲವಾರು ರಾಜ್ಯದಿಂದ ಬೇಡಿಕೆಗಳಿವೆ.

2016 ರಲ್ಲಿ ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ನಡೆದ ಮಹಿಳಾ ಸಮಾಗಮ ಸಂದರ್ಭದಲಿ ಸಮ್ಮಾನ ಪುರಸ್ಕಾರ ಸಂದಿದೆ. ಕೋಟಿ-ಚೆನ್ನಯ, ದೇಯಿ ಬೈದೇತಿ ಮೂಲಸ್ಥಾನ ಗೆಜ್ಜೆಗಿರಿಯಯ ನಂದನಬಿತ್ತಿಲಿನಲ್ಲಿ ನಾಟಿ ವೈದ್ಯ ಪದ್ಧತಿಯನ್ನು ಮುಂದುವರಿಸಿಕೊಂಡು ಬಂದಿದ್ದಾರೆ.

ಕುಟುಂಬದ ಹೆಸರಿನಲ್ಲಿ ‘ವೈದ್ಯೆ’ ಎನ್ನುವ ವಿಶೇಷಣವನ್ನು ಪಡುಮಲೆಯ ಬಲ್ಲಾಳರಿಂದ ಪಡೆದ ಸಾರ್ಥಕತೆಯ ಗೌರವ. ದೇಯಿಬೈದ್ಯೆದಿ ಬಳಸುವ ಮದ್ದಿನಗಿಂಡಿಯಲ್ಲಿ ಔಷಧ ನೀಡುವ ಇಂದಿಗೂ ಸರ್ಪರೊಗಗಳಿಗೆ ಮದ್ದನ್ನು ಮಾಡುವ ಇವರ ಕೈಗುಣದ ಬಗ್ಗೆ ಜನರಿಗೆ ಅಪಾರ ಭಕ್ತಿ, ಶ್ರದ್ಧೆ ಮತು ಗೌರವದ ವಿಶ್ವಾಸ. ಸಾವಿರಾರು ಮಂದಿಯ ಬದುಕಿನ ಸಂಕಟವನ್ನು ದೂರಮಾಡುತ್ತಿರುವ ಸಂಜೀವಿನಿ ಸಸ್ಯೌಷಧ ಜ್ಞಾನ ಪರಂಪರೆಯಿಂದ ಸಂರಕ್ಷಿಸಿಕೊಂಡು ಬಂದಿರುವ ಇವರ ಮನೆತನ ಮತು ಇವರು ನೀಡುವ ಪ್ರತಿ ಔಷಧಿಯಲ್ಲಿ ಅಮೃತಸಿದ್ಧಿ ನೀಡುವ ದೇಯಿಬೈದ್ಯೆದಿ ಶ್ರೀ ರಕ್ಷೆ ಆಶೀರ್ವಾದ ಇರಲಿದೆ ಎಂಬುದು ಜನರ ವಿಶ್ವಾಸವಾಗಿದೆ.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »