TOP STORIES:

FOLLOW US

ಗೆಜ್ಜೆಗಿರಿ ನಂದನ ಬಿತ್ತಿಲಿನ ಆನುವಂಶಿಕ ಮೊಕ್ತೇಸರರಾದ, ಹಿರಿಯ ನಾಟಿ ವೈದ್ಯೆ ಲೀಲಾವತಿ ಪೂಜಾರಿ ಅವರಿಗೆ ಕರ್ನಾಟಕ ಜಾನಪದ ಪ್ರಶಸ್ತಿ..


ಪುತ್ತೂರು, ನ. 4 : ಕಾರಣಿಕ ಶಕ್ತಿಗಳಾದ ಕೋಟಿ-ಚೆನ್ನಯ, ದೇಯಿಬೈದೇತಿ ಮೂಲಸ್ಥಾನ ಗೆಜ್ಜೆಗಿರಿ ನಂದನಬಿತ್ತಿಲು ನಿವಾಸಿ ನಾಟಿವೈದ್ಯೆ ಲೀಲಾವತಿ ಬೈದೇತಿ (77) ಅವರು ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಪಡುಮಲೆಯಲ್ಲಿನ ಪ್ರತಿ ಮರ-ಗಿಡ-ಬಳ್ಳಿಗಳಲ್ಲಿ ಸಂಜೀವಿನಿಯಂತಹ ಔಷಧೀಯ ದೃವ್ಯಗುಣಗಳಿವೆ ಎಂಬ ನಂಬಿಕೆ ಇದೆ. ಈ ಪರಿಸರದ ಲೀಲಾವತಿ ನಾಟಿ ವೈದ್ಯರಾಗಿ ಚಿರಪರಿಚಿತರು.

ಸಾವಿರಾರು ಮಂದಿಯ ಬದುಕಿನಲ್ಲಿ ಅಶಾ ಕಿರಣ ಮೂಡಿಸಿರುವುದರೊಂದಿಗೆ ನಾಟಿ

ವೈದ್ಯವನ್ನು ಸೇವಾ ಯಜ್ಞದಂತೆ ನಡೆಸಿಕೊಂಡು ಬರುತ್ತಿದ್ದಾರೆ. ಮುಖ್ಯವಾಗಿ ಸರ್ಪಸುತ್ತು, ಕೆಂಪು, ದೃಷ್ಟಿ, ಬೆಸುರುಪು, ಸೊರಿಯಾಸಿಸ್-ಚರ್ಮ ರೋಗವನ್ನೂ ಪರಿಹರಿಸುವ ಚಿಕಿತ್ಸೆ ನೀಡುವಲ್ಲಿ ಪ್ರಖ್ಯಾತರು.

ಮಕ್ಕಳ ಚಿಕಿತ್ಸೆ, ಸಂಧಿವಾತ, ನೋವಿನ ತೈಲ ಅಲ್ಲದೆ ಇವರು ತಯಾರಿಸಿ ಕೊಡುವ ದೇಸೀ ಔಷಧಗಳಿಗೆ ಮತ್ತು ಕೇಶಕಾಂತಿ ತೈಲ, ದೇಯಿ-ಬೈದ್ಯೆತಿ ತೈಲಕ್ಕೆ ಹಲವಾರು ರಾಜ್ಯದಿಂದ ಬೇಡಿಕೆಗಳಿವೆ.

2016 ರಲ್ಲಿ ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ನಡೆದ ಮಹಿಳಾ ಸಮಾಗಮ ಸಂದರ್ಭದಲಿ ಸಮ್ಮಾನ ಪುರಸ್ಕಾರ ಸಂದಿದೆ. ಕೋಟಿ-ಚೆನ್ನಯ, ದೇಯಿ ಬೈದೇತಿ ಮೂಲಸ್ಥಾನ ಗೆಜ್ಜೆಗಿರಿಯಯ ನಂದನಬಿತ್ತಿಲಿನಲ್ಲಿ ನಾಟಿ ವೈದ್ಯ ಪದ್ಧತಿಯನ್ನು ಮುಂದುವರಿಸಿಕೊಂಡು ಬಂದಿದ್ದಾರೆ.

ಕುಟುಂಬದ ಹೆಸರಿನಲ್ಲಿ ‘ವೈದ್ಯೆ’ ಎನ್ನುವ ವಿಶೇಷಣವನ್ನು ಪಡುಮಲೆಯ ಬಲ್ಲಾಳರಿಂದ ಪಡೆದ ಸಾರ್ಥಕತೆಯ ಗೌರವ. ದೇಯಿಬೈದ್ಯೆದಿ ಬಳಸುವ ಮದ್ದಿನಗಿಂಡಿಯಲ್ಲಿ ಔಷಧ ನೀಡುವ ಇಂದಿಗೂ ಸರ್ಪರೊಗಗಳಿಗೆ ಮದ್ದನ್ನು ಮಾಡುವ ಇವರ ಕೈಗುಣದ ಬಗ್ಗೆ ಜನರಿಗೆ ಅಪಾರ ಭಕ್ತಿ, ಶ್ರದ್ಧೆ ಮತು ಗೌರವದ ವಿಶ್ವಾಸ. ಸಾವಿರಾರು ಮಂದಿಯ ಬದುಕಿನ ಸಂಕಟವನ್ನು ದೂರಮಾಡುತ್ತಿರುವ ಸಂಜೀವಿನಿ ಸಸ್ಯೌಷಧ ಜ್ಞಾನ ಪರಂಪರೆಯಿಂದ ಸಂರಕ್ಷಿಸಿಕೊಂಡು ಬಂದಿರುವ ಇವರ ಮನೆತನ ಮತು ಇವರು ನೀಡುವ ಪ್ರತಿ ಔಷಧಿಯಲ್ಲಿ ಅಮೃತಸಿದ್ಧಿ ನೀಡುವ ದೇಯಿಬೈದ್ಯೆದಿ ಶ್ರೀ ರಕ್ಷೆ ಆಶೀರ್ವಾದ ಇರಲಿದೆ ಎಂಬುದು ಜನರ ವಿಶ್ವಾಸವಾಗಿದೆ.


Share:

More Posts

Category

Send Us A Message

Related Posts

ACP ರೀನಾ ಸುವರ್ಣಗೆ ಜೀ ಕನ್ನಡ ನ್ಯೂಸ್‌ ಅಚೀವರ್ಸ್‌ ಅವಾರ್ಡ್ಸ್‌- 2025


Share       3ನೇ ವಾರ್ಷಿಕೋತ್ಸವದ ಅಂಗವಾಗಿ ಜೀ ಕನ್ನಡ ನ್ಯೂಸ್‌ ವತಿಯಿಂದ, Zee Achievers Awards ಕಾರ್ಯಕ್ರಮವನ್ನು ದಿ ರಿಟ್ಸ್‌ ಕಾರ್ಲ್‌ಟರ್ನ್‌ನಲ್ಲಿ ಆಯೋಜಿಸಲಾಗಿತ್ತು, ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯಾತಿಗಣ್ಯರನ್ನು ಗುರುತಿಸಿ ಜೀ ಕನ್ನಡ


Read More »

ಮುಂಬಯಿ ಎನ್‌ಸಿಪಿ (ಎಸ್‌ಪಿ) ಈಶಾನ್ಯ ಜಿಲ್ಲಾ ನಿರೀಕ್ಷಕರಾಗಿ ಲಕ್ಷ್ಮಣ್ ಸಿ. ಪೂಜಾರಿ ಚಿತ್ರಾಪು ಆಯ್ಕೆ


Share       ಮುಂಬಯಿ, ಮಾ. 21: ಎನ್‌ಸಿಪಿ (ಎಸ್‌ಪಿ) ಈಶಾನ್ಯ (ಉತ್ತರ ಮುಂಬಯಿ) ಜಿಲ್ಲಾ ನಿರೀಕ್ಷಕರಾಗಿ ತುಳು-ಕನ್ನಡಿಗಲಕ್ಷ್ಮಣ್ ಸಿ. ಪೂಜಾರಿ ಚಿತ್ರಾಪು ಅವರನ್ನು ಪಕ್ಷದ ಅಧ್ಯಕ್ಷೆ ರಾಖಿ ಜಾಧವ್ ಅವರು ನೇಮಕ ಮಾಡಿದ್ದಾರೆ. ಮಂಗಳೂರು ಚಿತ್ರಾಪು


Read More »

ಬಿಲ್ಲವಾಸ್ ಫ್ಯಾಮಿಲಿ ದುಬೈ ಸಂಘಟನೆ ; ಉಪ ಪೊಲೀಸ್ ಅಧಿಕ್ಷಕರಾದ ಎಸ್ ಮಹೇಶ್ ಕುಮಾರ್ ರವರ ಮನದಾಳದ ಮಾತು


Share       ಬಿಲ್ಲವಾಸ್ ಫ್ಯಾಮಿಲಿ ದುಬೈ, ಸಮುದಾಯದ ಸಾಮಾಜಿಕ ಚಟುವಟಿಕೆಗಳಲ್ಲಿ ಮಂಚೂಣಿ ಯಲ್ಲಿರುವ ಸಂಘಟನೆ. ಇತ್ತೀಚೆಗೆ ಖಾಸಗಿ ಕಾರ್ಯಕ್ರಮದ ನಿಮಿತ್ತ ದುಬೈಗೆ ಪ್ರಯಾಣ ಬೆಳೆಸಿದಾಗ ಈ ಸಂಘಟನೆಯ ಕಾರ್ಯವೈಖರಿ ಯನ್ನು ಕಣ್ಣಾರೆ ನೋಡುವ ಅವಕಾಶ ಒದಗಿ


Read More »

ನಾರಾಯಣ ಗುರುಗಳ ತತ್ವದಂತೆ ಎಲ್ಲರೂ ಜೊತೆಗೂಡಿ ಮುನ್ನೆಡೆಯಬೇಕು : ಪದ್ಮರಾಜ್ ಆರ್ ಪೂಜಾರಿ


Share       ಬಂಟ್ವಾಳ: ಯುವವಾಹಿನಿ(ರಿ.) ಮಾಣಿ ಘಟಕದ 2025-26 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭ ದಿನಾಂಕ 10-03-2025 ರ ಸೋಮವಾರದಂದು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದ ನೂತನ ನಿವೇಶನದಲ್ಲಿ ಜರುಗಿತು. ಪದಗ್ರಹಣ


Read More »

ಕೊಲ್ಲಿ ರಾಷ್ಟ್ರ ಕತಾ‌ರ್ ದೇಶದಲ್ಲಿ ಕತಾರ್ ಬಿಲ್ಲವಸ್ ಸಂಘದ ಮೊಟ್ಟ ಮೊದಲ ಬಾರಿಗೆ ಮಹಿಳಾ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ಅಪರ್ಣ ಶರತ್


Share       ಕೊಲ್ಲಿ ರಾಷ್ಟ್ರ ಕತಾ‌ರ್ ದೇಶದಲ್ಲಿ ನಮ್ಮ ತುಳುವರು ಹಲವಾರು ವರ್ಷಗಳಿಂದ ವಾಸವಿದ್ದಿದ್ದು, ಇಂದಿಗೂ ತುಳುವ ಮಣ್ಣಿನ ಪ್ರೀತಿಯನ್ನು ಮರೆತಿಲ್ಲ. ತುಳುನಾಡಿನ ಸಂಸ್ಕೃತಿ, ಆಚಾರ-ವಿಚಾರಗಳನ್ನು ಮರೆಯದೆ ಇಂದಿಗೂ ತಾವು ನೆಲೆ ನಿಂತ ಮಣ್ಣಿನಲ್ಲಿ ಸಂಭ್ರಮಿಸುತ್ತಾರೆ


Read More »

ದಮ್ಮಾಮ್: ಸೌದಿ ಬಿಲ್ಲವಾಸ್ ದಮ್ಮಾಮ್ ಸಂಘದ ಮಹಾಸಭೆ


Share       ದಮ್ಮಾಮ್: ಶ್ರೀ ನಾರಾಯಣ ಗುರು ಅವರ ತತ್ವ ಸಂದೇಶಗಳನ್ನು ಅಳವಡಿಸಿಕೊಂಡು ದಮ್ಮಾಮ್ ಬಿಲ್ಲವಾಸ್ ಸೌದಿ ಅರೇಬಿಯ ಸಂಘವನ್ನು ಮುನ್ನಡೆಸಬೇಕೆಂದು ಹಾಗು ಸಮಾಜದಲ್ಲಿರುವ ಶೋಷಿತರ , ಅಸಹಾಯಕರ ಮತ್ತು ಆರ್ಥಿಕವಾಗಿ ಹಿಂದುಳಿದವರಿಗೆ ಸಹಾಯ ಹಾಗು


Read More »