TOP STORIES:

ಗೆಜ್ಜೆಗಿರಿ ನಂದನ ಬಿತ್ತಿಲಿನ ಆನುವಂಶಿಕ ಮೊಕ್ತೇಸರರಾದ, ಹಿರಿಯ ನಾಟಿ ವೈದ್ಯೆ ಲೀಲಾವತಿ ಪೂಜಾರಿ ಅವರಿಗೆ ಕರ್ನಾಟಕ ಜಾನಪದ ಪ್ರಶಸ್ತಿ..


ಪುತ್ತೂರು, ನ. 4 : ಕಾರಣಿಕ ಶಕ್ತಿಗಳಾದ ಕೋಟಿ-ಚೆನ್ನಯ, ದೇಯಿಬೈದೇತಿ ಮೂಲಸ್ಥಾನ ಗೆಜ್ಜೆಗಿರಿ ನಂದನಬಿತ್ತಿಲು ನಿವಾಸಿ ನಾಟಿವೈದ್ಯೆ ಲೀಲಾವತಿ ಬೈದೇತಿ (77) ಅವರು ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಪಡುಮಲೆಯಲ್ಲಿನ ಪ್ರತಿ ಮರ-ಗಿಡ-ಬಳ್ಳಿಗಳಲ್ಲಿ ಸಂಜೀವಿನಿಯಂತಹ ಔಷಧೀಯ ದೃವ್ಯಗುಣಗಳಿವೆ ಎಂಬ ನಂಬಿಕೆ ಇದೆ. ಈ ಪರಿಸರದ ಲೀಲಾವತಿ ನಾಟಿ ವೈದ್ಯರಾಗಿ ಚಿರಪರಿಚಿತರು.

ಸಾವಿರಾರು ಮಂದಿಯ ಬದುಕಿನಲ್ಲಿ ಅಶಾ ಕಿರಣ ಮೂಡಿಸಿರುವುದರೊಂದಿಗೆ ನಾಟಿ

ವೈದ್ಯವನ್ನು ಸೇವಾ ಯಜ್ಞದಂತೆ ನಡೆಸಿಕೊಂಡು ಬರುತ್ತಿದ್ದಾರೆ. ಮುಖ್ಯವಾಗಿ ಸರ್ಪಸುತ್ತು, ಕೆಂಪು, ದೃಷ್ಟಿ, ಬೆಸುರುಪು, ಸೊರಿಯಾಸಿಸ್-ಚರ್ಮ ರೋಗವನ್ನೂ ಪರಿಹರಿಸುವ ಚಿಕಿತ್ಸೆ ನೀಡುವಲ್ಲಿ ಪ್ರಖ್ಯಾತರು.

ಮಕ್ಕಳ ಚಿಕಿತ್ಸೆ, ಸಂಧಿವಾತ, ನೋವಿನ ತೈಲ ಅಲ್ಲದೆ ಇವರು ತಯಾರಿಸಿ ಕೊಡುವ ದೇಸೀ ಔಷಧಗಳಿಗೆ ಮತ್ತು ಕೇಶಕಾಂತಿ ತೈಲ, ದೇಯಿ-ಬೈದ್ಯೆತಿ ತೈಲಕ್ಕೆ ಹಲವಾರು ರಾಜ್ಯದಿಂದ ಬೇಡಿಕೆಗಳಿವೆ.

2016 ರಲ್ಲಿ ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ನಡೆದ ಮಹಿಳಾ ಸಮಾಗಮ ಸಂದರ್ಭದಲಿ ಸಮ್ಮಾನ ಪುರಸ್ಕಾರ ಸಂದಿದೆ. ಕೋಟಿ-ಚೆನ್ನಯ, ದೇಯಿ ಬೈದೇತಿ ಮೂಲಸ್ಥಾನ ಗೆಜ್ಜೆಗಿರಿಯಯ ನಂದನಬಿತ್ತಿಲಿನಲ್ಲಿ ನಾಟಿ ವೈದ್ಯ ಪದ್ಧತಿಯನ್ನು ಮುಂದುವರಿಸಿಕೊಂಡು ಬಂದಿದ್ದಾರೆ.

ಕುಟುಂಬದ ಹೆಸರಿನಲ್ಲಿ ‘ವೈದ್ಯೆ’ ಎನ್ನುವ ವಿಶೇಷಣವನ್ನು ಪಡುಮಲೆಯ ಬಲ್ಲಾಳರಿಂದ ಪಡೆದ ಸಾರ್ಥಕತೆಯ ಗೌರವ. ದೇಯಿಬೈದ್ಯೆದಿ ಬಳಸುವ ಮದ್ದಿನಗಿಂಡಿಯಲ್ಲಿ ಔಷಧ ನೀಡುವ ಇಂದಿಗೂ ಸರ್ಪರೊಗಗಳಿಗೆ ಮದ್ದನ್ನು ಮಾಡುವ ಇವರ ಕೈಗುಣದ ಬಗ್ಗೆ ಜನರಿಗೆ ಅಪಾರ ಭಕ್ತಿ, ಶ್ರದ್ಧೆ ಮತು ಗೌರವದ ವಿಶ್ವಾಸ. ಸಾವಿರಾರು ಮಂದಿಯ ಬದುಕಿನ ಸಂಕಟವನ್ನು ದೂರಮಾಡುತ್ತಿರುವ ಸಂಜೀವಿನಿ ಸಸ್ಯೌಷಧ ಜ್ಞಾನ ಪರಂಪರೆಯಿಂದ ಸಂರಕ್ಷಿಸಿಕೊಂಡು ಬಂದಿರುವ ಇವರ ಮನೆತನ ಮತು ಇವರು ನೀಡುವ ಪ್ರತಿ ಔಷಧಿಯಲ್ಲಿ ಅಮೃತಸಿದ್ಧಿ ನೀಡುವ ದೇಯಿಬೈದ್ಯೆದಿ ಶ್ರೀ ರಕ್ಷೆ ಆಶೀರ್ವಾದ ಇರಲಿದೆ ಎಂಬುದು ಜನರ ವಿಶ್ವಾಸವಾಗಿದೆ.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »