TOP STORIES:

ಕೇರಳದ ಕಾಸರಗೋಡಿನ ಬಿರುವೆರ್ ಕುಡ್ಲ (ರಿ)ಮಂಜೇಶ್ವರ ತಾಲೂಕು ತಂಡದ ವತಿಯಿಂದ 6 ನೆಯ ಸೇವಾಯೋಜನೆ


ತುಳುನಾಡಿನ ಹಲವಾರು ಬಡಕುಟುಂಬಗಳ ಕಣ್ಣೀರೊರಸಿ ಅವರ ನೇರವಿಗೆ ಕಾರಣವಾದ ಬಲಿಷ್ಠ ಹಾಗೂ ಪ್ರಸಿದ್ದಿ ಪಡೆದ ಸಂಘಟನೆ ಫ್ರೆಂಡ್ಸ್ ಬಲ್ಲಾಳ್ಬಾಗ್  ಬಿರುವೆರ್ ಕುಡ್ಲ ಇದರ ಸ್ಥಾಪಕಾಧ್ಯಕ್ಷರಾದ  ಶ್ರೀಯುತ ಉದಯ ಪೂಜಾರಿಯವರ ವ್ಯಕ್ತಿತ್ವ, ಮನುಷ್ಯತ್ವ ಹಾಗೂ ಸಮಾಜಮುಖಿ ಕೆಲಸಗಳ ಪ್ರೇರಣೆಯಿಂದ ಬಿರುವೆರ್ ಕುಡ್ಲ ಸಂಘಟನೆಯ ಅನೇಕ ಶಾಖೆಗಳು ಈಗ ತುಳುನಾಡಿನಾದ್ಯಾಂತ ಕವಲೊಡೆದು ಅಶಕ್ತರಿಗೆ ನೇರವಾಗುತ್ತಾ ಬರುತ್ತಿವೆ. ಇಂತಹ ಶಾಖೆಗಳಲ್ಲಿ ಒಂದು ಕೇರಳದ ಕಾಸರಗೋಡಿನ ಬಿರುವೆರ್ ಕುಡ್ಲ ಮಂಜೇಶ್ವರ ತಾಲೂಕು ತಂಡ.

ಕನಿಷ್ಠ ಪ್ರಮಾಣದ ಉತ್ಸಾಹಿ ಸದಸ್ಯರನ್ನು ಒಳಗೊಂಡ ತಂಡ ಆರಂಭವಾಗಿ 10 ತಿಂಗಳುಗಳಾಗುತ್ತಾ ಬಂದಿದೆ. ಕಳೆದ 10 ತಿಂಗಳಿನಲ್ಲಿ ಸಮಾಜಮುಖಿ ಕೆಲಸಕಾರ್ಯಗಳಲ್ಲಿ 6 ಸೇವಾಯೋಜನೆಯನ್ನು ಮಾಡುವುದರ ಮೂಲಕ ಮುಂದಕ್ಕೆ ಹೆಜ್ಜೆ ಇಡುತ್ತಿದೆ.

ನಮ್ಮ ತಂಡದ 6 ನೆಯ ಸೇವಾಯೋಜನೆಯನ್ನು ಮೀಂಜ ಪಂಚಾಯತಿನ ಕಲ್ಲಗದ್ದೆ ಸುಂದರ ಪೂಜಾರಿಯವರಿಗೆ ನೀಡಲಾಯಿತು.ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದ ಇವರು ಬೈಕಿನಿಂದ ಬಿದ್ದು ಬೆನ್ನೆಲುಬು ಮುರಿದು ಕೆಲಸಮಾಡಲು ಸಾಧ್ಯವಾಗದ ಸ್ಥಿತಿಯಲ್ಲಿ ಇದ್ದಾರೆ.ಇವರಿಗೆ 1 ಗಂಡು ಹಾಗೂ 10 ವರ್ಷ ಪ್ರಾಯದ ತ್ರಿವಳಿ ಹೆಣ್ಣುಮಕ್ಕಳಿದ್ದಾರೆ.ಇವರ ಮನೆಯ ಶೋಚನೀಯ ಅವಸ್ಥೆಯನ್ನು ಮನಗಂಡ ನಮ್ಮ ತಂಡ ರೂ.25000 /-ಮೊತ್ತವನ್ನು ಅವರಿಗೆ ನಿನ್ನೆ ಹಸ್ತಾಂತರಿಸಲಾಯಿತು*. ಸಂಘಟನೆಯ ಗೌರವಾಧ್ಯಕ್ಷರಾದ ಶೀನಪ್ಪ ಪೂಜಾರಿ ಅಲಾರು,ಕಾರ್ಯದರ್ಶಿ ಅನಿಲ್ ಪ್ರತಾಪ್ ನಗರ,ಸದಸ್ಯರಾದ ಐತಪ್ಪ ಪೂಜಾರಿ ಅರಿಯಾಲ ಮುಂತಾದ ಸದಸ್ಯರು ಭಾಗವಹಿಸಿದ್ದರು.


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »