TOP STORIES:

ಕೇರಳದ ಕಾಸರಗೋಡಿನ ಬಿರುವೆರ್ ಕುಡ್ಲ (ರಿ)ಮಂಜೇಶ್ವರ ತಾಲೂಕು ತಂಡದ ವತಿಯಿಂದ 6 ನೆಯ ಸೇವಾಯೋಜನೆ


ತುಳುನಾಡಿನ ಹಲವಾರು ಬಡಕುಟುಂಬಗಳ ಕಣ್ಣೀರೊರಸಿ ಅವರ ನೇರವಿಗೆ ಕಾರಣವಾದ ಬಲಿಷ್ಠ ಹಾಗೂ ಪ್ರಸಿದ್ದಿ ಪಡೆದ ಸಂಘಟನೆ ಫ್ರೆಂಡ್ಸ್ ಬಲ್ಲಾಳ್ಬಾಗ್  ಬಿರುವೆರ್ ಕುಡ್ಲ ಇದರ ಸ್ಥಾಪಕಾಧ್ಯಕ್ಷರಾದ  ಶ್ರೀಯುತ ಉದಯ ಪೂಜಾರಿಯವರ ವ್ಯಕ್ತಿತ್ವ, ಮನುಷ್ಯತ್ವ ಹಾಗೂ ಸಮಾಜಮುಖಿ ಕೆಲಸಗಳ ಪ್ರೇರಣೆಯಿಂದ ಬಿರುವೆರ್ ಕುಡ್ಲ ಸಂಘಟನೆಯ ಅನೇಕ ಶಾಖೆಗಳು ಈಗ ತುಳುನಾಡಿನಾದ್ಯಾಂತ ಕವಲೊಡೆದು ಅಶಕ್ತರಿಗೆ ನೇರವಾಗುತ್ತಾ ಬರುತ್ತಿವೆ. ಇಂತಹ ಶಾಖೆಗಳಲ್ಲಿ ಒಂದು ಕೇರಳದ ಕಾಸರಗೋಡಿನ ಬಿರುವೆರ್ ಕುಡ್ಲ ಮಂಜೇಶ್ವರ ತಾಲೂಕು ತಂಡ.

ಕನಿಷ್ಠ ಪ್ರಮಾಣದ ಉತ್ಸಾಹಿ ಸದಸ್ಯರನ್ನು ಒಳಗೊಂಡ ತಂಡ ಆರಂಭವಾಗಿ 10 ತಿಂಗಳುಗಳಾಗುತ್ತಾ ಬಂದಿದೆ. ಕಳೆದ 10 ತಿಂಗಳಿನಲ್ಲಿ ಸಮಾಜಮುಖಿ ಕೆಲಸಕಾರ್ಯಗಳಲ್ಲಿ 6 ಸೇವಾಯೋಜನೆಯನ್ನು ಮಾಡುವುದರ ಮೂಲಕ ಮುಂದಕ್ಕೆ ಹೆಜ್ಜೆ ಇಡುತ್ತಿದೆ.

ನಮ್ಮ ತಂಡದ 6 ನೆಯ ಸೇವಾಯೋಜನೆಯನ್ನು ಮೀಂಜ ಪಂಚಾಯತಿನ ಕಲ್ಲಗದ್ದೆ ಸುಂದರ ಪೂಜಾರಿಯವರಿಗೆ ನೀಡಲಾಯಿತು.ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದ ಇವರು ಬೈಕಿನಿಂದ ಬಿದ್ದು ಬೆನ್ನೆಲುಬು ಮುರಿದು ಕೆಲಸಮಾಡಲು ಸಾಧ್ಯವಾಗದ ಸ್ಥಿತಿಯಲ್ಲಿ ಇದ್ದಾರೆ.ಇವರಿಗೆ 1 ಗಂಡು ಹಾಗೂ 10 ವರ್ಷ ಪ್ರಾಯದ ತ್ರಿವಳಿ ಹೆಣ್ಣುಮಕ್ಕಳಿದ್ದಾರೆ.ಇವರ ಮನೆಯ ಶೋಚನೀಯ ಅವಸ್ಥೆಯನ್ನು ಮನಗಂಡ ನಮ್ಮ ತಂಡ ರೂ.25000 /-ಮೊತ್ತವನ್ನು ಅವರಿಗೆ ನಿನ್ನೆ ಹಸ್ತಾಂತರಿಸಲಾಯಿತು*. ಸಂಘಟನೆಯ ಗೌರವಾಧ್ಯಕ್ಷರಾದ ಶೀನಪ್ಪ ಪೂಜಾರಿ ಅಲಾರು,ಕಾರ್ಯದರ್ಶಿ ಅನಿಲ್ ಪ್ರತಾಪ್ ನಗರ,ಸದಸ್ಯರಾದ ಐತಪ್ಪ ಪೂಜಾರಿ ಅರಿಯಾಲ ಮುಂತಾದ ಸದಸ್ಯರು ಭಾಗವಹಿಸಿದ್ದರು.


Related Posts

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »

ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ


Share         ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ ಉಡುಪಿ: ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯದ ಜಾರಿ ಆದೇಶವನ್ನು ಕಾರ್ಯಗತಗೊಳಿಸುವ ನೆಪದಲ್ಲಿ ಪೊಲೀಸರು ಮಹಿಳೆಯರಿದ್ದ ಮನೆಗೆ ಬೆಳ್ಳಂ


Read More »