TOP STORIES:

FOLLOW US

ಕೇರಳದ ಕಾಸರಗೋಡಿನ ಬಿರುವೆರ್ ಕುಡ್ಲ (ರಿ)ಮಂಜೇಶ್ವರ ತಾಲೂಕು ತಂಡದ ವತಿಯಿಂದ 6 ನೆಯ ಸೇವಾಯೋಜನೆ


ತುಳುನಾಡಿನ ಹಲವಾರು ಬಡಕುಟುಂಬಗಳ ಕಣ್ಣೀರೊರಸಿ ಅವರ ನೇರವಿಗೆ ಕಾರಣವಾದ ಬಲಿಷ್ಠ ಹಾಗೂ ಪ್ರಸಿದ್ದಿ ಪಡೆದ ಸಂಘಟನೆ ಫ್ರೆಂಡ್ಸ್ ಬಲ್ಲಾಳ್ಬಾಗ್  ಬಿರುವೆರ್ ಕುಡ್ಲ ಇದರ ಸ್ಥಾಪಕಾಧ್ಯಕ್ಷರಾದ  ಶ್ರೀಯುತ ಉದಯ ಪೂಜಾರಿಯವರ ವ್ಯಕ್ತಿತ್ವ, ಮನುಷ್ಯತ್ವ ಹಾಗೂ ಸಮಾಜಮುಖಿ ಕೆಲಸಗಳ ಪ್ರೇರಣೆಯಿಂದ ಬಿರುವೆರ್ ಕುಡ್ಲ ಸಂಘಟನೆಯ ಅನೇಕ ಶಾಖೆಗಳು ಈಗ ತುಳುನಾಡಿನಾದ್ಯಾಂತ ಕವಲೊಡೆದು ಅಶಕ್ತರಿಗೆ ನೇರವಾಗುತ್ತಾ ಬರುತ್ತಿವೆ. ಇಂತಹ ಶಾಖೆಗಳಲ್ಲಿ ಒಂದು ಕೇರಳದ ಕಾಸರಗೋಡಿನ ಬಿರುವೆರ್ ಕುಡ್ಲ ಮಂಜೇಶ್ವರ ತಾಲೂಕು ತಂಡ.

ಕನಿಷ್ಠ ಪ್ರಮಾಣದ ಉತ್ಸಾಹಿ ಸದಸ್ಯರನ್ನು ಒಳಗೊಂಡ ತಂಡ ಆರಂಭವಾಗಿ 10 ತಿಂಗಳುಗಳಾಗುತ್ತಾ ಬಂದಿದೆ. ಕಳೆದ 10 ತಿಂಗಳಿನಲ್ಲಿ ಸಮಾಜಮುಖಿ ಕೆಲಸಕಾರ್ಯಗಳಲ್ಲಿ 6 ಸೇವಾಯೋಜನೆಯನ್ನು ಮಾಡುವುದರ ಮೂಲಕ ಮುಂದಕ್ಕೆ ಹೆಜ್ಜೆ ಇಡುತ್ತಿದೆ.

ನಮ್ಮ ತಂಡದ 6 ನೆಯ ಸೇವಾಯೋಜನೆಯನ್ನು ಮೀಂಜ ಪಂಚಾಯತಿನ ಕಲ್ಲಗದ್ದೆ ಸುಂದರ ಪೂಜಾರಿಯವರಿಗೆ ನೀಡಲಾಯಿತು.ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದ ಇವರು ಬೈಕಿನಿಂದ ಬಿದ್ದು ಬೆನ್ನೆಲುಬು ಮುರಿದು ಕೆಲಸಮಾಡಲು ಸಾಧ್ಯವಾಗದ ಸ್ಥಿತಿಯಲ್ಲಿ ಇದ್ದಾರೆ.ಇವರಿಗೆ 1 ಗಂಡು ಹಾಗೂ 10 ವರ್ಷ ಪ್ರಾಯದ ತ್ರಿವಳಿ ಹೆಣ್ಣುಮಕ್ಕಳಿದ್ದಾರೆ.ಇವರ ಮನೆಯ ಶೋಚನೀಯ ಅವಸ್ಥೆಯನ್ನು ಮನಗಂಡ ನಮ್ಮ ತಂಡ ರೂ.25000 /-ಮೊತ್ತವನ್ನು ಅವರಿಗೆ ನಿನ್ನೆ ಹಸ್ತಾಂತರಿಸಲಾಯಿತು*. ಸಂಘಟನೆಯ ಗೌರವಾಧ್ಯಕ್ಷರಾದ ಶೀನಪ್ಪ ಪೂಜಾರಿ ಅಲಾರು,ಕಾರ್ಯದರ್ಶಿ ಅನಿಲ್ ಪ್ರತಾಪ್ ನಗರ,ಸದಸ್ಯರಾದ ಐತಪ್ಪ ಪೂಜಾರಿ ಅರಿಯಾಲ ಮುಂತಾದ ಸದಸ್ಯರು ಭಾಗವಹಿಸಿದ್ದರು.


Share:

More Posts

Category

Send Us A Message

Related Posts

ACP ರೀನಾ ಸುವರ್ಣಗೆ ಜೀ ಕನ್ನಡ ನ್ಯೂಸ್‌ ಅಚೀವರ್ಸ್‌ ಅವಾರ್ಡ್ಸ್‌- 2025


Share       3ನೇ ವಾರ್ಷಿಕೋತ್ಸವದ ಅಂಗವಾಗಿ ಜೀ ಕನ್ನಡ ನ್ಯೂಸ್‌ ವತಿಯಿಂದ, Zee Achievers Awards ಕಾರ್ಯಕ್ರಮವನ್ನು ದಿ ರಿಟ್ಸ್‌ ಕಾರ್ಲ್‌ಟರ್ನ್‌ನಲ್ಲಿ ಆಯೋಜಿಸಲಾಗಿತ್ತು, ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯಾತಿಗಣ್ಯರನ್ನು ಗುರುತಿಸಿ ಜೀ ಕನ್ನಡ


Read More »

ಮುಂಬಯಿ ಎನ್‌ಸಿಪಿ (ಎಸ್‌ಪಿ) ಈಶಾನ್ಯ ಜಿಲ್ಲಾ ನಿರೀಕ್ಷಕರಾಗಿ ಲಕ್ಷ್ಮಣ್ ಸಿ. ಪೂಜಾರಿ ಚಿತ್ರಾಪು ಆಯ್ಕೆ


Share       ಮುಂಬಯಿ, ಮಾ. 21: ಎನ್‌ಸಿಪಿ (ಎಸ್‌ಪಿ) ಈಶಾನ್ಯ (ಉತ್ತರ ಮುಂಬಯಿ) ಜಿಲ್ಲಾ ನಿರೀಕ್ಷಕರಾಗಿ ತುಳು-ಕನ್ನಡಿಗಲಕ್ಷ್ಮಣ್ ಸಿ. ಪೂಜಾರಿ ಚಿತ್ರಾಪು ಅವರನ್ನು ಪಕ್ಷದ ಅಧ್ಯಕ್ಷೆ ರಾಖಿ ಜಾಧವ್ ಅವರು ನೇಮಕ ಮಾಡಿದ್ದಾರೆ. ಮಂಗಳೂರು ಚಿತ್ರಾಪು


Read More »

ಬಿಲ್ಲವಾಸ್ ಫ್ಯಾಮಿಲಿ ದುಬೈ ಸಂಘಟನೆ ; ಉಪ ಪೊಲೀಸ್ ಅಧಿಕ್ಷಕರಾದ ಎಸ್ ಮಹೇಶ್ ಕುಮಾರ್ ರವರ ಮನದಾಳದ ಮಾತು


Share       ಬಿಲ್ಲವಾಸ್ ಫ್ಯಾಮಿಲಿ ದುಬೈ, ಸಮುದಾಯದ ಸಾಮಾಜಿಕ ಚಟುವಟಿಕೆಗಳಲ್ಲಿ ಮಂಚೂಣಿ ಯಲ್ಲಿರುವ ಸಂಘಟನೆ. ಇತ್ತೀಚೆಗೆ ಖಾಸಗಿ ಕಾರ್ಯಕ್ರಮದ ನಿಮಿತ್ತ ದುಬೈಗೆ ಪ್ರಯಾಣ ಬೆಳೆಸಿದಾಗ ಈ ಸಂಘಟನೆಯ ಕಾರ್ಯವೈಖರಿ ಯನ್ನು ಕಣ್ಣಾರೆ ನೋಡುವ ಅವಕಾಶ ಒದಗಿ


Read More »

ನಾರಾಯಣ ಗುರುಗಳ ತತ್ವದಂತೆ ಎಲ್ಲರೂ ಜೊತೆಗೂಡಿ ಮುನ್ನೆಡೆಯಬೇಕು : ಪದ್ಮರಾಜ್ ಆರ್ ಪೂಜಾರಿ


Share       ಬಂಟ್ವಾಳ: ಯುವವಾಹಿನಿ(ರಿ.) ಮಾಣಿ ಘಟಕದ 2025-26 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭ ದಿನಾಂಕ 10-03-2025 ರ ಸೋಮವಾರದಂದು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದ ನೂತನ ನಿವೇಶನದಲ್ಲಿ ಜರುಗಿತು. ಪದಗ್ರಹಣ


Read More »

ಕೊಲ್ಲಿ ರಾಷ್ಟ್ರ ಕತಾ‌ರ್ ದೇಶದಲ್ಲಿ ಕತಾರ್ ಬಿಲ್ಲವಸ್ ಸಂಘದ ಮೊಟ್ಟ ಮೊದಲ ಬಾರಿಗೆ ಮಹಿಳಾ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ಅಪರ್ಣ ಶರತ್


Share       ಕೊಲ್ಲಿ ರಾಷ್ಟ್ರ ಕತಾ‌ರ್ ದೇಶದಲ್ಲಿ ನಮ್ಮ ತುಳುವರು ಹಲವಾರು ವರ್ಷಗಳಿಂದ ವಾಸವಿದ್ದಿದ್ದು, ಇಂದಿಗೂ ತುಳುವ ಮಣ್ಣಿನ ಪ್ರೀತಿಯನ್ನು ಮರೆತಿಲ್ಲ. ತುಳುನಾಡಿನ ಸಂಸ್ಕೃತಿ, ಆಚಾರ-ವಿಚಾರಗಳನ್ನು ಮರೆಯದೆ ಇಂದಿಗೂ ತಾವು ನೆಲೆ ನಿಂತ ಮಣ್ಣಿನಲ್ಲಿ ಸಂಭ್ರಮಿಸುತ್ತಾರೆ


Read More »

ದಮ್ಮಾಮ್: ಸೌದಿ ಬಿಲ್ಲವಾಸ್ ದಮ್ಮಾಮ್ ಸಂಘದ ಮಹಾಸಭೆ


Share       ದಮ್ಮಾಮ್: ಶ್ರೀ ನಾರಾಯಣ ಗುರು ಅವರ ತತ್ವ ಸಂದೇಶಗಳನ್ನು ಅಳವಡಿಸಿಕೊಂಡು ದಮ್ಮಾಮ್ ಬಿಲ್ಲವಾಸ್ ಸೌದಿ ಅರೇಬಿಯ ಸಂಘವನ್ನು ಮುನ್ನಡೆಸಬೇಕೆಂದು ಹಾಗು ಸಮಾಜದಲ್ಲಿರುವ ಶೋಷಿತರ , ಅಸಹಾಯಕರ ಮತ್ತು ಆರ್ಥಿಕವಾಗಿ ಹಿಂದುಳಿದವರಿಗೆ ಸಹಾಯ ಹಾಗು


Read More »