TOP STORIES:

ನಾರಾಯಣ ಗುರುಗಳ ಗುಣಗಾನ ಮಾಡಿದ ಪೋಪ್! ವ್ಯಾಟಿಕನ್ ಸಿಟಿಯಲ್ಲಿ ಕ್ರೈಸ್ತ ಪರಮೋಚ್ಛ ಗುರುವಿನಿಂದಲೇ ‘ಬ್ರಹ್ಮಶ್ರೀ’ಗೆ’ನಮನ!


బ్ర ಹ್ಮ ಶ್ರೀ ನಾರಾಯಣ ಗುರುಗಳ (Brahma Shree Narayana Guru) ಪ್ರಸ್ತುತ ಜಗತ್ತಿನಲ್ಲಿ ಬಹಳ ಪ್ರಸ್ತುತವಾಗಿವೆ ಎಂದು ಪೋಪ್‌ ಫ್ರಾನ್ಸಿಸ್ (Pope Francis) ಹೇಳಿದರು. ಪ್ರತಿಯೊಬ್ಬ ಮಾನವರೂ ಒಂದೇ ಕುಟುಂಬ ಎಂದು ಪ್ರತಿಪಾದಿಸಿದ ಸಂತರಲ್ಲಿ ಬ್ರಹ್ಮಶ್ರೀ ನಾರಾಯಣಗುರಗಳು ಅಗ್ರ ಸ್ಥಾನದಲ್ಲಿ ಬರುತ್ತಾರೆ.

ಶ್ರೀ ನಾರಾಯಣ ಗುರುಗಳು ಸಮಾಜದ ಉದ್ಧಾರಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ವ್ಯಕ್ತಿಯಾಗಿದ್ದರು ಎಂದು ಪೋಪ್ ಹೇಳಿದರು.

ವ್ಯಾಟಿಕನ್ ನಗರದ ಶಿವಗಿರಿ ಮಠದಲ್ಲಿ ಆಯೋಜಿಸಿದ್ದ ಕಾರ್ಯಕ್ರಮ

ವ್ಯಾಟಿಕನ್ ನಗರದ ಶಿವಗಿರಿ ಮಠದಲ್ಲಿ ಆಯೋಜಿಸಿದ್ದ ಸರ್ವಧರ್ಮ ಸಭೆಯಲ್ಲಿ ಪೋಪ್ ಅವರು ತಮ್ಮ ಆಶೀರ್ವಚನದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳನ್ನು ಸ್ಮರಿಸಿದರು. ರಾಷ್ಟ್ರಗಳು ಮತ್ತು ವ್ಯಕ್ತಿಗಳ ನಡುವೆ ಅಸಹಿಷ್ಣುತೆ ಮತ್ತು ದ್ವೇಷ ಹೆಚ್ಚುತ್ತಿರುವ ಈ ಕಾಲದಲ್ಲಿ ಗುರುಗಳ ಸಂದೇಶವು ಬಹಳ ಪ್ರಸ್ತುತವಾಗಿದೆ ಎಂದು ಅವರು ಹೇಳಿದರು. ಇಂದು ಬೆಳಗ್ಗೆ (ನವೆಂಬರ್ 30) ವ್ಯಾಟಿಕನ್ ನಲ್ಲಿ ನಡೆದ ಸರ್ವಧರ್ಮ ಸಮ್ಮೇಳನದಲ್ಲಿ ಇಟಲಿ, ಐರ್ಲೆಂಡ್, ಯುಎಇ, ಬಹೇನ್, ಇಂಡೋನೇಷ್ಯಾ, ಇಂಗ್ಲೆಂಡ್, ಅಮೆರಿಕ ಸೇರಿದಂತೆ ಹದಿನೈದಕ್ಕೂ ಹೆಚ್ಚು ರಾಷ್ಟ್ರಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

ಯಾರು ಈ ನಾರಾಯಣ ಗುರುಗಳು?

1856 ರಲ್ಲಿ ತಿರುವನಂತಪುರದ ಚೆಂಬಲಾಂತಿ ಎಂಬ ಹಳ್ಳಿಯಲ್ಲಿ ಕೆಳವರ್ಗದ ಮಧ್ಯಮ ಕುಟುಂಬದ ಈಳವ ಜಾತಿಯಲ್ಲಿ, ವಯಲ್ ವರಂ ಮನೆಯ ಮಾದನ್ ಆಶಾನ್ ಮತ್ತು ಕುಟ್ಟಿಯಮ್ಮ ಎಂಬ ದಂಪತಿಗಳ ನಾಲ್ಕನೇ ಮಗನಾಗಿ ಜನಿಸಿದರು. ತಂದೆ ಜ್ಯೋತಿಷ್ಯವನ್ನು ಬಲ್ಲ ಆಯುರ್ವೇದ ಪಂಡಿತರಾಗಿದ್ದರು. ಕೆಲವು ಕಾಲ ಶಾಲೆಯಲ್ಲಿ ಉಪಾಧ್ಯಯರಾಗಿದ್ದರಿಂದ ಅವರನ್ನು ಆಶಾನ್ (ಗುರು) ಎಂದು ಕರೆಯುತಿದ್ದರು.

ಬಾಲ್ಯ ಜೀವನ

ಬಾಲ್ಯದಲ್ಲಿ ನಾರಾಯಣಗುರುಗಳನ್ನು ‘ನಾಣು’ ಎಂದು ಕರೆಯುತ್ತಿದ್ದರು. ಕೃಷ್ಣ ವೈದ್ಯರ್ ಮತ್ತು ರಾಮನ್ ವೈದ್ಯರ್ ರವರ ಮಾರ್ಗದರ್ಶನದಲ್ಲಿ ರಾಮಾಯಣ, ಮಹಾಭಾರತ, ಭಾಗವತ ಗ್ರಂಥಗಳ ಅಧ್ಯಯನ ನಡೆಸಿದರು. ನಾಟಿ ಔಷಧಿ ತಯಾರು ಮಾಡುವುದನ್ನು ಕಲಿತು ವೈದ್ಯಕೀಯ ವೃತ್ತಿಯಲ್ಲಿಯೂ ಪ್ರಾವೀಣ್ಯತೆ ಪಡೆದಿದ್ದರು. ಸಂಸ್ಕೃತ, ತಮಿಳು, ಮಲಯಾಳಂ ಭಾಷಾ ಜ್ಞಾನವನ್ನು ಗಳಿಸಿ ವಾರಣ ಪಳ್ಳಿಯಲ್ಲಿ ರಾಮನ್ ಪಿಳ್ಳೆ ಆಶಾನ್ ರವರ ಶಿಷ್ಯತ್ವ ಸ್ವೀಕರಿಸಿ

ಹೆಚ್ಚಿನ ಪಾಂಡಿತ್ಯವನ್ನು ಗಳಿಸಿದರು. ಅಲ್ಲಿ ಅವರು ವಿದ್ಯಾರ್ಥಿಗಳೆಲ್ಲರ ‘ಚಟ್ಟಂಬಿ’ (ಮುಂದಾಳು)ಯಾಗಿ ಗುರುತಿಸಲ್ಪಟ್ಟರು. ನಂತರ ಅಧ್ಯಾಪಕ ವೃತ್ತಿ ಕೈಗೊಂಡ ನಾರಾಯಣ ಗುರುಗಳು, “ನಾಣು ಆಶಾನ್” ಎಂದು ಚಿರಪರಿಚಿತರಾದರು.

ಆಧ್ಯಾತ್ಮಿಕ ಚಿಂತನೆ

ಅವರ ತಂದೆ ಮತ್ತು ತಾಯಿ ತೀರಿ ಹೋದ ನಂತರ ಅವರು ಹೆಚ್ಚು ಆಧ್ಯಾತ್ಮಿಕ ಚಿಂತನೆ ಕಡೆಗೆ ಹೆಚ್ಚು ಒಲವು ತೋರಿಸಿದ್ದರು. ಅಧ್ಯಾಪಕ ವೃತ್ತಿಯ ಜೊತೆಗೆ ವೇದಾಂತ ಉಪನಿಷತ್ತುಗಳು ಹಾಗೂ ಇತರ ಧರ್ಮಗ್ರಂಥಗಳಾದ ಕುರಾನ್, ಬೈಬಲ್‌ಗಳ ದೀರ್ಘ ಅಧ್ಯಯನ ಮತ್ತು ಚಿಂತನೆ ನಡೆಸಿ ಆ ಮುಖಾಂತರ ಅಂತರ್ಮುಖಿ ಜ್ಞಾನವನ್ನು ಗಳಿಸಲಾರಂಭಿಸಿದರು. ಆಧ್ಯಾತ್ಮಿಕ ದೀಕ್ಷೆಯನ್ನು ಪಡೆದ ನಂತರ ನಾರಾಯಣ ಗುರು ಜನರಿಗೆ ಹೆಚ್ಚು ನಿಕಟವಾಗತೊಡಗಿದರು. ಎಲ್ಲರೊಂದಿಗೂ ಸಮಾನವಾಗಿ ಬೆರೆಯತೊಡಗಿದರು. ತನ್ನ ಪ್ರದೇಶದ ಸುತ್ತಲೂ ಇರುವ ತಳ ಸಮುದಾಯದವರ ಆರೋಗ್ಯ ವಿಚಾರಿಸಲು ಆರಂಭಿಸಿದರು.

ವೈಕಂ ಸತ್ಯಾಗ್ರಹ

ಬ್ರಹ್ಮಶ್ರೀ ನಾರಾಯಣಗುರುಗಳು ಅವರು ಹಲವಾರು ಹೋರಾಟಗಳಿಗೆ ಹೆಜ್ಜೆ ಹಾಕಿದರು. ಕೆಳವರ್ಗದವರು ದಾರಿಯಲ್ಲಿ ಮುಕ್ತವಾಗಿ ನಡೆಯುವ ಹಕ್ಕಿಗಾಗಿ “ವೈಕ್ಕಂ ಸತ್ಯಾಗ್ರಹ” ನಡೆಸಿದರು. ಅದೇ ರೀತಿ ದುಂದುವೆಚ್ಚ, ಕಂದಾಚಾರ, ಪ್ರಾಣಿಬಲಿ, ಮದ್ಯಪಾನ, ಮಹಿಳಾ ಶೋಷಣೆ, ಶಿಕ್ಷಣ, ಇತ್ಯಾದಿ ವಿಷಯಗಳ ಬಗ್ಗೆ ಜನಜಾಗೃತಿ ಮೂಡಿಸಿದ್ದರು.


Related Posts

ಯುವ ವೈಭವ 2025 -ಯುವವಾಹಿನಿ (ರಿ.)ಬೆಂಗಳೂರು ಘಟಕದ ಪತ್ರಿಕಾಗೋಷ್ಠಿ


Share         #ಯುವ ವೈಭವ 2025 05/12/25 ಇಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಯುವವಾಹಿನಿ (ರಿ.)ಬೆಂಗಳೂರು ಘಟಕ ಅಧ್ಯಕ್ಷರಾದ ಶಶಿಧರ್ ಕೋಟ್ಯಾನ್ ಮತ್ತು ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ ಅವರು


Read More »

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ


Share         ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಳ್ಳಾಲ: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ


Read More »

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ


Share         ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ


Read More »

ಯುವವಾಹಿನಿ ಪುತ್ತೂರು ಘಟಕದಿಂದ ಅವಿಭಜಿತ ಪುತ್ತೂರು ತಾ ಮಟ್ಟದ ಕೋಟಿ-ಚೆನ್ನಯ ಕ್ರೀಡಾಕೂಟ ಸಮಾರೋಪ.


Share         ಪುತ್ತೂರು:ವಿದ್ಯೆ, ಉದ್ಯೋಗ, ಸಂಪರ್ಕ ಧ್ಯೇಯವನ್ನೊಳಗೊಂಡ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ವ್ಯಾಪ್ತಿಗೆ ಒಳಪಟ್ಟ ಸಮಾಜ ಬಾಂಧವರಿಗಾಗಿ


Read More »

🏆ವಿಶ್ವ ಚಾಂಪಿಯನ್ ಭಾರತ 🇮🇳🏆ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಧನಲಕ್ಷ್ಮಿ ಪೂಜಾರಿ


Share         🏆ವಿಶ್ವ ಚಾಂಪಿಯನ್ ಭಾರತ 🇮🇳🏆 ಢಾಕಾದಲ್ಲಿ ನಡೆದ 2025ರ ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಚೈನೀಸ್ ತೈಪೆ ತಂಡವನ್ನು ರೋಚಕವಾಗಿ ಮಣಿಸಿ ಪ್ರತಿಷ್ಠಿತ ಕಬಡ್ಡಿ ವಿಶ್ವಕಪ್ ಟ್ರೋಫಿಯನ್ನು ಗೆದ್ದ ಭಾರತೀಯ ಮಹಿಳಾ ಕಬಡ್ಡಿ ತಂಡಕ್ಕೆ


Read More »

ಮಸ್ಕತ್ ನ ಭೀಷ್ಮ ಎಂಬ ಹೆಗ್ಗಳಿಕೆಗೆ ಪಾತ್ರರಾದ ಹಿರಿಯ ಉದ್ಯಮಿ ಶ್ರೀಯುತ ಎಸ್ ಕೆ ಪೂಜಾರಿ


Share         ಮೂಲತಃ ಗಂಜಿಮಠ ಪೆರಾರ ಎಂಬಲ್ಲಿ 1956 ರಲ್ಲಿ ಜನಿಸಿದ ಶ್ರೀಯುತರು ಕಿರಿಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಊರಿನಲ್ಲಿ ಪ್ರಾರಂಭಿಸಿ ನಂತರ ಮುಂಬೈಗೆ ಬಂದು ಕೆಲಸದ ಜೊತೆಗೆ ಹೆಚ್ಚಿನ ವಿದ್ಯಾಭ್ಯಾಸವನ್ನು ಮುಂಬೈನಲ್ಲಿ ಪ್ರಾರಂಭಿಸಿ


Read More »