TOP STORIES:

ನಾರಾಯಣ ಗುರುಗಳ ಗುಣಗಾನ ಮಾಡಿದ ಪೋಪ್! ವ್ಯಾಟಿಕನ್ ಸಿಟಿಯಲ್ಲಿ ಕ್ರೈಸ್ತ ಪರಮೋಚ್ಛ ಗುರುವಿನಿಂದಲೇ ‘ಬ್ರಹ್ಮಶ್ರೀ’ಗೆ’ನಮನ!


బ్ర ಹ್ಮ ಶ್ರೀ ನಾರಾಯಣ ಗುರುಗಳ (Brahma Shree Narayana Guru) ಪ್ರಸ್ತುತ ಜಗತ್ತಿನಲ್ಲಿ ಬಹಳ ಪ್ರಸ್ತುತವಾಗಿವೆ ಎಂದು ಪೋಪ್‌ ಫ್ರಾನ್ಸಿಸ್ (Pope Francis) ಹೇಳಿದರು. ಪ್ರತಿಯೊಬ್ಬ ಮಾನವರೂ ಒಂದೇ ಕುಟುಂಬ ಎಂದು ಪ್ರತಿಪಾದಿಸಿದ ಸಂತರಲ್ಲಿ ಬ್ರಹ್ಮಶ್ರೀ ನಾರಾಯಣಗುರಗಳು ಅಗ್ರ ಸ್ಥಾನದಲ್ಲಿ ಬರುತ್ತಾರೆ.

ಶ್ರೀ ನಾರಾಯಣ ಗುರುಗಳು ಸಮಾಜದ ಉದ್ಧಾರಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ವ್ಯಕ್ತಿಯಾಗಿದ್ದರು ಎಂದು ಪೋಪ್ ಹೇಳಿದರು.

ವ್ಯಾಟಿಕನ್ ನಗರದ ಶಿವಗಿರಿ ಮಠದಲ್ಲಿ ಆಯೋಜಿಸಿದ್ದ ಕಾರ್ಯಕ್ರಮ

ವ್ಯಾಟಿಕನ್ ನಗರದ ಶಿವಗಿರಿ ಮಠದಲ್ಲಿ ಆಯೋಜಿಸಿದ್ದ ಸರ್ವಧರ್ಮ ಸಭೆಯಲ್ಲಿ ಪೋಪ್ ಅವರು ತಮ್ಮ ಆಶೀರ್ವಚನದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳನ್ನು ಸ್ಮರಿಸಿದರು. ರಾಷ್ಟ್ರಗಳು ಮತ್ತು ವ್ಯಕ್ತಿಗಳ ನಡುವೆ ಅಸಹಿಷ್ಣುತೆ ಮತ್ತು ದ್ವೇಷ ಹೆಚ್ಚುತ್ತಿರುವ ಈ ಕಾಲದಲ್ಲಿ ಗುರುಗಳ ಸಂದೇಶವು ಬಹಳ ಪ್ರಸ್ತುತವಾಗಿದೆ ಎಂದು ಅವರು ಹೇಳಿದರು. ಇಂದು ಬೆಳಗ್ಗೆ (ನವೆಂಬರ್ 30) ವ್ಯಾಟಿಕನ್ ನಲ್ಲಿ ನಡೆದ ಸರ್ವಧರ್ಮ ಸಮ್ಮೇಳನದಲ್ಲಿ ಇಟಲಿ, ಐರ್ಲೆಂಡ್, ಯುಎಇ, ಬಹೇನ್, ಇಂಡೋನೇಷ್ಯಾ, ಇಂಗ್ಲೆಂಡ್, ಅಮೆರಿಕ ಸೇರಿದಂತೆ ಹದಿನೈದಕ್ಕೂ ಹೆಚ್ಚು ರಾಷ್ಟ್ರಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

ಯಾರು ಈ ನಾರಾಯಣ ಗುರುಗಳು?

1856 ರಲ್ಲಿ ತಿರುವನಂತಪುರದ ಚೆಂಬಲಾಂತಿ ಎಂಬ ಹಳ್ಳಿಯಲ್ಲಿ ಕೆಳವರ್ಗದ ಮಧ್ಯಮ ಕುಟುಂಬದ ಈಳವ ಜಾತಿಯಲ್ಲಿ, ವಯಲ್ ವರಂ ಮನೆಯ ಮಾದನ್ ಆಶಾನ್ ಮತ್ತು ಕುಟ್ಟಿಯಮ್ಮ ಎಂಬ ದಂಪತಿಗಳ ನಾಲ್ಕನೇ ಮಗನಾಗಿ ಜನಿಸಿದರು. ತಂದೆ ಜ್ಯೋತಿಷ್ಯವನ್ನು ಬಲ್ಲ ಆಯುರ್ವೇದ ಪಂಡಿತರಾಗಿದ್ದರು. ಕೆಲವು ಕಾಲ ಶಾಲೆಯಲ್ಲಿ ಉಪಾಧ್ಯಯರಾಗಿದ್ದರಿಂದ ಅವರನ್ನು ಆಶಾನ್ (ಗುರು) ಎಂದು ಕರೆಯುತಿದ್ದರು.

ಬಾಲ್ಯ ಜೀವನ

ಬಾಲ್ಯದಲ್ಲಿ ನಾರಾಯಣಗುರುಗಳನ್ನು ‘ನಾಣು’ ಎಂದು ಕರೆಯುತ್ತಿದ್ದರು. ಕೃಷ್ಣ ವೈದ್ಯರ್ ಮತ್ತು ರಾಮನ್ ವೈದ್ಯರ್ ರವರ ಮಾರ್ಗದರ್ಶನದಲ್ಲಿ ರಾಮಾಯಣ, ಮಹಾಭಾರತ, ಭಾಗವತ ಗ್ರಂಥಗಳ ಅಧ್ಯಯನ ನಡೆಸಿದರು. ನಾಟಿ ಔಷಧಿ ತಯಾರು ಮಾಡುವುದನ್ನು ಕಲಿತು ವೈದ್ಯಕೀಯ ವೃತ್ತಿಯಲ್ಲಿಯೂ ಪ್ರಾವೀಣ್ಯತೆ ಪಡೆದಿದ್ದರು. ಸಂಸ್ಕೃತ, ತಮಿಳು, ಮಲಯಾಳಂ ಭಾಷಾ ಜ್ಞಾನವನ್ನು ಗಳಿಸಿ ವಾರಣ ಪಳ್ಳಿಯಲ್ಲಿ ರಾಮನ್ ಪಿಳ್ಳೆ ಆಶಾನ್ ರವರ ಶಿಷ್ಯತ್ವ ಸ್ವೀಕರಿಸಿ

ಹೆಚ್ಚಿನ ಪಾಂಡಿತ್ಯವನ್ನು ಗಳಿಸಿದರು. ಅಲ್ಲಿ ಅವರು ವಿದ್ಯಾರ್ಥಿಗಳೆಲ್ಲರ ‘ಚಟ್ಟಂಬಿ’ (ಮುಂದಾಳು)ಯಾಗಿ ಗುರುತಿಸಲ್ಪಟ್ಟರು. ನಂತರ ಅಧ್ಯಾಪಕ ವೃತ್ತಿ ಕೈಗೊಂಡ ನಾರಾಯಣ ಗುರುಗಳು, “ನಾಣು ಆಶಾನ್” ಎಂದು ಚಿರಪರಿಚಿತರಾದರು.

ಆಧ್ಯಾತ್ಮಿಕ ಚಿಂತನೆ

ಅವರ ತಂದೆ ಮತ್ತು ತಾಯಿ ತೀರಿ ಹೋದ ನಂತರ ಅವರು ಹೆಚ್ಚು ಆಧ್ಯಾತ್ಮಿಕ ಚಿಂತನೆ ಕಡೆಗೆ ಹೆಚ್ಚು ಒಲವು ತೋರಿಸಿದ್ದರು. ಅಧ್ಯಾಪಕ ವೃತ್ತಿಯ ಜೊತೆಗೆ ವೇದಾಂತ ಉಪನಿಷತ್ತುಗಳು ಹಾಗೂ ಇತರ ಧರ್ಮಗ್ರಂಥಗಳಾದ ಕುರಾನ್, ಬೈಬಲ್‌ಗಳ ದೀರ್ಘ ಅಧ್ಯಯನ ಮತ್ತು ಚಿಂತನೆ ನಡೆಸಿ ಆ ಮುಖಾಂತರ ಅಂತರ್ಮುಖಿ ಜ್ಞಾನವನ್ನು ಗಳಿಸಲಾರಂಭಿಸಿದರು. ಆಧ್ಯಾತ್ಮಿಕ ದೀಕ್ಷೆಯನ್ನು ಪಡೆದ ನಂತರ ನಾರಾಯಣ ಗುರು ಜನರಿಗೆ ಹೆಚ್ಚು ನಿಕಟವಾಗತೊಡಗಿದರು. ಎಲ್ಲರೊಂದಿಗೂ ಸಮಾನವಾಗಿ ಬೆರೆಯತೊಡಗಿದರು. ತನ್ನ ಪ್ರದೇಶದ ಸುತ್ತಲೂ ಇರುವ ತಳ ಸಮುದಾಯದವರ ಆರೋಗ್ಯ ವಿಚಾರಿಸಲು ಆರಂಭಿಸಿದರು.

ವೈಕಂ ಸತ್ಯಾಗ್ರಹ

ಬ್ರಹ್ಮಶ್ರೀ ನಾರಾಯಣಗುರುಗಳು ಅವರು ಹಲವಾರು ಹೋರಾಟಗಳಿಗೆ ಹೆಜ್ಜೆ ಹಾಕಿದರು. ಕೆಳವರ್ಗದವರು ದಾರಿಯಲ್ಲಿ ಮುಕ್ತವಾಗಿ ನಡೆಯುವ ಹಕ್ಕಿಗಾಗಿ “ವೈಕ್ಕಂ ಸತ್ಯಾಗ್ರಹ” ನಡೆಸಿದರು. ಅದೇ ರೀತಿ ದುಂದುವೆಚ್ಚ, ಕಂದಾಚಾರ, ಪ್ರಾಣಿಬಲಿ, ಮದ್ಯಪಾನ, ಮಹಿಳಾ ಶೋಷಣೆ, ಶಿಕ್ಷಣ, ಇತ್ಯಾದಿ ವಿಷಯಗಳ ಬಗ್ಗೆ ಜನಜಾಗೃತಿ ಮೂಡಿಸಿದ್ದರು.


Related Posts

ಬಿಲ್ಲವರ ಉನ್ನತಿಯಲ್ಲಿ ನಾರಾಯಣ ಗುರುಗಳ ಪಾತ್ರ ಗುರುತರವಾದುದು ಡಾ.ಮುಕೇಶ್ ಕುಮಾರ್


Share        ಮುಂಬಯಿ ಒಂದು ಕಾಲದಲ್ಲಿ ಮೇಲ್ವರ್ಗದವರಿಂದ ಅಸ್ಪ್ರಶ್ಯರೆನಿಸಿಕೊಂಡು ಸಮಾಜದಿಂದ ಬಹಿಷ್ಕೃತರಾದ ಬಿಲ್ಲವರು ಶ್ರೀಮಂತವಾದ ಸಂಸ್ಕೃತಿಯ ಹಿನ್ನೆಲೆಯಿಂದ ಬಂದವರು. ದಾರ್ಶನಿಕ ನಾರಾಯಣ ಗುರುಗಳ ಮಾರ್ಗದರ್ಶನವನ್ನೇ ಸ್ಫೂರ್ತಿಯಾಗಿಸಿಕೊಂಡು ಹಲವಾರು ಸಂಘರ್ಷಗಳನ್ನು ಎದುರಿಸಿಯೂ ಬಿಲ್ಲರು ಉನ್ನತ ಸ್ಥಾನಮಾನವನ್ನು ಗಳಿಸಿಕೊಂಡರು.


Read More »

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »