TOP STORIES:

ಆಯತಪ್ಪಿ ಕಂದಕಕ್ಕೆ ಬಿದ್ದ ಸೇನೆಯ ಟ್ರಕ್; ಉಡುಪಿ ಜಿಲ್ಲೆ ಕುಂದಾಪುರ ಬೀಜಾಡಿ ಮೂಲದ ಸೈನಿಕ ಅನೂಪ್ ಪೂಜಾರಿ ಹುತಾತ್ಮ


ಕುಂದಾಪುರ: ಸೇನಾ ಟ್ರಕ್ ರಸ್ತೆಯಿಂದ ಸ್ಕಿಡ್ ಆಗಿ ಕಂದಕಕ್ಕೆ ಬಿದ್ದ ಘಟನೆ ಪೂಂಚ್ ಜಿಲ್ಲೆಯ ಮೆಂಧರ್ ಪ್ರದೇಶದ ಬಲ್ನೋಯಿ ಪ್ರದೇಶದಲ್ಲಿ ನಡೆದಿದ್ದು ಈ ಟ್ರಕ್ನಲ್ಲಿ ಚಲಿಸುತ್ತಿದ್ದ ದೇಶ ಕಾಯುವ ಯೋಧರು ಪ್ರಯಾಣಿಸುತ್ತಿದ್ದು, ಇದರಲ್ಲಿ ಕರ್ನಾಟಕದ ಮೂವರು ಯೋಧ ಸೇರಿ ಐವರು ಮೃತ ಪಟ್ಟಿದ್ದಾರೆ. ಈ ಪೈಕಿ ಓರ್ವ ಯೋಧ ಕುಂದಾಪುರ ಬೀಜಾಡಿಯ ಅನೂಪ್ ಪೂಜಾರಿ (31) ಹುತಾತ್ಮ ಯೋಧ.

ಬೀಜಾಡಿ ನಿವಾಸಿ ಚಂದು ಪೂಜಾರಿ, ನಾರಾಯಣ ಪೂಜಾರಿ ದಂಪತಿಗಳ ಪುತ್ರ ಅನೂಪ್ ಪೂಜಾರಿ ಸೇನೆಗೆ ಸೇರಿ 13 ವರ್ಷವಾಗಿತ್ತು. ಅವರು ಮರಾಠ ಲೈಟ್ ಇನ್ಫೆಂಟ್ರಿ ಬಟಾಲಿಯನ್ ನಲ್ಲಿ ಸೇವೆ ಸಲ್ಲಿಸುತ್ತಿದ್ದರು.

ಹುತಾತ್ಮರಾಧ ಯೋಧ ಅನೂಪ್ ಅವರಿಗೆ ವಿವಾಹವಾಗಿದ್ದು 2 ವರ್ಷದ ಹೆಣ್ಣು ಮಗುವಿದೆ. ಕಳೆದ ತಿಂಗಳು ರಜೆಗೆ ಆಗಮಿಸಿದ್ದ ಅವರು ಡಿ.15 ರಂದು ಕೋಟೇಶ್ವರದಲ್ಲಿ ನಡೆದ ಕೊಡಿ ಹಬ್ಬದಲ್ಲಿ ಪಾಲ್ಘೊಂಡಿದ್ದಲ್ಲದೆ ಮಗಳ ಹುಟ್ಟುಹಬ್ಬವನ್ನು ಆಚರಿಸಿದ್ದರು. ಹುಯಾತ್ಮ ಯೋಧ ತಾಯಿ, ಇಬ್ಬರು ಸಹೋದರಿಯರು, ಪತ್ನಿ, ಪುತ್ರಿ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

ನಾಳೆ (ಗುರುವಾರ) ತೆಕ್ಕಟ್ಟೆಯಿಂದ ಪಾರ್ಥೀವ ಶರೀರವನ್ನು ತೆರೆದ ವಾಹನದಲ್ಲಿ ಕೋಟೇಶ್ವರ ಮೂಲಕವಾಗಿ ಮೆರವಣಿಗೆ ನಡೆಸಿ ಹುಟ್ಟೂರಾದ ಬೀಜಾಡಿಗೆ ಕರೆತಂದು ಸಕಲ ವಿಧಿಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲಾಗುತ್ತದೆ. ಬೀಜಾಡಿ ಪಡುಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ತೆ ಕಲ್ಪಿಸಲಾಗುತ್ತದೆ. ಸಮಾಜ ಸೇವಕ ಅಶೋಕ್ ಪೂಜಾರಿ ಬೀಜಾಡಿ, ಬೀಜಾಡಿ ಗ್ರಾ.ಪಂ ಅಧ್ಯಕ್ಷ ಪ್ರಕಾಶ್ ಪೂಜಾರಿ, ಗ್ರಾಮಸ್ತರ ನೇತೃತ್ವದಲ್ಲಿ ಅಂತಿಮ ಸಂಸ್ಕಾರಕ್ಕೆ ಸಿದ್ದತೆ ಮಾಡಲಾಗುತ್ತಿದೆ.

ಮನೆಯಲ್ಲಿ ಮುಗಿಲುಮುಟ್ಟಿದ ಆಕ್ರಂದನ:

ಸೈನಿಕ ಅನೂಪ್ ಪೂಜಾರಿಯವರೊಂದಿಗೆ ಸೇವೆಯಲ್ಲಿ ಜೊತೆಗಿದ್ದು ಸದ್ಯ ರಜಾದಲ್ಲಿ ಊರಾದ ಚಿಕ್ಕೋಡಿಗೆ ಬಂದಿದ್ದ ಯೋಧ ಆಂಜನೇಯ ಪಾಟೀಲ್ ತನ್ನ ಸಹೋದರ ನೊಂದಿಗೆ ತಡರಾತ್ರಿ ಹೊರಟು ಬಂದು ಬೆಳಿಗ್ಗೆ ಮೃತ ಯೋಧನ ಮನೆಗೆ ಮಾಹಿತಿ ನೀಡಿದರು. ವಿಚಾರ ತಿಳಿಯುತ್ತಿದ್ದಂತೆಯೇ ಮನೆಯಲ್ಲಿ ಕುಟುಂಬಿಕರ ಆಕ್ರಂಧನ ಮುಗಿಲುಮುಟ್ಟಿದೆ.

ಘಟನೆ ಹಿನ್ನೆಲೆ:

ಮಂಗಳವಾರ ಸಂಜೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಬಳಿ ಯೋಧರು ಪ್ರಯಾಣಿಸುತ್ತಿದ್ದ ವಾಹನವು ರಸ್ತೆಯಿಂದ ಕಣಿವೆಗೆ ಉರುಳಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಸೇನಾ ವಾಹನಲ್ಲಿ 18 ಯೋಧರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಇದರಲ್ಲಿ 5 ಮಂದಿ ಹುತಾತ್ಮರಾಗಿದ್ದಾರೆ. ಉಳಿದವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »