TOP STORIES:

ಅನಿತಾ ಪಿ.ತಾಕೊಡೆಯವರ ಸುವರ್ಣಯುಗ ಕೃತಿಗೆ ಡಾ. ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನ ಮುಂಬಯಿ ವತಿಯಿಂದ “ವಿಕಾಸ ಪುಸ್ತಕ ಬಹುಮಾನ”


ಮುಂಬಯಿ:- ಹಿರಿಯ ಸಾಹಿತಿ, ಲೇಖಕ, ಪ್ರಾಧ್ಯಾಪಕ ಡಾ.ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನವು ಮುಂಬಯಿ ಕನ್ನಡ ಪುಸ್ತಕ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಕೊಡಮಾಡುತ್ತಾ ಬಂದ ಪುಸ್ತಕ ಬಹುಮಾನ ಯೋಜನೆಯಂತೆ 2023-24ರ ಸಾಲಿನ ವಿಕಾಸ’ ಪುಸ್ತಕ ಬಹುಮಾನಕ್ಕೆ, ಅನಿತಾ ಪಿ. ತಾಕೊಡೆ ಅವರ ಸುವರ್ಣಯುಗ ಕೃತಿ  ಆಯ್ಕೆಯಾಗಿದೆ. ಪ್ರತಿಷ್ಠಾನದ ಅಧ್ಯಕ್ಷರಾದ ಡಾ.ಜಿ.ಎನ್.ಉಪಾಧ್ಯ, ಪ್ರತಿಷ್ಠಾನದ ಸಂಸ್ಥಾಪಕರಾದ ಡಾ.ವಿಶ್ವನಾಥ ಕಾರ್ನಾಡ್, ಕೋಶಾಧಿಕಾರಿ ಶರತ್ ಕಾರ್ನಾಡ್ ಅವರ ಉಪಸ್ಥಿತಿಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು

ಈ ಪುರಸ್ಕಾರವು ನಗದು ಪುರಸ್ಕಾರ, ಪ್ರಶಸ್ತಿ ಪತ್ರ ಹಾಗೂ ಗ್ರಂಥ ಗೌರವವನ್ನು ಒಳಗೊಂಡಿದ್ದು ಫೆಬ್ರವರಿ ತಿಂಗಳಲ್ಲಿ ಮುಂಬೈ ವಿಶ್ವವಿದ್ಯಾಲಯದಲ್ಲಿ ಈ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಲಿದೆ ಎಂಬುದಾಗಿ ಪ್ರತಿಷ್ಠಾನದ ಪ್ರಕಟಣೆ ತಿಳಿಸಿದೆ.

ಅನಿತಾ ಪೂಜಾರಿಯವರು ಕವಿಯಾಗಿ, ಲೇಖಕರಾಗಿ, ಕಥೆಗಾರರಾಗಿ ಸಾಹಿತ್ಯ ಕ್ಷೇತ್ರದಲ್ಲಿ ಪರಿಚಿತರಾಗಿದ್ದಾರೆ. ಇವರು  ಕೆ.ಎಸ್.ಒ.ಯು. ಮೈಸೂರು ವಿಶ್ವವಿದ್ಯಾಲಯದಲ್ಲಿ ಬಿ.ಎ. ಪದವಿ ಪಡೆದಿದ್ದಾರೆ. ಮುಂಬೈ ವಿಶ್ವವಿದ್ಯಾಲಯದಲ್ಲಿ ಎಂ.ಎ. ಪದವಿಯನ್ನು ಪ್ರಥಮ ರ್ಯಾಂಕ್‍ನೊಂದಿಗೆ ಪಡೆಯುವುದರ ಮೂಲಕ ಎಂ.ಬಿ.ಕುಕ್ಯಾನ್ ಬಂಗಾರದ ಪದಕದ ಅರ್ಹತೆಯನ್ನು ಸಾಧಿಸಿದ್ದಾರೆ. ಇದೀಗ ಮುಂಬಯಿ ವಿಶ್ವವಿದ್ಯಾಲಯದಲ್ಲಿ ಡಾ.ಜಿ. ಎನ್. ಉಪಾಧ್ಯ ಅವರ ಮಾರ್ಗದರ್ಶನದಲ್ಲಿ “ಮುಂಬಯಿ ಬಿಲ್ಲವರು ಸಾಂಸ್ಕೃತಿಕ ಅಧ್ಯಯನ” ಈ ವಿಷಯದ ಕುರಿತು ಪಿಎಚ್.ಡಿ ಅಧ್ಯಯನದಲ್ಲಿ ನಿರತರಾಗಿದ್ದಾರೆ. ಈಗಾಗಲೇ ಅನಿತಾ ಅವರ ಒಟ್ಟು ಎಂಟು ಕೃತಿಗಳು ಲೋಕಾರ್ಪಣೆಗೊಂಡಿವೆ.

ಪಿಎಚ್.ಡಿ ಕೋರ್ಸ್ ವರ್ಕ್ ನ ಸಲುವಾಗಿ ಜಯ ಸಿ. ಸುವರ್ಣರ ಕುರಿತು ಸಿದ್ಧಪಡಿಸಿದ ‘ಸುವರ್ಣಯುಗ’ ಶೋಧ ಪ್ರಬಂಧಕ್ಕೆ ಮುಂಬೈ ವಿಶ್ವವಿದ್ಯಾಲಯದ ವತಿಯಿದ ಸಂಶೋಧಕಿ ಡಾ.ಲೀಲಾ ಬಿ. ಅವರು ಕೊಡಮಾಡುವ ‘ಶೋಧಸಿರಿ’ ಪುರಸ್ಕಾರ, ನಿವಾಳಿಸಿ ಬಿಟ್ಟ ಕೋಳಿ ಕಥಾಕವನಸಂಕಲನಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕೊಡಮಾಡುವ 2022ನೆಯ ಸಾಲಿನ ಕೆ. ವಸುದೇವಾಚಾರ್ಯ ದತ್ತಿ ಪ್ರಶಸ್ತಿ  ಮಾಣಿಕ್ಯ ಪ್ರಕಾಶನದ ವತಿಯಿಂದ ಪದ್ಮಾವತಿ ವೆಂಕಟೇಶ ದತ್ತಿ ಪುರಸ್ಕಾರ, ‘ಅಂತರಂಗದ ಮೃದಂಗ’ದ ಹಸ್ತಪ್ರತಿಗೆ, ಜಗಜ್ಯೋತಿ ಕಲಾವೃಂದ ಮುಂಬೈ ವತಿಯಿಂದ ‘ಶ್ರೀಮತಿ ಸುಶೀಲಾ ಎಸ್. ಶೆಟ್ಟಿ ಸ್ಮಾರಕ ಕಾವ್ಯ ಪ್ರಶಸ್ತಿ’, ಜನಸ್ಪಂದನ ಟ್ರಸ್ಟ್(ರಿ) ಸುವ್ವಿ ಪಬ್ಲಿಕೇಷನ್ಸ್, ಶಿಕಾರಿಪುರ ಕೊಡಮಾಡುವ ‘ಅಲ್ಲಮ ಸಾಹಿತ್ಯ ಪ್ರಶಸ್ತಿ’, ಕನ್ನಡ ಕಲರವ ಮತ್ತು ಅವ್ವ ಪುಸ್ತಕಾಲಯದ ವತಿಯಿಂದ ‘ಸೃಜನಶೀಲ ಸಾಹಿತಿ ಪ್ರಶಸ್ತಿ’ ಲಭಿಸಿದೆ. ಮೋಹನ ತರಂಗ’ ಈ ಕೃತಿಗೆ 2019-20ನೆಯ ಸಾಲಿನ ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ನಗದು ಪುರಸ್ಕಾರ ಪ್ರಾಪ್ತಿಯಾಗಿದೆ. ಗ್ರಾಮಾಂತರ ಬುದ್ಧಿಜೀವಿಗಳ ಬಳಗ ವತಿಯಿಂದ  ಎರಡು ಬಾರಿ ‘ಪ್ರೇಮಕಾವ್ಯ ಪುರಸ್ಕಾರ’ ಹಾಗೂ ‘ವಿಶ್ವ ಕವಿ ಕುವೆಂಪು ಕಾವ್ಯ ಪುರಸ್ಕಾರ’ ಲಭಿಸಿದೆ.

ಮಹಾರಾಷ್ಟ್ರ ನವಚಿಂತನ ಸಂಸ್ಥೆಯಿಂದ ಕವಿರತ್ನ ಪುರಸ್ಕಾರ, ಮುಂಬಯಿ ಕಲಾಜಗತ್ತು ಸಂಸ್ಥೆಯ ವತಿಯಿಂದ ‘ದಿ ಗೋಪಾಲಕೃಷ್ಣ ಸ್ಮಾರಕ ಪ್ರಶಸಿ’್ತ, ಡೊಂಬಿವಲಿ ತುಳುಕೂಟದ ವತಿಯಿಂದ ‘ತುಳುಸಿರಿ ಪ್ರಶಸ್ತಿ’, ಕನ್ನಡ ಕವಿವಾಣಿ ಪತ್ರಿಕಾ ಬಳಗದ ವತಿಯಿಂದ  ‘ಕಾವ್ಯಸಿರಿ ಪ್ರಶಸ್ತಿ’, ಕಲಾ ಸೌರಭ ಮುಂಬಯಿ ವತಿಯಿಂದ ‘ಅಮೃತ ಸೌರಭ ಪುರಸ್ಕಾರ’, ಶ್ರೀಕೃಷ್ಣ ವಿಠ್ಠಲ ಪ್ರತಿಷ್ಠಾನದ ವತಿಯಿಂದ ‘ಶ್ರೀ ಕೃಷ್ಣ ವಿಠ್ಠಲ ಪ್ರಶಸ್ತಿ’ ಲಭಿಸಿದೆ. ಇವರು 2019ರಲ್ಲಿ  ಮೈಸೂರು ಅರಮನೆಯಲ್ಲಿ ನಡೆದ ವಿಶ್ವವಿಖ್ಯಾತ ದಸರಾ ಕವಿಗೋಷ್ಠಿಯಲ್ಲೂ ಭಾಗವಹಿಸಿ ಗೌರವ ಪುರಸ್ಕಾರವನ್ನು ಪಡೆದಿರುತ್ತಾರೆ. ಇವರ ಕತೆ ಕವಿತೆಗಳಿಗೆ ಲಭಿಸಿದ ಹಲವಾರು ಬಹುಮಾನ, ಪುರಸ್ಕಾರಗಳು ಇವರ ಸಾಹಿತ್ಯ ಶಕ್ತಿಗೆ ಸಾಕ್ಷಿಯಾಗಿವೆ. ಪ್ರಸ್ತುತ ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ(ರಿ)ಇದರ ಕಾರ್ಯಕಾರಿ ಸಮಿತಿಯ ಸದಸ್ಯರಾಗಿದ್ದಾರೆ.

ಮುಂಬಯಿ ಮತ್ತು ಮಂಗಳೂರು ಆಕಾಶವಾಣಿಯಲ್ಲಿ ಇವರ ಕತೆ, ಭಾವಗೀತೆ ಮತ್ತು ಕವನಗಳು ಪ್ರಸಾರಗೊಂಡಿವೆ. ಇವರು 2019ರಲ್ಲಿ  ಮೈಸೂರು ಅರಮನೆಯಲ್ಲಿ ನಡೆದ ವಿಶ್ವವಿಖ್ಯಾತ ದಸರಾ ಕವಿಗೋಷ್ಠಿಯಲ್ಲೂ ಭಾಗವಹಿಸಿ ಗೌರವ ಪುರಸ್ಕಾರವನ್ನು ಪಡೆದಿದ್ದಾರೆ. ಪ್ರಸ್ತುತ ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ(ರಿ)ಇದರ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.


Related Posts

ಕವಿ ಗವಿಸಿದ್ದ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ “ಮೇಣಕ್ಕಂಟಿದ ಬತ್ತಿ” ಕವನ ಸಂಕಲನ ಬಿಡುಗಡೆ


Share         ಅ.26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ,ಸಾಹಿತ್ಯ ಚರ್ಚೆ ಮುಂಬಯಿ, ಅ.23-  ಖ್ಯಾತ ಬಂಡಾಯ ಕವಿ ಗವಿಸಿದ್ದ ಎನ್. ಬಳ್ಳಾರಿ


Read More »

ಮಂಗಳೂರು: ಅಳದಂಗಡಿಯ ಶ್ರೀಮತಿ ಅನುಷಾ ಪ್ರಸಾದ್ ಪೂಜಾರಿ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ


Share         ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ (Manipal Institute of Technology, Manipal) ನ ಗಣಿತಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಅನುಷಾ ಎಲ್ ಅವರು ಮಂಡಿಸಿದ “A study on N-Covering


Read More »

ಬ್ರಿಟನ್ ಬಿಲ್ಲವ ಬಳಗ ಯುಕೆ ದೇಶದಲ್ಲಿ ಉತ್ಸಾಹದಿಂದ ಉದ್ಘಾಟನಾ ಸಮಾರಂಭವನ್ನು ಆಯೋಜಿಸಿದೆ.


Share         ಬ್ರಿಟನ್ ಬಿಲ್ಲವ ಬಳಗ ಯುಕೆಯ ಉದ್ಘಾಟನಾ ಸಮಾರಂಭವು ಸೆಪ್ಟೆಂಬರ್ 13 ರ ಶನಿವಾರದಂದು ಕೋವೆಂಟ್ರಿ ಹಾಲಿಡೇ ಇನ್ ಎಕ್ಸ್‌ಪ್ರೆಸ್ ಹೋಟೆಲ್‌ನಲ್ಲಿ ಸಂಘದ ಆಯ್ಕೆಯಾದ ಅಧ್ಯಕ್ಷ ಡಾ. ಪಿ.ಕೆ. ಮನೋಜ್ ಪೂಜಾರಿ ಅವರ ನೇತೃತ್ವದಲ್ಲಿ


Read More »

ಬಾರ್ಕೂರು ನಾಗರ ಮಠದ ಕ್ರೀಡಾ ಬಹು ಮುಖ ಪ್ರತಿಭೆಯ ಧನ್ವಿತಪೂಜಾರಿ ಧನ್ವಿತಪೂಜಾರಿ ಅವರಿಗೆ ಮೂರು ಪ್ರಶಸ್ತಿಗಳ ಗರಿ


Share         ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಕಿರಿ, ಮಂಜೇಶ್ವರ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಉಡುಪಿ ಜಿಲ್ಲೆ ಇವರ ಆಶ್ರಯದಲ್ಲಿ  ದಿನಾಂಕ 30-08-2025 ರಂದು


Read More »

ಸತತ 216 ಗಂಟೆಗಳ ಭರತನಾಟ್ಯ ಮಾಡುವುದರ ಮೂಲಕ ಗೋಲ್ಡನ್ ಬುಕ್ ವಲ್ಡ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ಬರೆಸಿಕೊಂಡ ನವರಸಧಾರ ದೀಕ್ಷಾ. ವಿ


Share         ದೀಕ್ಷಾ ವಿ. ಅವರ ಜೀವನವು ಕಲೆಯ ತಪಸ್ಸಿನ ಜೀವಂತ ಪ್ರತೀಕವಾಗಿದೆ. ತಂದೆ ಶ್ರೀ ವಿಠಲ್ ಪೂಜಾರಿ ಮತ್ತು ತಾಯಿ ಶುಭಾ ವಿಠಲ್ ಅವರ ಮಗಳಾದ ಅವರು, ಬಾಲ್ಯದಿಂದಲೇ ಕಲೆಯ ಕಡೆ ಮನಸ್ಸು ತಿರುಗಿಸಿಕೊಂಡಿದ್ದರು.


Read More »

ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರಿಗೆ ಗೋಲ್ಡನ್ ಐಕಾನಿಕ್ ಅವಾರ್ಡ್


Share         ಮಂಗಳೂರು: ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರನ್ನು ಮಂಗಳೂರಿನಲ್ಲಿ ಗೋಲ್ಡನ್ ಐಕಾನಿಕ್ ಅವಾರ್ಡ್ ಗೌರವ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು. ಹೋಟೆಲ್ ಓಷನ್ ಪರ್ಲ್ ನಲ್ಲಿ ನಡೆದ


Read More »