TOP STORIES:

ಅನಿತಾ ಪಿ.ತಾಕೊಡೆಯವರ ಸುವರ್ಣಯುಗ ಕೃತಿಗೆ ಡಾ. ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನ ಮುಂಬಯಿ ವತಿಯಿಂದ “ವಿಕಾಸ ಪುಸ್ತಕ ಬಹುಮಾನ”


ಮುಂಬಯಿ:- ಹಿರಿಯ ಸಾಹಿತಿ, ಲೇಖಕ, ಪ್ರಾಧ್ಯಾಪಕ ಡಾ.ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನವು ಮುಂಬಯಿ ಕನ್ನಡ ಪುಸ್ತಕ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಕೊಡಮಾಡುತ್ತಾ ಬಂದ ಪುಸ್ತಕ ಬಹುಮಾನ ಯೋಜನೆಯಂತೆ 2023-24ರ ಸಾಲಿನ ವಿಕಾಸ’ ಪುಸ್ತಕ ಬಹುಮಾನಕ್ಕೆ, ಅನಿತಾ ಪಿ. ತಾಕೊಡೆ ಅವರ ಸುವರ್ಣಯುಗ ಕೃತಿ  ಆಯ್ಕೆಯಾಗಿದೆ. ಪ್ರತಿಷ್ಠಾನದ ಅಧ್ಯಕ್ಷರಾದ ಡಾ.ಜಿ.ಎನ್.ಉಪಾಧ್ಯ, ಪ್ರತಿಷ್ಠಾನದ ಸಂಸ್ಥಾಪಕರಾದ ಡಾ.ವಿಶ್ವನಾಥ ಕಾರ್ನಾಡ್, ಕೋಶಾಧಿಕಾರಿ ಶರತ್ ಕಾರ್ನಾಡ್ ಅವರ ಉಪಸ್ಥಿತಿಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು

ಈ ಪುರಸ್ಕಾರವು ನಗದು ಪುರಸ್ಕಾರ, ಪ್ರಶಸ್ತಿ ಪತ್ರ ಹಾಗೂ ಗ್ರಂಥ ಗೌರವವನ್ನು ಒಳಗೊಂಡಿದ್ದು ಫೆಬ್ರವರಿ ತಿಂಗಳಲ್ಲಿ ಮುಂಬೈ ವಿಶ್ವವಿದ್ಯಾಲಯದಲ್ಲಿ ಈ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಲಿದೆ ಎಂಬುದಾಗಿ ಪ್ರತಿಷ್ಠಾನದ ಪ್ರಕಟಣೆ ತಿಳಿಸಿದೆ.

ಅನಿತಾ ಪೂಜಾರಿಯವರು ಕವಿಯಾಗಿ, ಲೇಖಕರಾಗಿ, ಕಥೆಗಾರರಾಗಿ ಸಾಹಿತ್ಯ ಕ್ಷೇತ್ರದಲ್ಲಿ ಪರಿಚಿತರಾಗಿದ್ದಾರೆ. ಇವರು  ಕೆ.ಎಸ್.ಒ.ಯು. ಮೈಸೂರು ವಿಶ್ವವಿದ್ಯಾಲಯದಲ್ಲಿ ಬಿ.ಎ. ಪದವಿ ಪಡೆದಿದ್ದಾರೆ. ಮುಂಬೈ ವಿಶ್ವವಿದ್ಯಾಲಯದಲ್ಲಿ ಎಂ.ಎ. ಪದವಿಯನ್ನು ಪ್ರಥಮ ರ್ಯಾಂಕ್‍ನೊಂದಿಗೆ ಪಡೆಯುವುದರ ಮೂಲಕ ಎಂ.ಬಿ.ಕುಕ್ಯಾನ್ ಬಂಗಾರದ ಪದಕದ ಅರ್ಹತೆಯನ್ನು ಸಾಧಿಸಿದ್ದಾರೆ. ಇದೀಗ ಮುಂಬಯಿ ವಿಶ್ವವಿದ್ಯಾಲಯದಲ್ಲಿ ಡಾ.ಜಿ. ಎನ್. ಉಪಾಧ್ಯ ಅವರ ಮಾರ್ಗದರ್ಶನದಲ್ಲಿ “ಮುಂಬಯಿ ಬಿಲ್ಲವರು ಸಾಂಸ್ಕೃತಿಕ ಅಧ್ಯಯನ” ಈ ವಿಷಯದ ಕುರಿತು ಪಿಎಚ್.ಡಿ ಅಧ್ಯಯನದಲ್ಲಿ ನಿರತರಾಗಿದ್ದಾರೆ. ಈಗಾಗಲೇ ಅನಿತಾ ಅವರ ಒಟ್ಟು ಎಂಟು ಕೃತಿಗಳು ಲೋಕಾರ್ಪಣೆಗೊಂಡಿವೆ.

ಪಿಎಚ್.ಡಿ ಕೋರ್ಸ್ ವರ್ಕ್ ನ ಸಲುವಾಗಿ ಜಯ ಸಿ. ಸುವರ್ಣರ ಕುರಿತು ಸಿದ್ಧಪಡಿಸಿದ ‘ಸುವರ್ಣಯುಗ’ ಶೋಧ ಪ್ರಬಂಧಕ್ಕೆ ಮುಂಬೈ ವಿಶ್ವವಿದ್ಯಾಲಯದ ವತಿಯಿದ ಸಂಶೋಧಕಿ ಡಾ.ಲೀಲಾ ಬಿ. ಅವರು ಕೊಡಮಾಡುವ ‘ಶೋಧಸಿರಿ’ ಪುರಸ್ಕಾರ, ನಿವಾಳಿಸಿ ಬಿಟ್ಟ ಕೋಳಿ ಕಥಾಕವನಸಂಕಲನಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕೊಡಮಾಡುವ 2022ನೆಯ ಸಾಲಿನ ಕೆ. ವಸುದೇವಾಚಾರ್ಯ ದತ್ತಿ ಪ್ರಶಸ್ತಿ  ಮಾಣಿಕ್ಯ ಪ್ರಕಾಶನದ ವತಿಯಿಂದ ಪದ್ಮಾವತಿ ವೆಂಕಟೇಶ ದತ್ತಿ ಪುರಸ್ಕಾರ, ‘ಅಂತರಂಗದ ಮೃದಂಗ’ದ ಹಸ್ತಪ್ರತಿಗೆ, ಜಗಜ್ಯೋತಿ ಕಲಾವೃಂದ ಮುಂಬೈ ವತಿಯಿಂದ ‘ಶ್ರೀಮತಿ ಸುಶೀಲಾ ಎಸ್. ಶೆಟ್ಟಿ ಸ್ಮಾರಕ ಕಾವ್ಯ ಪ್ರಶಸ್ತಿ’, ಜನಸ್ಪಂದನ ಟ್ರಸ್ಟ್(ರಿ) ಸುವ್ವಿ ಪಬ್ಲಿಕೇಷನ್ಸ್, ಶಿಕಾರಿಪುರ ಕೊಡಮಾಡುವ ‘ಅಲ್ಲಮ ಸಾಹಿತ್ಯ ಪ್ರಶಸ್ತಿ’, ಕನ್ನಡ ಕಲರವ ಮತ್ತು ಅವ್ವ ಪುಸ್ತಕಾಲಯದ ವತಿಯಿಂದ ‘ಸೃಜನಶೀಲ ಸಾಹಿತಿ ಪ್ರಶಸ್ತಿ’ ಲಭಿಸಿದೆ. ಮೋಹನ ತರಂಗ’ ಈ ಕೃತಿಗೆ 2019-20ನೆಯ ಸಾಲಿನ ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ನಗದು ಪುರಸ್ಕಾರ ಪ್ರಾಪ್ತಿಯಾಗಿದೆ. ಗ್ರಾಮಾಂತರ ಬುದ್ಧಿಜೀವಿಗಳ ಬಳಗ ವತಿಯಿಂದ  ಎರಡು ಬಾರಿ ‘ಪ್ರೇಮಕಾವ್ಯ ಪುರಸ್ಕಾರ’ ಹಾಗೂ ‘ವಿಶ್ವ ಕವಿ ಕುವೆಂಪು ಕಾವ್ಯ ಪುರಸ್ಕಾರ’ ಲಭಿಸಿದೆ.

ಮಹಾರಾಷ್ಟ್ರ ನವಚಿಂತನ ಸಂಸ್ಥೆಯಿಂದ ಕವಿರತ್ನ ಪುರಸ್ಕಾರ, ಮುಂಬಯಿ ಕಲಾಜಗತ್ತು ಸಂಸ್ಥೆಯ ವತಿಯಿಂದ ‘ದಿ ಗೋಪಾಲಕೃಷ್ಣ ಸ್ಮಾರಕ ಪ್ರಶಸಿ’್ತ, ಡೊಂಬಿವಲಿ ತುಳುಕೂಟದ ವತಿಯಿಂದ ‘ತುಳುಸಿರಿ ಪ್ರಶಸ್ತಿ’, ಕನ್ನಡ ಕವಿವಾಣಿ ಪತ್ರಿಕಾ ಬಳಗದ ವತಿಯಿಂದ  ‘ಕಾವ್ಯಸಿರಿ ಪ್ರಶಸ್ತಿ’, ಕಲಾ ಸೌರಭ ಮುಂಬಯಿ ವತಿಯಿಂದ ‘ಅಮೃತ ಸೌರಭ ಪುರಸ್ಕಾರ’, ಶ್ರೀಕೃಷ್ಣ ವಿಠ್ಠಲ ಪ್ರತಿಷ್ಠಾನದ ವತಿಯಿಂದ ‘ಶ್ರೀ ಕೃಷ್ಣ ವಿಠ್ಠಲ ಪ್ರಶಸ್ತಿ’ ಲಭಿಸಿದೆ. ಇವರು 2019ರಲ್ಲಿ  ಮೈಸೂರು ಅರಮನೆಯಲ್ಲಿ ನಡೆದ ವಿಶ್ವವಿಖ್ಯಾತ ದಸರಾ ಕವಿಗೋಷ್ಠಿಯಲ್ಲೂ ಭಾಗವಹಿಸಿ ಗೌರವ ಪುರಸ್ಕಾರವನ್ನು ಪಡೆದಿರುತ್ತಾರೆ. ಇವರ ಕತೆ ಕವಿತೆಗಳಿಗೆ ಲಭಿಸಿದ ಹಲವಾರು ಬಹುಮಾನ, ಪುರಸ್ಕಾರಗಳು ಇವರ ಸಾಹಿತ್ಯ ಶಕ್ತಿಗೆ ಸಾಕ್ಷಿಯಾಗಿವೆ. ಪ್ರಸ್ತುತ ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ(ರಿ)ಇದರ ಕಾರ್ಯಕಾರಿ ಸಮಿತಿಯ ಸದಸ್ಯರಾಗಿದ್ದಾರೆ.

ಮುಂಬಯಿ ಮತ್ತು ಮಂಗಳೂರು ಆಕಾಶವಾಣಿಯಲ್ಲಿ ಇವರ ಕತೆ, ಭಾವಗೀತೆ ಮತ್ತು ಕವನಗಳು ಪ್ರಸಾರಗೊಂಡಿವೆ. ಇವರು 2019ರಲ್ಲಿ  ಮೈಸೂರು ಅರಮನೆಯಲ್ಲಿ ನಡೆದ ವಿಶ್ವವಿಖ್ಯಾತ ದಸರಾ ಕವಿಗೋಷ್ಠಿಯಲ್ಲೂ ಭಾಗವಹಿಸಿ ಗೌರವ ಪುರಸ್ಕಾರವನ್ನು ಪಡೆದಿದ್ದಾರೆ. ಪ್ರಸ್ತುತ ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ(ರಿ)ಇದರ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »