TOP STORIES:

FOLLOW US

ಅನಿತಾ ಪಿ.ತಾಕೊಡೆಯವರ ಸುವರ್ಣಯುಗ ಕೃತಿಗೆ ಡಾ. ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನ ಮುಂಬಯಿ ವತಿಯಿಂದ “ವಿಕಾಸ ಪುಸ್ತಕ ಬಹುಮಾನ”


ಮುಂಬಯಿ:- ಹಿರಿಯ ಸಾಹಿತಿ, ಲೇಖಕ, ಪ್ರಾಧ್ಯಾಪಕ ಡಾ.ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನವು ಮುಂಬಯಿ ಕನ್ನಡ ಪುಸ್ತಕ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಕೊಡಮಾಡುತ್ತಾ ಬಂದ ಪುಸ್ತಕ ಬಹುಮಾನ ಯೋಜನೆಯಂತೆ 2023-24ರ ಸಾಲಿನ ವಿಕಾಸ’ ಪುಸ್ತಕ ಬಹುಮಾನಕ್ಕೆ, ಅನಿತಾ ಪಿ. ತಾಕೊಡೆ ಅವರ ಸುವರ್ಣಯುಗ ಕೃತಿ  ಆಯ್ಕೆಯಾಗಿದೆ. ಪ್ರತಿಷ್ಠಾನದ ಅಧ್ಯಕ್ಷರಾದ ಡಾ.ಜಿ.ಎನ್.ಉಪಾಧ್ಯ, ಪ್ರತಿಷ್ಠಾನದ ಸಂಸ್ಥಾಪಕರಾದ ಡಾ.ವಿಶ್ವನಾಥ ಕಾರ್ನಾಡ್, ಕೋಶಾಧಿಕಾರಿ ಶರತ್ ಕಾರ್ನಾಡ್ ಅವರ ಉಪಸ್ಥಿತಿಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು

ಈ ಪುರಸ್ಕಾರವು ನಗದು ಪುರಸ್ಕಾರ, ಪ್ರಶಸ್ತಿ ಪತ್ರ ಹಾಗೂ ಗ್ರಂಥ ಗೌರವವನ್ನು ಒಳಗೊಂಡಿದ್ದು ಫೆಬ್ರವರಿ ತಿಂಗಳಲ್ಲಿ ಮುಂಬೈ ವಿಶ್ವವಿದ್ಯಾಲಯದಲ್ಲಿ ಈ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಲಿದೆ ಎಂಬುದಾಗಿ ಪ್ರತಿಷ್ಠಾನದ ಪ್ರಕಟಣೆ ತಿಳಿಸಿದೆ.

ಅನಿತಾ ಪೂಜಾರಿಯವರು ಕವಿಯಾಗಿ, ಲೇಖಕರಾಗಿ, ಕಥೆಗಾರರಾಗಿ ಸಾಹಿತ್ಯ ಕ್ಷೇತ್ರದಲ್ಲಿ ಪರಿಚಿತರಾಗಿದ್ದಾರೆ. ಇವರು  ಕೆ.ಎಸ್.ಒ.ಯು. ಮೈಸೂರು ವಿಶ್ವವಿದ್ಯಾಲಯದಲ್ಲಿ ಬಿ.ಎ. ಪದವಿ ಪಡೆದಿದ್ದಾರೆ. ಮುಂಬೈ ವಿಶ್ವವಿದ್ಯಾಲಯದಲ್ಲಿ ಎಂ.ಎ. ಪದವಿಯನ್ನು ಪ್ರಥಮ ರ್ಯಾಂಕ್‍ನೊಂದಿಗೆ ಪಡೆಯುವುದರ ಮೂಲಕ ಎಂ.ಬಿ.ಕುಕ್ಯಾನ್ ಬಂಗಾರದ ಪದಕದ ಅರ್ಹತೆಯನ್ನು ಸಾಧಿಸಿದ್ದಾರೆ. ಇದೀಗ ಮುಂಬಯಿ ವಿಶ್ವವಿದ್ಯಾಲಯದಲ್ಲಿ ಡಾ.ಜಿ. ಎನ್. ಉಪಾಧ್ಯ ಅವರ ಮಾರ್ಗದರ್ಶನದಲ್ಲಿ “ಮುಂಬಯಿ ಬಿಲ್ಲವರು ಸಾಂಸ್ಕೃತಿಕ ಅಧ್ಯಯನ” ಈ ವಿಷಯದ ಕುರಿತು ಪಿಎಚ್.ಡಿ ಅಧ್ಯಯನದಲ್ಲಿ ನಿರತರಾಗಿದ್ದಾರೆ. ಈಗಾಗಲೇ ಅನಿತಾ ಅವರ ಒಟ್ಟು ಎಂಟು ಕೃತಿಗಳು ಲೋಕಾರ್ಪಣೆಗೊಂಡಿವೆ.

ಪಿಎಚ್.ಡಿ ಕೋರ್ಸ್ ವರ್ಕ್ ನ ಸಲುವಾಗಿ ಜಯ ಸಿ. ಸುವರ್ಣರ ಕುರಿತು ಸಿದ್ಧಪಡಿಸಿದ ‘ಸುವರ್ಣಯುಗ’ ಶೋಧ ಪ್ರಬಂಧಕ್ಕೆ ಮುಂಬೈ ವಿಶ್ವವಿದ್ಯಾಲಯದ ವತಿಯಿದ ಸಂಶೋಧಕಿ ಡಾ.ಲೀಲಾ ಬಿ. ಅವರು ಕೊಡಮಾಡುವ ‘ಶೋಧಸಿರಿ’ ಪುರಸ್ಕಾರ, ನಿವಾಳಿಸಿ ಬಿಟ್ಟ ಕೋಳಿ ಕಥಾಕವನಸಂಕಲನಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕೊಡಮಾಡುವ 2022ನೆಯ ಸಾಲಿನ ಕೆ. ವಸುದೇವಾಚಾರ್ಯ ದತ್ತಿ ಪ್ರಶಸ್ತಿ  ಮಾಣಿಕ್ಯ ಪ್ರಕಾಶನದ ವತಿಯಿಂದ ಪದ್ಮಾವತಿ ವೆಂಕಟೇಶ ದತ್ತಿ ಪುರಸ್ಕಾರ, ‘ಅಂತರಂಗದ ಮೃದಂಗ’ದ ಹಸ್ತಪ್ರತಿಗೆ, ಜಗಜ್ಯೋತಿ ಕಲಾವೃಂದ ಮುಂಬೈ ವತಿಯಿಂದ ‘ಶ್ರೀಮತಿ ಸುಶೀಲಾ ಎಸ್. ಶೆಟ್ಟಿ ಸ್ಮಾರಕ ಕಾವ್ಯ ಪ್ರಶಸ್ತಿ’, ಜನಸ್ಪಂದನ ಟ್ರಸ್ಟ್(ರಿ) ಸುವ್ವಿ ಪಬ್ಲಿಕೇಷನ್ಸ್, ಶಿಕಾರಿಪುರ ಕೊಡಮಾಡುವ ‘ಅಲ್ಲಮ ಸಾಹಿತ್ಯ ಪ್ರಶಸ್ತಿ’, ಕನ್ನಡ ಕಲರವ ಮತ್ತು ಅವ್ವ ಪುಸ್ತಕಾಲಯದ ವತಿಯಿಂದ ‘ಸೃಜನಶೀಲ ಸಾಹಿತಿ ಪ್ರಶಸ್ತಿ’ ಲಭಿಸಿದೆ. ಮೋಹನ ತರಂಗ’ ಈ ಕೃತಿಗೆ 2019-20ನೆಯ ಸಾಲಿನ ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ನಗದು ಪುರಸ್ಕಾರ ಪ್ರಾಪ್ತಿಯಾಗಿದೆ. ಗ್ರಾಮಾಂತರ ಬುದ್ಧಿಜೀವಿಗಳ ಬಳಗ ವತಿಯಿಂದ  ಎರಡು ಬಾರಿ ‘ಪ್ರೇಮಕಾವ್ಯ ಪುರಸ್ಕಾರ’ ಹಾಗೂ ‘ವಿಶ್ವ ಕವಿ ಕುವೆಂಪು ಕಾವ್ಯ ಪುರಸ್ಕಾರ’ ಲಭಿಸಿದೆ.

ಮಹಾರಾಷ್ಟ್ರ ನವಚಿಂತನ ಸಂಸ್ಥೆಯಿಂದ ಕವಿರತ್ನ ಪುರಸ್ಕಾರ, ಮುಂಬಯಿ ಕಲಾಜಗತ್ತು ಸಂಸ್ಥೆಯ ವತಿಯಿಂದ ‘ದಿ ಗೋಪಾಲಕೃಷ್ಣ ಸ್ಮಾರಕ ಪ್ರಶಸಿ’್ತ, ಡೊಂಬಿವಲಿ ತುಳುಕೂಟದ ವತಿಯಿಂದ ‘ತುಳುಸಿರಿ ಪ್ರಶಸ್ತಿ’, ಕನ್ನಡ ಕವಿವಾಣಿ ಪತ್ರಿಕಾ ಬಳಗದ ವತಿಯಿಂದ  ‘ಕಾವ್ಯಸಿರಿ ಪ್ರಶಸ್ತಿ’, ಕಲಾ ಸೌರಭ ಮುಂಬಯಿ ವತಿಯಿಂದ ‘ಅಮೃತ ಸೌರಭ ಪುರಸ್ಕಾರ’, ಶ್ರೀಕೃಷ್ಣ ವಿಠ್ಠಲ ಪ್ರತಿಷ್ಠಾನದ ವತಿಯಿಂದ ‘ಶ್ರೀ ಕೃಷ್ಣ ವಿಠ್ಠಲ ಪ್ರಶಸ್ತಿ’ ಲಭಿಸಿದೆ. ಇವರು 2019ರಲ್ಲಿ  ಮೈಸೂರು ಅರಮನೆಯಲ್ಲಿ ನಡೆದ ವಿಶ್ವವಿಖ್ಯಾತ ದಸರಾ ಕವಿಗೋಷ್ಠಿಯಲ್ಲೂ ಭಾಗವಹಿಸಿ ಗೌರವ ಪುರಸ್ಕಾರವನ್ನು ಪಡೆದಿರುತ್ತಾರೆ. ಇವರ ಕತೆ ಕವಿತೆಗಳಿಗೆ ಲಭಿಸಿದ ಹಲವಾರು ಬಹುಮಾನ, ಪುರಸ್ಕಾರಗಳು ಇವರ ಸಾಹಿತ್ಯ ಶಕ್ತಿಗೆ ಸಾಕ್ಷಿಯಾಗಿವೆ. ಪ್ರಸ್ತುತ ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ(ರಿ)ಇದರ ಕಾರ್ಯಕಾರಿ ಸಮಿತಿಯ ಸದಸ್ಯರಾಗಿದ್ದಾರೆ.

ಮುಂಬಯಿ ಮತ್ತು ಮಂಗಳೂರು ಆಕಾಶವಾಣಿಯಲ್ಲಿ ಇವರ ಕತೆ, ಭಾವಗೀತೆ ಮತ್ತು ಕವನಗಳು ಪ್ರಸಾರಗೊಂಡಿವೆ. ಇವರು 2019ರಲ್ಲಿ  ಮೈಸೂರು ಅರಮನೆಯಲ್ಲಿ ನಡೆದ ವಿಶ್ವವಿಖ್ಯಾತ ದಸರಾ ಕವಿಗೋಷ್ಠಿಯಲ್ಲೂ ಭಾಗವಹಿಸಿ ಗೌರವ ಪುರಸ್ಕಾರವನ್ನು ಪಡೆದಿದ್ದಾರೆ. ಪ್ರಸ್ತುತ ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ(ರಿ)ಇದರ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.


Share:

More Posts

Category

Send Us A Message

Related Posts

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share       ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »

ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಪುಣೆಯ ಸಮಾಜಸೇವಕ   “ವಿಶ್ವನಾಥ ಪೂಜಾರಿ ಕಡ್ತಲ’ ಆಯ್ಕೆ


Share       ಪುಣೆ :ಪುಣೆ ಬಿಲ್ಲವ ಸಮಾಜ ಸೇವಾ ಸಂಘ ಇದರ ಅಧ್ಯಕ್ಷ ,ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಗುರುತಿಸಿಕೊಂಡಿರುವ ವಿಶ್ವನಾಥ ಪೂಜಾರಿ ಕಡ್ತಲ ಇವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ -2025  ಗೆ ಆಯ್ಕೆಯಾಗಿರುತ್ತಾರೆ .


Read More »

ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ 1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ


Share       ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ  1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ ಯತೀವರ್ಯರು, ಸಚಿವ ಮಾಂಕಳ್ ವೈದ್ಯ, ಶಾಸಕ ಹರೀಶ್ ಪೂಂಜ, ಸೇರಿದಂತೆ ಬೆಳ್ತಂಗಡಿಯಿಂದ ಸುಮಾರು 200


Read More »

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ


Share         ಪ್ರಸಿದ್ದ ಬೈದ್ಯೇರುಗಳ ಪಾತ್ರಿಯಾದ  ಶ್ರೀ ಸುರೇಶ್ ಪೂಜಾರಿಯವರು ಅಲ್ಪಕಾಲದ  ಅಸೌಖ್ಯದ ಕಾರಣ ಇಂದು ಭಗವಂತನ ಪಾದ ಸೇರಿದರು. ಕಳತ್ತೂರು ಹಿರಿಯಣ್ಣ ಪೂಜಾರಿ ಹಾಗೂ ಶ್ರೀಮತಿ ಲೀಲಾವತಿ ಪೂಜಾರಿಯವರ ಮಗನಾದ ಶ್ರೀ ಸುರೇಶ್


Read More »

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »

ಮೂಡಬಿದಿರಿಯಲ್ಲೊಂದು 75 ಸಂಭ್ರಮ ಕ್ಕೆ ಸ್ನೇಹ ಸೇತುವಾದ ಸಿಂಗಾಪೂರ ಬಿಲ್ಲವ ಅಸೋಸಿಯೇಷನ್


Share       ಮೂಡಬಿದಿರಿಯಿಂದ ಸಿಂಗಪೂರಿಗೆ 🇸🇬: ಜಾಗತಿಕ ಸಮುದಾಯ ಸಂಬಂಧಗಳ ಬಲವರ್ಧನೆ: ಜಾಗತಿಕ ಸಮುದಾಯ ಸಂಬಂಧಗಳನ್ನು ಬಲಪಡಿಸುವ ದಿಕ್ಕಿನಲ್ಲಿ ಮಹತ್ವಪೂರ್ಣ ಹೆಜ್ಜೆವಹಿಸಿ, ಬಿಲ್ಲವ ಅಸೋಸಿಯೇಷನ್ ಸಿಂಗಪೂರಿನ ಸ್ಥಾಪಕರಾದ ಅಶ್ವಿತ್ ಬಂಗೇರಾ ಅವರು, ಬಿಲ್ಲವ ಅಸೋಸಿಯೇಷನ್ ಮೂಡಬಿದಿರಿಯ


Read More »