TOP STORIES:

FOLLOW US

ಮಹಾ ಕುಂಭಮೇಳ: ಮಹಾಮಂಡಲೇಶ್ವರರಾಗಿ ಪಟ್ಟಾಭಿಶಕ್ತರಾದ ಕನ್ಯಾಡಿ ಶ್ರೀರಾಮ ಕ್ಷೇತ್ರದ ಬ್ರಹ್ಮಾನಂದ ಶ್ರೀ ಕರ್ನಾಟಕಕ್ಕೆ ಸಂದ ಮೊದಲ ಗೌರವ


ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ನಿತ್ಯಾನಂದ ನಗರದ

ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರಿಗೆ ಜ.31 ರಂದು ಪ್ರಯಾಗ್ ರಾಜ್ ನಲ್ಲಿ ನಡೆದ ಮಹಾ ಕುಂಬಮೇಳದಲ್ಲಿ ಉತ್ತರ ಭಾರತದ ನಾಗಾಸಾದು ಸನ್ಯಾಸಿ ಪರಂಪರೆಯಲ್ಲಿ ಅತ್ಯುನ್ನತ ಹುದ್ದೆಯಾದ ಮಹಾಮಂಡಲೇಶ್ವರ ಪದವಿಯನ್ನು ಜುನಾ ಅಖಾಡದ ಮೂಲಕ ಪಟ್ಟಾಭಿಷೇಕ ನೆರವೇರಿತು.

ಧಾರ್ಮಿಕ ಕ್ಷೇತ್ರ, ಆಧ್ಯಾತ್ಮಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಉನ್ನತ ಸಾಧನೆ ಮಾಡಿದ ಮಹಾಪುರುಷರಿಗೆ ಈ ಪದವಿಯನ್ನು ಪ್ರದಾನ ಮಾಡುವುದು ಅಖಾಡದ ವಾಡಿಕೆಯಾಗಿದೆ. ಈ ಪದವಿಗೆ ಅರ್ಹರಾದವರು ಸ್ವತಂತ್ರ್ಯ ಪೀಠಾಧೀಶರಾಗಿರಬೇಕಾಗಿದೆ. ಪಟ್ಟಾಭಿಷೇಕಕ್ಕೂ ಮುನ್ನ ಅಖಾಡದಲ್ಲಿರುವ ಕ್ಯಾಬಿನೇಟ್ ಸದಸ್ಯರು ಸ್ವಾಮೀಜಿವರ ಆಧ್ಯಾತ್ಮಿಕ ಸತ್ಸಂಗವನ್ನು ಪರಿಶೀಲಿಸಿ ಬೈಟಕ್ ನಲ್ಲಿ ಚರ್ಚೆ ನಡೆಸಿ ಗೌರವ ಪ್ರದಾನ ಮಾಡುವುದಾಗಿದೆ. ಶ್ರೀಗಳು ಮುಂದೆ ರಾಷ್ಟ್ರಾದ್ಯಂತ ಧರ್ಮ ಪ್ರಚಾರದ ಜತೆಗೆ ಆಧ್ಯಾತ್ಮದ ಉನ್ನತ ಸಾಧನೆಗಾಗಿ ಧಾರ್ಮಿಕ ಮೌಲ್ಯಗಳನ್ನು ಮತ್ತಷ್ಟು ಬಲಿಷ್ಠಗೊಳಿಸಲು ಅರ್ಹತೆಯುಳ್ಳವರಾಗಿದ್ದಾರೆಂದು ಪರಿಗಣಿಸಿ ನಾಗಾ ಸಾದು ಸನ್ಯಾಸಿ ಪರಂಪರೆಯಲ್ಲಿ ಜುನಾ ಅಖಾಡ ಈ ಜವಾಬ್ದಾರಿಯನ್ನು ನೀಡಿದೆ.

ಕರ್ನಾಟದಲ್ಲಿ ಇದೇ ಮೊದಲು:

ದಕ್ಷಿಣ ಭಾರತದಲ್ಲಿ ಮಹಾಮಂಡಲೇಶ್ವರ ಪಟ್ಟ ನೀಡಿದ್ದು ವಿರಳ. ಸ್ವಾಮೀಜಿಗಳ ಪೈಕಿ ಕನ್ಯಾಡಿ ಶ್ರೀರಾಮಕ್ಷೇತ್ರದ ಸದ್ಗರು ಶ್ರೀಗಳ ಮೂಲಕ ಕರ್ನಾಟಕಕ್ಕೆ ಬರುವ ಪ್ರಪ್ರಥಮ ಮಹಾಮಂಡಲೇಶ್ವರ ಪದವಿಯಾಗಿದೆ. ಈ ಪಟ್ಟಾಭಿಷೇಕರಾದವರಿಗೆ ಧಾರ್ಮಿಕ ಪುರುಷನಿಗೆ ರಾಷ್ಟ್ರಾದ್ಯಂತ ವಿಶೇಷ ಸೌಲಭ್ಯ ನೀಡಲಾಗುತ್ತದೆ. ವಾರಣಾಸಿಯ ಪಂಚದಶನಾಮ್ ಜುನಾ ಅಖಾಡದಲ್ಲಿರುವ ಸಾಧು ಸಮಾಜದ ಮಹಾಮಂಡಲೇಶ್ವರ ಆಚಾರ್ಯರಾದ ಅವದೇಶಾನಂದ ಗಿರಿ ಮಹಾರಾಜರು ಈ ಪುಣ್ಯ ಕಾರ್ಯದ ಪಟ್ಟಾಭಿಷೇಕವನ್ನು ಶುಕ್ರವಾರ ಮಹಾಕುಂಭಮೇಳದಲ್ಲಿ ನಿರ್ವಹಿಸಿದರು.

ಜ.31 ರಂದು ಪ್ರಯಾಗ್ ರಾಜ್ ಮಹಾ ಕುಂಬಮೇಳದಲ್ಲಿ ಮಹಾಮಂಡಲೇಶ್ವರರಾಗಿ ಕುಂಬಮೇಳ ಕ್ಷೇತ್ರದಲ್ಲಿ ಅಂತಾರಾಷ್ಟ್ರೀಯ ಜುನಾ ಅಖಾಡದ ಅಧ್ಯಕ್ಷರಾದ ಹರಿಗಿರಿ ಮಹಾರಾಜ್, ಜುನಾ ಅಖಾಡ ಉಪಾಧ್ಯಕ್ಷರಾದ ವಿದ್ಯಾನಂದ ಸರಸ್ವತಿ ಸ್ವಾಮೀಜಿ, ಜುನಾ ಅಖಾಡದ ಉತ್ತಾರಾಖಂಡ ಮಹಾಮಂತ್ರಿ ದೇವಾನಂದ ಮಹಾರಾಜ್, ಕೋಶಾಧಿಕಾರಿ ದೀರಜ್ ಗಿರಿ, ಕನ್ಯಾಡಿ ಶ್ರೀರಾಮ ಕ್ಷೇತ್ರದ ಟ್ರಸ್ಟಿ ತುಕಾರಾಮ್ ಸಾಲ್ಯಾನ್, ಕೃಷ್ಣಪ್ಪ ಗುಡಿಗಾ‌ರ್, ರವೀಂದ್ರ ಪೂಜಾರಿ ಆರ್ಲ, ಹರ್ಷಿತ್ ಉಪಸ್ಥಿತರಿದ್ದರು.

ಶ್ರೀಗಳು ಕನ್ಯಾಡಿಗೆ ಫೆ.2 ರಂದು ಆಗಮಿಸಲಿದ್ದು, ಮಾರ್ಚ್ ತಿಂಗಳಲ್ಲಿ ಸಾರ್ವಜನಿಕರಿಂದ ಅಭಿನಂದನಾ ಸಮಾರಂಭನಡೆಯಲಿದೆ.

9 ಕಡೆ ಶಾಖಾ ಮಠದ ಮಹದಾಸೆ:

ಧರ್ಮಸ್ಥಳ ಗ್ರಾಮದ ನಿತ್ಯಾನಂದ ನಗರದ ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಶ್ರೀ ಆತ್ಮಾನಂದ ಸರಸ್ವತಿ ಸ್ವಾಮೀಜಿಯವರ ಬಳಿಕ ಪೀಠಾಧೀಶರಾದವರು ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರು. ಬಳಿಕ ಜಗದ್ಗುರುಗಳಾಗಿ ಉಡುಪಿ, ಭಟ್ಕಳ ಅಶ್ರಕೇರಿ ನಿಶ್ಚಳ ಮಕ್ಕಿ, ಭಟ್ಕಳದ ಕರಿಕಲ್ ಸಮುದ್ರ ಕಿನಾರೆ ರಾಮಮಂದಿರ ಸಹಿತ ಹರಿದ್ವಾರ ಗಂಗಾ ಕಿನಾರೆಯಲ್ಲಿ ಶಾಖಾ ಮಠ ಸ್ಥಾಪಿಸಿದ್ದಾರೆ. ಪ್ರಸ್ತುತ ಅಯೋಧ್ಯೆಯಲ್ಲಿ ಶಾಖಾ ಮಠ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು,

ಕೇರಳ, ತಿರುಪತಿ, ಶಿವಮೊಗ್ಗ ದಲ್ಲಿ ಶಾಖಾ ಮಠ ನಿರ್ಮಿಸಲು ಜಾಗ ನಿಗದಿಯಾಗಿದೆ. ಈ ಮೂಲಕ ಭಾರತದಲ್ಲಿ ಒಟ್ಟು 9 ಕಡೆ ಶಾಖಾ ಮಠ ನಿರ್ಮಿಸಿ ಜನರಲ್ಲಿ ಧಾರ್ಮಿಕ ಪ್ರಜ್ಞೆ ಉತ್ತೇಜಿಸುತ್ತಿದ್ದಾರೆ. 2018 ರಲ್ಲಿ ದಕ್ಷಿಣ ಭಾರತದಲ್ಲಿ ಪ್ರಪ್ರಥಮ ಬಾರಿಗೆ ಕನ್ಯಾಡಿಗೆ ರಾಷ್ಟ್ರದಾದ್ಯಂತ ಸಾದುಸಂತರನ್ನು ಕರೆಸಿ ಧರ್ಮ ಸಂಸತ್ ನಡೆಸಿದ್ದರು.

ಹೇಳಿಕೆ

ಮಹಾಕುಂಭ ಎಂಬುದು ವಿಶ್ವಕ್ಕೆ ಧಾರ್ಮಿಕ ಪ್ರಜ್ಞೆಯ ದಿಕ್ಕೂಚಿಯಾಗಿತ್ತು. ಐದು ವರ್ಷದ ಮಕ್ಕಳಿಂದ ಹಿಡಿದು 120 ವರ್ಷದ ಮುದುಕರ ವರೆಗೆ ತ್ರಿವೇಣಿ ಸಂಗಮದಲ್ಲಿ ಮುಳುಗಿ ಪಾವನರಾಗಿದ್ದಾರೆ. 12 ವರ್ಷಕ್ಕೊಮ್ಮೆ ನಡೆಯುವ ಕುಂಬ ಮೇಳದಲ್ಲಿ ಅಮೃತ ಉತ್ಪತಿಯಾಗುತ್ತದೆ ಎಂಬ ಪ್ರತೀತಿ. ಅದರಲ್ಲೂ 144 ವರ್ಷಕ್ಕೊಮ್ಮೆ ಬರುವ ಈ ಮಹಾಕುಂಭದಲ್ಲಿ ಹಿಮಾಲಯದ ದೊಡ್ಡ ದೊಡ್ಡ ಸಾಧಕರು ಬಂದು ಆ ನದಿಯ ಪವಿತ್ರತೆಯನ್ನು ಹೆಚ್ಚಿಸುತ್ತಾರೆ. ನಮ್ಮನ್ನ ರಥದ ಮೂಲಕ ಕರೆದೊಯ್ದು ಪುಣ್ಯ ಸ್ನಾನ ಮಾಡಿಸಿದ್ದಾರೆ.


Share:

More Posts

Category

Send Us A Message

Related Posts

ಶ್ರೀ ಗುರು ಸೇವಾ ಸಮಿತಿ ಬಹರೈನ್ ಬಿಲ್ಲವಾಸ್ ಕೂಟದ ವತಿಯಿಂದ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ


Share       ಶ್ರೀ ಗುರು ಸೇವಾ ಸಮಿತಿ ಬಹರೈನ್ ಬಿಲ್ಲವಾಸ್ ಕೂಟದ ವತಿಯಿಂದ 14-02-2025 ರಂದು ಅಧ್ಯಕ್ಷರಾದ ಹರೀಶ್ ಪೂಜಾರಿ ಅವರ ಅಧ್ಯಕ್ಷತೆಯಲ್ಲಿಂದು ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಹರೈನ್ ನಲ್ಲಿ ಬಿಡುಗಡೆ


Read More »

ಸರ್ಕಾರಿ ಆಸ್ಪತ್ರೆಗಳಲ್ಲಿದೆ ಗುಣಮಟ್ಟದ ಚಿಕಿತ್ಸೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಶ್ಲಾಘನೆ


Share       ಮಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲೂ ಗುಣಮಟ್ಟದ ಚಿಕಿತ್ಸೆ ಸಿಗುತ್ತದೆ ಎನ್ನುವುದಕ್ಕೆ ವೆನ್ಲಾಕ್ ಆಸ್ಪತ್ರೆ ಉತ್ತಮ ನಿದರ್ಶನ. ಸರ್ಕಾರಿ ಆಸ್ಪತ್ರೆಗಳ ಬಗ್ಗೆ ತಾತ್ಸಾರ ಬೇಡ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.


Read More »

ಗೆಜ್ಜೆಗಿರಿಯ ಮೂಲಕ ಬಿಲ್ಲವ ಸಮಾಜಕ್ಕೆ ಸಂಘಟಾನಾತ್ಮಕ ಬಲ ತುಂಬಲು ಹೊರಟ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಗೆ ಅಭಿನಂದನೆ


Share       ಬಿಲ್ಲವ ಸಮಾಜ ಸೇವಾ ಸಂಘ(ರಿ) ಕುಂದಾಪುರ ಇದರ ಅಧ್ಯಕ್ಷರಾದ ಅಶೋಕ್ ಪೂಜಾರಿ ಬಿಜಾಡಿ ಹಾಗೂ ಸಂಘದ ಪಧಾಧಿಕಾರಿಗಳು  ಬ್ರಹ್ಮ ಶ್ರೀ ನಾರಾಯಣ ಗುರುಗಳ ವಿದ್ಯೆಯಿಂದ ಸ್ವತಂತ್ರರಾಗಿರಿ ಸಂಘಟನೆಯಿಂದ  ಬಲಯುತರಾಗಿ ಎಂಬ ತತ್ವದಂತೆ  ಬಿಲ್ಲವ


Read More »

ರಕ್ತಹೀನತೆಯಿಂದ ಬಳಲುತ್ತಿರುವವರು ಹುರುಳಿ ಸೇವನೆ ಮಾಡಿ


Share       ಹುರುಳಿ ನಾಲಿಗೆಗೆ ರುಚಿ ನೀಡುವುದರ ಜೊತೆಗೆ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಏಕೆಂದರೆ ಇದು ಪೌಷ್ಠಿಕಾಂಶಗಳಿಂದ ಸಮೃದ್ಧವಾಗಿದ್ದು, ಪ್ರೋಟೀನ್, ಫೈಬರ್, ಜೀವಸತ್ವಗಳು ಮತ್ತು ಖನಿಜಗಳ ಭಂಡಾರವಾಗಿದೆ. ಇದು ದೇಹಕ್ಕೆ ಅಗತ್ಯ ಪ್ರಯೋಜನಗಳನ್ನು ನೀಡುವ ಧಾನ್ಯವಾಗಿದೆ.


Read More »

ಬಂಟ್ವಾಳ ತಾಲೂಕು ಬಿಲ್ಲವ ಸಂಘದಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ


Share       ಬಂಟ್ವಾಳ : ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಆಡಳಿತ ಸಮಿತಿಯ ಪದಾಧಿಕಾರಿಗಳು ಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸಕ್ಕೆ ಆಮಂತ್ರಿಸಿದರು. ಗೆಜ್ಜೆಗಿರಿ ಕ್ಷೇತ್ರಾಡಳಿತ


Read More »

ಫುಡ್ ಫೆಸ್ಟ್ ನಿಂದ ಬಂದ ಹಣ ಬಡವರ್ಗಕ್ಜೆ ಮೀಸಲಿಡುತ್ತಿರುವ ಬಿರುವೆರ್ ಕುಡ್ಲ; 3 ಲಕ್ಷ ಮೌಲ್ಯದ ಕೃತಕ ಅಂಗಾಂಗ ಸಲಕರಣೆ ವಿತರಣೆ


Share       ಮಂಗಳೂರು: ಅವರೆಲ್ಲಾ ತಿಂಗಳ ಸಂಬಳಕ್ಕಾಗಿ ದುಡಿಯುವ ಯುವಕರು. ಆದ್ರೆ ದುಡಿದ ಹಣದಲ್ಲಿ ಸಮಾಜ ಸೇವೆಗಾಗಿ ಮೀಸಲಿಟ್ಟು ಸೇವಾ ಕಾರ್ಯ ನಡೆಸುತ್ತಿರುವ ಆ ತಂಡ ಮನೆಯಿಲ್ಲದವರಿಗೆ ಮನೆ,ಅನಾರೋಗ್ಯಕ್ಕೀಡಾದವರಿಗೆ ಚಿಕಿತ್ಸೆಗೆ ಹಣಕಾಸಿನ ನೆರವು,ದಿನಸಿ ಕಿಟ್ ,ಆಂಬುಲೆನ್ಸ್


Read More »