TOP STORIES:

ಬಿಲ್ಲವಾಸ್ ಕತಾರ್ ನ ಅಧ್ಯಕ್ಷ ಶ್ರೀ ಸಂದೀಪ್ ಸಾಲಿಯಾನ್ ರವರಿಗೆ ವಿನಯಪೂರ್ವಕ ಬೀಳ್ಕೊಡುಗೆ


ಬಿಲ್ಲವಾಸ್ ಕತಾರ್ ನ ನೇತೃತ್ವದಲ್ಲಿ ದಿನಾಂಕ ೮.೨.೨೦೨೫ ರಂದು ಎಂ. ಆರ್. ಎ, ಸಲ್ವ ರೋಡ್, ಕತಾರ್, ಔತಣಕೂಟ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ಬಿಲ್ಲವಾಸ್ ಕತಾರ್ ನ ಅಧ್ಯಕ್ಷರಾದ ಶ್ರೀ ಸಂದೀಪ್ ಸಾಲಿಯಾನ್ ಅವರನ್ನು ವಿನಯಪೂರ್ವಕವಾಗಿ ಬೀಳ್ಕೊಡಲಾಯಿತು.

ಈ ಬೀಳ್ಕೊಡುಗೆ ಸಮಾರಂಭದ ಆರಂಭವನ್ನು ಬಿಲ್ಲವಾಸ್ ಕತಾರ್ ನ ಸಾಂಸ್ಕ್ರತಿಕ   ಕಾರ್ಯದರ್ಶಿ ಪೂಜಾ ಜಿತಿನ್ ಮಾಡಿದರು.  ಸ್ವಾಗತ ಭಾಷಣವನ್ನು ಸಂಘದ ಉಪಾಧ್ಯಕ್ಷೆ ಶ್ರೀಮತಿ ಅಪರ್ಣ ಶರತ್ ಅವರು ಮಾಡಿದರು.

ಸರಳ ಸಜ್ಜನಿಕೆಯ, ನಿರಾಡಂಬರ, ಮೃದು ಸ್ವಭಾವದ ಶ್ರೀ ಸಂದೀಪ್ ಸಾಲಿಯಾನ್  ಅವರ ಕತಾರ್ ನ ಜೀವನ ಚರಿತ್ರೆಯನ್ನು ಬಿಲ್ಲವಾಸ್ ಕತಾರ್ ನ ಸಾಂಸ್ಕ್ರತಿಕ ಸಮಿತಿಯ ಸದಸ್ಯರು ಕಿರು ನಾಟಕದ ರೂಪದಲ್ಲಿ  ವಹಿಸಿ ಕೊಟ್ಟು ಎಲ್ಲರ ಮನ ಸೂರೆಗೊಂಡರು.

ಬೀಳ್ಕೊಡುಗೆಯ ಸಂದರ್ಭದಲ್ಲಿ ಹಾಜರಿದ್ದ  ಐ. ಸಿ. ಸಿ. ಕತಾರ್ ನ ಉಪಾಧ್ಯಕ್ಷರಾದ ಶ್ರೀಸುಬ್ರಹ್ಮಣ್ಯ

ಹೆಬ್ಬಾಗಿಲು, ಬಿಲ್ಲವಾಸ್ ಕತಾರ್ ನ ಮಾಜಿ ಅಧ್ಯಕ್ಷರಾದ ಶ್ರೀ ರಘುನಾಥ್ ಅಂಚನ್,  ಸಲಹಾ ಮಂಡಳಿ, ಕಾರ್ಯಕಾರಿ ಮಂಡಳಿ  ಮತ್ತು ಸದಸ್ಯರು ಶ್ರೀ ಸಂದೀಪ್ ಸಾಲಿಯಾನ್ ರವರ ಗುಣಗಾನ ಮಾಡಿ, ಬಿಲ್ಲವ ರಥವನ್ನು ಉತ್ತಮ ಪಥದಲ್ಲಿ ಮುನ್ನಡೆಸಿದ ಯಶಸ್ವೀ ನಾಯಕ ಎಂದು ಹೊಗಳಿದರು. ಬಿಲ್ಲವಾಸ್ ಕತಾರ್ ನ ಮಾಜಿ ಉಪಾಧ್ಯಕ್ಷ ಶ್ರೀ ಅಮಿತ್ ಅವರ ವಿಶೇಷ ಉಪಸ್ಥಿತಿ ಕಾರ್ಯಕ್ರ್ರಮಕ್ಕೊಂದು ಮೆರಗು ಕೊಟ್ಟಿತ್ತು.

ಬೀಳ್ಕೊಡುಗೆಗೆ  ಉತ್ತರಿಸುತ್ತಾ ಶ್ರೀ ಸಾಲಿಯಾನ್ ರವರು ಉದ್ಯೋಗದ ನಿಮಿತ್ತ ಹತ್ತಿರದ ಕೊಲ್ಲಿ ರಾಷ್ಟ್ರಕ್ಕೆ  ವರ್ಗಾವಣೆ ಹೊಂದಬೇಕಾದ ಅನಿವಾರ್ಯತೆಯನ್ನು ವ್ಯಕ್ತ ಪಡಿಸಿ ತನಗೆ ಸಹಕರಿಸಿದ ಎಲ್ಲಾ ಮಹನೀಯರನ್ನು ಹೃತ್ಪೂರ್ವಕವಾಗಿ ನೆನಪಿನಂಗಳದಿಂದಿಳಿಸಿ ಅಭಿನಂದಿಸಿದರು.   


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »