TOP STORIES:

ಕೊಲ್ಲಿ ರಾಷ್ಟ್ರ ಕತಾ‌ರ್ ದೇಶದಲ್ಲಿ ಕತಾರ್ ಬಿಲ್ಲವಸ್ ಸಂಘದ ಮೊಟ್ಟ ಮೊದಲ ಬಾರಿಗೆ ಮಹಿಳಾ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ಅಪರ್ಣ ಶರತ್


ಕೊಲ್ಲಿ ರಾಷ್ಟ್ರ ಕತಾ‌ರ್ ದೇಶದಲ್ಲಿ ನಮ್ಮ ತುಳುವರು ಹಲವಾರು ವರ್ಷಗಳಿಂದ ವಾಸವಿದ್ದಿದ್ದು, ಇಂದಿಗೂ ತುಳುವ ಮಣ್ಣಿನ ಪ್ರೀತಿಯನ್ನು ಮರೆತಿಲ್ಲ. ತುಳುನಾಡಿನ ಸಂಸ್ಕೃತಿ, ಆಚಾರ-ವಿಚಾರಗಳನ್ನು ಮರೆಯದೆ ಇಂದಿಗೂ ತಾವು ನೆಲೆ ನಿಂತ ಮಣ್ಣಿನಲ್ಲಿ ಸಂಭ್ರಮಿಸುತ್ತಾರೆ ಎಂಬುದಕ್ಕೆ ಕತಾರ್ ಬಿಲ್ಲವಸ್ ಅಜಂತ ಸಾಕ್ಷಿ. 2012 ರಲ್ಲಿ ಆರಂಭಗೊಂಡ ಈ ಬಿಲ್ಲವ ಸಮಾಜದ ಸಂಘಕ್ಕೆ ನೂತನ ಮಹಿಳಾ ಅಧ್ಯಕ್ಷೆಯಾಗಿ ಮೊಟ್ಟಮೊದಲ ಬಾರಿಗೆ ಅಪರ್ಣ ಶರತ್ ರವರನ್ನು ಸಂಘದ ಸದಸ್ಯರು ಸರ್ವಾನುಮತದಿಂದ ಆಯ್ಕೆಮಾಡಿದ್ದಾರೆ.

ಅಪರ್ಣ ರವರು ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಅಡ್ಯಾರ್ ನವರಾಗಿದ್ದು, ಮಾನವ ಸಂಪನ್ಮೂಲ ವಿಷಯದಲ್ಲಿ ಎಂಬಿಎ ಪದವಿಯನ್ನು ಪಡೆದು, ಕತಾರ್‌ನ ಪ್ರತಿಷ್ಠಿತ ಸಂಸ್ಥೆಯೊಂದರಲ್ಲಿ ಮಾನವ ಸಂಪನ್ಮೂಲ ವಿಭಾಗದ ಮ್ಯಾನೇಜ‌ರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಕಳೆದ ತಿಂಗಳು 26ರಂದು ICC ಕತಾರ್‌ನಲ್ಲಿ ನಡೆದ ಸಂಘದ ಸಲಹಾ ಸಮಿತಿಯ ಸಭೆಯಲ್ಲಿ ನೂತನ ಸಮಿತಿಯ ಆಯ್ಕೆ ನಡೆದಿದ್ದು, ಮುಂದಿನ ಅವಧಿಯಲ್ಲಿ ಈ ಸಮಿತಿಯು ಕಾರ್ಯ ನಿರ್ವಹಿಸಲಿದೆ. ಶ್ರೀಮತಿ ಅಪರ್ಣ ಶರತ್ ರವರಿಗೆ, ನಿಮ್ಮ ಕಾರ್ಯಾವಧಿಯಲ್ಲಿ ಬಿಲ್ಲವಸ್ ಕತಾ‌ರ್ ಇನ್ನಷ್ಟು ಉತ್ತುಂಗಕ್ಕೆ ಸೇರಲಿ ಎಂದು ಹಾರೈಸುವೆವು.

ಪದಾಧಿಕಾರಿಗಳು ಹಾಗೂ ಸದಸ್ಯರು

ಬಿಲ್ಲವ ಕತಾರ್


Related Posts

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »