TOP STORIES:

ಕೊಲ್ಲಿ ರಾಷ್ಟ್ರ ಕತಾ‌ರ್ ದೇಶದಲ್ಲಿ ಕತಾರ್ ಬಿಲ್ಲವಸ್ ಸಂಘದ ಮೊಟ್ಟ ಮೊದಲ ಬಾರಿಗೆ ಮಹಿಳಾ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ಅಪರ್ಣ ಶರತ್


ಕೊಲ್ಲಿ ರಾಷ್ಟ್ರ ಕತಾ‌ರ್ ದೇಶದಲ್ಲಿ ನಮ್ಮ ತುಳುವರು ಹಲವಾರು ವರ್ಷಗಳಿಂದ ವಾಸವಿದ್ದಿದ್ದು, ಇಂದಿಗೂ ತುಳುವ ಮಣ್ಣಿನ ಪ್ರೀತಿಯನ್ನು ಮರೆತಿಲ್ಲ. ತುಳುನಾಡಿನ ಸಂಸ್ಕೃತಿ, ಆಚಾರ-ವಿಚಾರಗಳನ್ನು ಮರೆಯದೆ ಇಂದಿಗೂ ತಾವು ನೆಲೆ ನಿಂತ ಮಣ್ಣಿನಲ್ಲಿ ಸಂಭ್ರಮಿಸುತ್ತಾರೆ ಎಂಬುದಕ್ಕೆ ಕತಾರ್ ಬಿಲ್ಲವಸ್ ಅಜಂತ ಸಾಕ್ಷಿ. 2012 ರಲ್ಲಿ ಆರಂಭಗೊಂಡ ಈ ಬಿಲ್ಲವ ಸಮಾಜದ ಸಂಘಕ್ಕೆ ನೂತನ ಮಹಿಳಾ ಅಧ್ಯಕ್ಷೆಯಾಗಿ ಮೊಟ್ಟಮೊದಲ ಬಾರಿಗೆ ಅಪರ್ಣ ಶರತ್ ರವರನ್ನು ಸಂಘದ ಸದಸ್ಯರು ಸರ್ವಾನುಮತದಿಂದ ಆಯ್ಕೆಮಾಡಿದ್ದಾರೆ.

ಅಪರ್ಣ ರವರು ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಅಡ್ಯಾರ್ ನವರಾಗಿದ್ದು, ಮಾನವ ಸಂಪನ್ಮೂಲ ವಿಷಯದಲ್ಲಿ ಎಂಬಿಎ ಪದವಿಯನ್ನು ಪಡೆದು, ಕತಾರ್‌ನ ಪ್ರತಿಷ್ಠಿತ ಸಂಸ್ಥೆಯೊಂದರಲ್ಲಿ ಮಾನವ ಸಂಪನ್ಮೂಲ ವಿಭಾಗದ ಮ್ಯಾನೇಜ‌ರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಕಳೆದ ತಿಂಗಳು 26ರಂದು ICC ಕತಾರ್‌ನಲ್ಲಿ ನಡೆದ ಸಂಘದ ಸಲಹಾ ಸಮಿತಿಯ ಸಭೆಯಲ್ಲಿ ನೂತನ ಸಮಿತಿಯ ಆಯ್ಕೆ ನಡೆದಿದ್ದು, ಮುಂದಿನ ಅವಧಿಯಲ್ಲಿ ಈ ಸಮಿತಿಯು ಕಾರ್ಯ ನಿರ್ವಹಿಸಲಿದೆ. ಶ್ರೀಮತಿ ಅಪರ್ಣ ಶರತ್ ರವರಿಗೆ, ನಿಮ್ಮ ಕಾರ್ಯಾವಧಿಯಲ್ಲಿ ಬಿಲ್ಲವಸ್ ಕತಾ‌ರ್ ಇನ್ನಷ್ಟು ಉತ್ತುಂಗಕ್ಕೆ ಸೇರಲಿ ಎಂದು ಹಾರೈಸುವೆವು.

ಪದಾಧಿಕಾರಿಗಳು ಹಾಗೂ ಸದಸ್ಯರು

ಬಿಲ್ಲವ ಕತಾರ್


Related Posts

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »