TOP STORIES:

ಪೊಲೀಸ್ ಸಬ್ ಇನ್ಸಸ್ಪೆಕ್ಟರ್ ಪ್ರದೀಪ್ ಪೂಜಾರಿಯವರಿಗೆ ಮುಖ್ಯಮಂತ್ರಿ ಚಿನ್ನದ ಪದಕ


ಕೆಯ್ಯೂರು: ಕೆಯ್ಯೂರು ಗ್ರಾಮದ ಪಿ.ಎಸ್.ಐ ಪ್ರದೀಪ್ ಪೂಜಾರಿ 2023ನೇ ವರ್ಷದ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ. ಮೂರನೇ ಬೆಟಾಲಿಯನ್ ಫೆರೆಡ್ ಗ್ರೌಂಡ್ ಕೆಎಸ್ಆರ್ಪಿ  ಕೊರಮಂಗಲ ಬೆಂಗಳೂರಿನಲ್ಲಿ ಎ.2ರಂದು ಪ್ರಶಸ್ತಿ ಪ್ರಧಾನ ನಡೆಯಲಿದೆ

ಪ್ರದೀಪ್ ಪೂಜಾರಿ ಪೊಲೀಸ್ ಸಬ್ ಇನ್ಸಸ್ಪೆಕ್ಟರ್ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ರವರು  2010ನೇ ಸಾಲಿನಲ್ಲಿ ಪೊಲೀಸ್ ಸಬ್ ಇನ್ಸಸ್ಪೆಕ್ಟರ್ ಆಗಿ ಆಯ್ಕೆ ಗೊಂಡಿರುತ್ತಾರೆ. ಇವರು ನಿವೃತ್ತ ಸರ್ವೆ ಸೂಪರ್ ವೈಸರ್ ಬಾಲಕೃಷ್ಣ ಪೂಜಾರಿ ಕೆಂಗುಡೇಲು ಮತ್ತು ಗುಣವತಿ ದಂಪತಿಗಳ ಪುತ್ರ. ಇವರು ರಾಜಾನುಕುಂಟೆ, ಆವಲಹಳ್ಳಿ, ಕಮರ್ಷಿಯಲ್ ಸ್ಟ್ರೀಟ್, ಶಿಡ್ಲಘಟ್ಟ ಗ್ರಾಮಾಂತರ, ವಿಶ್ವನಾಥಪುರ ಹಾಗೂ ಹಾಲಿ  ಚಿಕ್ಕಬಳ್ಳಾಪುರ ಗ್ರಾಮಾಂತರ ಮತ್ತು ಹೊರವಲಯ ಪೊಲೀಸ್ ಠಾಣೆಯಲ್ಲಿ ಪಿ.ಎಸ್.ಐ ಆಗಿ ಕರ್ತವ್ಯ ನಿರ್ವಹಿಸಿದ್ದಾರೆ.

ಇವರ ಸೇವಾ ಅವಧಿಯಲ್ಲಿ ಆರೋಪಿತರು ವಿಮಾನದಲ್ಲಿ ಬೆಂಗಳೂರು ನಗರಕ್ಕೆ ಮತ್ತು ಬೆಂಗಳೂರು ಹೊರ ವಲಯ ಬಂದು ಬಾಡಿಗೆಗೆ ಬೈಕನ್ನು ಪಡೆದು  ಬೆಂಗಳೂರು ನಗರದಲ್ಲಿ ಸರಗಳ್ಳತನವನ್ನು ಮಾಡಿ, ವಿಮಾನದಲ್ಲಿ ವಾಪಸ್ ಹೋಗುವ ಪ್ರವೃತ್ತಿವುಳ್ಳ ಬವೇರಿಯಾ ಗ್ಯಾಂಗ್ ಅನ್ನು ಪಂಜಾಬಿನಲ್ಲಿ ಪತ್ತೆ ಮಾಡಿ ಆರೋಪಿತರಿಂದ 500 ಗ್ರಾಂ ಚಿನ್ನವನ್ನು ಅಮಾನತ್ತುಪಡಿಸಿ ನೊಂದವರಿಗೆ ನ್ಯಾಯಾಲಯದ ಮುಖಾಂತರ ಹಿಂದಿರುಗಿಸಿರುತ್ತಾರೆ. 2022ನೇ ಸಾಲಿನಲ್ಲಿ ಪೆರೇಸಂದ್ರ ಗ್ರಾಮದ ಶ್ರೀನಾರಾಯಣಸ್ವಾಮಿ ಎ.ಎಸ್.ಐ ರವರ ಮನೆಯಲ್ಲಿ ನಡೆದ ಡಕಾಯಿತಿ ಪ್ರಕರಣದಲ್ಲಿ ಪಡೆದ ದೇಶದಲ್ಲಿಯೇ  ಗ್ಯಾಂಗ್ ಸ್ಟರ್ ಎಂದು ಕುಖ್ಯಾತಿ ಪಡೆದ ಉತ್ತರಪ್ರದೇಶ ಹೈದರ್ ಮತ್ತು ತಂಡವನ್ನು ಉತ್ತರಾಖಾಂಡ್ ರಾಜ್ಯದಲ್ಲಿ ಪತ್ತೆ ಮಾಡಿ ಅವರಿಂದ 12 ಲಕ್ಷ ರೂಪಾಯಿ  ನಗದು 4 ಪಿಸ್ತೂಲ್, 24 ಜೀವಂತ ಗುಂಡುಗಳು ಮತ್ತು ಬಂಗಾರದ ವಡವೆಗಳನ್ನು ಅಮಾನತ್ತುಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ. ಆವಲಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ತಲೆ, ರುಂಡ, ಮುಂಡವನ್ನು ಬೇರ್ಪಡಿಸಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿತರನ್ನು ಹಿಡಿಯುವಲ್ಲಿ ಯಶಸ್ವಿಯಾಗಿರುತ್ತಾರೆ.  16 ಜಿಲ್ಲೆಗಳಲ್ಲಿ ಎಟಿಎಂ ಕೇಂದ್ರಗಳ ಬಳಿ ಹಣ ಡ್ರಾ ಮಾಡಲು ಬರುವ  ಸಾರ್ವಜನಿಕರನ್ನು ಯಾಮಾರಿಸಿ ಅವರ ಕಾರ್ಡುಗಳನ್ನು ಬದಲಾಯಿಸಿ ಹಣವನ್ನು ಡ್ರಾ ಮಾಡಿ ಮೋಸ ಮಾಡುತ್ತಿದ್ದ ಸಾಗರ್ & ಕಿರಣ್ ಕುಮಾರ್ ಎಂಬುವರನ್ನು ಪತ್ತೆ ಮಾಡಿ ಪ್ರಕರಣಗಳನ್ನು ಬೆಳಕಿಗೆ ತಂದಿರುತ್ತಾರೆ.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »