TOP STORIES:

ಪೊಲೀಸ್ ಸಬ್ ಇನ್ಸಸ್ಪೆಕ್ಟರ್ ಪ್ರದೀಪ್ ಪೂಜಾರಿಯವರಿಗೆ ಮುಖ್ಯಮಂತ್ರಿ ಚಿನ್ನದ ಪದಕ


ಕೆಯ್ಯೂರು: ಕೆಯ್ಯೂರು ಗ್ರಾಮದ ಪಿ.ಎಸ್.ಐ ಪ್ರದೀಪ್ ಪೂಜಾರಿ 2023ನೇ ವರ್ಷದ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ. ಮೂರನೇ ಬೆಟಾಲಿಯನ್ ಫೆರೆಡ್ ಗ್ರೌಂಡ್ ಕೆಎಸ್ಆರ್ಪಿ  ಕೊರಮಂಗಲ ಬೆಂಗಳೂರಿನಲ್ಲಿ ಎ.2ರಂದು ಪ್ರಶಸ್ತಿ ಪ್ರಧಾನ ನಡೆಯಲಿದೆ

ಪ್ರದೀಪ್ ಪೂಜಾರಿ ಪೊಲೀಸ್ ಸಬ್ ಇನ್ಸಸ್ಪೆಕ್ಟರ್ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ರವರು  2010ನೇ ಸಾಲಿನಲ್ಲಿ ಪೊಲೀಸ್ ಸಬ್ ಇನ್ಸಸ್ಪೆಕ್ಟರ್ ಆಗಿ ಆಯ್ಕೆ ಗೊಂಡಿರುತ್ತಾರೆ. ಇವರು ನಿವೃತ್ತ ಸರ್ವೆ ಸೂಪರ್ ವೈಸರ್ ಬಾಲಕೃಷ್ಣ ಪೂಜಾರಿ ಕೆಂಗುಡೇಲು ಮತ್ತು ಗುಣವತಿ ದಂಪತಿಗಳ ಪುತ್ರ. ಇವರು ರಾಜಾನುಕುಂಟೆ, ಆವಲಹಳ್ಳಿ, ಕಮರ್ಷಿಯಲ್ ಸ್ಟ್ರೀಟ್, ಶಿಡ್ಲಘಟ್ಟ ಗ್ರಾಮಾಂತರ, ವಿಶ್ವನಾಥಪುರ ಹಾಗೂ ಹಾಲಿ  ಚಿಕ್ಕಬಳ್ಳಾಪುರ ಗ್ರಾಮಾಂತರ ಮತ್ತು ಹೊರವಲಯ ಪೊಲೀಸ್ ಠಾಣೆಯಲ್ಲಿ ಪಿ.ಎಸ್.ಐ ಆಗಿ ಕರ್ತವ್ಯ ನಿರ್ವಹಿಸಿದ್ದಾರೆ.

ಇವರ ಸೇವಾ ಅವಧಿಯಲ್ಲಿ ಆರೋಪಿತರು ವಿಮಾನದಲ್ಲಿ ಬೆಂಗಳೂರು ನಗರಕ್ಕೆ ಮತ್ತು ಬೆಂಗಳೂರು ಹೊರ ವಲಯ ಬಂದು ಬಾಡಿಗೆಗೆ ಬೈಕನ್ನು ಪಡೆದು  ಬೆಂಗಳೂರು ನಗರದಲ್ಲಿ ಸರಗಳ್ಳತನವನ್ನು ಮಾಡಿ, ವಿಮಾನದಲ್ಲಿ ವಾಪಸ್ ಹೋಗುವ ಪ್ರವೃತ್ತಿವುಳ್ಳ ಬವೇರಿಯಾ ಗ್ಯಾಂಗ್ ಅನ್ನು ಪಂಜಾಬಿನಲ್ಲಿ ಪತ್ತೆ ಮಾಡಿ ಆರೋಪಿತರಿಂದ 500 ಗ್ರಾಂ ಚಿನ್ನವನ್ನು ಅಮಾನತ್ತುಪಡಿಸಿ ನೊಂದವರಿಗೆ ನ್ಯಾಯಾಲಯದ ಮುಖಾಂತರ ಹಿಂದಿರುಗಿಸಿರುತ್ತಾರೆ. 2022ನೇ ಸಾಲಿನಲ್ಲಿ ಪೆರೇಸಂದ್ರ ಗ್ರಾಮದ ಶ್ರೀನಾರಾಯಣಸ್ವಾಮಿ ಎ.ಎಸ್.ಐ ರವರ ಮನೆಯಲ್ಲಿ ನಡೆದ ಡಕಾಯಿತಿ ಪ್ರಕರಣದಲ್ಲಿ ಪಡೆದ ದೇಶದಲ್ಲಿಯೇ  ಗ್ಯಾಂಗ್ ಸ್ಟರ್ ಎಂದು ಕುಖ್ಯಾತಿ ಪಡೆದ ಉತ್ತರಪ್ರದೇಶ ಹೈದರ್ ಮತ್ತು ತಂಡವನ್ನು ಉತ್ತರಾಖಾಂಡ್ ರಾಜ್ಯದಲ್ಲಿ ಪತ್ತೆ ಮಾಡಿ ಅವರಿಂದ 12 ಲಕ್ಷ ರೂಪಾಯಿ  ನಗದು 4 ಪಿಸ್ತೂಲ್, 24 ಜೀವಂತ ಗುಂಡುಗಳು ಮತ್ತು ಬಂಗಾರದ ವಡವೆಗಳನ್ನು ಅಮಾನತ್ತುಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ. ಆವಲಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ತಲೆ, ರುಂಡ, ಮುಂಡವನ್ನು ಬೇರ್ಪಡಿಸಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿತರನ್ನು ಹಿಡಿಯುವಲ್ಲಿ ಯಶಸ್ವಿಯಾಗಿರುತ್ತಾರೆ.  16 ಜಿಲ್ಲೆಗಳಲ್ಲಿ ಎಟಿಎಂ ಕೇಂದ್ರಗಳ ಬಳಿ ಹಣ ಡ್ರಾ ಮಾಡಲು ಬರುವ  ಸಾರ್ವಜನಿಕರನ್ನು ಯಾಮಾರಿಸಿ ಅವರ ಕಾರ್ಡುಗಳನ್ನು ಬದಲಾಯಿಸಿ ಹಣವನ್ನು ಡ್ರಾ ಮಾಡಿ ಮೋಸ ಮಾಡುತ್ತಿದ್ದ ಸಾಗರ್ & ಕಿರಣ್ ಕುಮಾರ್ ಎಂಬುವರನ್ನು ಪತ್ತೆ ಮಾಡಿ ಪ್ರಕರಣಗಳನ್ನು ಬೆಳಕಿಗೆ ತಂದಿರುತ್ತಾರೆ.


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »