TOP STORIES:

ಪೊಲೀಸ್ ಸಬ್ ಇನ್ಸಸ್ಪೆಕ್ಟರ್ ಪ್ರದೀಪ್ ಪೂಜಾರಿಯವರಿಗೆ ಮುಖ್ಯಮಂತ್ರಿ ಚಿನ್ನದ ಪದಕ


ಕೆಯ್ಯೂರು: ಕೆಯ್ಯೂರು ಗ್ರಾಮದ ಪಿ.ಎಸ್.ಐ ಪ್ರದೀಪ್ ಪೂಜಾರಿ 2023ನೇ ವರ್ಷದ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ. ಮೂರನೇ ಬೆಟಾಲಿಯನ್ ಫೆರೆಡ್ ಗ್ರೌಂಡ್ ಕೆಎಸ್ಆರ್ಪಿ  ಕೊರಮಂಗಲ ಬೆಂಗಳೂರಿನಲ್ಲಿ ಎ.2ರಂದು ಪ್ರಶಸ್ತಿ ಪ್ರಧಾನ ನಡೆಯಲಿದೆ

ಪ್ರದೀಪ್ ಪೂಜಾರಿ ಪೊಲೀಸ್ ಸಬ್ ಇನ್ಸಸ್ಪೆಕ್ಟರ್ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ರವರು  2010ನೇ ಸಾಲಿನಲ್ಲಿ ಪೊಲೀಸ್ ಸಬ್ ಇನ್ಸಸ್ಪೆಕ್ಟರ್ ಆಗಿ ಆಯ್ಕೆ ಗೊಂಡಿರುತ್ತಾರೆ. ಇವರು ನಿವೃತ್ತ ಸರ್ವೆ ಸೂಪರ್ ವೈಸರ್ ಬಾಲಕೃಷ್ಣ ಪೂಜಾರಿ ಕೆಂಗುಡೇಲು ಮತ್ತು ಗುಣವತಿ ದಂಪತಿಗಳ ಪುತ್ರ. ಇವರು ರಾಜಾನುಕುಂಟೆ, ಆವಲಹಳ್ಳಿ, ಕಮರ್ಷಿಯಲ್ ಸ್ಟ್ರೀಟ್, ಶಿಡ್ಲಘಟ್ಟ ಗ್ರಾಮಾಂತರ, ವಿಶ್ವನಾಥಪುರ ಹಾಗೂ ಹಾಲಿ  ಚಿಕ್ಕಬಳ್ಳಾಪುರ ಗ್ರಾಮಾಂತರ ಮತ್ತು ಹೊರವಲಯ ಪೊಲೀಸ್ ಠಾಣೆಯಲ್ಲಿ ಪಿ.ಎಸ್.ಐ ಆಗಿ ಕರ್ತವ್ಯ ನಿರ್ವಹಿಸಿದ್ದಾರೆ.

ಇವರ ಸೇವಾ ಅವಧಿಯಲ್ಲಿ ಆರೋಪಿತರು ವಿಮಾನದಲ್ಲಿ ಬೆಂಗಳೂರು ನಗರಕ್ಕೆ ಮತ್ತು ಬೆಂಗಳೂರು ಹೊರ ವಲಯ ಬಂದು ಬಾಡಿಗೆಗೆ ಬೈಕನ್ನು ಪಡೆದು  ಬೆಂಗಳೂರು ನಗರದಲ್ಲಿ ಸರಗಳ್ಳತನವನ್ನು ಮಾಡಿ, ವಿಮಾನದಲ್ಲಿ ವಾಪಸ್ ಹೋಗುವ ಪ್ರವೃತ್ತಿವುಳ್ಳ ಬವೇರಿಯಾ ಗ್ಯಾಂಗ್ ಅನ್ನು ಪಂಜಾಬಿನಲ್ಲಿ ಪತ್ತೆ ಮಾಡಿ ಆರೋಪಿತರಿಂದ 500 ಗ್ರಾಂ ಚಿನ್ನವನ್ನು ಅಮಾನತ್ತುಪಡಿಸಿ ನೊಂದವರಿಗೆ ನ್ಯಾಯಾಲಯದ ಮುಖಾಂತರ ಹಿಂದಿರುಗಿಸಿರುತ್ತಾರೆ. 2022ನೇ ಸಾಲಿನಲ್ಲಿ ಪೆರೇಸಂದ್ರ ಗ್ರಾಮದ ಶ್ರೀನಾರಾಯಣಸ್ವಾಮಿ ಎ.ಎಸ್.ಐ ರವರ ಮನೆಯಲ್ಲಿ ನಡೆದ ಡಕಾಯಿತಿ ಪ್ರಕರಣದಲ್ಲಿ ಪಡೆದ ದೇಶದಲ್ಲಿಯೇ  ಗ್ಯಾಂಗ್ ಸ್ಟರ್ ಎಂದು ಕುಖ್ಯಾತಿ ಪಡೆದ ಉತ್ತರಪ್ರದೇಶ ಹೈದರ್ ಮತ್ತು ತಂಡವನ್ನು ಉತ್ತರಾಖಾಂಡ್ ರಾಜ್ಯದಲ್ಲಿ ಪತ್ತೆ ಮಾಡಿ ಅವರಿಂದ 12 ಲಕ್ಷ ರೂಪಾಯಿ  ನಗದು 4 ಪಿಸ್ತೂಲ್, 24 ಜೀವಂತ ಗುಂಡುಗಳು ಮತ್ತು ಬಂಗಾರದ ವಡವೆಗಳನ್ನು ಅಮಾನತ್ತುಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ. ಆವಲಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ತಲೆ, ರುಂಡ, ಮುಂಡವನ್ನು ಬೇರ್ಪಡಿಸಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿತರನ್ನು ಹಿಡಿಯುವಲ್ಲಿ ಯಶಸ್ವಿಯಾಗಿರುತ್ತಾರೆ.  16 ಜಿಲ್ಲೆಗಳಲ್ಲಿ ಎಟಿಎಂ ಕೇಂದ್ರಗಳ ಬಳಿ ಹಣ ಡ್ರಾ ಮಾಡಲು ಬರುವ  ಸಾರ್ವಜನಿಕರನ್ನು ಯಾಮಾರಿಸಿ ಅವರ ಕಾರ್ಡುಗಳನ್ನು ಬದಲಾಯಿಸಿ ಹಣವನ್ನು ಡ್ರಾ ಮಾಡಿ ಮೋಸ ಮಾಡುತ್ತಿದ್ದ ಸಾಗರ್ & ಕಿರಣ್ ಕುಮಾರ್ ಎಂಬುವರನ್ನು ಪತ್ತೆ ಮಾಡಿ ಪ್ರಕರಣಗಳನ್ನು ಬೆಳಕಿಗೆ ತಂದಿರುತ್ತಾರೆ.


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »