TOP STORIES:

ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ 1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ


ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ  1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ

4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ

ಯತೀವರ್ಯರು, ಸಚಿವ ಮಾಂಕಳ್ ವೈದ್ಯ, ಶಾಸಕ ಹರೀಶ್ ಪೂಂಜ, ಸೇರಿದಂತೆ ಬೆಳ್ತಂಗಡಿಯಿಂದ ಸುಮಾರು 200 ಕ್ಕೂ ಹೆಚ್ಚು ಸ್ವಾಮೀಜಿಯವರ ಭಕ್ತವೃಂದ ಭಾಗಿ

ರೂ 15 ಕೋಟಿ ವೆಚ್ಚದಲ್ಲಿ, 35 ಸಾವಿರ ಚದರಡಿಯ 4 ಅಂತಸ್ತಿನ ಭವನ,ಸತ್ಸಂಗ ಹಾಲ್,ಮೀಟಿಂಗ್ ಹಾಲ್,ಸ್ವಾಮೀಜಿಯ ಕೊಠಡಿ,ವಿವಿಐಪಿ,ವಿಐಪಿ ರೂಮ್,ಲಿಪ್ಟ್ ಸೌಲಭ್ಯ, ಮಲ್ಟಿ ಪರ್ಪಸ್ ಹಾಲ್ ನಿರ್ಮಾಣ

ಬೆಳ್ತಂಗಡಿ: ವಿಶ್ವದ ಕೋಟ್ಯಾಂತರ ಭಕ್ತರ ಶ್ರದ್ದಾಕೇಂದ್ರ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಅತಿ ಸುಂದರವಾದ ದೇಗುಲ ನಿರ್ಮಾಣವಾಗಿ ಲೋಕಾರ್ಪಣೆಗೊಂಡಿರುವುದು ಇಡೀ ಜಗತ್ತಿಗೆ ಸಂತೋಷವನ್ನುಂಟುಮಾಡಿದೆ.

ಇಂತಹ ಪುಣ್ಯಕ್ಷೇತ್ರದ ಪಕ್ಕದಲ್ಲಿ ದಕ್ಷಿಣದ ಅಯೋಧ್ಯೆಯೆಂದು ಖ್ಯಾತಿ ಹೊಂದಿದ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನಮ್ ನ ಶಾಖಾ ಮಠಕ್ಕೆ

ಕನ್ಯಾಡಿ ಶ್ರೀರಾಮ ಕ್ಷೇತ್ರದ  ಶ್ರೀ ಜಗದ್ಗುರು ಪೀಠದ ಪೀಠಾಧೀಶರಾದ ಮಹಾಮಂಡಲೇಶ್ವರ 1008 ಸ್ವಾಮಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಮಹಾರಾಜರವರ ನೇತೃತ್ವದಲ್ಲಿ

ಅಯೋಧ್ಯೆಯಲ್ಲಿ ಭೂಮಿ ಪೂಜೆ ಹಾಗೂ ಶಿಲಾನ್ಯಾಸವು ಮೇ 19 ರಂದು ನಡೆಯಿತು.

ಸುಮಾರು ರೂ 15 ಕೋಟಿ ವೆಚ್ಚದಲ್ಲಿ, 35 ಸಾವಿರ ಚದರಡಿಯಲ್ಲಿ 4 ಅಂತಸ್ತಿನ ಭವನ ನಿರ್ಮಾಣ.ಶಾಖಾ ಮಠದಲ್ಲಿ ಸತ್ಸಂಗ ಹಾಲ್,ಮೀಟಿಂಗ್ ಹಾಲ್,ಸ್ವಾಮೀಜಿಯ ಕೊಠಡಿ,ಡೈನಿಂಗ್,ಕಿಚನ್,ವಿವಿಐಪಿ,ವಿಐಪಿ ರೂಮ್,ಲಿಪ್ಟ್ ಸೌಲಭ್ಯ, ಮಲ್ಟಿ ಪರ್ಪಸ್ ಹಾಲ್ ನಿರ್ಮಾಣವಾಗಲಿದೆ.

ಭೂಮಿ ಪೂಜೆಯಲ್ಲಿ ಅನೇಕ ವಿಭೂತಿ ಪುರುಷರು, ರಾಷ್ಟ್ರ ಮಟ್ಟದ, ರಾಜ್ಯಮಟ್ಟದ ನೇತಾರರು ಭಾಗವಹಿಸಿದರು. ಭಾಗವಹಿಸುವ ಪ್ರಧಾನ ವಿಭೂತಿ ಪುರುಷರಾದ  ಆಚಾರ್ಯ ಮಾಹಾಮಂಡಲೇಶ್ವರ 1008 ಅವದೇಶಾನಂದ ಗಿರಿಜೀ ಮಹಾರಾಜ್ ಪಂಚದಶನಾಮ್ ಜುಣಾ ಅಖಾಡ,  ಮಹಂತ್ ವಿದ್ಯಾನಂದ ಸರಸ್ವತಿಜೀ ಮಹಾರಾಜ್ ಅಂತರಾಷ್ಟ್ರೀಯ ಉಪಾಧ್ಯಕ್ಷ ಶ್ರೀ ಪಂಚದಶನಾಮ್ ಜುನಾ ಅಖಾಡ.,  ಮಹಂತ್ ಡಾ| ಸ್ವಾಮಿ ಭರತ್ ದಾಸ್‌ಜೀ ಮಹಾರಾಜ್ ಉದಾಸೀನ್ ಸಂಘತ್ ಋಷಿ ಆಶ್ರಮ್  ರಾಣೋಪಾಲಿ ಅಯೋಧ್ಯೆ,ಮಹಂತ್ ದೇವಾನಂದ್ ಸರಸ್ವತಿಜೀ ಮಹಾರಾಜ್ ಸಚಿವ ಶ್ರೀ ಪಂಚದಶನಾಮ್ ಜುನಾ ಅಖಾಡ ಹರಿದ್ವಾರ,ಮಹಂತ್ ಸುರೇಶ್ ದಾಸ್‌ಜೀ ಮಹಾರಾಜ್ ದಿಗಂಬರ ಅಖಾಡ ಅಯೋಧ್ಯೆ., ಮಹಂತ್ ಕಮಲನಯನ್ ದಾಸ್‌ಜೀ ಮಹಾರಾಜ್ ಚೋಟಿ ಚಾವಣಿ ಅಯೋಧ್ಯೆ,  ಮಹಂತ್ ಅವದೇಶ್ ದಾಸ್‌ಜೀ ಮಹಾರಾಜ್ ಬಡಾಭಕ್ತಮಹಲ್ ಅಯೋಧ್ಯಾಧಾಮ್,  ಮಹಂತ್ ರಾಜ್‌ಕುಮಾರ್ ದಾಸ್‌ಜೀ ಮಹಾರಾಜ್ ರಾಮವಲ್ಲಭ ಕುಂಜ ಅಯೋಧ್ಯಾಧಾಮ್,  ಮಹಂತ್ ಸಂಜಯ್ ದಾಸ್‌ಜೀ ಮಹಾರಾಜ್ ಹನುಮಾನ್‌ಗಡಿ ಅಯೋಧ್ಯಾಧಾಮ್,  ಮಹಂತ್ ರಾಜೂದಾಸ್‌ಜೀ ಮಹಾರಾಜ್ ಹನುಮಾನ್‌ಗಡಿ ಅಯೋಧ್ಯಾಧಾಮ್,ಸಚಿವ ಮಾಂಕಲ್ ವೈದ್ಯ,ಶಾಸಕ ಹರೀಶ್ ಪೂಂಜ,ನಿವೃತ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್,ಬೆಸ್ಟ್ ಪೌಂಢೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್,ಕುದ್ರೋಳಿ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್, ಕಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ,ನಿವೃತ ಎಸ್.ಪಿ ಪೀತಾಂಬರ ಹೆರಾಜೆ,ಉದ್ಯಮಿಗಳಾದ ಸತೀಶ್ಚ್ಚಂದ್ರ ಸಾಲಿಯಾನ್ ಪಾಣಿಲ, ಕರುಣಾಕರ ಸುವರ್ಣ,ಪ್ರಮುಖರಾದ ಜಯಂತ್ ಕೋಟ್ಯಾನ್,ಪ್ರೀತಮ್ ಧರ್ಮಸ್ಥಳ,ಶಶಿರಾಜ್ ಶೆಟ್ಟಿ ಜಿ.ಕೆ,ರತ್ನಾಕರ ಬುಣ್ಣನ್,ರಾಜೇಶ್ ಮೂಡುಕೋಡಿ,ಪ್ರೇಮ ಉಮೇಶ್, ಸುಜಾತ ಅಣ್ಣಿ ಪೂಜಾರಿ,ಸಹಕಾರಿ ಅಭಿವೃದ್ದಿ ಅಧಿಕಾರಿ ಪ್ರತೀಮಾ,ರವೀಂದ್ರ ಅರ್ಲ,ತುಕರಾಮ್,ಸೀತರಾಮ ಬೆಲಾಲು,ಜನಾರ್ಧನ ಕುಕ್ಕೇಡಿ,ಜಯಾನದ ಕಲ್ಲಾಪು,ಮಹೇಶ್ ಬಾಯಾರ್,ಯೋಗೀಶ್ ಕೊಕ್ಕಡ,ಹರೀಶ್ ಕಳೆಂಜ,ಸುನಿಲ್ ಉಪ್ಪಿನಂಗಡಿ,ಮಂಜುನಾಥ ಸಾಲಿಯಾನ್, ಮಹಾಬಲ,ಪ್ರವೀಣ್ ಫೆರ್ನಾಂಡೀಸ್ ಉಜಿರೆ,ಬೆಳ್ತಂಗಡಿ ಪತ್ರಕರ್ತರರಾದ ಮನೋಹರ್ ಬಳಂಜ,ಸಂತೋಷ್ ಪಿ ಕೋಟ್ಯಾನ್,ಚೈತ್ರೇಶ್ ಇಳಂತಿಳ,ದೀಪಕ್ ಅಠವಳೆ,ಜಾರಪ್ಪ ಪೂಜಾರಿ,ಭುವನೇಶ್ ಗೇರುಕಟ್ಟೆ ಹಾಗೂ ಬೆಳ್ತಂಗಡಿಯಿಂದ  ಸ್ವಾಮೀಜಿಯ ಭಕ್ತರು ಸುಮಾರು200 ಕ್ಕೂ ಹೆಚ್ಚು ಮಂದಿ ಉಪಸ್ಥಿತರಿದ್ದರು.


Related Posts

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »