TOP STORIES:

FOLLOW US

ಶಾರದಾ ಎ.ಅಂಚನ್ ಇವರ ವೈದ್ಯಕೀಯ ಕೃತಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಪ್ರಶಸ್ತಿ


ಶಾರದಾ ಎ.ಅಂಚನ್ ಇವರ  ವೈದ್ಯಕೀಯ ಕೃತಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಪ್ರಶಸ್ತಿ

ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು ಇವರು ಕೊಡಮಾಡುವ 2022 ನೇ  ಸಾಲಿನ ದತ್ತಿ ಪ್ರಶಸ್ತಿಗಳ ಪಟ್ಟಿ ಪ್ರಕಟವಾಗಿದ್ದು ಮುಂಬಯಿ ಲೇಖಕಿ,ಸಾಹಿತಿ ಶ್ರೀಮತಿ ಶಾರದಾ ಎ.ಅಂಚನ್ ಕೊಡವೂರು ಇವರ ವೈದ್ಯಕೀಯ ಕೃತಿ “ರಕ್ತಶುದ್ಧಿ- ಆರೋಗ್ಯವೃದ್ಧಿ” ಕೃತಿಗೆ “ಬಿಸಲೇರಿ ಜಯಣ್ಣ ಮತ್ತು ಬಿಸಲೇರಿ ಬ್ರದರ್ಸ್ ದತ್ತಿ ಪ್ರಶಸ್ತಿ “ಲಭ್ಯವಾಗಿದೆ. ಈಗಾಗಲೇ ತನ್ನ”ರಕ್ತವೇ ಜೀವನದಿ”ಕೃತಿ ಗೆ ಕನ್ನಡ ಸಾಹಿತ್ಯ ಪರಿಷತ್ತಿನ  ದಿ//ಡಾ.ಎಚ್.ನರಸಿಂಹಯ್ಯ ದತ್ತಿ ಪ್ರಶಸ್ತಿಯನ್ನು ಪಡೆದಿರುವ ಶಾರದಾ ಎ.ಅಂಚನ್ ಇವರು ಇದುವರೆಗೆ ಸುಮಾರು ಹದಿನೇಳು ಕೃತಿಗಳನ್ನು ಪ್ರಕಟಿಸಿದ್ದು ಇವರ  “ಪಾಡ್ದನ” ತುಳು ಕವನ ಸಂಕಲನಕ್ಕೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಶಸ್ತಿ,”ರಕ್ತವೇ ಜೀವನದಿ “ವೈದ್ಯಕೀಯ ಕೃತಿಗೆ ವಿಶ್ವೇಶ್ವರಯ್ಯ ಇಂಜೀನೀಯರಿಂಗ್  ಪ್ರತಿಷ್ಠಾನದ  ವಿಶ್ವೇಶ್ವರಯ್ಯ ರಾಷ್ಟ್ರೀಯ ಸಾಹಿತ್ಯ ಪ್ರಶಸ್ತಿ, “ನಡೆ ನೀ ಮುಂದೆ” ಕವನ ಸಂಕಲನಕ್ಕೆ ಕರ್ನಾಟಕ ವಿದ್ಯಾವರ್ಧಕ ಸಂಘ ಕೊಡಮಾಡುವ “ಶ್ರೀ ಕ್ಷೇತ್ರ ಧರ್ಮಸ್ಥಳ ಮಾತೋಶ್ರೀ ರತ್ನಮ್ಮ ಹೆಗ್ಗಡೆ ಪ್ರಶಸ್ತಿ”ಗಳನ್ನು ಪಡೆದುಕೊಂಡಿದ್ದಾರೆ.

ಡಾ.ಕೆ.ಶಿವರಾಮ ಕಾರಂತ  ಕಥಾ ಪುರಸ್ಕಾರ,PROF.H.S.K ಸಾಹಿತ್ಯ ಪ್ರಶಸ್ತಿ,ಚೈತನ್ಯಶ್ರೀ ಪ್ರಶಸ್ತಿ,ಕಾವ್ಯಸಿರಿ ಪ್ರಶಸ್ತಿ,ಬಸವ ಶ್ರೀ ಹಾಗೂ ಕಾವ್ಯಶ್ರೀ ಪ್ರಶಸ್ತಿ, ಕನ್ನಡ ಸಾಹಿತ್ಯ ಸಿರಿ ಪ್ರಶಸ್ತಿ,ಪ್ರೇಮಕವಿ ಪ್ರಶಸ್ತಿ,ಕರ್ನಾಟಕ ಯುವ ರತ್ನ ಪ್ರಶಸ್ತಿ,ತ್ಹೌಳವ  ಸಿರಿ ಪ್ರಶಸ್ತಿ, ಪಂಚಕಥಾ ಪ್ರಶಸ್ತಿ,ಹುಬ್ಬಳ್ಳಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ,ವೀರರಾಣಿ  ಕಿತ್ತೂರು ಚೆನ್ನಮ್ಮ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ,ದಸರಾ ಕಾವ್ಯ ಪುರಸ್ಕಾರ,ಗಡಿನಾಡ ಧ್ವನಿ ಕಾವ್ಯಭೂಷಣ ಪ್ರಶಸ್ತಿ.ಎಂ.ಬಿ .ಕುಕ್ಯಾನ್     ರೈಟರ್ ಆಫ್ ದಿ ಇಯರ್  ಪ್ರಶಸ್ತಿ ಹೀಗೆ ಹತ್ತು ಹಲವಾರು ಪ್ರಶಸ್ತಿಗಳನ್ನು ಪಡೆದುಕೊಂಡಿರುವ ಶಾರದಾ ಅಂಚನ್ ಇವರು ಔದ್ಯೋಗಿಕವಾಗಿ ರಕ್ತನಿಧಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು ತನ್ನ ಕಾರ್ಯ ಕ್ಷೇತ್ರದಲ್ಲಿ  ಇದುವರೆಗೆ ಸುಮಾರು 1000ಕ್ಕೂ ಹೆಚ್ಚು ರಕ್ತದಾನ ಶಿಭಿರಗಲ್ಲಿ ಭಾಗವಹಿಸಿದ್ದಾರೆ.ಸಂಗೀತದಲ್ಲೂ ಆಸಕ್ತಿ ಇರುವ ಇವರು ಗಾಯಕಿಯಾಗಿಯೂ ಪರಿಚಿತರಾಗಿದ್ದಾರೆ.


Share:

More Posts

Category

Send Us A Message

Related Posts

ACP ರೀನಾ ಸುವರ್ಣಗೆ ಜೀ ಕನ್ನಡ ನ್ಯೂಸ್‌ ಅಚೀವರ್ಸ್‌ ಅವಾರ್ಡ್ಸ್‌- 2025


Share       3ನೇ ವಾರ್ಷಿಕೋತ್ಸವದ ಅಂಗವಾಗಿ ಜೀ ಕನ್ನಡ ನ್ಯೂಸ್‌ ವತಿಯಿಂದ, Zee Achievers Awards ಕಾರ್ಯಕ್ರಮವನ್ನು ದಿ ರಿಟ್ಸ್‌ ಕಾರ್ಲ್‌ಟರ್ನ್‌ನಲ್ಲಿ ಆಯೋಜಿಸಲಾಗಿತ್ತು, ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯಾತಿಗಣ್ಯರನ್ನು ಗುರುತಿಸಿ ಜೀ ಕನ್ನಡ


Read More »

ಮುಂಬಯಿ ಎನ್‌ಸಿಪಿ (ಎಸ್‌ಪಿ) ಈಶಾನ್ಯ ಜಿಲ್ಲಾ ನಿರೀಕ್ಷಕರಾಗಿ ಲಕ್ಷ್ಮಣ್ ಸಿ. ಪೂಜಾರಿ ಚಿತ್ರಾಪು ಆಯ್ಕೆ


Share       ಮುಂಬಯಿ, ಮಾ. 21: ಎನ್‌ಸಿಪಿ (ಎಸ್‌ಪಿ) ಈಶಾನ್ಯ (ಉತ್ತರ ಮುಂಬಯಿ) ಜಿಲ್ಲಾ ನಿರೀಕ್ಷಕರಾಗಿ ತುಳು-ಕನ್ನಡಿಗಲಕ್ಷ್ಮಣ್ ಸಿ. ಪೂಜಾರಿ ಚಿತ್ರಾಪು ಅವರನ್ನು ಪಕ್ಷದ ಅಧ್ಯಕ್ಷೆ ರಾಖಿ ಜಾಧವ್ ಅವರು ನೇಮಕ ಮಾಡಿದ್ದಾರೆ. ಮಂಗಳೂರು ಚಿತ್ರಾಪು


Read More »

ಬಿಲ್ಲವಾಸ್ ಫ್ಯಾಮಿಲಿ ದುಬೈ ಸಂಘಟನೆ ; ಉಪ ಪೊಲೀಸ್ ಅಧಿಕ್ಷಕರಾದ ಎಸ್ ಮಹೇಶ್ ಕುಮಾರ್ ರವರ ಮನದಾಳದ ಮಾತು


Share       ಬಿಲ್ಲವಾಸ್ ಫ್ಯಾಮಿಲಿ ದುಬೈ, ಸಮುದಾಯದ ಸಾಮಾಜಿಕ ಚಟುವಟಿಕೆಗಳಲ್ಲಿ ಮಂಚೂಣಿ ಯಲ್ಲಿರುವ ಸಂಘಟನೆ. ಇತ್ತೀಚೆಗೆ ಖಾಸಗಿ ಕಾರ್ಯಕ್ರಮದ ನಿಮಿತ್ತ ದುಬೈಗೆ ಪ್ರಯಾಣ ಬೆಳೆಸಿದಾಗ ಈ ಸಂಘಟನೆಯ ಕಾರ್ಯವೈಖರಿ ಯನ್ನು ಕಣ್ಣಾರೆ ನೋಡುವ ಅವಕಾಶ ಒದಗಿ


Read More »

ನಾರಾಯಣ ಗುರುಗಳ ತತ್ವದಂತೆ ಎಲ್ಲರೂ ಜೊತೆಗೂಡಿ ಮುನ್ನೆಡೆಯಬೇಕು : ಪದ್ಮರಾಜ್ ಆರ್ ಪೂಜಾರಿ


Share       ಬಂಟ್ವಾಳ: ಯುವವಾಹಿನಿ(ರಿ.) ಮಾಣಿ ಘಟಕದ 2025-26 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭ ದಿನಾಂಕ 10-03-2025 ರ ಸೋಮವಾರದಂದು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದ ನೂತನ ನಿವೇಶನದಲ್ಲಿ ಜರುಗಿತು. ಪದಗ್ರಹಣ


Read More »

ಕೊಲ್ಲಿ ರಾಷ್ಟ್ರ ಕತಾ‌ರ್ ದೇಶದಲ್ಲಿ ಕತಾರ್ ಬಿಲ್ಲವಸ್ ಸಂಘದ ಮೊಟ್ಟ ಮೊದಲ ಬಾರಿಗೆ ಮಹಿಳಾ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ಅಪರ್ಣ ಶರತ್


Share       ಕೊಲ್ಲಿ ರಾಷ್ಟ್ರ ಕತಾ‌ರ್ ದೇಶದಲ್ಲಿ ನಮ್ಮ ತುಳುವರು ಹಲವಾರು ವರ್ಷಗಳಿಂದ ವಾಸವಿದ್ದಿದ್ದು, ಇಂದಿಗೂ ತುಳುವ ಮಣ್ಣಿನ ಪ್ರೀತಿಯನ್ನು ಮರೆತಿಲ್ಲ. ತುಳುನಾಡಿನ ಸಂಸ್ಕೃತಿ, ಆಚಾರ-ವಿಚಾರಗಳನ್ನು ಮರೆಯದೆ ಇಂದಿಗೂ ತಾವು ನೆಲೆ ನಿಂತ ಮಣ್ಣಿನಲ್ಲಿ ಸಂಭ್ರಮಿಸುತ್ತಾರೆ


Read More »

ದಮ್ಮಾಮ್: ಸೌದಿ ಬಿಲ್ಲವಾಸ್ ದಮ್ಮಾಮ್ ಸಂಘದ ಮಹಾಸಭೆ


Share       ದಮ್ಮಾಮ್: ಶ್ರೀ ನಾರಾಯಣ ಗುರು ಅವರ ತತ್ವ ಸಂದೇಶಗಳನ್ನು ಅಳವಡಿಸಿಕೊಂಡು ದಮ್ಮಾಮ್ ಬಿಲ್ಲವಾಸ್ ಸೌದಿ ಅರೇಬಿಯ ಸಂಘವನ್ನು ಮುನ್ನಡೆಸಬೇಕೆಂದು ಹಾಗು ಸಮಾಜದಲ್ಲಿರುವ ಶೋಷಿತರ , ಅಸಹಾಯಕರ ಮತ್ತು ಆರ್ಥಿಕವಾಗಿ ಹಿಂದುಳಿದವರಿಗೆ ಸಹಾಯ ಹಾಗು


Read More »