TOP STORIES:

FOLLOW US

ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಪುಣೆಯ ಸಮಾಜಸೇವಕ   “ವಿಶ್ವನಾಥ ಪೂಜಾರಿ ಕಡ್ತಲ’ ಆಯ್ಕೆ


ಪುಣೆ :ಪುಣೆ ಬಿಲ್ಲವ ಸಮಾಜ ಸೇವಾ ಸಂಘ ಇದರ ಅಧ್ಯಕ್ಷ ,ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಗುರುತಿಸಿಕೊಂಡಿರುವ ವಿಶ್ವನಾಥ ಪೂಜಾರಿ ಕಡ್ತಲ ಇವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ -2025  ಗೆ ಆಯ್ಕೆಯಾಗಿರುತ್ತಾರೆ . ಬೆಂಗಳೂರಿನ” ಆರ್ಯಭಟ ಕಲ್ಚರಲ್ ಆರ್ಗನೈಶೇಶನ್ “ಕೊಡಮಾಡುವ ಈ ಪ್ರಶಸ್ತಿಯನ್ನು ವಿಶ್ವನಾಥ ಪೂಜಾರಿ ಕಡ್ತಲ ಇವರ ಸಾಮಾಜಿಕ ಹಾಗೂ ಧಾರ್ಮಿಕ ಸೇವೆಯನ್ನು ಗುರುತಿಸಿ ನೀಡಲಾಗಿದೆ . ಮೇ 22 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭವು ಜರಗಲಿದೆ . ಸಂಸ್ಥೆಯು ಪ್ರತೀ ವರ್ಷ ಸಮಾಜದ ವಿವಿಧ ಕ್ಷೇತ್ರದ ಸಾಧಕರಿಗೆ ಈ ಪ್ರಶಸ್ತಿಯನ್ನು ನೀಡುತ್ತಾ ಬಂದಿದೆ . 

 ವಿಶ್ವನಾಥ ಪೂಜಾರಿಯವರು ಪುಣೆಯಲ್ಲಿ ಹೋಟೆಲ್ ಉದ್ಯಮದಲ್ಲಿ ಯಶಸ್ಸನ್ನು ಕಂಡವರು . ಕೇವಲ ತಾನೊಬ್ಬನೇ ನೆಮ್ಮದಿಯಿಂದ ಇದ್ದರಷ್ಟೇ ಜೀವನವಲ್ಲ” ಪರರೆಲ್ಲ ನಮ್ಮವರು “ಎಂಬ ಮನೋಭಾವವನ್ನು ರೂಢಿಸಿಕೊಂಡು ಸಾಮಾಜಿಕ ಸೇವೆಯನ್ನು ನಿರಂತರವಾಗಿ ಅನುಸಂಧಾನಿಸಿಕೊಂಡು ಅದರಲ್ಲಿ ತೃಪ್ತಿಯನ್ನು ಕಂಡಿರುವವರು . ಪುಣೆ ಬಿಲ್ಲವ ಸಮಾಜ ಸೇವಾ ಸಂಘದ ಚುಕ್ಕಾಣಿ ಹಿಡಿದು ಸಂಘದಲ್ಲಿ ಹೊಸ ಸಂಚಲನವನ್ನು ಮೂಡಿಸಿ  ಹಿರಿಕಿರಿಯರೆಲ್ಲರ ವಿಶ್ವಾಸಗಳನ್ನು ಗಳಿಸಿ ಮಾದರಿ ಸಂಘವನ್ನಾಗಿಸುವಲ್ಲಿ ಅವರ ಶ್ರಮ ಶ್ಲಾಘನೀಯವಾಗಿದೆ . ಸಂಘದ ಮೂಲಕ ವಿವಿಧ  ಸಾಂಸ್ಕೃತಿಕ ,ಸಾಮಾಜಿಕ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬಂದಿರುವುದಲ್ಲದೆ ಸಮಾಜಬಾಂಧವರ ಒಗ್ಗಟ್ಟಿಗಾಗಿ ಅಪಾರವಾಗಿ ಶ್ರಮಿಸುತ್ತಿದ್ದಾರೆ . ಪುಣೆ ರೆಸ್ಟೋರೆಂಟ್ & ಹೋಟೆಲಿಯರ್ಸ್ ಅಸೋಸಿಯೇಷನ್ ನಲ್ಲಿಯೂ ಸಕ್ರಿಯವಾಗಿದ್ದುಕೊಂಡು ಪುಣೆಯಲ್ಲಿರುವ ಯಾವುದೇ ಹೊಟೇಲಿಗರಿಗೆ ಅನ್ಯಾಯವಾದರೆ ತುರ್ತಾಗಿ ಧಾವಿಸಿ ಅವರಿಗೆ ನೈತಿಕ ಸ್ಥೈರ್ಯವನ್ನು ತುಂಬುವ ಮನೋಭಾವ ಅವರದ್ದಾಗಿದೆ . ಪುಣೆಯಲ್ಲಿರುವ ತುಳು ಕನ್ನಡಿಗರೆಲ್ಲರಲ್ಲೂ ಅನ್ಯೋನ್ಯವಾಗಿ ಗುರುತಿಸಿಕೊಂಡಿರುವುದಲ್ಲದೆ ನಾಡಿನ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೂ ತನ್ನದೇ ಆದ  ಕೊಡುಗೆಯನ್ನು ನೀಡುತ್ತಾ ಬಂದಿರುತ್ತಾರೆ . ಅಲ್ಲದೆ ತುಳುನಾಡಿನ ಭಾಷೆ ,ಸಂಸ್ಕೃತಿಗಳ ಬಗ್ಗೆ ಅಪಾರವಾದ ಆಸ್ಥೆಯಿರಿಸಿಕೊಂಡಿರುವುದಲ್ಲದೆ   ಯಕ್ಷಗಾನ ,ನಾಟಕ ,ಚಲನಚಿತ್ರ ಗಳಿಗೆ ಸದಾ ಪ್ರೋತ್ಸಾಹ ನೀಡುತ್ತಾ ಬಂದಿರುತ್ತಾರೆ .ಇತ್ತೀಚಿಗೆ ಪುಣೆ ಬಿಲ್ಲವ ಸಮಾಜಸೇವಾ ಸಂಘದ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಾಟವನ್ನು ಯಶಸ್ವಿಯಾಗಿ ಆಯೋಜಿಸಿದ ಹೆಗ್ಗಳಿಕೆ ಇವರದ್ದಾಗಿದೆ . 

ಭವಿಷ್ಯದಲ್ಲಿ  ಇನ್ನಷ್ಟು ಸಾಮಾಜಿಕ ಸೇವೆಯ ಮೂಲಕ ಯಶಸ್ಸನ್ನು ಪಡೆಯಲಿ  ಮತ್ತಷ್ಟು ಕೀರ್ತಿ ಗೌರವಗಳು ತಮ್ಮನ್ನು ಅರಸಿ ಬರಲಿ ಎಂಬ ಶುಭ ಹಾರೈಕೆಗಳು …... 


Share:

More Posts

Category

Send Us A Message

Related Posts

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ


Share       ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ


Read More »

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share       ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »

ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಪುಣೆಯ ಸಮಾಜಸೇವಕ   “ವಿಶ್ವನಾಥ ಪೂಜಾರಿ ಕಡ್ತಲ’ ಆಯ್ಕೆ


Share       ಪುಣೆ :ಪುಣೆ ಬಿಲ್ಲವ ಸಮಾಜ ಸೇವಾ ಸಂಘ ಇದರ ಅಧ್ಯಕ್ಷ ,ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಗುರುತಿಸಿಕೊಂಡಿರುವ ವಿಶ್ವನಾಥ ಪೂಜಾರಿ ಕಡ್ತಲ ಇವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ -2025  ಗೆ ಆಯ್ಕೆಯಾಗಿರುತ್ತಾರೆ .


Read More »

ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ 1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ


Share       ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ  1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ ಯತೀವರ್ಯರು, ಸಚಿವ ಮಾಂಕಳ್ ವೈದ್ಯ, ಶಾಸಕ ಹರೀಶ್ ಪೂಂಜ, ಸೇರಿದಂತೆ ಬೆಳ್ತಂಗಡಿಯಿಂದ ಸುಮಾರು 200


Read More »

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ


Share         ಪ್ರಸಿದ್ದ ಬೈದ್ಯೇರುಗಳ ಪಾತ್ರಿಯಾದ  ಶ್ರೀ ಸುರೇಶ್ ಪೂಜಾರಿಯವರು ಅಲ್ಪಕಾಲದ  ಅಸೌಖ್ಯದ ಕಾರಣ ಇಂದು ಭಗವಂತನ ಪಾದ ಸೇರಿದರು. ಕಳತ್ತೂರು ಹಿರಿಯಣ್ಣ ಪೂಜಾರಿ ಹಾಗೂ ಶ್ರೀಮತಿ ಲೀಲಾವತಿ ಪೂಜಾರಿಯವರ ಮಗನಾದ ಶ್ರೀ ಸುರೇಶ್


Read More »

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »