TOP STORIES:

ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಪುಣೆಯ ಸಮಾಜಸೇವಕ   “ವಿಶ್ವನಾಥ ಪೂಜಾರಿ ಕಡ್ತಲ’ ಆಯ್ಕೆ


ಪುಣೆ :ಪುಣೆ ಬಿಲ್ಲವ ಸಮಾಜ ಸೇವಾ ಸಂಘ ಇದರ ಅಧ್ಯಕ್ಷ ,ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಗುರುತಿಸಿಕೊಂಡಿರುವ ವಿಶ್ವನಾಥ ಪೂಜಾರಿ ಕಡ್ತಲ ಇವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ -2025  ಗೆ ಆಯ್ಕೆಯಾಗಿರುತ್ತಾರೆ . ಬೆಂಗಳೂರಿನ” ಆರ್ಯಭಟ ಕಲ್ಚರಲ್ ಆರ್ಗನೈಶೇಶನ್ “ಕೊಡಮಾಡುವ ಈ ಪ್ರಶಸ್ತಿಯನ್ನು ವಿಶ್ವನಾಥ ಪೂಜಾರಿ ಕಡ್ತಲ ಇವರ ಸಾಮಾಜಿಕ ಹಾಗೂ ಧಾರ್ಮಿಕ ಸೇವೆಯನ್ನು ಗುರುತಿಸಿ ನೀಡಲಾಗಿದೆ . ಮೇ 22 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭವು ಜರಗಲಿದೆ . ಸಂಸ್ಥೆಯು ಪ್ರತೀ ವರ್ಷ ಸಮಾಜದ ವಿವಿಧ ಕ್ಷೇತ್ರದ ಸಾಧಕರಿಗೆ ಈ ಪ್ರಶಸ್ತಿಯನ್ನು ನೀಡುತ್ತಾ ಬಂದಿದೆ . 

 ವಿಶ್ವನಾಥ ಪೂಜಾರಿಯವರು ಪುಣೆಯಲ್ಲಿ ಹೋಟೆಲ್ ಉದ್ಯಮದಲ್ಲಿ ಯಶಸ್ಸನ್ನು ಕಂಡವರು . ಕೇವಲ ತಾನೊಬ್ಬನೇ ನೆಮ್ಮದಿಯಿಂದ ಇದ್ದರಷ್ಟೇ ಜೀವನವಲ್ಲ” ಪರರೆಲ್ಲ ನಮ್ಮವರು “ಎಂಬ ಮನೋಭಾವವನ್ನು ರೂಢಿಸಿಕೊಂಡು ಸಾಮಾಜಿಕ ಸೇವೆಯನ್ನು ನಿರಂತರವಾಗಿ ಅನುಸಂಧಾನಿಸಿಕೊಂಡು ಅದರಲ್ಲಿ ತೃಪ್ತಿಯನ್ನು ಕಂಡಿರುವವರು . ಪುಣೆ ಬಿಲ್ಲವ ಸಮಾಜ ಸೇವಾ ಸಂಘದ ಚುಕ್ಕಾಣಿ ಹಿಡಿದು ಸಂಘದಲ್ಲಿ ಹೊಸ ಸಂಚಲನವನ್ನು ಮೂಡಿಸಿ  ಹಿರಿಕಿರಿಯರೆಲ್ಲರ ವಿಶ್ವಾಸಗಳನ್ನು ಗಳಿಸಿ ಮಾದರಿ ಸಂಘವನ್ನಾಗಿಸುವಲ್ಲಿ ಅವರ ಶ್ರಮ ಶ್ಲಾಘನೀಯವಾಗಿದೆ . ಸಂಘದ ಮೂಲಕ ವಿವಿಧ  ಸಾಂಸ್ಕೃತಿಕ ,ಸಾಮಾಜಿಕ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬಂದಿರುವುದಲ್ಲದೆ ಸಮಾಜಬಾಂಧವರ ಒಗ್ಗಟ್ಟಿಗಾಗಿ ಅಪಾರವಾಗಿ ಶ್ರಮಿಸುತ್ತಿದ್ದಾರೆ . ಪುಣೆ ರೆಸ್ಟೋರೆಂಟ್ & ಹೋಟೆಲಿಯರ್ಸ್ ಅಸೋಸಿಯೇಷನ್ ನಲ್ಲಿಯೂ ಸಕ್ರಿಯವಾಗಿದ್ದುಕೊಂಡು ಪುಣೆಯಲ್ಲಿರುವ ಯಾವುದೇ ಹೊಟೇಲಿಗರಿಗೆ ಅನ್ಯಾಯವಾದರೆ ತುರ್ತಾಗಿ ಧಾವಿಸಿ ಅವರಿಗೆ ನೈತಿಕ ಸ್ಥೈರ್ಯವನ್ನು ತುಂಬುವ ಮನೋಭಾವ ಅವರದ್ದಾಗಿದೆ . ಪುಣೆಯಲ್ಲಿರುವ ತುಳು ಕನ್ನಡಿಗರೆಲ್ಲರಲ್ಲೂ ಅನ್ಯೋನ್ಯವಾಗಿ ಗುರುತಿಸಿಕೊಂಡಿರುವುದಲ್ಲದೆ ನಾಡಿನ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೂ ತನ್ನದೇ ಆದ  ಕೊಡುಗೆಯನ್ನು ನೀಡುತ್ತಾ ಬಂದಿರುತ್ತಾರೆ . ಅಲ್ಲದೆ ತುಳುನಾಡಿನ ಭಾಷೆ ,ಸಂಸ್ಕೃತಿಗಳ ಬಗ್ಗೆ ಅಪಾರವಾದ ಆಸ್ಥೆಯಿರಿಸಿಕೊಂಡಿರುವುದಲ್ಲದೆ   ಯಕ್ಷಗಾನ ,ನಾಟಕ ,ಚಲನಚಿತ್ರ ಗಳಿಗೆ ಸದಾ ಪ್ರೋತ್ಸಾಹ ನೀಡುತ್ತಾ ಬಂದಿರುತ್ತಾರೆ .ಇತ್ತೀಚಿಗೆ ಪುಣೆ ಬಿಲ್ಲವ ಸಮಾಜಸೇವಾ ಸಂಘದ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಾಟವನ್ನು ಯಶಸ್ವಿಯಾಗಿ ಆಯೋಜಿಸಿದ ಹೆಗ್ಗಳಿಕೆ ಇವರದ್ದಾಗಿದೆ . 

ಭವಿಷ್ಯದಲ್ಲಿ  ಇನ್ನಷ್ಟು ಸಾಮಾಜಿಕ ಸೇವೆಯ ಮೂಲಕ ಯಶಸ್ಸನ್ನು ಪಡೆಯಲಿ  ಮತ್ತಷ್ಟು ಕೀರ್ತಿ ಗೌರವಗಳು ತಮ್ಮನ್ನು ಅರಸಿ ಬರಲಿ ಎಂಬ ಶುಭ ಹಾರೈಕೆಗಳು …... 


Related Posts

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »