TOP STORIES:

ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಪುಣೆಯ ಸಮಾಜಸೇವಕ   “ವಿಶ್ವನಾಥ ಪೂಜಾರಿ ಕಡ್ತಲ’ ಆಯ್ಕೆ


ಪುಣೆ :ಪುಣೆ ಬಿಲ್ಲವ ಸಮಾಜ ಸೇವಾ ಸಂಘ ಇದರ ಅಧ್ಯಕ್ಷ ,ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಗುರುತಿಸಿಕೊಂಡಿರುವ ವಿಶ್ವನಾಥ ಪೂಜಾರಿ ಕಡ್ತಲ ಇವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ -2025  ಗೆ ಆಯ್ಕೆಯಾಗಿರುತ್ತಾರೆ . ಬೆಂಗಳೂರಿನ” ಆರ್ಯಭಟ ಕಲ್ಚರಲ್ ಆರ್ಗನೈಶೇಶನ್ “ಕೊಡಮಾಡುವ ಈ ಪ್ರಶಸ್ತಿಯನ್ನು ವಿಶ್ವನಾಥ ಪೂಜಾರಿ ಕಡ್ತಲ ಇವರ ಸಾಮಾಜಿಕ ಹಾಗೂ ಧಾರ್ಮಿಕ ಸೇವೆಯನ್ನು ಗುರುತಿಸಿ ನೀಡಲಾಗಿದೆ . ಮೇ 22 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭವು ಜರಗಲಿದೆ . ಸಂಸ್ಥೆಯು ಪ್ರತೀ ವರ್ಷ ಸಮಾಜದ ವಿವಿಧ ಕ್ಷೇತ್ರದ ಸಾಧಕರಿಗೆ ಈ ಪ್ರಶಸ್ತಿಯನ್ನು ನೀಡುತ್ತಾ ಬಂದಿದೆ . 

 ವಿಶ್ವನಾಥ ಪೂಜಾರಿಯವರು ಪುಣೆಯಲ್ಲಿ ಹೋಟೆಲ್ ಉದ್ಯಮದಲ್ಲಿ ಯಶಸ್ಸನ್ನು ಕಂಡವರು . ಕೇವಲ ತಾನೊಬ್ಬನೇ ನೆಮ್ಮದಿಯಿಂದ ಇದ್ದರಷ್ಟೇ ಜೀವನವಲ್ಲ” ಪರರೆಲ್ಲ ನಮ್ಮವರು “ಎಂಬ ಮನೋಭಾವವನ್ನು ರೂಢಿಸಿಕೊಂಡು ಸಾಮಾಜಿಕ ಸೇವೆಯನ್ನು ನಿರಂತರವಾಗಿ ಅನುಸಂಧಾನಿಸಿಕೊಂಡು ಅದರಲ್ಲಿ ತೃಪ್ತಿಯನ್ನು ಕಂಡಿರುವವರು . ಪುಣೆ ಬಿಲ್ಲವ ಸಮಾಜ ಸೇವಾ ಸಂಘದ ಚುಕ್ಕಾಣಿ ಹಿಡಿದು ಸಂಘದಲ್ಲಿ ಹೊಸ ಸಂಚಲನವನ್ನು ಮೂಡಿಸಿ  ಹಿರಿಕಿರಿಯರೆಲ್ಲರ ವಿಶ್ವಾಸಗಳನ್ನು ಗಳಿಸಿ ಮಾದರಿ ಸಂಘವನ್ನಾಗಿಸುವಲ್ಲಿ ಅವರ ಶ್ರಮ ಶ್ಲಾಘನೀಯವಾಗಿದೆ . ಸಂಘದ ಮೂಲಕ ವಿವಿಧ  ಸಾಂಸ್ಕೃತಿಕ ,ಸಾಮಾಜಿಕ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬಂದಿರುವುದಲ್ಲದೆ ಸಮಾಜಬಾಂಧವರ ಒಗ್ಗಟ್ಟಿಗಾಗಿ ಅಪಾರವಾಗಿ ಶ್ರಮಿಸುತ್ತಿದ್ದಾರೆ . ಪುಣೆ ರೆಸ್ಟೋರೆಂಟ್ & ಹೋಟೆಲಿಯರ್ಸ್ ಅಸೋಸಿಯೇಷನ್ ನಲ್ಲಿಯೂ ಸಕ್ರಿಯವಾಗಿದ್ದುಕೊಂಡು ಪುಣೆಯಲ್ಲಿರುವ ಯಾವುದೇ ಹೊಟೇಲಿಗರಿಗೆ ಅನ್ಯಾಯವಾದರೆ ತುರ್ತಾಗಿ ಧಾವಿಸಿ ಅವರಿಗೆ ನೈತಿಕ ಸ್ಥೈರ್ಯವನ್ನು ತುಂಬುವ ಮನೋಭಾವ ಅವರದ್ದಾಗಿದೆ . ಪುಣೆಯಲ್ಲಿರುವ ತುಳು ಕನ್ನಡಿಗರೆಲ್ಲರಲ್ಲೂ ಅನ್ಯೋನ್ಯವಾಗಿ ಗುರುತಿಸಿಕೊಂಡಿರುವುದಲ್ಲದೆ ನಾಡಿನ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೂ ತನ್ನದೇ ಆದ  ಕೊಡುಗೆಯನ್ನು ನೀಡುತ್ತಾ ಬಂದಿರುತ್ತಾರೆ . ಅಲ್ಲದೆ ತುಳುನಾಡಿನ ಭಾಷೆ ,ಸಂಸ್ಕೃತಿಗಳ ಬಗ್ಗೆ ಅಪಾರವಾದ ಆಸ್ಥೆಯಿರಿಸಿಕೊಂಡಿರುವುದಲ್ಲದೆ   ಯಕ್ಷಗಾನ ,ನಾಟಕ ,ಚಲನಚಿತ್ರ ಗಳಿಗೆ ಸದಾ ಪ್ರೋತ್ಸಾಹ ನೀಡುತ್ತಾ ಬಂದಿರುತ್ತಾರೆ .ಇತ್ತೀಚಿಗೆ ಪುಣೆ ಬಿಲ್ಲವ ಸಮಾಜಸೇವಾ ಸಂಘದ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಾಟವನ್ನು ಯಶಸ್ವಿಯಾಗಿ ಆಯೋಜಿಸಿದ ಹೆಗ್ಗಳಿಕೆ ಇವರದ್ದಾಗಿದೆ . 

ಭವಿಷ್ಯದಲ್ಲಿ  ಇನ್ನಷ್ಟು ಸಾಮಾಜಿಕ ಸೇವೆಯ ಮೂಲಕ ಯಶಸ್ಸನ್ನು ಪಡೆಯಲಿ  ಮತ್ತಷ್ಟು ಕೀರ್ತಿ ಗೌರವಗಳು ತಮ್ಮನ್ನು ಅರಸಿ ಬರಲಿ ಎಂಬ ಶುಭ ಹಾರೈಕೆಗಳು …... 


Related Posts

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »