TOP STORIES:

ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಪುಣೆಯ ಸಮಾಜಸೇವಕ   “ವಿಶ್ವನಾಥ ಪೂಜಾರಿ ಕಡ್ತಲ’ ಆಯ್ಕೆ


ಪುಣೆ :ಪುಣೆ ಬಿಲ್ಲವ ಸಮಾಜ ಸೇವಾ ಸಂಘ ಇದರ ಅಧ್ಯಕ್ಷ ,ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಗುರುತಿಸಿಕೊಂಡಿರುವ ವಿಶ್ವನಾಥ ಪೂಜಾರಿ ಕಡ್ತಲ ಇವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ -2025  ಗೆ ಆಯ್ಕೆಯಾಗಿರುತ್ತಾರೆ . ಬೆಂಗಳೂರಿನ” ಆರ್ಯಭಟ ಕಲ್ಚರಲ್ ಆರ್ಗನೈಶೇಶನ್ “ಕೊಡಮಾಡುವ ಈ ಪ್ರಶಸ್ತಿಯನ್ನು ವಿಶ್ವನಾಥ ಪೂಜಾರಿ ಕಡ್ತಲ ಇವರ ಸಾಮಾಜಿಕ ಹಾಗೂ ಧಾರ್ಮಿಕ ಸೇವೆಯನ್ನು ಗುರುತಿಸಿ ನೀಡಲಾಗಿದೆ . ಮೇ 22 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭವು ಜರಗಲಿದೆ . ಸಂಸ್ಥೆಯು ಪ್ರತೀ ವರ್ಷ ಸಮಾಜದ ವಿವಿಧ ಕ್ಷೇತ್ರದ ಸಾಧಕರಿಗೆ ಈ ಪ್ರಶಸ್ತಿಯನ್ನು ನೀಡುತ್ತಾ ಬಂದಿದೆ . 

 ವಿಶ್ವನಾಥ ಪೂಜಾರಿಯವರು ಪುಣೆಯಲ್ಲಿ ಹೋಟೆಲ್ ಉದ್ಯಮದಲ್ಲಿ ಯಶಸ್ಸನ್ನು ಕಂಡವರು . ಕೇವಲ ತಾನೊಬ್ಬನೇ ನೆಮ್ಮದಿಯಿಂದ ಇದ್ದರಷ್ಟೇ ಜೀವನವಲ್ಲ” ಪರರೆಲ್ಲ ನಮ್ಮವರು “ಎಂಬ ಮನೋಭಾವವನ್ನು ರೂಢಿಸಿಕೊಂಡು ಸಾಮಾಜಿಕ ಸೇವೆಯನ್ನು ನಿರಂತರವಾಗಿ ಅನುಸಂಧಾನಿಸಿಕೊಂಡು ಅದರಲ್ಲಿ ತೃಪ್ತಿಯನ್ನು ಕಂಡಿರುವವರು . ಪುಣೆ ಬಿಲ್ಲವ ಸಮಾಜ ಸೇವಾ ಸಂಘದ ಚುಕ್ಕಾಣಿ ಹಿಡಿದು ಸಂಘದಲ್ಲಿ ಹೊಸ ಸಂಚಲನವನ್ನು ಮೂಡಿಸಿ  ಹಿರಿಕಿರಿಯರೆಲ್ಲರ ವಿಶ್ವಾಸಗಳನ್ನು ಗಳಿಸಿ ಮಾದರಿ ಸಂಘವನ್ನಾಗಿಸುವಲ್ಲಿ ಅವರ ಶ್ರಮ ಶ್ಲಾಘನೀಯವಾಗಿದೆ . ಸಂಘದ ಮೂಲಕ ವಿವಿಧ  ಸಾಂಸ್ಕೃತಿಕ ,ಸಾಮಾಜಿಕ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬಂದಿರುವುದಲ್ಲದೆ ಸಮಾಜಬಾಂಧವರ ಒಗ್ಗಟ್ಟಿಗಾಗಿ ಅಪಾರವಾಗಿ ಶ್ರಮಿಸುತ್ತಿದ್ದಾರೆ . ಪುಣೆ ರೆಸ್ಟೋರೆಂಟ್ & ಹೋಟೆಲಿಯರ್ಸ್ ಅಸೋಸಿಯೇಷನ್ ನಲ್ಲಿಯೂ ಸಕ್ರಿಯವಾಗಿದ್ದುಕೊಂಡು ಪುಣೆಯಲ್ಲಿರುವ ಯಾವುದೇ ಹೊಟೇಲಿಗರಿಗೆ ಅನ್ಯಾಯವಾದರೆ ತುರ್ತಾಗಿ ಧಾವಿಸಿ ಅವರಿಗೆ ನೈತಿಕ ಸ್ಥೈರ್ಯವನ್ನು ತುಂಬುವ ಮನೋಭಾವ ಅವರದ್ದಾಗಿದೆ . ಪುಣೆಯಲ್ಲಿರುವ ತುಳು ಕನ್ನಡಿಗರೆಲ್ಲರಲ್ಲೂ ಅನ್ಯೋನ್ಯವಾಗಿ ಗುರುತಿಸಿಕೊಂಡಿರುವುದಲ್ಲದೆ ನಾಡಿನ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೂ ತನ್ನದೇ ಆದ  ಕೊಡುಗೆಯನ್ನು ನೀಡುತ್ತಾ ಬಂದಿರುತ್ತಾರೆ . ಅಲ್ಲದೆ ತುಳುನಾಡಿನ ಭಾಷೆ ,ಸಂಸ್ಕೃತಿಗಳ ಬಗ್ಗೆ ಅಪಾರವಾದ ಆಸ್ಥೆಯಿರಿಸಿಕೊಂಡಿರುವುದಲ್ಲದೆ   ಯಕ್ಷಗಾನ ,ನಾಟಕ ,ಚಲನಚಿತ್ರ ಗಳಿಗೆ ಸದಾ ಪ್ರೋತ್ಸಾಹ ನೀಡುತ್ತಾ ಬಂದಿರುತ್ತಾರೆ .ಇತ್ತೀಚಿಗೆ ಪುಣೆ ಬಿಲ್ಲವ ಸಮಾಜಸೇವಾ ಸಂಘದ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಾಟವನ್ನು ಯಶಸ್ವಿಯಾಗಿ ಆಯೋಜಿಸಿದ ಹೆಗ್ಗಳಿಕೆ ಇವರದ್ದಾಗಿದೆ . 

ಭವಿಷ್ಯದಲ್ಲಿ  ಇನ್ನಷ್ಟು ಸಾಮಾಜಿಕ ಸೇವೆಯ ಮೂಲಕ ಯಶಸ್ಸನ್ನು ಪಡೆಯಲಿ  ಮತ್ತಷ್ಟು ಕೀರ್ತಿ ಗೌರವಗಳು ತಮ್ಮನ್ನು ಅರಸಿ ಬರಲಿ ಎಂಬ ಶುಭ ಹಾರೈಕೆಗಳು …... 


Related Posts

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »

ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ


Share         ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ ಉಡುಪಿ: ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯದ ಜಾರಿ ಆದೇಶವನ್ನು ಕಾರ್ಯಗತಗೊಳಿಸುವ ನೆಪದಲ್ಲಿ ಪೊಲೀಸರು ಮಹಿಳೆಯರಿದ್ದ ಮನೆಗೆ ಬೆಳ್ಳಂ


Read More »

ಯುವ ವೈಭವ 2025 -ಯುವವಾಹಿನಿ (ರಿ.)ಬೆಂಗಳೂರು ಘಟಕದ ಪತ್ರಿಕಾಗೋಷ್ಠಿ


Share         #ಯುವ ವೈಭವ 2025 05/12/25 ಇಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಯುವವಾಹಿನಿ (ರಿ.)ಬೆಂಗಳೂರು ಘಟಕ ಅಧ್ಯಕ್ಷರಾದ ಶಶಿಧರ್ ಕೋಟ್ಯಾನ್ ಮತ್ತು ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ ಅವರು


Read More »

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ


Share         ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಳ್ಳಾಲ: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ


Read More »

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ


Share         ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ


Read More »