TOP STORIES:

ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಪುಣೆಯ ಸಮಾಜಸೇವಕ   “ವಿಶ್ವನಾಥ ಪೂಜಾರಿ ಕಡ್ತಲ’ ಆಯ್ಕೆ


ಪುಣೆ :ಪುಣೆ ಬಿಲ್ಲವ ಸಮಾಜ ಸೇವಾ ಸಂಘ ಇದರ ಅಧ್ಯಕ್ಷ ,ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಗುರುತಿಸಿಕೊಂಡಿರುವ ವಿಶ್ವನಾಥ ಪೂಜಾರಿ ಕಡ್ತಲ ಇವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ -2025  ಗೆ ಆಯ್ಕೆಯಾಗಿರುತ್ತಾರೆ . ಬೆಂಗಳೂರಿನ” ಆರ್ಯಭಟ ಕಲ್ಚರಲ್ ಆರ್ಗನೈಶೇಶನ್ “ಕೊಡಮಾಡುವ ಈ ಪ್ರಶಸ್ತಿಯನ್ನು ವಿಶ್ವನಾಥ ಪೂಜಾರಿ ಕಡ್ತಲ ಇವರ ಸಾಮಾಜಿಕ ಹಾಗೂ ಧಾರ್ಮಿಕ ಸೇವೆಯನ್ನು ಗುರುತಿಸಿ ನೀಡಲಾಗಿದೆ . ಮೇ 22 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭವು ಜರಗಲಿದೆ . ಸಂಸ್ಥೆಯು ಪ್ರತೀ ವರ್ಷ ಸಮಾಜದ ವಿವಿಧ ಕ್ಷೇತ್ರದ ಸಾಧಕರಿಗೆ ಈ ಪ್ರಶಸ್ತಿಯನ್ನು ನೀಡುತ್ತಾ ಬಂದಿದೆ . 

 ವಿಶ್ವನಾಥ ಪೂಜಾರಿಯವರು ಪುಣೆಯಲ್ಲಿ ಹೋಟೆಲ್ ಉದ್ಯಮದಲ್ಲಿ ಯಶಸ್ಸನ್ನು ಕಂಡವರು . ಕೇವಲ ತಾನೊಬ್ಬನೇ ನೆಮ್ಮದಿಯಿಂದ ಇದ್ದರಷ್ಟೇ ಜೀವನವಲ್ಲ” ಪರರೆಲ್ಲ ನಮ್ಮವರು “ಎಂಬ ಮನೋಭಾವವನ್ನು ರೂಢಿಸಿಕೊಂಡು ಸಾಮಾಜಿಕ ಸೇವೆಯನ್ನು ನಿರಂತರವಾಗಿ ಅನುಸಂಧಾನಿಸಿಕೊಂಡು ಅದರಲ್ಲಿ ತೃಪ್ತಿಯನ್ನು ಕಂಡಿರುವವರು . ಪುಣೆ ಬಿಲ್ಲವ ಸಮಾಜ ಸೇವಾ ಸಂಘದ ಚುಕ್ಕಾಣಿ ಹಿಡಿದು ಸಂಘದಲ್ಲಿ ಹೊಸ ಸಂಚಲನವನ್ನು ಮೂಡಿಸಿ  ಹಿರಿಕಿರಿಯರೆಲ್ಲರ ವಿಶ್ವಾಸಗಳನ್ನು ಗಳಿಸಿ ಮಾದರಿ ಸಂಘವನ್ನಾಗಿಸುವಲ್ಲಿ ಅವರ ಶ್ರಮ ಶ್ಲಾಘನೀಯವಾಗಿದೆ . ಸಂಘದ ಮೂಲಕ ವಿವಿಧ  ಸಾಂಸ್ಕೃತಿಕ ,ಸಾಮಾಜಿಕ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬಂದಿರುವುದಲ್ಲದೆ ಸಮಾಜಬಾಂಧವರ ಒಗ್ಗಟ್ಟಿಗಾಗಿ ಅಪಾರವಾಗಿ ಶ್ರಮಿಸುತ್ತಿದ್ದಾರೆ . ಪುಣೆ ರೆಸ್ಟೋರೆಂಟ್ & ಹೋಟೆಲಿಯರ್ಸ್ ಅಸೋಸಿಯೇಷನ್ ನಲ್ಲಿಯೂ ಸಕ್ರಿಯವಾಗಿದ್ದುಕೊಂಡು ಪುಣೆಯಲ್ಲಿರುವ ಯಾವುದೇ ಹೊಟೇಲಿಗರಿಗೆ ಅನ್ಯಾಯವಾದರೆ ತುರ್ತಾಗಿ ಧಾವಿಸಿ ಅವರಿಗೆ ನೈತಿಕ ಸ್ಥೈರ್ಯವನ್ನು ತುಂಬುವ ಮನೋಭಾವ ಅವರದ್ದಾಗಿದೆ . ಪುಣೆಯಲ್ಲಿರುವ ತುಳು ಕನ್ನಡಿಗರೆಲ್ಲರಲ್ಲೂ ಅನ್ಯೋನ್ಯವಾಗಿ ಗುರುತಿಸಿಕೊಂಡಿರುವುದಲ್ಲದೆ ನಾಡಿನ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೂ ತನ್ನದೇ ಆದ  ಕೊಡುಗೆಯನ್ನು ನೀಡುತ್ತಾ ಬಂದಿರುತ್ತಾರೆ . ಅಲ್ಲದೆ ತುಳುನಾಡಿನ ಭಾಷೆ ,ಸಂಸ್ಕೃತಿಗಳ ಬಗ್ಗೆ ಅಪಾರವಾದ ಆಸ್ಥೆಯಿರಿಸಿಕೊಂಡಿರುವುದಲ್ಲದೆ   ಯಕ್ಷಗಾನ ,ನಾಟಕ ,ಚಲನಚಿತ್ರ ಗಳಿಗೆ ಸದಾ ಪ್ರೋತ್ಸಾಹ ನೀಡುತ್ತಾ ಬಂದಿರುತ್ತಾರೆ .ಇತ್ತೀಚಿಗೆ ಪುಣೆ ಬಿಲ್ಲವ ಸಮಾಜಸೇವಾ ಸಂಘದ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಾಟವನ್ನು ಯಶಸ್ವಿಯಾಗಿ ಆಯೋಜಿಸಿದ ಹೆಗ್ಗಳಿಕೆ ಇವರದ್ದಾಗಿದೆ . 

ಭವಿಷ್ಯದಲ್ಲಿ  ಇನ್ನಷ್ಟು ಸಾಮಾಜಿಕ ಸೇವೆಯ ಮೂಲಕ ಯಶಸ್ಸನ್ನು ಪಡೆಯಲಿ  ಮತ್ತಷ್ಟು ಕೀರ್ತಿ ಗೌರವಗಳು ತಮ್ಮನ್ನು ಅರಸಿ ಬರಲಿ ಎಂಬ ಶುಭ ಹಾರೈಕೆಗಳು …... 


Related Posts

ಬಿಲ್ಲವಾಸ್ ಕತಾರ್ ನ ಸ್ವರ ಲಹರಿಗೆ ಸ್ವರ ಸೇರಿಸಿ ಕುಣಿದು ಕುಪ್ಪಳಿಸಿದ ಜನಸ್ತೋಮ


Share        ಬಿಲ್ಲವಾಸ್ ಕತಾರ್  ಆಯೋಜಿಸಿದ  ಸ್ವರ ಲಹರಿ, ಸಂಗೀತ ಸಂಜೆ ಕಾರ್ಯಕ್ರಮ  ದಿನಾಂಕ  ಮೇ 30, 2025 ರಂದು ಡಿ.ಪಿ.ಎಸ್. ಎಂ.ಐ.ಎಸ್ ಅಲ್ ವಕ್ರ   ಸಭಾಂಗಣದಲ್ಲಿ ನವ ಇತಿಹಾಸವನ್ನು ಸೃಷ್ಟಿಸಿತು.  ಅದ್ಭುತ ಸಂಗೀತ


Read More »

ಬಿಕ್ಕಳಿಕೆ ಬಂದಾಗ ಈ ಸರಳ ಟೆಕ್ನಿಕ್ ಟ್ರೈ ಮಾಡಿ ನೋಡಿ, ತಕ್ಷಣ ಕಡಿಮೆಯಾಗುತ್ತೆ


Share        ಬಿಕ್ಕಳಿಕೆ ಯಾರಿಗೆ ಬರಲ್ಲ ಹೇಳಿ? ಅದರಲ್ಲಿಯೂ ಈ ಬಿಕ್ಕಳಿಕೆ ಯಾರನ್ನೂ ಹೇಳಿ, ಕೇಳಿ ಬರುವಂತದ್ದಲ್ಲ. ಆದರೆ ಅವು ಬಂದಾಗ ಎಲ್ಲರ ಮುಂದೆ ಮುಜುಗರ ಆಗುವುದು ಮಾತ್ರ ತಪ್ಪುವುದಿಲ್ಲ. ಏಕೆಂದರೆ ಇದು ಯಾವಾಗ ಬೇಕಾದರೂ


Read More »

ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಗೆಜೆಟೆಡ್ ಅಧಿಕಾರಿಯಾಗಿ ಆಯ್ಕೆಯಾದ ಸುದೀಪ್ ರಾಜ್ ಮನೆಗೆ ಸೌದಿ ಬಿಲ್ಲಾವಾಸ್ ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಭೇಟಿ


Share        ಮಂಗಳೂರು: ಕೇಂದ್ರ ಲೋಕಸೇವಾ ಆಯೋಗ (UPSC) ನಡೆಸಲಾದ ಪರೀಕ್ಷೆಯಲ್ಲಿ ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಆಯ್ಕೆಯಾದ ಮಂಗಳೂರಿನ ಚಿಲಿಂಬಿ ಆದರ್ಶನಗರದ ಸುದೀಪ್ ರಾಜ್ ಅವರ ಮನೆಗೆ ತೆರಳಿ ಸೌದಿ ಬಿಲ್ಲಾವಾಸ್


Read More »

UPSC ನಡೆಸಲಾದ ಪರೀಕ್ಷೆಯಲ್ಲಿ. ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಸುದೀಪ್ ರಾಜ್ ಆಯ್ಕೆ


Share        ಕೇಂದ್ರ ಲೋಕಸೇವಾ ಆಯೋಗ (UPSC), ಮೇ 23, 2025 ರಂದು ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ (CDS) ಪರೀಕ್ಷೆ (II), 2024 ರ ಅಂತಿಮ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಅದರಲ್ಲಿ ನಮ್ಮ ಬಿಲ್ಲವ


Read More »

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ


Share        ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ


Read More »

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share        ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »