TOP STORIES:

ಬಿಕ್ಕಳಿಕೆ ಬಂದಾಗ ಈ ಸರಳ ಟೆಕ್ನಿಕ್ ಟ್ರೈ ಮಾಡಿ ನೋಡಿ, ತಕ್ಷಣ ಕಡಿಮೆಯಾಗುತ್ತೆ


ಬಿಕ್ಕಳಿಕೆ ಯಾರಿಗೆ ಬರಲ್ಲ ಹೇಳಿ? ಅದರಲ್ಲಿಯೂ ಈ ಬಿಕ್ಕಳಿಕೆ ಯಾರನ್ನೂ ಹೇಳಿ, ಕೇಳಿ ಬರುವಂತದ್ದಲ್ಲ. ಆದರೆ ಅವು ಬಂದಾಗ ಎಲ್ಲರ ಮುಂದೆ ಮುಜುಗರ ಆಗುವುದು ಮಾತ್ರ ತಪ್ಪುವುದಿಲ್ಲ. ಏಕೆಂದರೆ ಇದು ಯಾವಾಗ ಬೇಕಾದರೂ ಬರಬಹುದು, ಜೊತೆಗೆ ಇದು ಬಂದಾಗ ಸುತ್ತಮುತ್ತಲಿರುವವರು ನಮ್ಮನ್ನು ನೋಡುವುದರಿಂದ ಸಹಜವಾಗಿ ಏನು ಮಾಡಬೇಕು ಎಂಬುದೇ ತಿಳಿಯುವುದಿಲ್ಲ. ಕೆಲವರು ಬಿಕ್ಕಳಿಕೆ ಬಂದಾಗ ತಕ್ಷಣ ನೀರು ಕುಡಿಯುತ್ತಾರೆ, ಇನ್ನು ಕೆಲವರು ಸಕ್ಕರೆಯನ್ನು ಬಾಯಿಗೆ ಹಾಕಿಕೊಳ್ಳುತ್ತಾರೆ. ಹಗಲಿನಲ್ಲಿ ಈ ರೀತಿ ಬಿಕ್ಕಳಿಕೆ ಬಂದರೆ ಪರವಾಗಿಲ್ಲ. ಆದರೆ ರಾತ್ರಿ ಸಮಯದಲ್ಲಿ ಈ ರೀತಿಯಾದಾಗ ಏನು ಮಾಡಬೇಕು? ಅದಕ್ಕೂ ಮೊದಲು ಈ ರೀತಿ ಬಿಕ್ಕಳಿಕೆ ಏಕೆ ಬರುತ್ತದೆ (Hiccups Causes)? ಅದಕ್ಕೆ ಕಾರಣವೇನು? ಇದನ್ನು ಕಡಿಮೆ ಮಾಡಲು ಯಾವ ರೀತಿ ಸಲಹೆಗಳನ್ನು ಪಾಲಿಸಬೇಕು ಎಂಬುದನ್ನು ತಿಳಿದುಕೊಳ್ಳಿ. ಬಿಕ್ಕಳಿಕೆ ತುಂಬಾ ಸಾಮಾನ್ಯ. ದೇಹದಲ್ಲಿನ ಡಯಾಫ್ರಾಮ್ ಸ್ನಾಯುವಿನ ಸಮಸ್ಯೆಗಳಿಂದ ಅವು ಸಂಭವಿಸುತ್ತವೆ. ಇದು ನಮ್ಮ ಉಸಿರಾಟಕ್ಕೆ ಸಂಬಂಧಿಸಿದ್ದು. ಈ ಸ್ನಾಯು ಇದ್ದಕ್ಕಿದ್ದಂತೆ ಸಂಕುಚಿತಗೊಂಡಾಗ ಬಿಕ್ಕಳಿಕೆ ಉಂಟಾಗುತ್ತದೆ. ಆದರೆ ಬಿಕ್ಕಳಿಕೆ ಬರುವುದಕ್ಕೆ ಇದೊಂದೇ ಕಾರಣವಲ್ಲ. ಬಿಕ್ಕಳಿಕೆಗೆ ಕಂಡುಬರುವುದಕ್ಕೆ ಹಲವು ಕಾರಣಗಳಿವೆ. ಆಹಾರವನ್ನು ಬೇಗನೆ ತಿನ್ನುವುದು ಅಥವಾ ವೇಗವಾಗಿ ನೀರನ್ನು ಕುಡಿಯುವುದರಿಂದ ಹೊಟ್ಟೆಗೆ ಸಾಕಷ್ಟು ಗಾಳಿ ಪ್ರವೇಶಿಸಬಹುದು. ಸೋಡಾ ಮತ್ತು ಬಿಯರ್‌ನಂತಹ ಹೆಚ್ಚು ಕಾರ್ಬೊನೇಟೆಡ್ ಪಾನೀಯಗಳನ್ನು ಕುಡಿಯುವುದರಿಂದಲೂ ಬಿಕ್ಕಳಿಕೆ ಬರಬಹುದು. ಜೊತೆಗೆ ಹೆಚ್ಚು ಹಸಿವಾಗಿದ್ದಾಗ ಒಮ್ಮೆಲೇ ತಿನ್ನುವುದರಿಂದಲೂ ಬಿಕ್ಕಳಿಕೆ ಬರಬಹುದು. ಹೆಚ್ಚುವರಿಯಾಗಿ, ಮಸಾಲೆಯುಕ್ತ ಆಹಾರವನ್ನು ಸೇವಿಸುವುದು, ಧೂಮಪಾನ ಮಾಡುವುದು ಮತ್ತು ಒತ್ತಡ ಅಥವಾ ಆತಂಕದಿಂದ ಬಳಲುವುದು ಸಹ ಬಿಕ್ಕಳಿಗೆ ಕಾರಣವಾಗಬಹುದು.ಬಿಕ್ಕಳಿಕೆ ಕಡಿಮೆ ಮಾಡಲು ಗಂಟಲಿನಲ್ಲಿ ನೀರನ್ನು ಹಿಡಿದಿಟ್ಟುಕೊಳ್ಳಿ. ಈ ರೀತಿ ಮಾಡುವುದರಿಂದ ಬಿಕ್ಕಳಿಕೆ ಕಡಿಮೆಯಾಗುತ್ತದೆ.

ತಣ್ಣೀರು ಕುಡಿಯುವುದರಿಂದ ಬಿಕ್ಕಳಿಕೆ ಕಡಿಮೆಯಾಗುತ್ತದೆ.

ಬಿಕ್ಕಳಿಕೆಯನ್ನು ತ್ವರಿತವಾಗಿ ನಿವಾರಿಸಲು, ಬಾಯಿಗೆ ಸ್ವಲ್ಪ ಸಕ್ಕರೆ ಹಾಕಿ ಅದನ್ನು ನಿಧಾನವಾಗಿ ಅಗಿಯಿರಿ.

ಅನ್ನ ತಿನ್ನುವುದರಿಂದ ಬಿಕ್ಕಳಿಕೆ ಕಡಿಮೆಯಾಗುತ್ತದೆ.

ಮುಖವನ್ನು ತಣ್ಣೀರಿನಿಂದ ತೊಳೆಯುವುದು, ಹಾಗೆಯೇ ಕೆಲವು ಸೆಕೆಂಡುಗಳ ಕಾಲ ನಿಮ್ಮ ಉಸಿರನ್ನು ಹಿಡಿದಿಟ್ಟುಕೊಳ್ಳುವುದು ಸಹ ಬಿಕ್ಕಳಿಕೆಯನ್ನು ನಿಯಂತ್ರಿಸಬಹುದು.

ಬಾಯಿಯಲ್ಲಿ ಐಸ್ ಕ್ಯೂಬ್ ಅನ್ನು ಇಟ್ಟು ನಿಧಾನವಾಗಿ ಅಗಿಯುವುದರಿಂದ ಬಿಕ್ಕಳಿಕೆಯಿಂದ ಪರಿಹಾರ ಸಿಗುತ್ತದೆ.

ಬೆಳ್ಳುಳ್ಳಿಯ ಎಸಳು ತಿನ್ನುವುದು ಅಥವಾ ಒಂದು ಚಮಚ ನಿಂಬೆ ರಸವನ್ನು ಸೇವನೆ ಮಾಡುವುದರಿಂದಲೂ ಸಹ ಬಿಕ್ಕಳಿಕೆಯನ್ನು ಕಡಿಮೆ ಮಾಡಬಹುದು.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »