TOP STORIES:

ಬಿಕ್ಕಳಿಕೆ ಬಂದಾಗ ಈ ಸರಳ ಟೆಕ್ನಿಕ್ ಟ್ರೈ ಮಾಡಿ ನೋಡಿ, ತಕ್ಷಣ ಕಡಿಮೆಯಾಗುತ್ತೆ


ಬಿಕ್ಕಳಿಕೆ ಯಾರಿಗೆ ಬರಲ್ಲ ಹೇಳಿ? ಅದರಲ್ಲಿಯೂ ಈ ಬಿಕ್ಕಳಿಕೆ ಯಾರನ್ನೂ ಹೇಳಿ, ಕೇಳಿ ಬರುವಂತದ್ದಲ್ಲ. ಆದರೆ ಅವು ಬಂದಾಗ ಎಲ್ಲರ ಮುಂದೆ ಮುಜುಗರ ಆಗುವುದು ಮಾತ್ರ ತಪ್ಪುವುದಿಲ್ಲ. ಏಕೆಂದರೆ ಇದು ಯಾವಾಗ ಬೇಕಾದರೂ ಬರಬಹುದು, ಜೊತೆಗೆ ಇದು ಬಂದಾಗ ಸುತ್ತಮುತ್ತಲಿರುವವರು ನಮ್ಮನ್ನು ನೋಡುವುದರಿಂದ ಸಹಜವಾಗಿ ಏನು ಮಾಡಬೇಕು ಎಂಬುದೇ ತಿಳಿಯುವುದಿಲ್ಲ. ಕೆಲವರು ಬಿಕ್ಕಳಿಕೆ ಬಂದಾಗ ತಕ್ಷಣ ನೀರು ಕುಡಿಯುತ್ತಾರೆ, ಇನ್ನು ಕೆಲವರು ಸಕ್ಕರೆಯನ್ನು ಬಾಯಿಗೆ ಹಾಕಿಕೊಳ್ಳುತ್ತಾರೆ. ಹಗಲಿನಲ್ಲಿ ಈ ರೀತಿ ಬಿಕ್ಕಳಿಕೆ ಬಂದರೆ ಪರವಾಗಿಲ್ಲ. ಆದರೆ ರಾತ್ರಿ ಸಮಯದಲ್ಲಿ ಈ ರೀತಿಯಾದಾಗ ಏನು ಮಾಡಬೇಕು? ಅದಕ್ಕೂ ಮೊದಲು ಈ ರೀತಿ ಬಿಕ್ಕಳಿಕೆ ಏಕೆ ಬರುತ್ತದೆ (Hiccups Causes)? ಅದಕ್ಕೆ ಕಾರಣವೇನು? ಇದನ್ನು ಕಡಿಮೆ ಮಾಡಲು ಯಾವ ರೀತಿ ಸಲಹೆಗಳನ್ನು ಪಾಲಿಸಬೇಕು ಎಂಬುದನ್ನು ತಿಳಿದುಕೊಳ್ಳಿ. ಬಿಕ್ಕಳಿಕೆ ತುಂಬಾ ಸಾಮಾನ್ಯ. ದೇಹದಲ್ಲಿನ ಡಯಾಫ್ರಾಮ್ ಸ್ನಾಯುವಿನ ಸಮಸ್ಯೆಗಳಿಂದ ಅವು ಸಂಭವಿಸುತ್ತವೆ. ಇದು ನಮ್ಮ ಉಸಿರಾಟಕ್ಕೆ ಸಂಬಂಧಿಸಿದ್ದು. ಈ ಸ್ನಾಯು ಇದ್ದಕ್ಕಿದ್ದಂತೆ ಸಂಕುಚಿತಗೊಂಡಾಗ ಬಿಕ್ಕಳಿಕೆ ಉಂಟಾಗುತ್ತದೆ. ಆದರೆ ಬಿಕ್ಕಳಿಕೆ ಬರುವುದಕ್ಕೆ ಇದೊಂದೇ ಕಾರಣವಲ್ಲ. ಬಿಕ್ಕಳಿಕೆಗೆ ಕಂಡುಬರುವುದಕ್ಕೆ ಹಲವು ಕಾರಣಗಳಿವೆ. ಆಹಾರವನ್ನು ಬೇಗನೆ ತಿನ್ನುವುದು ಅಥವಾ ವೇಗವಾಗಿ ನೀರನ್ನು ಕುಡಿಯುವುದರಿಂದ ಹೊಟ್ಟೆಗೆ ಸಾಕಷ್ಟು ಗಾಳಿ ಪ್ರವೇಶಿಸಬಹುದು. ಸೋಡಾ ಮತ್ತು ಬಿಯರ್‌ನಂತಹ ಹೆಚ್ಚು ಕಾರ್ಬೊನೇಟೆಡ್ ಪಾನೀಯಗಳನ್ನು ಕುಡಿಯುವುದರಿಂದಲೂ ಬಿಕ್ಕಳಿಕೆ ಬರಬಹುದು. ಜೊತೆಗೆ ಹೆಚ್ಚು ಹಸಿವಾಗಿದ್ದಾಗ ಒಮ್ಮೆಲೇ ತಿನ್ನುವುದರಿಂದಲೂ ಬಿಕ್ಕಳಿಕೆ ಬರಬಹುದು. ಹೆಚ್ಚುವರಿಯಾಗಿ, ಮಸಾಲೆಯುಕ್ತ ಆಹಾರವನ್ನು ಸೇವಿಸುವುದು, ಧೂಮಪಾನ ಮಾಡುವುದು ಮತ್ತು ಒತ್ತಡ ಅಥವಾ ಆತಂಕದಿಂದ ಬಳಲುವುದು ಸಹ ಬಿಕ್ಕಳಿಗೆ ಕಾರಣವಾಗಬಹುದು.ಬಿಕ್ಕಳಿಕೆ ಕಡಿಮೆ ಮಾಡಲು ಗಂಟಲಿನಲ್ಲಿ ನೀರನ್ನು ಹಿಡಿದಿಟ್ಟುಕೊಳ್ಳಿ. ಈ ರೀತಿ ಮಾಡುವುದರಿಂದ ಬಿಕ್ಕಳಿಕೆ ಕಡಿಮೆಯಾಗುತ್ತದೆ.

ತಣ್ಣೀರು ಕುಡಿಯುವುದರಿಂದ ಬಿಕ್ಕಳಿಕೆ ಕಡಿಮೆಯಾಗುತ್ತದೆ.

ಬಿಕ್ಕಳಿಕೆಯನ್ನು ತ್ವರಿತವಾಗಿ ನಿವಾರಿಸಲು, ಬಾಯಿಗೆ ಸ್ವಲ್ಪ ಸಕ್ಕರೆ ಹಾಕಿ ಅದನ್ನು ನಿಧಾನವಾಗಿ ಅಗಿಯಿರಿ.

ಅನ್ನ ತಿನ್ನುವುದರಿಂದ ಬಿಕ್ಕಳಿಕೆ ಕಡಿಮೆಯಾಗುತ್ತದೆ.

ಮುಖವನ್ನು ತಣ್ಣೀರಿನಿಂದ ತೊಳೆಯುವುದು, ಹಾಗೆಯೇ ಕೆಲವು ಸೆಕೆಂಡುಗಳ ಕಾಲ ನಿಮ್ಮ ಉಸಿರನ್ನು ಹಿಡಿದಿಟ್ಟುಕೊಳ್ಳುವುದು ಸಹ ಬಿಕ್ಕಳಿಕೆಯನ್ನು ನಿಯಂತ್ರಿಸಬಹುದು.

ಬಾಯಿಯಲ್ಲಿ ಐಸ್ ಕ್ಯೂಬ್ ಅನ್ನು ಇಟ್ಟು ನಿಧಾನವಾಗಿ ಅಗಿಯುವುದರಿಂದ ಬಿಕ್ಕಳಿಕೆಯಿಂದ ಪರಿಹಾರ ಸಿಗುತ್ತದೆ.

ಬೆಳ್ಳುಳ್ಳಿಯ ಎಸಳು ತಿನ್ನುವುದು ಅಥವಾ ಒಂದು ಚಮಚ ನಿಂಬೆ ರಸವನ್ನು ಸೇವನೆ ಮಾಡುವುದರಿಂದಲೂ ಸಹ ಬಿಕ್ಕಳಿಕೆಯನ್ನು ಕಡಿಮೆ ಮಾಡಬಹುದು.


Related Posts

ಬಿಲ್ಲವಾಸ್ ಕತಾರ್ ನ ಸ್ವರ ಲಹರಿಗೆ ಸ್ವರ ಸೇರಿಸಿ ಕುಣಿದು ಕುಪ್ಪಳಿಸಿದ ಜನಸ್ತೋಮ


Share        ಬಿಲ್ಲವಾಸ್ ಕತಾರ್  ಆಯೋಜಿಸಿದ  ಸ್ವರ ಲಹರಿ, ಸಂಗೀತ ಸಂಜೆ ಕಾರ್ಯಕ್ರಮ  ದಿನಾಂಕ  ಮೇ 30, 2025 ರಂದು ಡಿ.ಪಿ.ಎಸ್. ಎಂ.ಐ.ಎಸ್ ಅಲ್ ವಕ್ರ   ಸಭಾಂಗಣದಲ್ಲಿ ನವ ಇತಿಹಾಸವನ್ನು ಸೃಷ್ಟಿಸಿತು.  ಅದ್ಭುತ ಸಂಗೀತ


Read More »

ಬಿಕ್ಕಳಿಕೆ ಬಂದಾಗ ಈ ಸರಳ ಟೆಕ್ನಿಕ್ ಟ್ರೈ ಮಾಡಿ ನೋಡಿ, ತಕ್ಷಣ ಕಡಿಮೆಯಾಗುತ್ತೆ


Share        ಬಿಕ್ಕಳಿಕೆ ಯಾರಿಗೆ ಬರಲ್ಲ ಹೇಳಿ? ಅದರಲ್ಲಿಯೂ ಈ ಬಿಕ್ಕಳಿಕೆ ಯಾರನ್ನೂ ಹೇಳಿ, ಕೇಳಿ ಬರುವಂತದ್ದಲ್ಲ. ಆದರೆ ಅವು ಬಂದಾಗ ಎಲ್ಲರ ಮುಂದೆ ಮುಜುಗರ ಆಗುವುದು ಮಾತ್ರ ತಪ್ಪುವುದಿಲ್ಲ. ಏಕೆಂದರೆ ಇದು ಯಾವಾಗ ಬೇಕಾದರೂ


Read More »

ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಗೆಜೆಟೆಡ್ ಅಧಿಕಾರಿಯಾಗಿ ಆಯ್ಕೆಯಾದ ಸುದೀಪ್ ರಾಜ್ ಮನೆಗೆ ಸೌದಿ ಬಿಲ್ಲಾವಾಸ್ ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಭೇಟಿ


Share        ಮಂಗಳೂರು: ಕೇಂದ್ರ ಲೋಕಸೇವಾ ಆಯೋಗ (UPSC) ನಡೆಸಲಾದ ಪರೀಕ್ಷೆಯಲ್ಲಿ ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಆಯ್ಕೆಯಾದ ಮಂಗಳೂರಿನ ಚಿಲಿಂಬಿ ಆದರ್ಶನಗರದ ಸುದೀಪ್ ರಾಜ್ ಅವರ ಮನೆಗೆ ತೆರಳಿ ಸೌದಿ ಬಿಲ್ಲಾವಾಸ್


Read More »

UPSC ನಡೆಸಲಾದ ಪರೀಕ್ಷೆಯಲ್ಲಿ. ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಸುದೀಪ್ ರಾಜ್ ಆಯ್ಕೆ


Share        ಕೇಂದ್ರ ಲೋಕಸೇವಾ ಆಯೋಗ (UPSC), ಮೇ 23, 2025 ರಂದು ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ (CDS) ಪರೀಕ್ಷೆ (II), 2024 ರ ಅಂತಿಮ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಅದರಲ್ಲಿ ನಮ್ಮ ಬಿಲ್ಲವ


Read More »

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ


Share        ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ


Read More »

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share        ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »