TOP STORIES:

ಬಿಕ್ಕಳಿಕೆ ಬಂದಾಗ ಈ ಸರಳ ಟೆಕ್ನಿಕ್ ಟ್ರೈ ಮಾಡಿ ನೋಡಿ, ತಕ್ಷಣ ಕಡಿಮೆಯಾಗುತ್ತೆ


ಬಿಕ್ಕಳಿಕೆ ಯಾರಿಗೆ ಬರಲ್ಲ ಹೇಳಿ? ಅದರಲ್ಲಿಯೂ ಈ ಬಿಕ್ಕಳಿಕೆ ಯಾರನ್ನೂ ಹೇಳಿ, ಕೇಳಿ ಬರುವಂತದ್ದಲ್ಲ. ಆದರೆ ಅವು ಬಂದಾಗ ಎಲ್ಲರ ಮುಂದೆ ಮುಜುಗರ ಆಗುವುದು ಮಾತ್ರ ತಪ್ಪುವುದಿಲ್ಲ. ಏಕೆಂದರೆ ಇದು ಯಾವಾಗ ಬೇಕಾದರೂ ಬರಬಹುದು, ಜೊತೆಗೆ ಇದು ಬಂದಾಗ ಸುತ್ತಮುತ್ತಲಿರುವವರು ನಮ್ಮನ್ನು ನೋಡುವುದರಿಂದ ಸಹಜವಾಗಿ ಏನು ಮಾಡಬೇಕು ಎಂಬುದೇ ತಿಳಿಯುವುದಿಲ್ಲ. ಕೆಲವರು ಬಿಕ್ಕಳಿಕೆ ಬಂದಾಗ ತಕ್ಷಣ ನೀರು ಕುಡಿಯುತ್ತಾರೆ, ಇನ್ನು ಕೆಲವರು ಸಕ್ಕರೆಯನ್ನು ಬಾಯಿಗೆ ಹಾಕಿಕೊಳ್ಳುತ್ತಾರೆ. ಹಗಲಿನಲ್ಲಿ ಈ ರೀತಿ ಬಿಕ್ಕಳಿಕೆ ಬಂದರೆ ಪರವಾಗಿಲ್ಲ. ಆದರೆ ರಾತ್ರಿ ಸಮಯದಲ್ಲಿ ಈ ರೀತಿಯಾದಾಗ ಏನು ಮಾಡಬೇಕು? ಅದಕ್ಕೂ ಮೊದಲು ಈ ರೀತಿ ಬಿಕ್ಕಳಿಕೆ ಏಕೆ ಬರುತ್ತದೆ (Hiccups Causes)? ಅದಕ್ಕೆ ಕಾರಣವೇನು? ಇದನ್ನು ಕಡಿಮೆ ಮಾಡಲು ಯಾವ ರೀತಿ ಸಲಹೆಗಳನ್ನು ಪಾಲಿಸಬೇಕು ಎಂಬುದನ್ನು ತಿಳಿದುಕೊಳ್ಳಿ. ಬಿಕ್ಕಳಿಕೆ ತುಂಬಾ ಸಾಮಾನ್ಯ. ದೇಹದಲ್ಲಿನ ಡಯಾಫ್ರಾಮ್ ಸ್ನಾಯುವಿನ ಸಮಸ್ಯೆಗಳಿಂದ ಅವು ಸಂಭವಿಸುತ್ತವೆ. ಇದು ನಮ್ಮ ಉಸಿರಾಟಕ್ಕೆ ಸಂಬಂಧಿಸಿದ್ದು. ಈ ಸ್ನಾಯು ಇದ್ದಕ್ಕಿದ್ದಂತೆ ಸಂಕುಚಿತಗೊಂಡಾಗ ಬಿಕ್ಕಳಿಕೆ ಉಂಟಾಗುತ್ತದೆ. ಆದರೆ ಬಿಕ್ಕಳಿಕೆ ಬರುವುದಕ್ಕೆ ಇದೊಂದೇ ಕಾರಣವಲ್ಲ. ಬಿಕ್ಕಳಿಕೆಗೆ ಕಂಡುಬರುವುದಕ್ಕೆ ಹಲವು ಕಾರಣಗಳಿವೆ. ಆಹಾರವನ್ನು ಬೇಗನೆ ತಿನ್ನುವುದು ಅಥವಾ ವೇಗವಾಗಿ ನೀರನ್ನು ಕುಡಿಯುವುದರಿಂದ ಹೊಟ್ಟೆಗೆ ಸಾಕಷ್ಟು ಗಾಳಿ ಪ್ರವೇಶಿಸಬಹುದು. ಸೋಡಾ ಮತ್ತು ಬಿಯರ್‌ನಂತಹ ಹೆಚ್ಚು ಕಾರ್ಬೊನೇಟೆಡ್ ಪಾನೀಯಗಳನ್ನು ಕುಡಿಯುವುದರಿಂದಲೂ ಬಿಕ್ಕಳಿಕೆ ಬರಬಹುದು. ಜೊತೆಗೆ ಹೆಚ್ಚು ಹಸಿವಾಗಿದ್ದಾಗ ಒಮ್ಮೆಲೇ ತಿನ್ನುವುದರಿಂದಲೂ ಬಿಕ್ಕಳಿಕೆ ಬರಬಹುದು. ಹೆಚ್ಚುವರಿಯಾಗಿ, ಮಸಾಲೆಯುಕ್ತ ಆಹಾರವನ್ನು ಸೇವಿಸುವುದು, ಧೂಮಪಾನ ಮಾಡುವುದು ಮತ್ತು ಒತ್ತಡ ಅಥವಾ ಆತಂಕದಿಂದ ಬಳಲುವುದು ಸಹ ಬಿಕ್ಕಳಿಗೆ ಕಾರಣವಾಗಬಹುದು.ಬಿಕ್ಕಳಿಕೆ ಕಡಿಮೆ ಮಾಡಲು ಗಂಟಲಿನಲ್ಲಿ ನೀರನ್ನು ಹಿಡಿದಿಟ್ಟುಕೊಳ್ಳಿ. ಈ ರೀತಿ ಮಾಡುವುದರಿಂದ ಬಿಕ್ಕಳಿಕೆ ಕಡಿಮೆಯಾಗುತ್ತದೆ.

ತಣ್ಣೀರು ಕುಡಿಯುವುದರಿಂದ ಬಿಕ್ಕಳಿಕೆ ಕಡಿಮೆಯಾಗುತ್ತದೆ.

ಬಿಕ್ಕಳಿಕೆಯನ್ನು ತ್ವರಿತವಾಗಿ ನಿವಾರಿಸಲು, ಬಾಯಿಗೆ ಸ್ವಲ್ಪ ಸಕ್ಕರೆ ಹಾಕಿ ಅದನ್ನು ನಿಧಾನವಾಗಿ ಅಗಿಯಿರಿ.

ಅನ್ನ ತಿನ್ನುವುದರಿಂದ ಬಿಕ್ಕಳಿಕೆ ಕಡಿಮೆಯಾಗುತ್ತದೆ.

ಮುಖವನ್ನು ತಣ್ಣೀರಿನಿಂದ ತೊಳೆಯುವುದು, ಹಾಗೆಯೇ ಕೆಲವು ಸೆಕೆಂಡುಗಳ ಕಾಲ ನಿಮ್ಮ ಉಸಿರನ್ನು ಹಿಡಿದಿಟ್ಟುಕೊಳ್ಳುವುದು ಸಹ ಬಿಕ್ಕಳಿಕೆಯನ್ನು ನಿಯಂತ್ರಿಸಬಹುದು.

ಬಾಯಿಯಲ್ಲಿ ಐಸ್ ಕ್ಯೂಬ್ ಅನ್ನು ಇಟ್ಟು ನಿಧಾನವಾಗಿ ಅಗಿಯುವುದರಿಂದ ಬಿಕ್ಕಳಿಕೆಯಿಂದ ಪರಿಹಾರ ಸಿಗುತ್ತದೆ.

ಬೆಳ್ಳುಳ್ಳಿಯ ಎಸಳು ತಿನ್ನುವುದು ಅಥವಾ ಒಂದು ಚಮಚ ನಿಂಬೆ ರಸವನ್ನು ಸೇವನೆ ಮಾಡುವುದರಿಂದಲೂ ಸಹ ಬಿಕ್ಕಳಿಕೆಯನ್ನು ಕಡಿಮೆ ಮಾಡಬಹುದು.


Related Posts

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »