TOP STORIES:

ದೆಹಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ : ಮೈ ಭಾರತ್ ನ ಯುವ ರಾಯಭಾರಿಯಾಗಿ ಶ್ರೀಕಾಂತ್ ಪೂಜಾರಿ‌ ಆಯ್ಕೆ


ಈ ಬಾರಿ ದೆಹಲಿಯಲ್ಲಿ ನಡೆಯುವ ಸ್ವಾತಂತ್ರೋತ್ಸವ ಕಾರ್ಯಕ್ರಮ ದಲ್ಲಿ ಮೈ ಭಾರತ್ ನವದೆಹಲಿಯ ಮೈ ಭಾರತ್ ನ ಯುವ ರಾಯಭಾರಿಯಾಗಿ ಪಾಲ್ಗೊಳ್ಳಲು ದಕ್ಷಿಣ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಶ್ರೀಕಾಂತ್ ಪೂಜಾರಿ ಬಿರಾವು ಕರ್ನಾಟಕದಿಂದ ಆಯ್ಕೆಯಾಗಿ ಪ್ರತಿನಿದಿಸಲಿದ್ದಾರೆ.

ಭಾರತ ಸರಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ , ಮೈ ಭಾರತ್ (ನೆಹರು ಯುವ ಕೇಂದ್ರ) ನವದೆಹಲಿ ಇದರ ವತಿಯಿಂದ ದೇಶದ ಪ್ರತಿ ರಾಜ್ಯದಿಂದ 15 ವರ್ಷ ದಿಂದ 28 ವರ್ಷ ವಯೋಮಿತಿ ವರೆಗಿನ ಯುವಜನರನ್ನು ನೇಮಕ ಮಾಡುತ್ತಿದ್ದು, ಕರ್ನಾಟಕ ರಾಜ್ಯ ದಿಂದ ಈ ಬಾರಿ ಶ್ರೀಕಾಂತ್ ಬಿರಾವು ವಿಶೇಷ ಯುವ ರಾಯಭಾರಿಯಾಗಿ ಪಾಲ್ಗೊಳ್ಳಲಿದ್ದಾರೆ ಎಂದು ನೆಹರು ಯುವ ಕೇಂದ್ರ ಮಂಗಳೂರಿನ ಜಿಲ್ಲಾ ಯುವ ಅಧಿಕಾರಿ ಉಲ್ಲಾಸ್ ಹಾಗೂ ಆಡಳಿತಾಧಿಕಾರಿ ಜಗದೀಶ್ ಪ್ರಕಟಣೆ ನೀಡಿದ್ದಾರೆ.

ಶ್ರೀಕಾಂತ್ ಬಿರಾವು ರವರು ಹಲವಾರು ವರ್ಷಗಳಿಂದ ಯುವ ಜನರ ಸಬಲೀಕರಣಕ್ಕೆ ತೊಡಗಿಸಿಕೊಂಡಿದ್ದು ಯುವ ತರಬೇತುದಾರರಾಗಿ ರಾಜ್ಯಾದ್ಯಂತ ಒಟ್ಟು 500 ಮಿಕ್ಕಿ ಅಧಿಕ ಕಾರ್ಯಕ್ರಮಗಳನ್ನು ಅಯೋಜಿಸಿದ್ದು ಸುಮಾರು ತೊಂಬತ್ತು ಸಾವಿರ ಯುವಜನರಿಗೆ ಜೀವನ ಕೌಶಲ್ಯ, ವೃತ್ತಿ ಮಾರ್ಗದರ್ಶನ, ನಾಯಕತ್ವ ತರಬೇತಿ, ಉದ್ಯಮಶೀಲತಾ ತರಬೇತಿ ಇನ್ನಿತರ ವಿಷಯಗಳ ಕುರಿತಾಗಿ ಶಾಲಾ ಕಾಲೇಜು, ಯುವಕ ಯುವತಿ ಮಂಡಲ ಮುಂತಾದವರಿಗೆ ತರಬೇತಿ ನೀಡಿದ್ದಾರೆ. ಇವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು 13 ಉದ್ಯೋಗ ಮೇಳವನ್ನು ಅಯೋಜಿಸಿ ಹಲವಾರು ಯುವಜನರಿಗೆ ಉದ್ಯೋಗಕ್ಕೆ ನೇರವಾಗಿದ್ದಾರೆ.ಈಗಿನ ಸಾಮಾಜಿಕ ಪಿಡುಗುಗಳಾದ ಸಾಮಾಜಿಕ ಜಾಲತಾಣ,ಮಾದಕ ವ್ಯಸನ,ಇದರ ಕುರಿತಾಗಿ ಹಳ್ಳಿ ಹಳ್ಳಿಗಳಿಗೆ ತೆರಳಿ ಕಾರ್ಯಕ್ರಮ ವನ್ನು ಅಯೋಜಿಸಿ ಜಾಗೃತಿ ಮೂಡಿಸುತ್ತಿದ್ದಾರೆ.

ಭಾರತ ಸರಕಾರ ಮತ್ತು ರಾಜ್ಯ ಸರಕಾರದ ಹಲವಾರು ಯುವಜನ ಕಾರ್ಯಕ್ರಮಗಳನ್ನು ಜಿಲ್ಲೆಯಲ್ಲಿ ಸಂಘಿಟಿಸಿರುತ್ತಾರೆ.ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯದ ದೆಹಲಿಯಲ್ಲಿ ನಡೆದ ಕಾರ್ಯಕ್ರಮಕ್ಕೆ ಯೂತ್ ಚಾಂಪಿಯನ್ ‌ಆಗಿ ಭಾಗವಹಿಸಿದ ಇವರು ಕರ್ನಾಟಕ ಮತ್ತು ಕೇರಳದ ಕಾರ್ಯಕ್ರಮಗಳ ತೀರ್ಪುಗಾರ ರಾಗಿದ್ದಾರೆ.ಅಂತರಾಷ್ಟ್ರೀಯ ಸಂಸ್ಥೆಗಳಾದ ಯುನೈಟೆಡ್‌ ನೇಷನ್ಸ್ ಡೆವಲಪ್ಮೆಂಟ್ ‌ಪ್ರೋಗ್ರಾಮ್ ಇದರ ಜೀವನ ಕೌಶಲ್ಯ ಮತ್ತು ಉದ್ಯಮಶೀಲತಾ ತರಬೇತುದಾರರಾಗಿರುತ್ತಾರೆ.

ಯುನೈಟೆಡ್ ನೇಷನ್ಸ್ ಇಂಟರ್ನ್ಯಾಷನಲ್ ಚಿಲ್ಡ್ರನ್ ಫಂಡ್ ಇದರ ವೃತ್ತಿ ಮಾರ್ಗದರ್ಶನ ತರಬೇತುದಾರರಾಗಿದ್ದಾರೆ.ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ ಬೆಂಗಳೂರು ಇದರ ಜೀವನ ಕೌಶಲ್ಯ ತರಬೇತುದಾರರಾಗಿದ್ದಾರೆ. ಹಲವಾರು ಸಾಹಿತ್ಯ ಸಮ್ಮೇಳನ ,ಕವಿಗೊಷ್ಠಿಗಳಲ್ಲಿ ಭಾಗವಹಿಸಿದ ಇವರು ಉತ್ತಮ ಬರಹಗಾರರು ಇವರ ಲೇಖನ ಹಲವಾರು ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ.ಇವರ ಯುವಜನ ಸಂಬಂಧಿಸಿದ ಸಾಧನೆಗೆ ಕರ್ನಾಟಕ ಸರಕಾರದಿಂದ ರಾಜ್ಯ ಅತ್ಯುತ್ತಮ ಜೀವನ ಕೌಶಲ್ಯ ಸುಗಮಕಾರ ಪ್ರಶಸ್ತಿ,ರಾಜ್ಯ ಯುವಜನ ಒಕ್ಕೂಟದಿಂದ ಸ್ವಾಮಿ ವಿವೇಕಾನಂದ ರಾಜ್ಯ ಸದ್ಬವನಾ ಪ್ರಶಸ್ತಿ, ಮಾಮ್ ಇನ್ಸ್ ಫೈರ್ ಆವಾರ್ಡ್,ರಾಜ್ಯ ಸಾಧನಶ್ರೀ ಪ್ರಶಸ್ತಿ, ಸಾಹಿತ್ಯ ಸರಸ್ಪತಿ ಬಿರುದು ಲಭಿಸಿದೆ.ತನ್ನ ಪ್ರಾಥಮಿಕ ಶಿಕ್ಷಣವನ್ನು ದ.ಕ.ಜಿ.ಪ ಹಿ ಪ್ರಾ ಶಾಲೆ ರಾಗಿಕುಮೇರಿ ಬಪ್ಪಳಿಗೆ,ಫ್ರೌಢ ಮತ್ತು ಪದವಿ ಪೂರ್ವ ಶಿಕ್ಷಣವನ್ನು ಸ.ಪ.ಪೂ ಕಾಲೇಜು ಕೊಂಬೆಟ್ಟು,ಪದವಿ ಶಿಕ್ಷಣ ವಿವೇಕಾನಂದ ಪದವಿ ಕಾಲೇಜು ಪುತ್ತೂರು, ಅರ್ಥಶಾಸ್ತ್ರ ದಲ್ಲಿ ಸ್ನಾತಕೋತ್ತರ ಪದವಿಯನ್ನು ಮಂಗಳೂರು ವಿಶ್ವವಿದ್ಯಾನಿಲಯದಿಂದ ಪಡೆದುಕೊಂಡಿದ್ದಾರೆ.ಆಗಸ್ಟ್ 15 ರಂದು ದೆಹಲಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕರ್ನಾಟಕದಿಂದ ವಿಶೇಷ ಯುವ ರಾಯಭಾರಿಯಾಗಿ ಭಾಗವಹಿಸಲಿದ್ದಾರೆ.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »