TOP STORIES:

ಪ್ರೀತಿಯಿಂದ ಕುಡ್ಲದ ಜನತೆ ಮನಗೆದ್ದೆ ಎಸಿಪಿ ಮಹೇಶ್‌ಕುಮಾರ್ ಇವರಿಗೆ ಮಂಗಳೂರು ನಾಗರಿಕ ಸಮಿತಿಯಿಂದ ಬೀಳ್ಕೊಡುಗೆ


ಪ್ರೀತಿಯಿಂದ ಕುಡ್ಲದ ಜನತೆ ಮನಗೆದ್ದೆ

ಭಾವುಕರಾಗಿ ನುಡಿದ ಎಸಿಪಿ ಮಹೇಶ್‌ಕುಮಾರ್  ಮಂಗಳೂರು ನಾಗರಿಕ ಸಮಿತಿಯಿಂದ ಬೀಳ್ಕೊಡುಗೆ

ಮಂಗಳೂರು: ಮಂಗಳೂರು ಜನರನ್ನು ಕಾನೂನು ಮತ್ತು ಪ್ರೀತಿಯಿಂದ ಮಾತ್ರ ಗೆಲ್ಲಲು ಸಾಧ್ಯ. ಕರಾವಳಿ ಜನತೆಗೆ ಪ್ರೀತಿ ಕೊಟ್ಟರೆ ಅವರು ನೂರುಪಟ್ಟು ಪ್ರೀತಿ ತೋರಿಸುತ್ತಾರೆ…

ಹೀಗೆ ಭಾವುಕರಾಗಿ ನುಡಿದವರು ಮಂಗಳೂರು ಸೆಂಟ್ರಲ್ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಮಹೇಶ್‌ಕುಮಾರ್.

ಕೊಡಗಿಗೆ ವರ್ಗಾವಣೆಗೊಂಡ ಅವರನ್ನು ಮಂಗಳೂರು ನಾಗರಿಕ ಸಮಿತಿ ವತಿಯಿಂದ ಭಾನುವಾರ ಆಯೋಜಿಸಲಾದ ಅದ್ದೂರಿ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು.

ಪೊಲೀಸ್ ಕೆಲಸದ ಜತೆಗೆ ಸಾಮಾಜಿಕ ಚಟುವಟಿಕೆಯಿಂದ ನಾನು ಜೀವನದಲ್ಲಿ ಖುಷಿ ಕಂಡಿದ್ದೇನೆ. ಮಂಗಳೂರು ಸರ್ವಧರ್ಮಗಳ ನೆಲೆಬೀಡು ಆಗಬೇಕು ಎನ್ನುವುದು ನಮ್ಮೆಲ್ಲರ ಕನಸು. ಈ ಸೌಹಾರ್ದದ ಮಂಗಳೂರಿನ ಗತವೈಭವ ಸಾರಲು ನಾವೆಲ್ಲ ಪ್ರಯತ್ನಿಸಬೇಕು ಎಂದು ಕಿವಿಮಾತು ಹೇಳಿದರು.

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ಮಾತನಾಡಿ, ಒಳ್ಳೆಯ ಕೆಲಸ ಮಾಡುವವರನ್ನು ಗುರುತಿಸಿ ಗೌರವಿಸುವುದು ನಮ್ಮೆಲ್ಲರ ಕರ್ತವ್ಯ. ಮಹೇಶ್‌ಕುಮಾರ್ ಒಬ್ಬ ದಕ್ಷ, ಪ್ರಾಮಾಣಿಕ, ಜನಸ್ನೇಹಿ ಅಧಿಯಾಗಿರುವ ಜತೆಗೆ ತಮ್ಮ ಸಾಮಾಜಿಕ ಚಟುವಟಿಕೆಗಳ ಮೂಲಕ ಅನೇಕ ಮಂದಿಯ ಕಣ್ಣೀರೊರೆಸಿದ್ದಾರೆ. ಕರಾವಳಿಯ ಮೂಲೆಮೂಲೆಯ ಕಲಾವಿದರನ್ನು ಗುರುತಿಸಿ ಅವರಿಗೊಂದು ವೇದಿಕೆ ಕಲ್ಪಿಸುವ ಮೂಲಕ ಕಲಾಮಾಣಿಕ್ಯರಾಗಿದ್ದರು ಎಂದು ಶ್ಲಾಘಿಸಿದರು.

ಮಾಜಿ ಮೇಯರ್ ಶಶಿಧರ ಹೆಗ್ಡೆ ಮಾತನಾಡಿ, ನಿಷ್ಠೆ, ಪ್ರಬುದ್ಧತೆ, ಪ್ರಾಮಾಣಿಕತೆಯಿಂದಾಗಿ ಎಸಿಪಿ ಮಹೇಶ್‌ಕುಮಾರ್ ಮಂಗಳೂರಿನ ಜನತೆಯ ಮನಗೆದ್ದಿದ್ದಾರೆ. ಇಂದು ಇಂತಹ ಅಧಿಕಾರಿಗಳ ಅನಿವಾರ್ಯತೆ ಇದೆ ಎಂದರು.

ಗಾಯಕರಾರ ರಮೇಶ್ಚಂದ್ರ, ಸಂಯುಕ್ತ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಅಧ್ಯಕ್ಷ ಕೆ.ಕೆ.ನೌಷಾದ್, ಡಿವೈಎಸ್‌ಪಿ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ಡಾ.ಅಮರಶ್ರೀ ಅಮರನಾಥ ಶೆಟ್ಟಿ, ಜಯಪ್ರಕಾಶ್ ರೈ, ಕರಾವಳಿ ಸಂಗೀತ ಕಲಾವಿದರ ಒಕ್ಕೂಟ ಉಪಾಧ್ಯಕ್ಷ  ಐವನ್ ಡಿಸೋಜ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಉದ್ಯಮಿ ಶೈಲೇಂದ್ರ ವೈ ಸೂವರ್ಣ, ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಹರೀಶ್ ಪೂಜಾರಿ ಮೊದಲಾದವರಿದ್ದರು. ತೋನ್ಸೆ ಪುಷ್ಕಳ್‌ಕುಮಾರ್ ಸ್ವಾಗತಿಸಿದರು. ಆರ್.ಜೆ. ಅಭಿಷೇಕ್ ಕಾರ್ಯಕ್ರಮ ನಿರೂಪಿಸಿದರು.

—-

ಪುಷ್ಪವೃಷ್ಟಿಗೈದು ಭಾವುಕರಾದರು

ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಎಸಿಪಿ ಮಹೇಶ್‌ಕುಮಾರ್ ಅವರನ್ನು ಗೌರವಿಸಲಾಯಿತು. ಕಾರ್ಯಕ್ರಮದ ಕೊನೆಯಲ್ಲಿ ನಾಗರಿಕರು ಮಹೇಶ್‌ಕುಮಾರ್ ಮೇಲೆ ಪುಷ್ಪವೃಷ್ಟಿಗೈದು ಭಾವುಕರಾಗಿ ಬೀಳ್ಕೊಟ್ಟರು.


Related Posts

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ


Share        ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ


Read More »