TOP STORIES:

ಪುತ್ತೂರು: ಕೋಟಿ ಚೆನ್ನಯರ ಹುಟ್ಟೂರ ಗೆಜ್ಜೆಗಿರಿ ಮೂಲಸ್ಥಾನದ ಈ ಗ್ರಾಮದ ಶಾಲೆಯಲ್ಲಿ ಅಷ್ಟ ಅವಳಿ ಮಕ್ಕಳು


ಪುತ್ತೂರು: ಈ ಶಾಲಾ ವಠಾರದಲ್ಲಿ ಓಡಾಡಿದರೆ ತತ್‌ಕ್ಷಣ

ನಿಮ್ಮ ಕಣ್ಣಿಗೆ ಆಗಾಗ ಒಬ್ಬರಂತೆಯೇ ಇರುವ ಇನ್ನೊಬ್ಬ ಮಕ್ಕಳು ಕಂಡರೆ ಅಚ್ಚರಿಪಡಬೇಡಿ. ಯಾಕೆಂದರೆ, ಈ ಶಾಲೆಯಲ್ಲಿ ಒಂದಲ್ಲ, ಎರಡಲ್ಲ ಎಂಟು ಅವಳಿಗಳು ಇದ್ದಾರೆ!

ಕೆಲವು ದಿನಗಳ ಹಿಂದೆ ಎಣ್ಣೂರಿನ ಶಾಲೆಯಲ್ಲಿ ಪಂಚ ಅವಳಿಗಳಿರುವ ಸುದ್ದಿ ಸದ್ದು ಮಾಡಿತ್ತು. ಈಗ ಈಶ್ವರಮಂಗಲದ ಶ್ರೀ ಗಜಾನನ ಆಂಗ್ಲ ಮಾಧ್ಯಮ ಶಾಲೆಯ ಅವಳಿಗಳ ಕಥೆ. ವಿಶೇಷವೆಂದರೆ ಎಣ್ಣೂರು ಮತ್ತು ಈ ಶಾಲೆ ಇರುವ ಊರು ಎರಡಕ್ಕೂ ತುಳುನಾಡಿನ ಅವಳಿ ವೀರರಾದ ಕೋಟಿ-ಚೆನ್ನಯ್ಯರ ನಂಟಿದೆ!

ಅವಳಿ ವೀರರ ಗ್ರಾಮ..!

ಕೋಟಿ-ಚೆನ್ನೆಯ ಅವರ ಹುಟ್ಟೂರಿನ ನೆಲೆಗಳು, ಅವರು ಇರುವಿಕೆಯ ಕುರುಹು ಗಳು ಹರಡಿಕೊಂಡಿರುವ ಪಡವನ್ನೂರು – ಬಡಗನ್ನೂರು ಗ್ರಾಮಗಳಲ್ಲಿ ಒಂದಾಗಿ ರುವ ಪಡವನ್ನೂರು ಗ್ರಾಮದಲ್ಲಿ ಈ ಶಾಲೆ ಇದೆ. ಪಡವನ್ನೂರು, ಬಡಗನ್ನೂರು ಕೋಟಿ ಚೆನ್ನಯರ ಹುಟ್ಟೂರು. ಇವರ ಜನ್ಮದಾತೆ ದೇಯಿ ಬೈದೇತಿಯ ಸಮಾಧಿ ಇರುವ ಪುಣ್ಯ ಭೂಮಿ. ಈ ಕಾರಣಿಕ ಶಕ್ತಿಗಳು ನಡೆದಾಡಿದ ಹಲವು ಐತಿಹ್ಯಗಳು ಇಲ್ಲಿ ಈಗಲೂ ಇವೆ. ಕೋಟಿ ಚೆನ್ನಯ ಜನ್ಮಸ್ಥಳ, ಗೆಜ್ಜೆಗಿರಿ ಮೂಲಸ್ಥಾನಗಳು ಈ ಗ್ರಾಮದಲ್ಲಿ ಇವೆ.

ಹೇಗಿದ್ದಾರೆ ಇಲ್ಲಿನ ಅವಳಿಗಳು?

ಈಶ್ವರ ಮಂಗಲ ಶಾಲೆಯಲ್ಲಿರುವ ಎಂಟು ಅವಳಿ ಗಳಲ್ಲಿ 3 ಜೋಡಿಗಳು ಹುಡುಗರಾಗಿದ್ದರೆ, ಇನ್ನು 3 ಅವಳಿ ಹುಡುಗಿಯರು. ಎರಡು ಜೋಡಿಗಳು ಹುಡುಗ ಮತ್ತು ಹುಡುಗಿ. ಹೀಗೆ 3 ವಿಭಾಗದಲ್ಲಿಯು ಇರುವ ಈ ಪುಟಾಣಿಗಳ ಪೈಕಿ 2 ಜೋಡಿಗಳು ಒಂದೇ ತರಗತಿಯ ಸಹಪಾಠಿಗಳು. ಉಳಿದವರು ಬೇರೆ ತರಗತಿಯವರು.

ಇವರೇ ನೋಡಿ ಅವಳಿಗಳು! ಶ್ರೀ ಗಜಾನನ ಆಂಗ್ಲಮಾಧ್ಯಮ ಶಾಲೆ ಈಶ್ವರಮಂಗಲ:

ಚರಿತ್ ರೈ ಮತ್ತು ಚಾರ್ವಿಕ್ ರೈ- ಪ್ರಿಕೆಜಿ (ಹೆತ್ತವರು: ಸನತ್ ಕುಮಾರ್ ರೈ ಎಂ. ಹಾಗೂ ಹರ್ಷಿತಾ )

ಚತುಷ್ಕ.ಎಂ.ಕೆ ಮತ್ತು ಚರಿಷ್ಮ ಎಂ. ಕೆ.-ಎಲ್‌ಕೆಜಿ (ಮನೋಜ್ ಕುಮಾರ್ ಕೆ. ಮತ್ತು ಪೂಜಿತ ಎಂ.ವಿ)

ಯಶಸ್ ಡಿ.ಆರ್. ಹಾಗೂ ಶ್ರೇಯಸ್ ಡಿ.ಆರ್.- 1ನೇ ತರಗತಿ (ರಾಜೇಶ್ ಡಿ.ಬಿ ಮತ್ತು ಸುಹಾಸಿನಿ ಎನ್)

ವಂಶಿಕ ಎ. ಮತ್ತು ವಿಶ್ಚಿಕ – 2ನೇ ತರಗತಿ (ಆನಂದ ನಾಯ್ಕ ಎ. ಮತ್ತು ಪ್ರಮೀಳಾ ಕೆ ಆರ್)

ಆಸಿಯತ್ ಶಫಾನ ಮತ್ತು ಮರಿಯಂ ಶಿಫಾನ – 3ನೇ ತರಗತಿ (ಕೆ.ವಿ. ಹೈದರಾಲಿ ಮತ್ತು ಆಯುಷತ್‌ ಸುಮಿಯ)

ಅನ್ವಿತ್ ಶೆಟ್ಟಿ ಮತ್ತು ಅಂಕಿತ್ ಶೆಟ್ಟಿ- 5ನೇ ತರಗತಿ (ಉದಯ ಶೆಟ್ಟಿ ಮತ್ತು ರೂಪ)

ನವ್ಯ ಬಿ. ಮತ್ತು ನಿತಿನ್ ಬಿ.- 5ನೇ ತರಗತಿ (ಸುದೇಶ ಮತ್ತು ಪ್ರಫುಲ್ಲ)

ಸಾನ್ವಿ ಎಂ.ಪಿ. ಮತ್ತು ಶ್ರಾವ್ಯ ಎಂ.ಪಿ -8 ತರಗತಿ (ಮನಮೋಹನ ಎಂ. ಮತ್ತು ಪುಷ್ಪಾವತಿ ಟಿ


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »