TOP STORIES:

ಪುತ್ತೂರು: ಕೋಟಿ ಚೆನ್ನಯರ ಹುಟ್ಟೂರ ಗೆಜ್ಜೆಗಿರಿ ಮೂಲಸ್ಥಾನದ ಈ ಗ್ರಾಮದ ಶಾಲೆಯಲ್ಲಿ ಅಷ್ಟ ಅವಳಿ ಮಕ್ಕಳು


ಪುತ್ತೂರು: ಈ ಶಾಲಾ ವಠಾರದಲ್ಲಿ ಓಡಾಡಿದರೆ ತತ್‌ಕ್ಷಣ

ನಿಮ್ಮ ಕಣ್ಣಿಗೆ ಆಗಾಗ ಒಬ್ಬರಂತೆಯೇ ಇರುವ ಇನ್ನೊಬ್ಬ ಮಕ್ಕಳು ಕಂಡರೆ ಅಚ್ಚರಿಪಡಬೇಡಿ. ಯಾಕೆಂದರೆ, ಈ ಶಾಲೆಯಲ್ಲಿ ಒಂದಲ್ಲ, ಎರಡಲ್ಲ ಎಂಟು ಅವಳಿಗಳು ಇದ್ದಾರೆ!

ಕೆಲವು ದಿನಗಳ ಹಿಂದೆ ಎಣ್ಣೂರಿನ ಶಾಲೆಯಲ್ಲಿ ಪಂಚ ಅವಳಿಗಳಿರುವ ಸುದ್ದಿ ಸದ್ದು ಮಾಡಿತ್ತು. ಈಗ ಈಶ್ವರಮಂಗಲದ ಶ್ರೀ ಗಜಾನನ ಆಂಗ್ಲ ಮಾಧ್ಯಮ ಶಾಲೆಯ ಅವಳಿಗಳ ಕಥೆ. ವಿಶೇಷವೆಂದರೆ ಎಣ್ಣೂರು ಮತ್ತು ಈ ಶಾಲೆ ಇರುವ ಊರು ಎರಡಕ್ಕೂ ತುಳುನಾಡಿನ ಅವಳಿ ವೀರರಾದ ಕೋಟಿ-ಚೆನ್ನಯ್ಯರ ನಂಟಿದೆ!

ಅವಳಿ ವೀರರ ಗ್ರಾಮ..!

ಕೋಟಿ-ಚೆನ್ನೆಯ ಅವರ ಹುಟ್ಟೂರಿನ ನೆಲೆಗಳು, ಅವರು ಇರುವಿಕೆಯ ಕುರುಹು ಗಳು ಹರಡಿಕೊಂಡಿರುವ ಪಡವನ್ನೂರು – ಬಡಗನ್ನೂರು ಗ್ರಾಮಗಳಲ್ಲಿ ಒಂದಾಗಿ ರುವ ಪಡವನ್ನೂರು ಗ್ರಾಮದಲ್ಲಿ ಈ ಶಾಲೆ ಇದೆ. ಪಡವನ್ನೂರು, ಬಡಗನ್ನೂರು ಕೋಟಿ ಚೆನ್ನಯರ ಹುಟ್ಟೂರು. ಇವರ ಜನ್ಮದಾತೆ ದೇಯಿ ಬೈದೇತಿಯ ಸಮಾಧಿ ಇರುವ ಪುಣ್ಯ ಭೂಮಿ. ಈ ಕಾರಣಿಕ ಶಕ್ತಿಗಳು ನಡೆದಾಡಿದ ಹಲವು ಐತಿಹ್ಯಗಳು ಇಲ್ಲಿ ಈಗಲೂ ಇವೆ. ಕೋಟಿ ಚೆನ್ನಯ ಜನ್ಮಸ್ಥಳ, ಗೆಜ್ಜೆಗಿರಿ ಮೂಲಸ್ಥಾನಗಳು ಈ ಗ್ರಾಮದಲ್ಲಿ ಇವೆ.

ಹೇಗಿದ್ದಾರೆ ಇಲ್ಲಿನ ಅವಳಿಗಳು?

ಈಶ್ವರ ಮಂಗಲ ಶಾಲೆಯಲ್ಲಿರುವ ಎಂಟು ಅವಳಿ ಗಳಲ್ಲಿ 3 ಜೋಡಿಗಳು ಹುಡುಗರಾಗಿದ್ದರೆ, ಇನ್ನು 3 ಅವಳಿ ಹುಡುಗಿಯರು. ಎರಡು ಜೋಡಿಗಳು ಹುಡುಗ ಮತ್ತು ಹುಡುಗಿ. ಹೀಗೆ 3 ವಿಭಾಗದಲ್ಲಿಯು ಇರುವ ಈ ಪುಟಾಣಿಗಳ ಪೈಕಿ 2 ಜೋಡಿಗಳು ಒಂದೇ ತರಗತಿಯ ಸಹಪಾಠಿಗಳು. ಉಳಿದವರು ಬೇರೆ ತರಗತಿಯವರು.

ಇವರೇ ನೋಡಿ ಅವಳಿಗಳು! ಶ್ರೀ ಗಜಾನನ ಆಂಗ್ಲಮಾಧ್ಯಮ ಶಾಲೆ ಈಶ್ವರಮಂಗಲ:

ಚರಿತ್ ರೈ ಮತ್ತು ಚಾರ್ವಿಕ್ ರೈ- ಪ್ರಿಕೆಜಿ (ಹೆತ್ತವರು: ಸನತ್ ಕುಮಾರ್ ರೈ ಎಂ. ಹಾಗೂ ಹರ್ಷಿತಾ )

ಚತುಷ್ಕ.ಎಂ.ಕೆ ಮತ್ತು ಚರಿಷ್ಮ ಎಂ. ಕೆ.-ಎಲ್‌ಕೆಜಿ (ಮನೋಜ್ ಕುಮಾರ್ ಕೆ. ಮತ್ತು ಪೂಜಿತ ಎಂ.ವಿ)

ಯಶಸ್ ಡಿ.ಆರ್. ಹಾಗೂ ಶ್ರೇಯಸ್ ಡಿ.ಆರ್.- 1ನೇ ತರಗತಿ (ರಾಜೇಶ್ ಡಿ.ಬಿ ಮತ್ತು ಸುಹಾಸಿನಿ ಎನ್)

ವಂಶಿಕ ಎ. ಮತ್ತು ವಿಶ್ಚಿಕ – 2ನೇ ತರಗತಿ (ಆನಂದ ನಾಯ್ಕ ಎ. ಮತ್ತು ಪ್ರಮೀಳಾ ಕೆ ಆರ್)

ಆಸಿಯತ್ ಶಫಾನ ಮತ್ತು ಮರಿಯಂ ಶಿಫಾನ – 3ನೇ ತರಗತಿ (ಕೆ.ವಿ. ಹೈದರಾಲಿ ಮತ್ತು ಆಯುಷತ್‌ ಸುಮಿಯ)

ಅನ್ವಿತ್ ಶೆಟ್ಟಿ ಮತ್ತು ಅಂಕಿತ್ ಶೆಟ್ಟಿ- 5ನೇ ತರಗತಿ (ಉದಯ ಶೆಟ್ಟಿ ಮತ್ತು ರೂಪ)

ನವ್ಯ ಬಿ. ಮತ್ತು ನಿತಿನ್ ಬಿ.- 5ನೇ ತರಗತಿ (ಸುದೇಶ ಮತ್ತು ಪ್ರಫುಲ್ಲ)

ಸಾನ್ವಿ ಎಂ.ಪಿ. ಮತ್ತು ಶ್ರಾವ್ಯ ಎಂ.ಪಿ -8 ತರಗತಿ (ಮನಮೋಹನ ಎಂ. ಮತ್ತು ಪುಷ್ಪಾವತಿ ಟಿ


Related Posts

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »