TOP STORIES:

ವೆನ್ಲಾಕ್‌ನ ಖ್ಯಾತ ಮೂತ್ರರೋಗ ತಜ್ಞ ಡಾ.ಸದಾನಂದ ಪೂಜಾರಿಗೆ ಪ್ರತಿಷ್ಠಿತ ಹೆಲ್ತ್‌ಕೇರ್‌ ಎಕ್ಸಲೆನ್ಸ್‌ ಅವಾರ್ಡ್‌


ಮಂಗಳೂರು: ಕನ್ನಡದ ಜನಪ್ರಿಯ ವಾಹಿನಿ ‘ಏಷ್ಯಾನೆಟ್‌ ಸುವರ್ಣ ನ್ಯೂಸ್’ ಹಾಗೂ ಕನ್ನಡದ ಖ್ಯಾತ ದಿನಪತ್ರಿಕೆ ‘ಕನ್ನಡ ಪ್ರಭ’ ಜಂಟಿಯಾಗಿ ನೀಡುವ ಪ್ರತಿಷ್ಠಿತ ‘ಹೆಲ್ತ್‌ಕೇರ್ ಎಕ್ಸಲೆನ್ಸ್ 2025’ ಅವಾರ್ಡ್‌ಗೆ ಮಂಗಳೂರು ವೆನ್ಲಾಕ್‌ ಆಸ್ಪತ್ರೆಯ ಖ್ಯಾತ ಮೂತ್ರರೋಗ ತಜ್ಞ ಡಾ.ಸದಾನಂದ ಪೂಜಾರಿ ಅವರು ಭಾಜನರಾಗಿದ್ದಾರೆ.

ಬೆಂಗಳೂರಿನ ಡಿ ಲಲಿತ್ ಅಶೋಕ್ ಹೊಟೇಲ್‌ನಲ್ಲಿ ಶನಿವಾರ ನಡೆದ ಸಮಾರಂಭದಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಸಮಾರಂಭದಲ್ಲಿ ವೈದ್ಯಲೋಕದಲ್ಲಿ ಸೇವೆ ಸಲ್ಲಿಸಿದ ಅಪ್ರತಿಮ ಸಾಧಕರಿಗೆ ಹೆಲ್ತ್‌ಕೇರ್‌ ಎಕ್ಸಲೆನ್ಸ್‌ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಮಾರಂಭದಲ್ಲಿ ಸಚಿವ ಭೈರತಿ ಸುರೇಶ್‌, ಮಾಜಿ ಸಚಿವ ಡಾ.ಕೆ ಸುಧಾಕರ್‌, ಕನ್ನಡಪ್ರಭ ಪ್ರಧಾನ ಸಂಪಾದಕ ರವಿ ಹೆಗಡೆ, ಮಣಿಪಾಲ್ ಸಮೂಹ ಆಸ್ಪತ್ರೆ ಮುಖ್ಯಸ್ಥ ಡಾ.ಸುದರ್ಶನ್ ಬಲ್ಲಾಳ್‌, ಪ್ರದಶ್ರೀ ಪುರಸ್ಕೃತ ಡಾ.ವಿಜಯಲಕ್ಷ್ಮೀ ದೇಶಮಾನೆ ಇದ್ದರು.

ಆರೋಗ್ಯ ಕ್ಷೇತ್ರದಲ್ಲಿ ‌ಡಾ. ಸದಾನಂದ ಪೂಜಾರಿ ಅವರ ಗಮರ್ನಾಹ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ಮಂಗಳೂರಿನ ವೆನ್ಲಾಕ್‌ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಮೂತ್ರರೋಗ ವಿಭಾಗದ ಮುಖ್ಯಸ್ಥರಾಗಿರುವ ಇವರು ಬಡರೋಗಿಗಳ ಜೀವರಕ್ಷಕ ಎಂದೇ ಹೇಳಿದರೂ ತಪ್ಪಗಲಾರದು.

ಡಾ. ಸದಾನಂದ ಪೂಜಾರಿ ಅವರು ಮಂಗಳೂರಿನಲ್ಲಿ ಮೂತ್ರರೋಗ ತಜ್ಞರಾಗಿ ಹೆಸರುವಾಸಿಯಾಗಿದ್ದಾರೆ. ಬಡ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡುತ್ತಾರೆ. ಅವರು ಸಮಾಜಮುಖಿ ಸೇವೆಗಾಗಿ ಹೆಸರುವಾಸಿಯಾಗಿದ್ದಾರೆ.

ಡಾ. ಸದಾನಂದ ಪೂಜಾರಿಯವರು ಬೆಳ್ತಂಗಡಿ ತಾಲೂಕಿನ ತೆಂಕ ಕಾರಂದೂರು ಗ್ರಾಮದ ಅಂಗಡಿಬೆಟ್ಟು ಮಾಯಿಲಪ್ಪ ಪೂಜಾರಿ ಮತ್ತು ಶ್ರೀಮತಿ ರೇವತಿ ದಂಪತಿಯ ಸುಪುತ್ರನಾಗಿ ಜನಿಸಿದರು. ಪ್ರಾಥಮಿಕ ಹಾಗೂ ಪ್ರೌಢಶಾಲೆ ಬೆಳ್ತಂಗಡಿಯಲ್ಲಿ ಮತ್ತು ಪಿ.ಯು.ಸಿ ಶಿಕ್ಷಣವನ್ನು ಎಸ್.ಡಿ.ಯಂ. ಕಾಲೇಜು ಉಜಿರೆಯಲ್ಲಿ ಪೂರೈಸಿ ಮಂಗಳೂರಿನ ಕೆ.ಎಂ.ಸಿ.ಯಲ್ಲಿ ಎಂ.ಬಿ.ಬಿ.ಎಸ್ ಮತ್ತು ಜನರಲ್ ಸರ್ಜರಿಯಲ್ಲಿ ಎಂ.ಎಸ್. ಪದವಿಯನ್ನು ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ಪಡೆದಿದ್ದಾರೆ. ಸೂಪರ್ ಸ್ಪೆಷಲಿಸ್ಟ್ ಎಂಸಿಎಚ್‌ ಯುರಾಲೊಜಿ ಅನ್ನು ಬೆಂಗಳೂರು ಮೆಡಿಕಲ್ ಕಾಲೇಜುನಲ್ಲಿ ಪಡೆದಿರುತ್ತಾರೆ.

ಡಾ. ಸದಾನಂದ ಪೂಜಾರಿ ಅವರು ಈಗಾಗಲೇ 5000 ಕ್ಕಿಂತಲೂ ಹೆಚ್ಚು ಶಸ್ತ್ರ ಚಿಕಿತ್ಸೆಗಳನ್ನು ನಡೆಸಿರುತ್ತಾರೆ. ಇವರ ಸೇವೆಯ ಜೊತೆ ಜೆ.ಸಿ.ಐ ಯಿಂದ ಅತ್ಯುತ್ತಮ ಯಂಗ್ ಇಂಡಿಯನ್ ಅವಾರ್ಡ್. ಕರ್ನಾಟಕ ಸೇವಾ ಪ್ರತಿಷ್ಠಾನದಿಂದ ಸಾಮಾಜಿಕ ಸೇವಾ ಪುರಸ್ಕಾರ, ಪ್ರತಿಷ್ಠಿತ ಐಎಂಎ ಪ್ರಶಸ್ತಿ, ಬೆಸ್ಟ್ ಸರ್ಜನ್ ಅವಾರ್ಡ್ ಹಾಗೂ ಯುವವಾಹಿನಿ, ಲಯನ್ಸ್‌ ಸೇರಿದಂತೆ ಹಲವಾರು ಸಂಘ ಸಂಸ್ಥೆಗಳಿಂದ ಸನ್ಮಾನಿಸಿ ಗೌರವಿಸಲಾಗಿದೆ.


Related Posts

ಸ್ವಾಮಿಗಳ ಚಿತ್ರ ಮತ್ತು ಪ್ರತಿಮೆಯ ಮುಂದೆ ರಾಜ್ಯಪಾಲರೊಂದಿಗೆ ಇರುವ ಚಿತ್ರ


Share         ಶಿವಗಿರಿ: ರಾಜ್ಯಪಾಲ ಆರ್.ವಿ. ಅರ್ಲೆಕ್ಕರ್ ಅವರು ರಾಜಭವನದ ಅತಿಥಿ ಕೊಠಡಿಯಲ್ಲಿ ಶ್ರೀ ನಾರಾಯಣ ಗುರುಗಳ ಚಿತ್ರ ಮತ್ತು ಕಂಚಿನ ಪ್ರತಿಮೆಯನ್ನು ಸ್ವಾಮಿಗಳಿಗೆ ತೋರಿಸಿದರು. ಅತಿಥಿ ಕೊಠಡಿಯನ್ನು ಪ್ರವೇಶಿಸುವಾಗ ಮೊದಲು ನೋಡುವುದು ಗುರುಗಳ ಚಿತ್ರ.


Read More »

ಕವಿ ಗವಿಸಿದ್ದ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ “ಮೇಣಕ್ಕಂಟಿದ ಬತ್ತಿ” ಕವನ ಸಂಕಲನ ಬಿಡುಗಡೆ


Share         ಅ.26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ,ಸಾಹಿತ್ಯ ಚರ್ಚೆ ಮುಂಬಯಿ, ಅ.23-  ಖ್ಯಾತ ಬಂಡಾಯ ಕವಿ ಗವಿಸಿದ್ದ ಎನ್. ಬಳ್ಳಾರಿ


Read More »

ಮಂಗಳೂರು: ಅಳದಂಗಡಿಯ ಶ್ರೀಮತಿ ಅನುಷಾ ಪ್ರಸಾದ್ ಪೂಜಾರಿ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ


Share         ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ (Manipal Institute of Technology, Manipal) ನ ಗಣಿತಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಅನುಷಾ ಎಲ್ ಅವರು ಮಂಡಿಸಿದ “A study on N-Covering


Read More »

ಬ್ರಿಟನ್ ಬಿಲ್ಲವ ಬಳಗ ಯುಕೆ ದೇಶದಲ್ಲಿ ಉತ್ಸಾಹದಿಂದ ಉದ್ಘಾಟನಾ ಸಮಾರಂಭವನ್ನು ಆಯೋಜಿಸಿದೆ.


Share         ಬ್ರಿಟನ್ ಬಿಲ್ಲವ ಬಳಗ ಯುಕೆಯ ಉದ್ಘಾಟನಾ ಸಮಾರಂಭವು ಸೆಪ್ಟೆಂಬರ್ 13 ರ ಶನಿವಾರದಂದು ಕೋವೆಂಟ್ರಿ ಹಾಲಿಡೇ ಇನ್ ಎಕ್ಸ್‌ಪ್ರೆಸ್ ಹೋಟೆಲ್‌ನಲ್ಲಿ ಸಂಘದ ಆಯ್ಕೆಯಾದ ಅಧ್ಯಕ್ಷ ಡಾ. ಪಿ.ಕೆ. ಮನೋಜ್ ಪೂಜಾರಿ ಅವರ ನೇತೃತ್ವದಲ್ಲಿ


Read More »

ಬಾರ್ಕೂರು ನಾಗರ ಮಠದ ಕ್ರೀಡಾ ಬಹು ಮುಖ ಪ್ರತಿಭೆಯ ಧನ್ವಿತಪೂಜಾರಿ ಧನ್ವಿತಪೂಜಾರಿ ಅವರಿಗೆ ಮೂರು ಪ್ರಶಸ್ತಿಗಳ ಗರಿ


Share         ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಕಿರಿ, ಮಂಜೇಶ್ವರ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಉಡುಪಿ ಜಿಲ್ಲೆ ಇವರ ಆಶ್ರಯದಲ್ಲಿ  ದಿನಾಂಕ 30-08-2025 ರಂದು


Read More »

ಸತತ 216 ಗಂಟೆಗಳ ಭರತನಾಟ್ಯ ಮಾಡುವುದರ ಮೂಲಕ ಗೋಲ್ಡನ್ ಬುಕ್ ವಲ್ಡ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ಬರೆಸಿಕೊಂಡ ನವರಸಧಾರ ದೀಕ್ಷಾ. ವಿ


Share         ದೀಕ್ಷಾ ವಿ. ಅವರ ಜೀವನವು ಕಲೆಯ ತಪಸ್ಸಿನ ಜೀವಂತ ಪ್ರತೀಕವಾಗಿದೆ. ತಂದೆ ಶ್ರೀ ವಿಠಲ್ ಪೂಜಾರಿ ಮತ್ತು ತಾಯಿ ಶುಭಾ ವಿಠಲ್ ಅವರ ಮಗಳಾದ ಅವರು, ಬಾಲ್ಯದಿಂದಲೇ ಕಲೆಯ ಕಡೆ ಮನಸ್ಸು ತಿರುಗಿಸಿಕೊಂಡಿದ್ದರು.


Read More »