TOP STORIES:

ವೆನ್ಲಾಕ್‌ನ ಖ್ಯಾತ ಮೂತ್ರರೋಗ ತಜ್ಞ ಡಾ.ಸದಾನಂದ ಪೂಜಾರಿಗೆ ಪ್ರತಿಷ್ಠಿತ ಹೆಲ್ತ್‌ಕೇರ್‌ ಎಕ್ಸಲೆನ್ಸ್‌ ಅವಾರ್ಡ್‌


ಮಂಗಳೂರು: ಕನ್ನಡದ ಜನಪ್ರಿಯ ವಾಹಿನಿ ‘ಏಷ್ಯಾನೆಟ್‌ ಸುವರ್ಣ ನ್ಯೂಸ್’ ಹಾಗೂ ಕನ್ನಡದ ಖ್ಯಾತ ದಿನಪತ್ರಿಕೆ ‘ಕನ್ನಡ ಪ್ರಭ’ ಜಂಟಿಯಾಗಿ ನೀಡುವ ಪ್ರತಿಷ್ಠಿತ ‘ಹೆಲ್ತ್‌ಕೇರ್ ಎಕ್ಸಲೆನ್ಸ್ 2025’ ಅವಾರ್ಡ್‌ಗೆ ಮಂಗಳೂರು ವೆನ್ಲಾಕ್‌ ಆಸ್ಪತ್ರೆಯ ಖ್ಯಾತ ಮೂತ್ರರೋಗ ತಜ್ಞ ಡಾ.ಸದಾನಂದ ಪೂಜಾರಿ ಅವರು ಭಾಜನರಾಗಿದ್ದಾರೆ.

ಬೆಂಗಳೂರಿನ ಡಿ ಲಲಿತ್ ಅಶೋಕ್ ಹೊಟೇಲ್‌ನಲ್ಲಿ ಶನಿವಾರ ನಡೆದ ಸಮಾರಂಭದಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಸಮಾರಂಭದಲ್ಲಿ ವೈದ್ಯಲೋಕದಲ್ಲಿ ಸೇವೆ ಸಲ್ಲಿಸಿದ ಅಪ್ರತಿಮ ಸಾಧಕರಿಗೆ ಹೆಲ್ತ್‌ಕೇರ್‌ ಎಕ್ಸಲೆನ್ಸ್‌ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಮಾರಂಭದಲ್ಲಿ ಸಚಿವ ಭೈರತಿ ಸುರೇಶ್‌, ಮಾಜಿ ಸಚಿವ ಡಾ.ಕೆ ಸುಧಾಕರ್‌, ಕನ್ನಡಪ್ರಭ ಪ್ರಧಾನ ಸಂಪಾದಕ ರವಿ ಹೆಗಡೆ, ಮಣಿಪಾಲ್ ಸಮೂಹ ಆಸ್ಪತ್ರೆ ಮುಖ್ಯಸ್ಥ ಡಾ.ಸುದರ್ಶನ್ ಬಲ್ಲಾಳ್‌, ಪ್ರದಶ್ರೀ ಪುರಸ್ಕೃತ ಡಾ.ವಿಜಯಲಕ್ಷ್ಮೀ ದೇಶಮಾನೆ ಇದ್ದರು.

ಆರೋಗ್ಯ ಕ್ಷೇತ್ರದಲ್ಲಿ ‌ಡಾ. ಸದಾನಂದ ಪೂಜಾರಿ ಅವರ ಗಮರ್ನಾಹ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ಮಂಗಳೂರಿನ ವೆನ್ಲಾಕ್‌ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಮೂತ್ರರೋಗ ವಿಭಾಗದ ಮುಖ್ಯಸ್ಥರಾಗಿರುವ ಇವರು ಬಡರೋಗಿಗಳ ಜೀವರಕ್ಷಕ ಎಂದೇ ಹೇಳಿದರೂ ತಪ್ಪಗಲಾರದು.

ಡಾ. ಸದಾನಂದ ಪೂಜಾರಿ ಅವರು ಮಂಗಳೂರಿನಲ್ಲಿ ಮೂತ್ರರೋಗ ತಜ್ಞರಾಗಿ ಹೆಸರುವಾಸಿಯಾಗಿದ್ದಾರೆ. ಬಡ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡುತ್ತಾರೆ. ಅವರು ಸಮಾಜಮುಖಿ ಸೇವೆಗಾಗಿ ಹೆಸರುವಾಸಿಯಾಗಿದ್ದಾರೆ.

ಡಾ. ಸದಾನಂದ ಪೂಜಾರಿಯವರು ಬೆಳ್ತಂಗಡಿ ತಾಲೂಕಿನ ತೆಂಕ ಕಾರಂದೂರು ಗ್ರಾಮದ ಅಂಗಡಿಬೆಟ್ಟು ಮಾಯಿಲಪ್ಪ ಪೂಜಾರಿ ಮತ್ತು ಶ್ರೀಮತಿ ರೇವತಿ ದಂಪತಿಯ ಸುಪುತ್ರನಾಗಿ ಜನಿಸಿದರು. ಪ್ರಾಥಮಿಕ ಹಾಗೂ ಪ್ರೌಢಶಾಲೆ ಬೆಳ್ತಂಗಡಿಯಲ್ಲಿ ಮತ್ತು ಪಿ.ಯು.ಸಿ ಶಿಕ್ಷಣವನ್ನು ಎಸ್.ಡಿ.ಯಂ. ಕಾಲೇಜು ಉಜಿರೆಯಲ್ಲಿ ಪೂರೈಸಿ ಮಂಗಳೂರಿನ ಕೆ.ಎಂ.ಸಿ.ಯಲ್ಲಿ ಎಂ.ಬಿ.ಬಿ.ಎಸ್ ಮತ್ತು ಜನರಲ್ ಸರ್ಜರಿಯಲ್ಲಿ ಎಂ.ಎಸ್. ಪದವಿಯನ್ನು ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ಪಡೆದಿದ್ದಾರೆ. ಸೂಪರ್ ಸ್ಪೆಷಲಿಸ್ಟ್ ಎಂಸಿಎಚ್‌ ಯುರಾಲೊಜಿ ಅನ್ನು ಬೆಂಗಳೂರು ಮೆಡಿಕಲ್ ಕಾಲೇಜುನಲ್ಲಿ ಪಡೆದಿರುತ್ತಾರೆ.

ಡಾ. ಸದಾನಂದ ಪೂಜಾರಿ ಅವರು ಈಗಾಗಲೇ 5000 ಕ್ಕಿಂತಲೂ ಹೆಚ್ಚು ಶಸ್ತ್ರ ಚಿಕಿತ್ಸೆಗಳನ್ನು ನಡೆಸಿರುತ್ತಾರೆ. ಇವರ ಸೇವೆಯ ಜೊತೆ ಜೆ.ಸಿ.ಐ ಯಿಂದ ಅತ್ಯುತ್ತಮ ಯಂಗ್ ಇಂಡಿಯನ್ ಅವಾರ್ಡ್. ಕರ್ನಾಟಕ ಸೇವಾ ಪ್ರತಿಷ್ಠಾನದಿಂದ ಸಾಮಾಜಿಕ ಸೇವಾ ಪುರಸ್ಕಾರ, ಪ್ರತಿಷ್ಠಿತ ಐಎಂಎ ಪ್ರಶಸ್ತಿ, ಬೆಸ್ಟ್ ಸರ್ಜನ್ ಅವಾರ್ಡ್ ಹಾಗೂ ಯುವವಾಹಿನಿ, ಲಯನ್ಸ್‌ ಸೇರಿದಂತೆ ಹಲವಾರು ಸಂಘ ಸಂಸ್ಥೆಗಳಿಂದ ಸನ್ಮಾನಿಸಿ ಗೌರವಿಸಲಾಗಿದೆ.


Related Posts

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »