TOP STORIES:

ವಿದೇಶದ ಇಸ್ರೇಲ್ ನಲ್ಲಿದ್ದು ತುಳುನಾಡಿನ ಸಂಕಷ್ಟದ ಕುಟುಂಬಕ್ಕೆ ಆರ್ಥಿಕ ಶಕ್ತಿ ತುಂಬಿದ ಮಹನೀಯ ವ್ಯಕ್ತಿ ದಿನಕರ ಪೂಜಾರಿ


ನಾನು ನನ್ನವರು ಎಂಬ ಈ ಕಾಲ ಘಟ್ಟದಲ್ಲಿ ಸಮಾನ ಮನಸ್ಕರ ಜೊತೆ  ಸೇರಿ ದುಡಿದದ್ದರಲ್ಲಿ ಸ್ವಲ್ಪ ಪಾಲನ್ನು ಸಮಾಜಕ್ಕಾಗಿ ವಿನಿಯೋಗಿಸುವ ಮಹೋನ್ನತ ಕಾರ್ಯಗೈಯುತ್ತಿರುವ ವ್ಯಕ್ತಿ ದಿನಕರ ಪೂಜಾರಿ.

ವಿದೇಶದಲ್ಲಿದ್ದು ಸಂಕಷ್ಟದ ಕುಟುಂಬಕ್ಕೆ ಆರ್ಥಿಕ ಶಕ್ತಿ ತುಂಬಿದ ಮಹನೀಯ. ಇದಕ್ಕೆ ಕಾರಣ ತಾನು ಬಾಲ್ಯದಲ್ಲಿ ಅನುಭವಿಸಿದ ಕಷ್ಟದ ಅನುಭವಗಳು. ವಿದ್ಯೆ ಪಡೆಯುವ ಹಂಬಲವಿದ್ದರೂ ಆರ್ಥಿಕತೆಯ ಬೆಂಬಲವಿಲ್ಲದೆ ಪರಿತಪಿಸಿದ ಕ್ಷಣಗಳು ಇಂದಿಗೂ ಅವರಿಗೆ ಕಹಿ ನೆನಪು.

ಸಕ್ಕರೆ ಮನಸಿನ ದಿನಕರ್ ಪೂಜಾರಿ ಇವರು ಕಾರ್ಕಳ ತಾಲೂಕಿನ ನಕ್ಕರೆ ಎನ್ನುವ ಗ್ರಾಮದಲ್ಲಿ ಬಾಬು ಪೂಜಾರಿ ಮತ್ತು ಉಮಾವತಿ ಇವರಿಗೆ ಕೊನೆಯ ಮಗನಾಗಿ ಜನಿಸುತ್ತಾರೆ. ಬಾಲ್ಯದಲ್ಲಿ ಒಂದನೇ ತರಗತಿಯಿಂದ ನಾಲ್ಕನೆಯವರೆಗೆ ಪಾಡ್ಯ  ಸ್ಕೂಲ್ ನಲ್ಲಿ ವ್ಯಾಸಂಗ ಮಾಡಿ, 5ನೇ ತರಗತಿಯಿಂದ ಹತ್ತನೇ ತರಗತಿಯವರೆಗೆ ನಕ್ರೆ ಸ್ಕೂಲ್ ನಲ್ಲಿ ವ್ಯಾಸಂಗ ಮಾಡಿದರು. ಬಡತನದ ಬೇಗುದಿಯ ಅನುಭವದಿ ಭವಿಷ್ಯದ ಚಿಂತೆಯ ಜೊತೆಗೆ ಓದಿನ ಆಸಕ್ತಿಯಿಂದ 15ನೇ ವಯಸ್ಸಿಗೆ

ಮುಂಬೈಗೆ ಬಂದು ಮುಂಬೈ ಕೆಬಿಎಸ್ ಕಾಲೇಜ್ ನಲ್ಲಿ ವ್ಯಾಸಾಂಗ ಮುಗಿಸಿ, ಭವಿಷ್ಯ ರೂಪಿಸುವ ದೃಢ ನಿರ್ಧಾರದಿಂದ ಕ್ಯಾಂಟೀನ್ ನಲ್ಲಿ ಕೆಲಸಕ್ಕೆ ಸೇರಿ, ಮುಂದೆ ತನ್ನದೇ ಆದ ಸ್ವಂತ ರೆಸ್ಟೋರೆಂಟ್ ಮತ್ತು ಬಾರುಗಳನ್ನು ನಡೆಸಿಕೊಂಡು ಬರುವಷ್ಟರಮಟ್ಟಿಗೆ ಆತ್ಮವಿಶ್ವಾಸ ಬೆಳೆಸಿಕೊಂಡರು.

2009 ನೇ ಇಸವಿಯಲ್ಲಿ ಉದ್ಯೋಗದ ನಿಮಿತ್ತ ಇಸ್ರೇಲ್ ನಲ್ಲಿ ನೆಲೆಸಿ ಫೈನಾನ್ಸ್ ಉದ್ಯೋಗವನ್ನು ಮಾಡುತ್ತಾರೆ. ಇದೀಗ ಅನಿವಾಸಿ ಭಾರತೀಯರಾಗಿದ್ದು, ಇಸ್ರೇಲ್ ನಲ್ಲಿ ತಮ್ಮದೇ ರೀತಿಯಲ್ಲಿ ಸಾಂಸ್ಕೃತಿಕವಾಗಿ, ಧಾರ್ಮಿಕವಾಗಿ ಎಲ್ಲಾ ಸಂಘ-ಸಂಸ್ಥೆಯಲ್ಲಿ ತೊಡಗಿಸಿಕೊಂಡಿರುತ್ತಾರೆ.

ದಾನ ಧರ್ಮ ಅಂತ ಬಂದರೆ ಸರ್ವಧರ್ಮದವರಿಗೂ ದಾನ ಮಾಡುವುದು ಇವರ ದೊಡ್ಡ ಗುಣವಾಗಿದೆ.

ಸುಮಾರು 5 ವರ್ಷಗಳಿಂದ “ಆಶಾಕಿರಣ ಹೆಲ್ಪಿಂಗ್ ಫಂಡ್ ಇಸ್ರೇಲ್” ಎನ್ನುವ ಸಂಘಟನೆ ಮಾಡಿ, ಇಸ್ರೇಲ್ ನಲ್ಲಿರುವ ಸ್ನೇಹಿತರನ್ನು ಸೇರಿಸಿಕೊಂಡು    ಸಂಘಟನೆಯಿಂದ ಸುಮಾರು 50 ಲಕ್ಷದವರೆಗೆ ಭಾರತದಲ್ಲಿರುವ ಅಸಹಾಯಕ ಕುಟುಂಬಗಳಿಗೆ ನೆರವಾಗುವುದರಲ್ಲಿ ಇವರ ಕೊಡುಗೆ ಅವಿಸ್ಮರಣೀಯ.

ಮುಂದೆ 2023ರಲ್ಲಿ ತನ್ನಂತೆ  ಇರುವ 15 ಜನರ ಸಮಾನ ಮನಸ್ಕರನ್ನು ಸೇರಿಸಿಕೊಂಡು ಇಸ್ರೇಲ್  ನಲ್ಲಿ  “ಓಂ ನಾರಾಯಣಗುರು ಹೆಲ್ಪಿಂಗ್ ಗ್ರೂಪ್ ಇಸ್ರೇಲ್” ಎನ್ನುವ ಸಂಸ್ಥೆಯನ್ನು ಸಂಘಟಿಸಿ ಅದರ ಮೂಲಕ 10 ಲಕ್ಷದಷ್ಟು ಭಾರತದಲ್ಲಿರುವ ಸಂಕಷ್ಟ ಕುಟುಂಬಗಳಿಗೆ ಸಹಾಯ ಮಾಡಿರುತ್ತಾರೆ. ಅದೇ ರೀತಿ  ಇಸ್ರೇಲ್ ನಲ್ಲಿ ನೆಲೆಸಿರುವ ತನ್ನ ಊರಿನ ಜನರಿಗೆ ಯಾವ ಕಷ್ಟದ ಸಮಯದಲ್ಲಾದರೂ  ಮನೆಯವರ ರೀತಿ ಸ್ಪಂದಿಸಿ, ಸಹಾಯ ಮಾಡುವ ಇವರ ಗುಣ ಮಹತ್ವದ್ದಾಗಿದೆ.

ಮಡದಿ ಭಾರತಿ ಮತ್ತು ಧನ್ವಿತ್ ಎನ್ನುವ ಒಬ್ಬ ಮಗನಿದ್ದು, ಚಿಕ್ಕದಾದ ಕುಟುಂಬವನ್ನು ಹೊಂದಿದ್ದಾರೆ. ದಿವಾಕರ್ ಸಾಲಿಯಾನ್ ಮತ್ತು ರತ್ನಾಕರ್ ಸಾಲಿಯಾನ್ ಎಂಬ ಇಬ್ಬರು ಸಹೋದರರು, ಶಶಿಕಲಾ ಎನ್ನುವ ಸಹೋದರಿಯಿದ್ದಾರೆ.

ತನ್ನ ಉದ್ಯೋಗದಂದಿಗೆ ಸಾಮಾಜಿಕ ಕಾಳಜಿಯ ಇವರ ಉದಾತ್ತ ಸೇವೆಗಳು ಹಲವಾರು ಕುಟುಂಬಗಳ ಪಾಲಿಗೆ ವರದಾನವಾಗಿದೆ. ಬರಲಿ ಸಂಪತ್ತು ಇವರಿಗೆ ಇನ್ನಷ್ಟು… ಮಾಡಲಿ ಸೇವೆ ಮತ್ತಷ್ಟು….. ಇದೇ ನಮ್ಮ ಆಶಯ.

(Copyrights owned by: billavaswarriors.com )


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »