TOP STORIES:

ವಿದೇಶದ ಇಸ್ರೇಲ್ ನಲ್ಲಿದ್ದು ತುಳುನಾಡಿನ ಸಂಕಷ್ಟದ ಕುಟುಂಬಕ್ಕೆ ಆರ್ಥಿಕ ಶಕ್ತಿ ತುಂಬಿದ ಮಹನೀಯ ವ್ಯಕ್ತಿ ದಿನಕರ ಪೂಜಾರಿ


ನಾನು ನನ್ನವರು ಎಂಬ ಈ ಕಾಲ ಘಟ್ಟದಲ್ಲಿ ಸಮಾನ ಮನಸ್ಕರ ಜೊತೆ  ಸೇರಿ ದುಡಿದದ್ದರಲ್ಲಿ ಸ್ವಲ್ಪ ಪಾಲನ್ನು ಸಮಾಜಕ್ಕಾಗಿ ವಿನಿಯೋಗಿಸುವ ಮಹೋನ್ನತ ಕಾರ್ಯಗೈಯುತ್ತಿರುವ ವ್ಯಕ್ತಿ ದಿನಕರ ಪೂಜಾರಿ.

ವಿದೇಶದಲ್ಲಿದ್ದು ಸಂಕಷ್ಟದ ಕುಟುಂಬಕ್ಕೆ ಆರ್ಥಿಕ ಶಕ್ತಿ ತುಂಬಿದ ಮಹನೀಯ. ಇದಕ್ಕೆ ಕಾರಣ ತಾನು ಬಾಲ್ಯದಲ್ಲಿ ಅನುಭವಿಸಿದ ಕಷ್ಟದ ಅನುಭವಗಳು. ವಿದ್ಯೆ ಪಡೆಯುವ ಹಂಬಲವಿದ್ದರೂ ಆರ್ಥಿಕತೆಯ ಬೆಂಬಲವಿಲ್ಲದೆ ಪರಿತಪಿಸಿದ ಕ್ಷಣಗಳು ಇಂದಿಗೂ ಅವರಿಗೆ ಕಹಿ ನೆನಪು.

ಸಕ್ಕರೆ ಮನಸಿನ ದಿನಕರ್ ಪೂಜಾರಿ ಇವರು ಕಾರ್ಕಳ ತಾಲೂಕಿನ ನಕ್ಕರೆ ಎನ್ನುವ ಗ್ರಾಮದಲ್ಲಿ ಬಾಬು ಪೂಜಾರಿ ಮತ್ತು ಉಮಾವತಿ ಇವರಿಗೆ ಕೊನೆಯ ಮಗನಾಗಿ ಜನಿಸುತ್ತಾರೆ. ಬಾಲ್ಯದಲ್ಲಿ ಒಂದನೇ ತರಗತಿಯಿಂದ ನಾಲ್ಕನೆಯವರೆಗೆ ಪಾಡ್ಯ  ಸ್ಕೂಲ್ ನಲ್ಲಿ ವ್ಯಾಸಂಗ ಮಾಡಿ, 5ನೇ ತರಗತಿಯಿಂದ ಹತ್ತನೇ ತರಗತಿಯವರೆಗೆ ನಕ್ರೆ ಸ್ಕೂಲ್ ನಲ್ಲಿ ವ್ಯಾಸಂಗ ಮಾಡಿದರು. ಬಡತನದ ಬೇಗುದಿಯ ಅನುಭವದಿ ಭವಿಷ್ಯದ ಚಿಂತೆಯ ಜೊತೆಗೆ ಓದಿನ ಆಸಕ್ತಿಯಿಂದ 15ನೇ ವಯಸ್ಸಿಗೆ

ಮುಂಬೈಗೆ ಬಂದು ಮುಂಬೈ ಕೆಬಿಎಸ್ ಕಾಲೇಜ್ ನಲ್ಲಿ ವ್ಯಾಸಾಂಗ ಮುಗಿಸಿ, ಭವಿಷ್ಯ ರೂಪಿಸುವ ದೃಢ ನಿರ್ಧಾರದಿಂದ ಕ್ಯಾಂಟೀನ್ ನಲ್ಲಿ ಕೆಲಸಕ್ಕೆ ಸೇರಿ, ಮುಂದೆ ತನ್ನದೇ ಆದ ಸ್ವಂತ ರೆಸ್ಟೋರೆಂಟ್ ಮತ್ತು ಬಾರುಗಳನ್ನು ನಡೆಸಿಕೊಂಡು ಬರುವಷ್ಟರಮಟ್ಟಿಗೆ ಆತ್ಮವಿಶ್ವಾಸ ಬೆಳೆಸಿಕೊಂಡರು.

2009 ನೇ ಇಸವಿಯಲ್ಲಿ ಉದ್ಯೋಗದ ನಿಮಿತ್ತ ಇಸ್ರೇಲ್ ನಲ್ಲಿ ನೆಲೆಸಿ ಫೈನಾನ್ಸ್ ಉದ್ಯೋಗವನ್ನು ಮಾಡುತ್ತಾರೆ. ಇದೀಗ ಅನಿವಾಸಿ ಭಾರತೀಯರಾಗಿದ್ದು, ಇಸ್ರೇಲ್ ನಲ್ಲಿ ತಮ್ಮದೇ ರೀತಿಯಲ್ಲಿ ಸಾಂಸ್ಕೃತಿಕವಾಗಿ, ಧಾರ್ಮಿಕವಾಗಿ ಎಲ್ಲಾ ಸಂಘ-ಸಂಸ್ಥೆಯಲ್ಲಿ ತೊಡಗಿಸಿಕೊಂಡಿರುತ್ತಾರೆ.

ದಾನ ಧರ್ಮ ಅಂತ ಬಂದರೆ ಸರ್ವಧರ್ಮದವರಿಗೂ ದಾನ ಮಾಡುವುದು ಇವರ ದೊಡ್ಡ ಗುಣವಾಗಿದೆ.

ಸುಮಾರು 5 ವರ್ಷಗಳಿಂದ “ಆಶಾಕಿರಣ ಹೆಲ್ಪಿಂಗ್ ಫಂಡ್ ಇಸ್ರೇಲ್” ಎನ್ನುವ ಸಂಘಟನೆ ಮಾಡಿ, ಇಸ್ರೇಲ್ ನಲ್ಲಿರುವ ಸ್ನೇಹಿತರನ್ನು ಸೇರಿಸಿಕೊಂಡು    ಸಂಘಟನೆಯಿಂದ ಸುಮಾರು 50 ಲಕ್ಷದವರೆಗೆ ಭಾರತದಲ್ಲಿರುವ ಅಸಹಾಯಕ ಕುಟುಂಬಗಳಿಗೆ ನೆರವಾಗುವುದರಲ್ಲಿ ಇವರ ಕೊಡುಗೆ ಅವಿಸ್ಮರಣೀಯ.

ಮುಂದೆ 2023ರಲ್ಲಿ ತನ್ನಂತೆ  ಇರುವ 15 ಜನರ ಸಮಾನ ಮನಸ್ಕರನ್ನು ಸೇರಿಸಿಕೊಂಡು ಇಸ್ರೇಲ್  ನಲ್ಲಿ  “ಓಂ ನಾರಾಯಣಗುರು ಹೆಲ್ಪಿಂಗ್ ಗ್ರೂಪ್ ಇಸ್ರೇಲ್” ಎನ್ನುವ ಸಂಸ್ಥೆಯನ್ನು ಸಂಘಟಿಸಿ ಅದರ ಮೂಲಕ 10 ಲಕ್ಷದಷ್ಟು ಭಾರತದಲ್ಲಿರುವ ಸಂಕಷ್ಟ ಕುಟುಂಬಗಳಿಗೆ ಸಹಾಯ ಮಾಡಿರುತ್ತಾರೆ. ಅದೇ ರೀತಿ  ಇಸ್ರೇಲ್ ನಲ್ಲಿ ನೆಲೆಸಿರುವ ತನ್ನ ಊರಿನ ಜನರಿಗೆ ಯಾವ ಕಷ್ಟದ ಸಮಯದಲ್ಲಾದರೂ  ಮನೆಯವರ ರೀತಿ ಸ್ಪಂದಿಸಿ, ಸಹಾಯ ಮಾಡುವ ಇವರ ಗುಣ ಮಹತ್ವದ್ದಾಗಿದೆ.

ಮಡದಿ ಭಾರತಿ ಮತ್ತು ಧನ್ವಿತ್ ಎನ್ನುವ ಒಬ್ಬ ಮಗನಿದ್ದು, ಚಿಕ್ಕದಾದ ಕುಟುಂಬವನ್ನು ಹೊಂದಿದ್ದಾರೆ. ದಿವಾಕರ್ ಸಾಲಿಯಾನ್ ಮತ್ತು ರತ್ನಾಕರ್ ಸಾಲಿಯಾನ್ ಎಂಬ ಇಬ್ಬರು ಸಹೋದರರು, ಶಶಿಕಲಾ ಎನ್ನುವ ಸಹೋದರಿಯಿದ್ದಾರೆ.

ತನ್ನ ಉದ್ಯೋಗದಂದಿಗೆ ಸಾಮಾಜಿಕ ಕಾಳಜಿಯ ಇವರ ಉದಾತ್ತ ಸೇವೆಗಳು ಹಲವಾರು ಕುಟುಂಬಗಳ ಪಾಲಿಗೆ ವರದಾನವಾಗಿದೆ. ಬರಲಿ ಸಂಪತ್ತು ಇವರಿಗೆ ಇನ್ನಷ್ಟು… ಮಾಡಲಿ ಸೇವೆ ಮತ್ತಷ್ಟು….. ಇದೇ ನಮ್ಮ ಆಶಯ.

(Copyrights owned by: billavaswarriors.com )


Related Posts

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ


Share        ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ


Read More »