TOP STORIES:

ವಿದೇಶದ ಇಸ್ರೇಲ್ ನಲ್ಲಿದ್ದು ತುಳುನಾಡಿನ ಸಂಕಷ್ಟದ ಕುಟುಂಬಕ್ಕೆ ಆರ್ಥಿಕ ಶಕ್ತಿ ತುಂಬಿದ ಮಹನೀಯ ವ್ಯಕ್ತಿ ದಿನಕರ ಪೂಜಾರಿ


ನಾನು ನನ್ನವರು ಎಂಬ ಈ ಕಾಲ ಘಟ್ಟದಲ್ಲಿ ಸಮಾನ ಮನಸ್ಕರ ಜೊತೆ  ಸೇರಿ ದುಡಿದದ್ದರಲ್ಲಿ ಸ್ವಲ್ಪ ಪಾಲನ್ನು ಸಮಾಜಕ್ಕಾಗಿ ವಿನಿಯೋಗಿಸುವ ಮಹೋನ್ನತ ಕಾರ್ಯಗೈಯುತ್ತಿರುವ ವ್ಯಕ್ತಿ ದಿನಕರ ಪೂಜಾರಿ.

ವಿದೇಶದಲ್ಲಿದ್ದು ಸಂಕಷ್ಟದ ಕುಟುಂಬಕ್ಕೆ ಆರ್ಥಿಕ ಶಕ್ತಿ ತುಂಬಿದ ಮಹನೀಯ. ಇದಕ್ಕೆ ಕಾರಣ ತಾನು ಬಾಲ್ಯದಲ್ಲಿ ಅನುಭವಿಸಿದ ಕಷ್ಟದ ಅನುಭವಗಳು. ವಿದ್ಯೆ ಪಡೆಯುವ ಹಂಬಲವಿದ್ದರೂ ಆರ್ಥಿಕತೆಯ ಬೆಂಬಲವಿಲ್ಲದೆ ಪರಿತಪಿಸಿದ ಕ್ಷಣಗಳು ಇಂದಿಗೂ ಅವರಿಗೆ ಕಹಿ ನೆನಪು.

ಸಕ್ಕರೆ ಮನಸಿನ ದಿನಕರ್ ಪೂಜಾರಿ ಇವರು ಕಾರ್ಕಳ ತಾಲೂಕಿನ ನಕ್ಕರೆ ಎನ್ನುವ ಗ್ರಾಮದಲ್ಲಿ ಬಾಬು ಪೂಜಾರಿ ಮತ್ತು ಉಮಾವತಿ ಇವರಿಗೆ ಕೊನೆಯ ಮಗನಾಗಿ ಜನಿಸುತ್ತಾರೆ. ಬಾಲ್ಯದಲ್ಲಿ ಒಂದನೇ ತರಗತಿಯಿಂದ ನಾಲ್ಕನೆಯವರೆಗೆ ಪಾಡ್ಯ  ಸ್ಕೂಲ್ ನಲ್ಲಿ ವ್ಯಾಸಂಗ ಮಾಡಿ, 5ನೇ ತರಗತಿಯಿಂದ ಹತ್ತನೇ ತರಗತಿಯವರೆಗೆ ನಕ್ರೆ ಸ್ಕೂಲ್ ನಲ್ಲಿ ವ್ಯಾಸಂಗ ಮಾಡಿದರು. ಬಡತನದ ಬೇಗುದಿಯ ಅನುಭವದಿ ಭವಿಷ್ಯದ ಚಿಂತೆಯ ಜೊತೆಗೆ ಓದಿನ ಆಸಕ್ತಿಯಿಂದ 15ನೇ ವಯಸ್ಸಿಗೆ

ಮುಂಬೈಗೆ ಬಂದು ಮುಂಬೈ ಕೆಬಿಎಸ್ ಕಾಲೇಜ್ ನಲ್ಲಿ ವ್ಯಾಸಾಂಗ ಮುಗಿಸಿ, ಭವಿಷ್ಯ ರೂಪಿಸುವ ದೃಢ ನಿರ್ಧಾರದಿಂದ ಕ್ಯಾಂಟೀನ್ ನಲ್ಲಿ ಕೆಲಸಕ್ಕೆ ಸೇರಿ, ಮುಂದೆ ತನ್ನದೇ ಆದ ಸ್ವಂತ ರೆಸ್ಟೋರೆಂಟ್ ಮತ್ತು ಬಾರುಗಳನ್ನು ನಡೆಸಿಕೊಂಡು ಬರುವಷ್ಟರಮಟ್ಟಿಗೆ ಆತ್ಮವಿಶ್ವಾಸ ಬೆಳೆಸಿಕೊಂಡರು.

2009 ನೇ ಇಸವಿಯಲ್ಲಿ ಉದ್ಯೋಗದ ನಿಮಿತ್ತ ಇಸ್ರೇಲ್ ನಲ್ಲಿ ನೆಲೆಸಿ ಫೈನಾನ್ಸ್ ಉದ್ಯೋಗವನ್ನು ಮಾಡುತ್ತಾರೆ. ಇದೀಗ ಅನಿವಾಸಿ ಭಾರತೀಯರಾಗಿದ್ದು, ಇಸ್ರೇಲ್ ನಲ್ಲಿ ತಮ್ಮದೇ ರೀತಿಯಲ್ಲಿ ಸಾಂಸ್ಕೃತಿಕವಾಗಿ, ಧಾರ್ಮಿಕವಾಗಿ ಎಲ್ಲಾ ಸಂಘ-ಸಂಸ್ಥೆಯಲ್ಲಿ ತೊಡಗಿಸಿಕೊಂಡಿರುತ್ತಾರೆ.

ದಾನ ಧರ್ಮ ಅಂತ ಬಂದರೆ ಸರ್ವಧರ್ಮದವರಿಗೂ ದಾನ ಮಾಡುವುದು ಇವರ ದೊಡ್ಡ ಗುಣವಾಗಿದೆ.

ಸುಮಾರು 5 ವರ್ಷಗಳಿಂದ “ಆಶಾಕಿರಣ ಹೆಲ್ಪಿಂಗ್ ಫಂಡ್ ಇಸ್ರೇಲ್” ಎನ್ನುವ ಸಂಘಟನೆ ಮಾಡಿ, ಇಸ್ರೇಲ್ ನಲ್ಲಿರುವ ಸ್ನೇಹಿತರನ್ನು ಸೇರಿಸಿಕೊಂಡು    ಸಂಘಟನೆಯಿಂದ ಸುಮಾರು 50 ಲಕ್ಷದವರೆಗೆ ಭಾರತದಲ್ಲಿರುವ ಅಸಹಾಯಕ ಕುಟುಂಬಗಳಿಗೆ ನೆರವಾಗುವುದರಲ್ಲಿ ಇವರ ಕೊಡುಗೆ ಅವಿಸ್ಮರಣೀಯ.

ಮುಂದೆ 2023ರಲ್ಲಿ ತನ್ನಂತೆ  ಇರುವ 15 ಜನರ ಸಮಾನ ಮನಸ್ಕರನ್ನು ಸೇರಿಸಿಕೊಂಡು ಇಸ್ರೇಲ್  ನಲ್ಲಿ  “ಓಂ ನಾರಾಯಣಗುರು ಹೆಲ್ಪಿಂಗ್ ಗ್ರೂಪ್ ಇಸ್ರೇಲ್” ಎನ್ನುವ ಸಂಸ್ಥೆಯನ್ನು ಸಂಘಟಿಸಿ ಅದರ ಮೂಲಕ 10 ಲಕ್ಷದಷ್ಟು ಭಾರತದಲ್ಲಿರುವ ಸಂಕಷ್ಟ ಕುಟುಂಬಗಳಿಗೆ ಸಹಾಯ ಮಾಡಿರುತ್ತಾರೆ. ಅದೇ ರೀತಿ  ಇಸ್ರೇಲ್ ನಲ್ಲಿ ನೆಲೆಸಿರುವ ತನ್ನ ಊರಿನ ಜನರಿಗೆ ಯಾವ ಕಷ್ಟದ ಸಮಯದಲ್ಲಾದರೂ  ಮನೆಯವರ ರೀತಿ ಸ್ಪಂದಿಸಿ, ಸಹಾಯ ಮಾಡುವ ಇವರ ಗುಣ ಮಹತ್ವದ್ದಾಗಿದೆ.

ಮಡದಿ ಭಾರತಿ ಮತ್ತು ಧನ್ವಿತ್ ಎನ್ನುವ ಒಬ್ಬ ಮಗನಿದ್ದು, ಚಿಕ್ಕದಾದ ಕುಟುಂಬವನ್ನು ಹೊಂದಿದ್ದಾರೆ. ದಿವಾಕರ್ ಸಾಲಿಯಾನ್ ಮತ್ತು ರತ್ನಾಕರ್ ಸಾಲಿಯಾನ್ ಎಂಬ ಇಬ್ಬರು ಸಹೋದರರು, ಶಶಿಕಲಾ ಎನ್ನುವ ಸಹೋದರಿಯಿದ್ದಾರೆ.

ತನ್ನ ಉದ್ಯೋಗದಂದಿಗೆ ಸಾಮಾಜಿಕ ಕಾಳಜಿಯ ಇವರ ಉದಾತ್ತ ಸೇವೆಗಳು ಹಲವಾರು ಕುಟುಂಬಗಳ ಪಾಲಿಗೆ ವರದಾನವಾಗಿದೆ. ಬರಲಿ ಸಂಪತ್ತು ಇವರಿಗೆ ಇನ್ನಷ್ಟು… ಮಾಡಲಿ ಸೇವೆ ಮತ್ತಷ್ಟು….. ಇದೇ ನಮ್ಮ ಆಶಯ.

(Copyrights owned by: billavaswarriors.com )


Related Posts

ನಿರೂಪಣಾ ಕ್ಷೇತ್ರದಲ್ಲಿ ಮಿಂಚುತ್ತಿರುವ ಉದಯೋನ್ಮುಖ ಪ್ರತಿಭೆ – ಕೃತಿ ಪೂಜಾರಿ ಮೂಡುಬೆಟ್ಟು


Share           ಸಾಧನೆಯೆಂಬುದು ಯಾರೊಬ್ಬನ ಸೊತ್ತೂ ಅಲ್ಲ, ಅದು ಕಠಿಣ ಪರಿಶ್ರಮ ಮತ್ತು ಸಮರ್ಪಣಾ ಭಾವದಿಂದ ಮುನ್ನಡೆಯುವ ಮನಸು ಮತ್ತು ವ್ಯಕ್ತಿಗಳ ಪಾಲಿನ ವರದಾನ. ಸಾಧನೆಯ ಮನಸ್ಸೆಂಬ ಸಸಿಗೆ ಸತತ ನೀರೆರೆದು ಪೋಷಿಸಿ, ಶ್ರಮವನ್ನು


Read More »

ಸುರತ್ಕಲ್‌ನಲ್ಲಿ ರಂಗುರಂಗಿನ ರಂಗೋತ್ಸವ ನವೀನ್ ಡಿ ಪಡೀಲ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ


Share         ಸುರತ್ಕಲ್: ರಂಗಚಾವಡಿ ಮಂಗಳೂರು ಸಾಂಸ್ಕೃತಿಕ ಸಾಂಸ್ಕೃತಿಕ ಸಂಘಟನೆ ಮತ್ತು ಸುಭಾಷಿತನಗರ  ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ನಡೆದ ರಂಗಚಾವಡಿ ರಜತ ಸಂಭ್ರಮ ಮತ್ತು ರಂಗುರಂಗಿನ ರಂಗೋತ್ಸವ ಕಾರ್ಯಕ್ರಮ


Read More »

ಸುರತ್ಕಲ್‌ನಲ್ಲಿ ರಂಗುರಂಗಿನ ರಂಗೋತ್ಸವ ನವೀನ್ ಡಿ ಪಡೀಲ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ


Share         ಸುರತ್ಕಲ್‌ನಲ್ಲಿ ರಂಗುರಂಗಿನ ರಂಗೋತ್ಸವ   ನವೀನ್ ಡಿ ಪಡೀಲ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ   ಸುರತ್ಕಲ್: ರಂಗಚಾವಡಿ ಮಂಗಳೂರು ಸಾಂಸ್ಕೃತಿಕ ಸಾಂಸ್ಕೃತಿಕ ಸಂಘಟನೆ ಮತ್ತು ಸುಭಾಷಿತನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್


Read More »

ಸ್ವಾಮಿಗಳ ಚಿತ್ರ ಮತ್ತು ಪ್ರತಿಮೆಯ ಮುಂದೆ ರಾಜ್ಯಪಾಲರೊಂದಿಗೆ ಇರುವ ಚಿತ್ರ


Share         ಶಿವಗಿರಿ: ರಾಜ್ಯಪಾಲ ಆರ್.ವಿ. ಅರ್ಲೆಕ್ಕರ್ ಅವರು ರಾಜಭವನದ ಅತಿಥಿ ಕೊಠಡಿಯಲ್ಲಿ ಶ್ರೀ ನಾರಾಯಣ ಗುರುಗಳ ಚಿತ್ರ ಮತ್ತು ಕಂಚಿನ ಪ್ರತಿಮೆಯನ್ನು ಸ್ವಾಮಿಗಳಿಗೆ ತೋರಿಸಿದರು. ಅತಿಥಿ ಕೊಠಡಿಯನ್ನು ಪ್ರವೇಶಿಸುವಾಗ ಮೊದಲು ನೋಡುವುದು ಗುರುಗಳ ಚಿತ್ರ.


Read More »

ಕವಿ ಗವಿಸಿದ್ದ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ “ಮೇಣಕ್ಕಂಟಿದ ಬತ್ತಿ” ಕವನ ಸಂಕಲನ ಬಿಡುಗಡೆ


Share         ಅ.26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ,ಸಾಹಿತ್ಯ ಚರ್ಚೆ ಮುಂಬಯಿ, ಅ.23-  ಖ್ಯಾತ ಬಂಡಾಯ ಕವಿ ಗವಿಸಿದ್ದ ಎನ್. ಬಳ್ಳಾರಿ


Read More »

ಮಂಗಳೂರು: ಅಳದಂಗಡಿಯ ಶ್ರೀಮತಿ ಅನುಷಾ ಪ್ರಸಾದ್ ಪೂಜಾರಿ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ


Share         ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ (Manipal Institute of Technology, Manipal) ನ ಗಣಿತಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಅನುಷಾ ಎಲ್ ಅವರು ಮಂಡಿಸಿದ “A study on N-Covering


Read More »