TOP STORIES:

FOLLOW US

ವಿದೇಶದ ಇಸ್ರೇಲ್ ನಲ್ಲಿದ್ದು ತುಳುನಾಡಿನ ಸಂಕಷ್ಟದ ಕುಟುಂಬಕ್ಕೆ ಆರ್ಥಿಕ ಶಕ್ತಿ ತುಂಬಿದ ಮಹನೀಯ ವ್ಯಕ್ತಿ ದಿನಕರ ಪೂಜಾರಿ


ನಾನು ನನ್ನವರು ಎಂಬ ಈ ಕಾಲ ಘಟ್ಟದಲ್ಲಿ ಸಮಾನ ಮನಸ್ಕರ ಜೊತೆ  ಸೇರಿ ದುಡಿದದ್ದರಲ್ಲಿ ಸ್ವಲ್ಪ ಪಾಲನ್ನು ಸಮಾಜಕ್ಕಾಗಿ ವಿನಿಯೋಗಿಸುವ ಮಹೋನ್ನತ ಕಾರ್ಯಗೈಯುತ್ತಿರುವ ವ್ಯಕ್ತಿ ದಿನಕರ ಪೂಜಾರಿ.

ವಿದೇಶದಲ್ಲಿದ್ದು ಸಂಕಷ್ಟದ ಕುಟುಂಬಕ್ಕೆ ಆರ್ಥಿಕ ಶಕ್ತಿ ತುಂಬಿದ ಮಹನೀಯ. ಇದಕ್ಕೆ ಕಾರಣ ತಾನು ಬಾಲ್ಯದಲ್ಲಿ ಅನುಭವಿಸಿದ ಕಷ್ಟದ ಅನುಭವಗಳು. ವಿದ್ಯೆ ಪಡೆಯುವ ಹಂಬಲವಿದ್ದರೂ ಆರ್ಥಿಕತೆಯ ಬೆಂಬಲವಿಲ್ಲದೆ ಪರಿತಪಿಸಿದ ಕ್ಷಣಗಳು ಇಂದಿಗೂ ಅವರಿಗೆ ಕಹಿ ನೆನಪು.

ಸಕ್ಕರೆ ಮನಸಿನ ದಿನಕರ್ ಪೂಜಾರಿ ಇವರು ಕಾರ್ಕಳ ತಾಲೂಕಿನ ನಕ್ಕರೆ ಎನ್ನುವ ಗ್ರಾಮದಲ್ಲಿ ಬಾಬು ಪೂಜಾರಿ ಮತ್ತು ಉಮಾವತಿ ಇವರಿಗೆ ಕೊನೆಯ ಮಗನಾಗಿ ಜನಿಸುತ್ತಾರೆ. ಬಾಲ್ಯದಲ್ಲಿ ಒಂದನೇ ತರಗತಿಯಿಂದ ನಾಲ್ಕನೆಯವರೆಗೆ ಪಾಡ್ಯ  ಸ್ಕೂಲ್ ನಲ್ಲಿ ವ್ಯಾಸಂಗ ಮಾಡಿ, 5ನೇ ತರಗತಿಯಿಂದ ಹತ್ತನೇ ತರಗತಿಯವರೆಗೆ ನಕ್ರೆ ಸ್ಕೂಲ್ ನಲ್ಲಿ ವ್ಯಾಸಂಗ ಮಾಡಿದರು. ಬಡತನದ ಬೇಗುದಿಯ ಅನುಭವದಿ ಭವಿಷ್ಯದ ಚಿಂತೆಯ ಜೊತೆಗೆ ಓದಿನ ಆಸಕ್ತಿಯಿಂದ 15ನೇ ವಯಸ್ಸಿಗೆ

ಮುಂಬೈಗೆ ಬಂದು ಮುಂಬೈ ಕೆಬಿಎಸ್ ಕಾಲೇಜ್ ನಲ್ಲಿ ವ್ಯಾಸಾಂಗ ಮುಗಿಸಿ, ಭವಿಷ್ಯ ರೂಪಿಸುವ ದೃಢ ನಿರ್ಧಾರದಿಂದ ಕ್ಯಾಂಟೀನ್ ನಲ್ಲಿ ಕೆಲಸಕ್ಕೆ ಸೇರಿ, ಮುಂದೆ ತನ್ನದೇ ಆದ ಸ್ವಂತ ರೆಸ್ಟೋರೆಂಟ್ ಮತ್ತು ಬಾರುಗಳನ್ನು ನಡೆಸಿಕೊಂಡು ಬರುವಷ್ಟರಮಟ್ಟಿಗೆ ಆತ್ಮವಿಶ್ವಾಸ ಬೆಳೆಸಿಕೊಂಡರು.

2009 ನೇ ಇಸವಿಯಲ್ಲಿ ಉದ್ಯೋಗದ ನಿಮಿತ್ತ ಇಸ್ರೇಲ್ ನಲ್ಲಿ ನೆಲೆಸಿ ಫೈನಾನ್ಸ್ ಉದ್ಯೋಗವನ್ನು ಮಾಡುತ್ತಾರೆ. ಇದೀಗ ಅನಿವಾಸಿ ಭಾರತೀಯರಾಗಿದ್ದು, ಇಸ್ರೇಲ್ ನಲ್ಲಿ ತಮ್ಮದೇ ರೀತಿಯಲ್ಲಿ ಸಾಂಸ್ಕೃತಿಕವಾಗಿ, ಧಾರ್ಮಿಕವಾಗಿ ಎಲ್ಲಾ ಸಂಘ-ಸಂಸ್ಥೆಯಲ್ಲಿ ತೊಡಗಿಸಿಕೊಂಡಿರುತ್ತಾರೆ.

ದಾನ ಧರ್ಮ ಅಂತ ಬಂದರೆ ಸರ್ವಧರ್ಮದವರಿಗೂ ದಾನ ಮಾಡುವುದು ಇವರ ದೊಡ್ಡ ಗುಣವಾಗಿದೆ.

ಸುಮಾರು 5 ವರ್ಷಗಳಿಂದ “ಆಶಾಕಿರಣ ಹೆಲ್ಪಿಂಗ್ ಫಂಡ್ ಇಸ್ರೇಲ್” ಎನ್ನುವ ಸಂಘಟನೆ ಮಾಡಿ, ಇಸ್ರೇಲ್ ನಲ್ಲಿರುವ ಸ್ನೇಹಿತರನ್ನು ಸೇರಿಸಿಕೊಂಡು    ಸಂಘಟನೆಯಿಂದ ಸುಮಾರು 50 ಲಕ್ಷದವರೆಗೆ ಭಾರತದಲ್ಲಿರುವ ಅಸಹಾಯಕ ಕುಟುಂಬಗಳಿಗೆ ನೆರವಾಗುವುದರಲ್ಲಿ ಇವರ ಕೊಡುಗೆ ಅವಿಸ್ಮರಣೀಯ.

ಮುಂದೆ 2023ರಲ್ಲಿ ತನ್ನಂತೆ  ಇರುವ 15 ಜನರ ಸಮಾನ ಮನಸ್ಕರನ್ನು ಸೇರಿಸಿಕೊಂಡು ಇಸ್ರೇಲ್  ನಲ್ಲಿ  “ಓಂ ನಾರಾಯಣಗುರು ಹೆಲ್ಪಿಂಗ್ ಗ್ರೂಪ್ ಇಸ್ರೇಲ್” ಎನ್ನುವ ಸಂಸ್ಥೆಯನ್ನು ಸಂಘಟಿಸಿ ಅದರ ಮೂಲಕ 10 ಲಕ್ಷದಷ್ಟು ಭಾರತದಲ್ಲಿರುವ ಸಂಕಷ್ಟ ಕುಟುಂಬಗಳಿಗೆ ಸಹಾಯ ಮಾಡಿರುತ್ತಾರೆ. ಅದೇ ರೀತಿ  ಇಸ್ರೇಲ್ ನಲ್ಲಿ ನೆಲೆಸಿರುವ ತನ್ನ ಊರಿನ ಜನರಿಗೆ ಯಾವ ಕಷ್ಟದ ಸಮಯದಲ್ಲಾದರೂ  ಮನೆಯವರ ರೀತಿ ಸ್ಪಂದಿಸಿ, ಸಹಾಯ ಮಾಡುವ ಇವರ ಗುಣ ಮಹತ್ವದ್ದಾಗಿದೆ.

ಮಡದಿ ಭಾರತಿ ಮತ್ತು ಧನ್ವಿತ್ ಎನ್ನುವ ಒಬ್ಬ ಮಗನಿದ್ದು, ಚಿಕ್ಕದಾದ ಕುಟುಂಬವನ್ನು ಹೊಂದಿದ್ದಾರೆ. ದಿವಾಕರ್ ಸಾಲಿಯಾನ್ ಮತ್ತು ರತ್ನಾಕರ್ ಸಾಲಿಯಾನ್ ಎಂಬ ಇಬ್ಬರು ಸಹೋದರರು, ಶಶಿಕಲಾ ಎನ್ನುವ ಸಹೋದರಿಯಿದ್ದಾರೆ.

ತನ್ನ ಉದ್ಯೋಗದಂದಿಗೆ ಸಾಮಾಜಿಕ ಕಾಳಜಿಯ ಇವರ ಉದಾತ್ತ ಸೇವೆಗಳು ಹಲವಾರು ಕುಟುಂಬಗಳ ಪಾಲಿಗೆ ವರದಾನವಾಗಿದೆ. ಬರಲಿ ಸಂಪತ್ತು ಇವರಿಗೆ ಇನ್ನಷ್ಟು… ಮಾಡಲಿ ಸೇವೆ ಮತ್ತಷ್ಟು….. ಇದೇ ನಮ್ಮ ಆಶಯ.

(Copyrights owned by: billavaswarriors.com )


Share:

More Posts

Category

Send Us A Message

Related Posts

ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಪುಣೆಯ ಸಮಾಜಸೇವಕ   “ವಿಶ್ವನಾಥ ಪೂಜಾರಿ ಕಡ್ತಲ’ ಆಯ್ಕೆ


Share       ಪುಣೆ :ಪುಣೆ ಬಿಲ್ಲವ ಸಮಾಜ ಸೇವಾ ಸಂಘ ಇದರ ಅಧ್ಯಕ್ಷ ,ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಗುರುತಿಸಿಕೊಂಡಿರುವ ವಿಶ್ವನಾಥ ಪೂಜಾರಿ ಕಡ್ತಲ ಇವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ -2025  ಗೆ ಆಯ್ಕೆಯಾಗಿರುತ್ತಾರೆ .


Read More »

ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ 1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ


Share       ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ  1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ ಯತೀವರ್ಯರು, ಸಚಿವ ಮಾಂಕಳ್ ವೈದ್ಯ, ಶಾಸಕ ಹರೀಶ್ ಪೂಂಜ, ಸೇರಿದಂತೆ ಬೆಳ್ತಂಗಡಿಯಿಂದ ಸುಮಾರು 200


Read More »

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ


Share         ಪ್ರಸಿದ್ದ ಬೈದ್ಯೇರುಗಳ ಪಾತ್ರಿಯಾದ  ಶ್ರೀ ಸುರೇಶ್ ಪೂಜಾರಿಯವರು ಅಲ್ಪಕಾಲದ  ಅಸೌಖ್ಯದ ಕಾರಣ ಇಂದು ಭಗವಂತನ ಪಾದ ಸೇರಿದರು. ಕಳತ್ತೂರು ಹಿರಿಯಣ್ಣ ಪೂಜಾರಿ ಹಾಗೂ ಶ್ರೀಮತಿ ಲೀಲಾವತಿ ಪೂಜಾರಿಯವರ ಮಗನಾದ ಶ್ರೀ ಸುರೇಶ್


Read More »

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »

ಮೂಡಬಿದಿರಿಯಲ್ಲೊಂದು 75 ಸಂಭ್ರಮ ಕ್ಕೆ ಸ್ನೇಹ ಸೇತುವಾದ ಸಿಂಗಾಪೂರ ಬಿಲ್ಲವ ಅಸೋಸಿಯೇಷನ್


Share       ಮೂಡಬಿದಿರಿಯಿಂದ ಸಿಂಗಪೂರಿಗೆ 🇸🇬: ಜಾಗತಿಕ ಸಮುದಾಯ ಸಂಬಂಧಗಳ ಬಲವರ್ಧನೆ: ಜಾಗತಿಕ ಸಮುದಾಯ ಸಂಬಂಧಗಳನ್ನು ಬಲಪಡಿಸುವ ದಿಕ್ಕಿನಲ್ಲಿ ಮಹತ್ವಪೂರ್ಣ ಹೆಜ್ಜೆವಹಿಸಿ, ಬಿಲ್ಲವ ಅಸೋಸಿಯೇಷನ್ ಸಿಂಗಪೂರಿನ ಸ್ಥಾಪಕರಾದ ಅಶ್ವಿತ್ ಬಂಗೇರಾ ಅವರು, ಬಿಲ್ಲವ ಅಸೋಸಿಯೇಷನ್ ಮೂಡಬಿದಿರಿಯ


Read More »

ಬಿಲ್ಲವಾಸ್ ಕತಾರ್ ನ ಇತಿಹಾಸದಲ್ಲಿ ಇನ್ನೊಂದು ಮೈಲಿಗಲ್ಲು. ಉಚಿತ ಆರೋಗ್ಯತಪಾಸಣಾ ಶಿಬಿರ ಮತ್ತು ಬಿಲ್ಲವಾಸ್ ಕತಾರ್ ನ ಅಧೀಕೃತ ಲಾಂಛನ (ಲೋಗೋ) ಬಿಡುಗಡೆ


Share       Noಹಲವು ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಗಮನ ಸೆಳೆಯುತ್ತಿರುವ ಬಿಲ್ಲವಾಸ್ ಕತಾರ್ ರವರ  ವತಿಯಿಂದ ದಿನಾಂಕ ೧೧.೦೪.೨೦೨೫ ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಕಿಮ್ಸ್ ಮೆಡಿಕಲ್ ಸೆಂಟರ್, ಅಲ್ ಮಿಶಾಫ್, ಕತಾರ್ ಅವರ


Read More »