TOP STORIES:

ವಿದೇಶದ ಇಸ್ರೇಲ್ ನಲ್ಲಿದ್ದು ತುಳುನಾಡಿನ ಸಂಕಷ್ಟದ ಕುಟುಂಬಕ್ಕೆ ಆರ್ಥಿಕ ಶಕ್ತಿ ತುಂಬಿದ ಮಹನೀಯ ವ್ಯಕ್ತಿ ದಿನಕರ ಪೂಜಾರಿ


ನಾನು ನನ್ನವರು ಎಂಬ ಈ ಕಾಲ ಘಟ್ಟದಲ್ಲಿ ಸಮಾನ ಮನಸ್ಕರ ಜೊತೆ  ಸೇರಿ ದುಡಿದದ್ದರಲ್ಲಿ ಸ್ವಲ್ಪ ಪಾಲನ್ನು ಸಮಾಜಕ್ಕಾಗಿ ವಿನಿಯೋಗಿಸುವ ಮಹೋನ್ನತ ಕಾರ್ಯಗೈಯುತ್ತಿರುವ ವ್ಯಕ್ತಿ ದಿನಕರ ಪೂಜಾರಿ.

ವಿದೇಶದಲ್ಲಿದ್ದು ಸಂಕಷ್ಟದ ಕುಟುಂಬಕ್ಕೆ ಆರ್ಥಿಕ ಶಕ್ತಿ ತುಂಬಿದ ಮಹನೀಯ. ಇದಕ್ಕೆ ಕಾರಣ ತಾನು ಬಾಲ್ಯದಲ್ಲಿ ಅನುಭವಿಸಿದ ಕಷ್ಟದ ಅನುಭವಗಳು. ವಿದ್ಯೆ ಪಡೆಯುವ ಹಂಬಲವಿದ್ದರೂ ಆರ್ಥಿಕತೆಯ ಬೆಂಬಲವಿಲ್ಲದೆ ಪರಿತಪಿಸಿದ ಕ್ಷಣಗಳು ಇಂದಿಗೂ ಅವರಿಗೆ ಕಹಿ ನೆನಪು.

ಸಕ್ಕರೆ ಮನಸಿನ ದಿನಕರ್ ಪೂಜಾರಿ ಇವರು ಕಾರ್ಕಳ ತಾಲೂಕಿನ ನಕ್ಕರೆ ಎನ್ನುವ ಗ್ರಾಮದಲ್ಲಿ ಬಾಬು ಪೂಜಾರಿ ಮತ್ತು ಉಮಾವತಿ ಇವರಿಗೆ ಕೊನೆಯ ಮಗನಾಗಿ ಜನಿಸುತ್ತಾರೆ. ಬಾಲ್ಯದಲ್ಲಿ ಒಂದನೇ ತರಗತಿಯಿಂದ ನಾಲ್ಕನೆಯವರೆಗೆ ಪಾಡ್ಯ  ಸ್ಕೂಲ್ ನಲ್ಲಿ ವ್ಯಾಸಂಗ ಮಾಡಿ, 5ನೇ ತರಗತಿಯಿಂದ ಹತ್ತನೇ ತರಗತಿಯವರೆಗೆ ನಕ್ರೆ ಸ್ಕೂಲ್ ನಲ್ಲಿ ವ್ಯಾಸಂಗ ಮಾಡಿದರು. ಬಡತನದ ಬೇಗುದಿಯ ಅನುಭವದಿ ಭವಿಷ್ಯದ ಚಿಂತೆಯ ಜೊತೆಗೆ ಓದಿನ ಆಸಕ್ತಿಯಿಂದ 15ನೇ ವಯಸ್ಸಿಗೆ

ಮುಂಬೈಗೆ ಬಂದು ಮುಂಬೈ ಕೆಬಿಎಸ್ ಕಾಲೇಜ್ ನಲ್ಲಿ ವ್ಯಾಸಾಂಗ ಮುಗಿಸಿ, ಭವಿಷ್ಯ ರೂಪಿಸುವ ದೃಢ ನಿರ್ಧಾರದಿಂದ ಕ್ಯಾಂಟೀನ್ ನಲ್ಲಿ ಕೆಲಸಕ್ಕೆ ಸೇರಿ, ಮುಂದೆ ತನ್ನದೇ ಆದ ಸ್ವಂತ ರೆಸ್ಟೋರೆಂಟ್ ಮತ್ತು ಬಾರುಗಳನ್ನು ನಡೆಸಿಕೊಂಡು ಬರುವಷ್ಟರಮಟ್ಟಿಗೆ ಆತ್ಮವಿಶ್ವಾಸ ಬೆಳೆಸಿಕೊಂಡರು.

2009 ನೇ ಇಸವಿಯಲ್ಲಿ ಉದ್ಯೋಗದ ನಿಮಿತ್ತ ಇಸ್ರೇಲ್ ನಲ್ಲಿ ನೆಲೆಸಿ ಫೈನಾನ್ಸ್ ಉದ್ಯೋಗವನ್ನು ಮಾಡುತ್ತಾರೆ. ಇದೀಗ ಅನಿವಾಸಿ ಭಾರತೀಯರಾಗಿದ್ದು, ಇಸ್ರೇಲ್ ನಲ್ಲಿ ತಮ್ಮದೇ ರೀತಿಯಲ್ಲಿ ಸಾಂಸ್ಕೃತಿಕವಾಗಿ, ಧಾರ್ಮಿಕವಾಗಿ ಎಲ್ಲಾ ಸಂಘ-ಸಂಸ್ಥೆಯಲ್ಲಿ ತೊಡಗಿಸಿಕೊಂಡಿರುತ್ತಾರೆ.

ದಾನ ಧರ್ಮ ಅಂತ ಬಂದರೆ ಸರ್ವಧರ್ಮದವರಿಗೂ ದಾನ ಮಾಡುವುದು ಇವರ ದೊಡ್ಡ ಗುಣವಾಗಿದೆ.

ಸುಮಾರು 5 ವರ್ಷಗಳಿಂದ “ಆಶಾಕಿರಣ ಹೆಲ್ಪಿಂಗ್ ಫಂಡ್ ಇಸ್ರೇಲ್” ಎನ್ನುವ ಸಂಘಟನೆ ಮಾಡಿ, ಇಸ್ರೇಲ್ ನಲ್ಲಿರುವ ಸ್ನೇಹಿತರನ್ನು ಸೇರಿಸಿಕೊಂಡು    ಸಂಘಟನೆಯಿಂದ ಸುಮಾರು 50 ಲಕ್ಷದವರೆಗೆ ಭಾರತದಲ್ಲಿರುವ ಅಸಹಾಯಕ ಕುಟುಂಬಗಳಿಗೆ ನೆರವಾಗುವುದರಲ್ಲಿ ಇವರ ಕೊಡುಗೆ ಅವಿಸ್ಮರಣೀಯ.

ಮುಂದೆ 2023ರಲ್ಲಿ ತನ್ನಂತೆ  ಇರುವ 15 ಜನರ ಸಮಾನ ಮನಸ್ಕರನ್ನು ಸೇರಿಸಿಕೊಂಡು ಇಸ್ರೇಲ್  ನಲ್ಲಿ  “ಓಂ ನಾರಾಯಣಗುರು ಹೆಲ್ಪಿಂಗ್ ಗ್ರೂಪ್ ಇಸ್ರೇಲ್” ಎನ್ನುವ ಸಂಸ್ಥೆಯನ್ನು ಸಂಘಟಿಸಿ ಅದರ ಮೂಲಕ 10 ಲಕ್ಷದಷ್ಟು ಭಾರತದಲ್ಲಿರುವ ಸಂಕಷ್ಟ ಕುಟುಂಬಗಳಿಗೆ ಸಹಾಯ ಮಾಡಿರುತ್ತಾರೆ. ಅದೇ ರೀತಿ  ಇಸ್ರೇಲ್ ನಲ್ಲಿ ನೆಲೆಸಿರುವ ತನ್ನ ಊರಿನ ಜನರಿಗೆ ಯಾವ ಕಷ್ಟದ ಸಮಯದಲ್ಲಾದರೂ  ಮನೆಯವರ ರೀತಿ ಸ್ಪಂದಿಸಿ, ಸಹಾಯ ಮಾಡುವ ಇವರ ಗುಣ ಮಹತ್ವದ್ದಾಗಿದೆ.

ಮಡದಿ ಭಾರತಿ ಮತ್ತು ಧನ್ವಿತ್ ಎನ್ನುವ ಒಬ್ಬ ಮಗನಿದ್ದು, ಚಿಕ್ಕದಾದ ಕುಟುಂಬವನ್ನು ಹೊಂದಿದ್ದಾರೆ. ದಿವಾಕರ್ ಸಾಲಿಯಾನ್ ಮತ್ತು ರತ್ನಾಕರ್ ಸಾಲಿಯಾನ್ ಎಂಬ ಇಬ್ಬರು ಸಹೋದರರು, ಶಶಿಕಲಾ ಎನ್ನುವ ಸಹೋದರಿಯಿದ್ದಾರೆ.

ತನ್ನ ಉದ್ಯೋಗದಂದಿಗೆ ಸಾಮಾಜಿಕ ಕಾಳಜಿಯ ಇವರ ಉದಾತ್ತ ಸೇವೆಗಳು ಹಲವಾರು ಕುಟುಂಬಗಳ ಪಾಲಿಗೆ ವರದಾನವಾಗಿದೆ. ಬರಲಿ ಸಂಪತ್ತು ಇವರಿಗೆ ಇನ್ನಷ್ಟು… ಮಾಡಲಿ ಸೇವೆ ಮತ್ತಷ್ಟು….. ಇದೇ ನಮ್ಮ ಆಶಯ.

(Copyrights owned by: billavaswarriors.com )


Related Posts

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »