TOP STORIES:

ಫುಡ್ ಫೆಸ್ಟ್ ನಿಂದ ಬಂದ ಹಣ ಬಡವರ್ಗಕ್ಜೆ ಮೀಸಲಿಡುತ್ತಿರುವ ಬಿರುವೆರ್ ಕುಡ್ಲ; 3 ಲಕ್ಷ ಮೌಲ್ಯದ ಕೃತಕ ಅಂಗಾಂಗ ಸಲಕರಣೆ ವಿತರಣೆ


ಮಂಗಳೂರು: ಅವರೆಲ್ಲಾ ತಿಂಗಳ ಸಂಬಳಕ್ಕಾಗಿ ದುಡಿಯುವ ಯುವಕರು. ಆದ್ರೆ ದುಡಿದ ಹಣದಲ್ಲಿ ಸಮಾಜ ಸೇವೆಗಾಗಿ ಮೀಸಲಿಟ್ಟು ಸೇವಾ ಕಾರ್ಯ ನಡೆಸುತ್ತಿರುವ ಆ ತಂಡ ಮನೆಯಿಲ್ಲದವರಿಗೆ ಮನೆ,ಅನಾರೋಗ್ಯಕ್ಕೀಡಾದವರಿಗೆ ಚಿಕಿತ್ಸೆಗೆ ಹಣಕಾಸಿನ ನೆರವು,ದಿನಸಿ ಕಿಟ್ ,ಆಂಬುಲೆನ್ಸ್ ಕೊಡುಗೆ ಹೀಗೆ ಹಲವು ವಿಧಧಲ್ಲಿ ಆಸರೆಯಾಗುತ್ತಿರುವ ಉದಯ ಪೂಜಾರಿ ನೇತೃತ್ವದ ಬಿರುವೆರ್ ಕುಡ್ಲ ಇದೀಗ ಕಳೆದ ಮೂರ್ನಾಲ್ಕು ವರ್ಷದಿಂದ ಫುಡ್ ಫೆಸ್ಟ್ ನಲ್ಲಿ ಭಾಗವಹಿಸಿ ಉಳಿದ ಲಕ್ಷ ಲಕ್ಷ ಲಾಭದ ಹಣವನ್ನು ಸಮಾಜದ ಬಡ ವರ್ಗಕ್ಕೆ ಮೀಸಲಿಟ್ಟು ಅರ್ಹರಿಗೆ ವಿತರಿಸುತ್ತಾ ಬರುತ್ತಿದೆ.

ಈ ಬಾರಿ ಲಾಭದಲ್ಲಿ ಬಂದ 3 ಲಕ್ಷ ರೂ 7 ಕುಟುಂಬಗಳಿಗೆ ಶನಿವಾರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ದಲ್ಲಿ ನಡೆದ ಸರಳ ಸಮಾರಂಭದಲ್ಲಿ ವಿತರಿಸಲಾಯಿತು.

ಇದೇ ಸಂದರ್ಭ ಆರು ಫಲಾನುಭವಿಗಳಿಗೆ ಬಿರುವೆರ್ ಕುಡ್ಲ ಹಾಗೂ ಫಿಟ್ ವೆಲ್ ಹೈಟೆಕ್ ಆರ್ಟಿಫಿಷೆಲ್ ಲಿಂಬ್ ಸೆಂಟರ್ ವತಿಯಿಂದ ವತಿಯಿಂದ 7 ಲಕ್ಷ ಮೊತ್ತದ ಕೃತಕ ಅಂಗಾಂಗ ಜೋಡಣೆ ಸಲಕರಣೆಯನ್ನು ಹಸ್ತಾಂತರಿಸಲಾಯಿತು.

ವಿಧಾನಸಭಾಧ್ಯಕ್ಷ ಯು.ಟಿ ಖಾದರ್, ಬಿಜೆಪಿ ಮಾಜಿ ರಾಜ್ಯಾಧ್ಯಾಕ್ಷ ನಳಿನ್ ಕುಮಾರ್ ಕಟೀಲ್ ,ಶಾಸಕರುಗಳಾದ ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ ವೈ,ಹರೀಶ್ ಪೂಂಜಾ, ಕಿಶೋರ್ ಕುಮಾರ್ ಪುತ್ತೂರು ಭಾಗವಹಿಸಿ ಅರ್ಹ ಫಲಾನುಭವಿಗಳಿಗೆ ವಿತರಿಸಿದರು.

ಇದೇ ಸಂದರ್ಭದಲ್ಲಿ ಬಿರುವೆರ್ ಕುಡ್ಲ ಸಂಘಟನೆ ಹುಟ್ಟು ಹಾಕಿ ಉದಯಪೂಜಾರಿ ಬಳ್ಳಾಲ್ ಬಾಗ್ ಬಡವರ ಕಣ್ಣೀರು ಒರೆಸುವ ಕೆಲಸ ಮಾಡುತ್ತಿದ್ದಾರೆ.ಸಮಾಜದ ಶಕ್ತಿಯಾಗಿ ಈ ಸಂಘಟನೆ ಬೆಳೆಯಲಿ ಎಂದು ಹಾರೈಸಿದರು. ಕ್ಷೇತ್ರದ ಮೊಕ್ತೇಸರ ಸಾಯಿರಾಮ್ , ಕೋಶಾಧಿಕಾರಿ ಪದ್ಮರಾಜ್ ,

ಗೆಜ್ಜೆಗಿರಿ ಕ್ಷೇತ್ರದ ರವಿ ಪೂಜಾರಿ ಚಿಲಿಂಬಿ, ನಮ್ಮಟಿವಿಯ ಡಾ.ಶಿವಶರಣ್ ಶೆಟ್ಟಿ,ನಮ್ಮಕುಡ್ಲ ವಾಹಿನಿಯ ಲೀಲಾಕ್ಷ ಕರ್ಕೇರ, ಕಿಶೋರ್ ಕೆ. ಅಧ್ಯಕ್ಷರು ಕೇಂದ್ರೀಯ ಸಮಿತಿ, ರಾಕೇಶ್ ಪೂಜಾರಿ ಬಲ್ಲಾಳ್ ಭಾಗ್. ಲತೀಶ್ ಪೂಜಾರಿ ಬಲ್ಲಾಳ್ ಭಾಗ್,ಜಿತೇಶ್ ಜೈನ್,ದರ್ಶನ್ ಜೈನ್,ಲಿಖಿತ್ ಕೋಟ್ಯಾನ್,ರಾಕೇಶ್ ಚಿಲಿಂಬಿ, ಲೋಹಿತ್ ಗಟ್ಟಿ ರೆನಿತ್ ರಾಜ್ , ಜೀವನ್ ತಲ್ವಾರ್ ಹಾಗೂ ಬಿರುವೆರ್ ಕುಡ್ಲ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ನಮ್ಮನ್ನಾಳುವ ಸರ್ಕಾರಗಳು ಎಷ್ಟೇ ಯೋಜನೆಗಳನ್ನು ಜಾರಿಗೊಳಿಸಿದ್ರು ಇಂದಿಗೂ ಸಹ ಸರಿಯಾದ ಸೂರು ಇಲ್ಲದ ಅದೆಷ್ಟೋ ಕುಟಂಬಗಳು ನಮ್ಮ ಜಿಲ್ಲೆ, ರಾಜ್ಯ, ದೇಶದಲ್ಲಿವೆ. ಆದ್ರೆ ಸರ್ಕಾರದ ಯೋಜನೆಗಳಿಗೆ ಕಾಯದೆ ಸಮಾಜದಲ್ಲಿರುವ ಅಶಕ್ತರ ಬಾಳಲ್ಲಿ ಬೆಳಕು ಮೂಡಿಸುವ ಕೆಲಸವನ್ನು ಮಂಗಳೂರಿನ ಯುವಕರ ತಂಡ ಬಿರುವೆರ್ ಕುಡ್ಲ ಮಾಡುತ್ತಿದೆ.

ಈ ಬಿರುವೆರ್ ಕುಡ್ಲ ಸಂಘಟನೆಯಲ್ಲಿ ನಿತ್ಯದ, ತಿಂಗಳ ಸಂಬಳಕ್ಕಾಗಿ ದುಡಿಯುವ ಯುವಕರಿಂದ ಹಿಡಿದು ಸಣ್ಣಪುಟ್ಟ ಉದ್ಯಮ ನಡೆಸುವ ಯುವಕರು ಇದ್ದಾರೆ. ಎಂಟು ವರ್ಷದ ಹಿಂದೆ ಆರಂಭಿಸಲಾದ ಈ ಸಂಘಟನೆ ಅದೆಷ್ಟೋ ಕುಟುಂಬಗಳ ಕಣ್ಣೀರು ಒರೆಸುತ್ತಾ ಬರುತ್ತಿದೆ.

ಒಟ್ಟ 10ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ಅಶಕ್ತ ಕುಟುಂಬಗಳ ಸಹಾಯಕ್ಕಾಗಿ ನೀಡಿದೆ.

ಮನೆ ನಿರ್ಮಾಣ ಮಾತ್ರವಲ್ಲದೆ ಪ್ರತಿ ತಿಂಗಳು ಒಬ್ಬೊಬ್ಬ ಅನಾರೋಗ್ಯ ಪೀಡಿತರ ಚಿಕಿತ್ಸೆಗಾಗಿ 50 ಸಾವಿರ ಧನ ಸಹಾಯ ನೀಡುತ್ತಾ ಬಂದಿದೆ. ಇದರ ಜೊತೆ ಉಚಿತ ಆ್ಯಂಬುಲೆನ್ಸ್ ಸೇವೆಯನ್ನು ಒದಗಿಸುತ್ತಿದೆ. ಈ ಸಂಘಟನೆಯಲ್ಲಿ ಮೂರು ಜಿಲ್ಲೆಯಲ್ಲಿ ಒಟ್ಟು 24 ಘಟಕಗಳಿದ್ದು ಇದರ ಸದಸ್ಯರೆಲ್ಲಾ ಒಟ್ಟು ಸೇರಿ ಸೇವಾ ಯೋಜನೆಯನ್ನು ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದ್ದಾರೆ.

ಯಾವುದೇ ಜಾತಿ, ಧರ್ಮದ ಭೇದವಿಲ್ಲದೆ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ಸಂದೇಶದಡಿ ಈ ಯುವಕರ ತಂಡ ಸೇವೆ ಮಾಡುತ್ತಿದೆ. ತಮ್ಮ ಮನೆಯಲ್ಲಿ ಸರಿಯಾದ ಸೌಕರ್ಯವಿಲ್ಲದಿದ್ದರೂ ಸಹ ಎಲ್ಲರೂ ಒಟ್ಟು ಸೇರಿ ತಮಗಿಂತಲೂ ಕೆಳ ಹಂತದಲ್ಲಿರುವ ಬಡವರ ಕಣ್ಣೀರ ಒರೆಸುವ ಕೆಲಸ ಮಾಡುತ್ತಿರುವುದು ನಿಜಕ್ಕೂ ಶ್ಲಾಘನೀಯವೇ ಸರಿ.

ಒಟ್ಟಿನಲ್ಲಿ ಈ ಸಂಘಟನೆ ಮಾಡುತ್ತಿರುವ ಈ ಸೇವಾ ಕಾರ್ಯ ಇತರರಿಗೂ ಮಾದರಿಯಾಗಿ ಇನ್ನಷ್ಟು ಮಂದಿ ಅಶಕ್ತರ ಬಾಳಿಗೆ ಬೆಳಕಾಗಲಿ ಎಂಬುದೇ ನಮ್ಮ ಆಶಯ.


Related Posts

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »