TOP STORIES:

ಫುಡ್ ಫೆಸ್ಟ್ ನಿಂದ ಬಂದ ಹಣ ಬಡವರ್ಗಕ್ಜೆ ಮೀಸಲಿಡುತ್ತಿರುವ ಬಿರುವೆರ್ ಕುಡ್ಲ; 3 ಲಕ್ಷ ಮೌಲ್ಯದ ಕೃತಕ ಅಂಗಾಂಗ ಸಲಕರಣೆ ವಿತರಣೆ


ಮಂಗಳೂರು: ಅವರೆಲ್ಲಾ ತಿಂಗಳ ಸಂಬಳಕ್ಕಾಗಿ ದುಡಿಯುವ ಯುವಕರು. ಆದ್ರೆ ದುಡಿದ ಹಣದಲ್ಲಿ ಸಮಾಜ ಸೇವೆಗಾಗಿ ಮೀಸಲಿಟ್ಟು ಸೇವಾ ಕಾರ್ಯ ನಡೆಸುತ್ತಿರುವ ಆ ತಂಡ ಮನೆಯಿಲ್ಲದವರಿಗೆ ಮನೆ,ಅನಾರೋಗ್ಯಕ್ಕೀಡಾದವರಿಗೆ ಚಿಕಿತ್ಸೆಗೆ ಹಣಕಾಸಿನ ನೆರವು,ದಿನಸಿ ಕಿಟ್ ,ಆಂಬುಲೆನ್ಸ್ ಕೊಡುಗೆ ಹೀಗೆ ಹಲವು ವಿಧಧಲ್ಲಿ ಆಸರೆಯಾಗುತ್ತಿರುವ ಉದಯ ಪೂಜಾರಿ ನೇತೃತ್ವದ ಬಿರುವೆರ್ ಕುಡ್ಲ ಇದೀಗ ಕಳೆದ ಮೂರ್ನಾಲ್ಕು ವರ್ಷದಿಂದ ಫುಡ್ ಫೆಸ್ಟ್ ನಲ್ಲಿ ಭಾಗವಹಿಸಿ ಉಳಿದ ಲಕ್ಷ ಲಕ್ಷ ಲಾಭದ ಹಣವನ್ನು ಸಮಾಜದ ಬಡ ವರ್ಗಕ್ಕೆ ಮೀಸಲಿಟ್ಟು ಅರ್ಹರಿಗೆ ವಿತರಿಸುತ್ತಾ ಬರುತ್ತಿದೆ.

ಈ ಬಾರಿ ಲಾಭದಲ್ಲಿ ಬಂದ 3 ಲಕ್ಷ ರೂ 7 ಕುಟುಂಬಗಳಿಗೆ ಶನಿವಾರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ದಲ್ಲಿ ನಡೆದ ಸರಳ ಸಮಾರಂಭದಲ್ಲಿ ವಿತರಿಸಲಾಯಿತು.

ಇದೇ ಸಂದರ್ಭ ಆರು ಫಲಾನುಭವಿಗಳಿಗೆ ಬಿರುವೆರ್ ಕುಡ್ಲ ಹಾಗೂ ಫಿಟ್ ವೆಲ್ ಹೈಟೆಕ್ ಆರ್ಟಿಫಿಷೆಲ್ ಲಿಂಬ್ ಸೆಂಟರ್ ವತಿಯಿಂದ ವತಿಯಿಂದ 7 ಲಕ್ಷ ಮೊತ್ತದ ಕೃತಕ ಅಂಗಾಂಗ ಜೋಡಣೆ ಸಲಕರಣೆಯನ್ನು ಹಸ್ತಾಂತರಿಸಲಾಯಿತು.

ವಿಧಾನಸಭಾಧ್ಯಕ್ಷ ಯು.ಟಿ ಖಾದರ್, ಬಿಜೆಪಿ ಮಾಜಿ ರಾಜ್ಯಾಧ್ಯಾಕ್ಷ ನಳಿನ್ ಕುಮಾರ್ ಕಟೀಲ್ ,ಶಾಸಕರುಗಳಾದ ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ ವೈ,ಹರೀಶ್ ಪೂಂಜಾ, ಕಿಶೋರ್ ಕುಮಾರ್ ಪುತ್ತೂರು ಭಾಗವಹಿಸಿ ಅರ್ಹ ಫಲಾನುಭವಿಗಳಿಗೆ ವಿತರಿಸಿದರು.

ಇದೇ ಸಂದರ್ಭದಲ್ಲಿ ಬಿರುವೆರ್ ಕುಡ್ಲ ಸಂಘಟನೆ ಹುಟ್ಟು ಹಾಕಿ ಉದಯಪೂಜಾರಿ ಬಳ್ಳಾಲ್ ಬಾಗ್ ಬಡವರ ಕಣ್ಣೀರು ಒರೆಸುವ ಕೆಲಸ ಮಾಡುತ್ತಿದ್ದಾರೆ.ಸಮಾಜದ ಶಕ್ತಿಯಾಗಿ ಈ ಸಂಘಟನೆ ಬೆಳೆಯಲಿ ಎಂದು ಹಾರೈಸಿದರು. ಕ್ಷೇತ್ರದ ಮೊಕ್ತೇಸರ ಸಾಯಿರಾಮ್ , ಕೋಶಾಧಿಕಾರಿ ಪದ್ಮರಾಜ್ ,

ಗೆಜ್ಜೆಗಿರಿ ಕ್ಷೇತ್ರದ ರವಿ ಪೂಜಾರಿ ಚಿಲಿಂಬಿ, ನಮ್ಮಟಿವಿಯ ಡಾ.ಶಿವಶರಣ್ ಶೆಟ್ಟಿ,ನಮ್ಮಕುಡ್ಲ ವಾಹಿನಿಯ ಲೀಲಾಕ್ಷ ಕರ್ಕೇರ, ಕಿಶೋರ್ ಕೆ. ಅಧ್ಯಕ್ಷರು ಕೇಂದ್ರೀಯ ಸಮಿತಿ, ರಾಕೇಶ್ ಪೂಜಾರಿ ಬಲ್ಲಾಳ್ ಭಾಗ್. ಲತೀಶ್ ಪೂಜಾರಿ ಬಲ್ಲಾಳ್ ಭಾಗ್,ಜಿತೇಶ್ ಜೈನ್,ದರ್ಶನ್ ಜೈನ್,ಲಿಖಿತ್ ಕೋಟ್ಯಾನ್,ರಾಕೇಶ್ ಚಿಲಿಂಬಿ, ಲೋಹಿತ್ ಗಟ್ಟಿ ರೆನಿತ್ ರಾಜ್ , ಜೀವನ್ ತಲ್ವಾರ್ ಹಾಗೂ ಬಿರುವೆರ್ ಕುಡ್ಲ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ನಮ್ಮನ್ನಾಳುವ ಸರ್ಕಾರಗಳು ಎಷ್ಟೇ ಯೋಜನೆಗಳನ್ನು ಜಾರಿಗೊಳಿಸಿದ್ರು ಇಂದಿಗೂ ಸಹ ಸರಿಯಾದ ಸೂರು ಇಲ್ಲದ ಅದೆಷ್ಟೋ ಕುಟಂಬಗಳು ನಮ್ಮ ಜಿಲ್ಲೆ, ರಾಜ್ಯ, ದೇಶದಲ್ಲಿವೆ. ಆದ್ರೆ ಸರ್ಕಾರದ ಯೋಜನೆಗಳಿಗೆ ಕಾಯದೆ ಸಮಾಜದಲ್ಲಿರುವ ಅಶಕ್ತರ ಬಾಳಲ್ಲಿ ಬೆಳಕು ಮೂಡಿಸುವ ಕೆಲಸವನ್ನು ಮಂಗಳೂರಿನ ಯುವಕರ ತಂಡ ಬಿರುವೆರ್ ಕುಡ್ಲ ಮಾಡುತ್ತಿದೆ.

ಈ ಬಿರುವೆರ್ ಕುಡ್ಲ ಸಂಘಟನೆಯಲ್ಲಿ ನಿತ್ಯದ, ತಿಂಗಳ ಸಂಬಳಕ್ಕಾಗಿ ದುಡಿಯುವ ಯುವಕರಿಂದ ಹಿಡಿದು ಸಣ್ಣಪುಟ್ಟ ಉದ್ಯಮ ನಡೆಸುವ ಯುವಕರು ಇದ್ದಾರೆ. ಎಂಟು ವರ್ಷದ ಹಿಂದೆ ಆರಂಭಿಸಲಾದ ಈ ಸಂಘಟನೆ ಅದೆಷ್ಟೋ ಕುಟುಂಬಗಳ ಕಣ್ಣೀರು ಒರೆಸುತ್ತಾ ಬರುತ್ತಿದೆ.

ಒಟ್ಟ 10ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ಅಶಕ್ತ ಕುಟುಂಬಗಳ ಸಹಾಯಕ್ಕಾಗಿ ನೀಡಿದೆ.

ಮನೆ ನಿರ್ಮಾಣ ಮಾತ್ರವಲ್ಲದೆ ಪ್ರತಿ ತಿಂಗಳು ಒಬ್ಬೊಬ್ಬ ಅನಾರೋಗ್ಯ ಪೀಡಿತರ ಚಿಕಿತ್ಸೆಗಾಗಿ 50 ಸಾವಿರ ಧನ ಸಹಾಯ ನೀಡುತ್ತಾ ಬಂದಿದೆ. ಇದರ ಜೊತೆ ಉಚಿತ ಆ್ಯಂಬುಲೆನ್ಸ್ ಸೇವೆಯನ್ನು ಒದಗಿಸುತ್ತಿದೆ. ಈ ಸಂಘಟನೆಯಲ್ಲಿ ಮೂರು ಜಿಲ್ಲೆಯಲ್ಲಿ ಒಟ್ಟು 24 ಘಟಕಗಳಿದ್ದು ಇದರ ಸದಸ್ಯರೆಲ್ಲಾ ಒಟ್ಟು ಸೇರಿ ಸೇವಾ ಯೋಜನೆಯನ್ನು ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದ್ದಾರೆ.

ಯಾವುದೇ ಜಾತಿ, ಧರ್ಮದ ಭೇದವಿಲ್ಲದೆ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ಸಂದೇಶದಡಿ ಈ ಯುವಕರ ತಂಡ ಸೇವೆ ಮಾಡುತ್ತಿದೆ. ತಮ್ಮ ಮನೆಯಲ್ಲಿ ಸರಿಯಾದ ಸೌಕರ್ಯವಿಲ್ಲದಿದ್ದರೂ ಸಹ ಎಲ್ಲರೂ ಒಟ್ಟು ಸೇರಿ ತಮಗಿಂತಲೂ ಕೆಳ ಹಂತದಲ್ಲಿರುವ ಬಡವರ ಕಣ್ಣೀರ ಒರೆಸುವ ಕೆಲಸ ಮಾಡುತ್ತಿರುವುದು ನಿಜಕ್ಕೂ ಶ್ಲಾಘನೀಯವೇ ಸರಿ.

ಒಟ್ಟಿನಲ್ಲಿ ಈ ಸಂಘಟನೆ ಮಾಡುತ್ತಿರುವ ಈ ಸೇವಾ ಕಾರ್ಯ ಇತರರಿಗೂ ಮಾದರಿಯಾಗಿ ಇನ್ನಷ್ಟು ಮಂದಿ ಅಶಕ್ತರ ಬಾಳಿಗೆ ಬೆಳಕಾಗಲಿ ಎಂಬುದೇ ನಮ್ಮ ಆಶಯ.


Related Posts

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »