TOP STORIES:

FOLLOW US

ಫುಡ್ ಫೆಸ್ಟ್ ನಿಂದ ಬಂದ ಹಣ ಬಡವರ್ಗಕ್ಜೆ ಮೀಸಲಿಡುತ್ತಿರುವ ಬಿರುವೆರ್ ಕುಡ್ಲ; 3 ಲಕ್ಷ ಮೌಲ್ಯದ ಕೃತಕ ಅಂಗಾಂಗ ಸಲಕರಣೆ ವಿತರಣೆ


ಮಂಗಳೂರು: ಅವರೆಲ್ಲಾ ತಿಂಗಳ ಸಂಬಳಕ್ಕಾಗಿ ದುಡಿಯುವ ಯುವಕರು. ಆದ್ರೆ ದುಡಿದ ಹಣದಲ್ಲಿ ಸಮಾಜ ಸೇವೆಗಾಗಿ ಮೀಸಲಿಟ್ಟು ಸೇವಾ ಕಾರ್ಯ ನಡೆಸುತ್ತಿರುವ ಆ ತಂಡ ಮನೆಯಿಲ್ಲದವರಿಗೆ ಮನೆ,ಅನಾರೋಗ್ಯಕ್ಕೀಡಾದವರಿಗೆ ಚಿಕಿತ್ಸೆಗೆ ಹಣಕಾಸಿನ ನೆರವು,ದಿನಸಿ ಕಿಟ್ ,ಆಂಬುಲೆನ್ಸ್ ಕೊಡುಗೆ ಹೀಗೆ ಹಲವು ವಿಧಧಲ್ಲಿ ಆಸರೆಯಾಗುತ್ತಿರುವ ಉದಯ ಪೂಜಾರಿ ನೇತೃತ್ವದ ಬಿರುವೆರ್ ಕುಡ್ಲ ಇದೀಗ ಕಳೆದ ಮೂರ್ನಾಲ್ಕು ವರ್ಷದಿಂದ ಫುಡ್ ಫೆಸ್ಟ್ ನಲ್ಲಿ ಭಾಗವಹಿಸಿ ಉಳಿದ ಲಕ್ಷ ಲಕ್ಷ ಲಾಭದ ಹಣವನ್ನು ಸಮಾಜದ ಬಡ ವರ್ಗಕ್ಕೆ ಮೀಸಲಿಟ್ಟು ಅರ್ಹರಿಗೆ ವಿತರಿಸುತ್ತಾ ಬರುತ್ತಿದೆ.

ಈ ಬಾರಿ ಲಾಭದಲ್ಲಿ ಬಂದ 3 ಲಕ್ಷ ರೂ 7 ಕುಟುಂಬಗಳಿಗೆ ಶನಿವಾರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ದಲ್ಲಿ ನಡೆದ ಸರಳ ಸಮಾರಂಭದಲ್ಲಿ ವಿತರಿಸಲಾಯಿತು.

ಇದೇ ಸಂದರ್ಭ ಆರು ಫಲಾನುಭವಿಗಳಿಗೆ ಬಿರುವೆರ್ ಕುಡ್ಲ ಹಾಗೂ ಫಿಟ್ ವೆಲ್ ಹೈಟೆಕ್ ಆರ್ಟಿಫಿಷೆಲ್ ಲಿಂಬ್ ಸೆಂಟರ್ ವತಿಯಿಂದ ವತಿಯಿಂದ 7 ಲಕ್ಷ ಮೊತ್ತದ ಕೃತಕ ಅಂಗಾಂಗ ಜೋಡಣೆ ಸಲಕರಣೆಯನ್ನು ಹಸ್ತಾಂತರಿಸಲಾಯಿತು.

ವಿಧಾನಸಭಾಧ್ಯಕ್ಷ ಯು.ಟಿ ಖಾದರ್, ಬಿಜೆಪಿ ಮಾಜಿ ರಾಜ್ಯಾಧ್ಯಾಕ್ಷ ನಳಿನ್ ಕುಮಾರ್ ಕಟೀಲ್ ,ಶಾಸಕರುಗಳಾದ ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ ವೈ,ಹರೀಶ್ ಪೂಂಜಾ, ಕಿಶೋರ್ ಕುಮಾರ್ ಪುತ್ತೂರು ಭಾಗವಹಿಸಿ ಅರ್ಹ ಫಲಾನುಭವಿಗಳಿಗೆ ವಿತರಿಸಿದರು.

ಇದೇ ಸಂದರ್ಭದಲ್ಲಿ ಬಿರುವೆರ್ ಕುಡ್ಲ ಸಂಘಟನೆ ಹುಟ್ಟು ಹಾಕಿ ಉದಯಪೂಜಾರಿ ಬಳ್ಳಾಲ್ ಬಾಗ್ ಬಡವರ ಕಣ್ಣೀರು ಒರೆಸುವ ಕೆಲಸ ಮಾಡುತ್ತಿದ್ದಾರೆ.ಸಮಾಜದ ಶಕ್ತಿಯಾಗಿ ಈ ಸಂಘಟನೆ ಬೆಳೆಯಲಿ ಎಂದು ಹಾರೈಸಿದರು. ಕ್ಷೇತ್ರದ ಮೊಕ್ತೇಸರ ಸಾಯಿರಾಮ್ , ಕೋಶಾಧಿಕಾರಿ ಪದ್ಮರಾಜ್ ,

ಗೆಜ್ಜೆಗಿರಿ ಕ್ಷೇತ್ರದ ರವಿ ಪೂಜಾರಿ ಚಿಲಿಂಬಿ, ನಮ್ಮಟಿವಿಯ ಡಾ.ಶಿವಶರಣ್ ಶೆಟ್ಟಿ,ನಮ್ಮಕುಡ್ಲ ವಾಹಿನಿಯ ಲೀಲಾಕ್ಷ ಕರ್ಕೇರ, ಕಿಶೋರ್ ಕೆ. ಅಧ್ಯಕ್ಷರು ಕೇಂದ್ರೀಯ ಸಮಿತಿ, ರಾಕೇಶ್ ಪೂಜಾರಿ ಬಲ್ಲಾಳ್ ಭಾಗ್. ಲತೀಶ್ ಪೂಜಾರಿ ಬಲ್ಲಾಳ್ ಭಾಗ್,ಜಿತೇಶ್ ಜೈನ್,ದರ್ಶನ್ ಜೈನ್,ಲಿಖಿತ್ ಕೋಟ್ಯಾನ್,ರಾಕೇಶ್ ಚಿಲಿಂಬಿ, ಲೋಹಿತ್ ಗಟ್ಟಿ ರೆನಿತ್ ರಾಜ್ , ಜೀವನ್ ತಲ್ವಾರ್ ಹಾಗೂ ಬಿರುವೆರ್ ಕುಡ್ಲ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ನಮ್ಮನ್ನಾಳುವ ಸರ್ಕಾರಗಳು ಎಷ್ಟೇ ಯೋಜನೆಗಳನ್ನು ಜಾರಿಗೊಳಿಸಿದ್ರು ಇಂದಿಗೂ ಸಹ ಸರಿಯಾದ ಸೂರು ಇಲ್ಲದ ಅದೆಷ್ಟೋ ಕುಟಂಬಗಳು ನಮ್ಮ ಜಿಲ್ಲೆ, ರಾಜ್ಯ, ದೇಶದಲ್ಲಿವೆ. ಆದ್ರೆ ಸರ್ಕಾರದ ಯೋಜನೆಗಳಿಗೆ ಕಾಯದೆ ಸಮಾಜದಲ್ಲಿರುವ ಅಶಕ್ತರ ಬಾಳಲ್ಲಿ ಬೆಳಕು ಮೂಡಿಸುವ ಕೆಲಸವನ್ನು ಮಂಗಳೂರಿನ ಯುವಕರ ತಂಡ ಬಿರುವೆರ್ ಕುಡ್ಲ ಮಾಡುತ್ತಿದೆ.

ಈ ಬಿರುವೆರ್ ಕುಡ್ಲ ಸಂಘಟನೆಯಲ್ಲಿ ನಿತ್ಯದ, ತಿಂಗಳ ಸಂಬಳಕ್ಕಾಗಿ ದುಡಿಯುವ ಯುವಕರಿಂದ ಹಿಡಿದು ಸಣ್ಣಪುಟ್ಟ ಉದ್ಯಮ ನಡೆಸುವ ಯುವಕರು ಇದ್ದಾರೆ. ಎಂಟು ವರ್ಷದ ಹಿಂದೆ ಆರಂಭಿಸಲಾದ ಈ ಸಂಘಟನೆ ಅದೆಷ್ಟೋ ಕುಟುಂಬಗಳ ಕಣ್ಣೀರು ಒರೆಸುತ್ತಾ ಬರುತ್ತಿದೆ.

ಒಟ್ಟ 10ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ಅಶಕ್ತ ಕುಟುಂಬಗಳ ಸಹಾಯಕ್ಕಾಗಿ ನೀಡಿದೆ.

ಮನೆ ನಿರ್ಮಾಣ ಮಾತ್ರವಲ್ಲದೆ ಪ್ರತಿ ತಿಂಗಳು ಒಬ್ಬೊಬ್ಬ ಅನಾರೋಗ್ಯ ಪೀಡಿತರ ಚಿಕಿತ್ಸೆಗಾಗಿ 50 ಸಾವಿರ ಧನ ಸಹಾಯ ನೀಡುತ್ತಾ ಬಂದಿದೆ. ಇದರ ಜೊತೆ ಉಚಿತ ಆ್ಯಂಬುಲೆನ್ಸ್ ಸೇವೆಯನ್ನು ಒದಗಿಸುತ್ತಿದೆ. ಈ ಸಂಘಟನೆಯಲ್ಲಿ ಮೂರು ಜಿಲ್ಲೆಯಲ್ಲಿ ಒಟ್ಟು 24 ಘಟಕಗಳಿದ್ದು ಇದರ ಸದಸ್ಯರೆಲ್ಲಾ ಒಟ್ಟು ಸೇರಿ ಸೇವಾ ಯೋಜನೆಯನ್ನು ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದ್ದಾರೆ.

ಯಾವುದೇ ಜಾತಿ, ಧರ್ಮದ ಭೇದವಿಲ್ಲದೆ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ಸಂದೇಶದಡಿ ಈ ಯುವಕರ ತಂಡ ಸೇವೆ ಮಾಡುತ್ತಿದೆ. ತಮ್ಮ ಮನೆಯಲ್ಲಿ ಸರಿಯಾದ ಸೌಕರ್ಯವಿಲ್ಲದಿದ್ದರೂ ಸಹ ಎಲ್ಲರೂ ಒಟ್ಟು ಸೇರಿ ತಮಗಿಂತಲೂ ಕೆಳ ಹಂತದಲ್ಲಿರುವ ಬಡವರ ಕಣ್ಣೀರ ಒರೆಸುವ ಕೆಲಸ ಮಾಡುತ್ತಿರುವುದು ನಿಜಕ್ಕೂ ಶ್ಲಾಘನೀಯವೇ ಸರಿ.

ಒಟ್ಟಿನಲ್ಲಿ ಈ ಸಂಘಟನೆ ಮಾಡುತ್ತಿರುವ ಈ ಸೇವಾ ಕಾರ್ಯ ಇತರರಿಗೂ ಮಾದರಿಯಾಗಿ ಇನ್ನಷ್ಟು ಮಂದಿ ಅಶಕ್ತರ ಬಾಳಿಗೆ ಬೆಳಕಾಗಲಿ ಎಂಬುದೇ ನಮ್ಮ ಆಶಯ.


Share:

More Posts

Category

Send Us A Message

Related Posts

ಶ್ರೀ ಗುರು ಸೇವಾ ಸಮಿತಿ ಬಹರೈನ್ ಬಿಲ್ಲವಾಸ್ ಕೂಟದ ವತಿಯಿಂದ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ


Share       ಶ್ರೀ ಗುರು ಸೇವಾ ಸಮಿತಿ ಬಹರೈನ್ ಬಿಲ್ಲವಾಸ್ ಕೂಟದ ವತಿಯಿಂದ 14-02-2025 ರಂದು ಅಧ್ಯಕ್ಷರಾದ ಹರೀಶ್ ಪೂಜಾರಿ ಅವರ ಅಧ್ಯಕ್ಷತೆಯಲ್ಲಿಂದು ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಹರೈನ್ ನಲ್ಲಿ ಬಿಡುಗಡೆ


Read More »

ಸರ್ಕಾರಿ ಆಸ್ಪತ್ರೆಗಳಲ್ಲಿದೆ ಗುಣಮಟ್ಟದ ಚಿಕಿತ್ಸೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಶ್ಲಾಘನೆ


Share       ಮಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲೂ ಗುಣಮಟ್ಟದ ಚಿಕಿತ್ಸೆ ಸಿಗುತ್ತದೆ ಎನ್ನುವುದಕ್ಕೆ ವೆನ್ಲಾಕ್ ಆಸ್ಪತ್ರೆ ಉತ್ತಮ ನಿದರ್ಶನ. ಸರ್ಕಾರಿ ಆಸ್ಪತ್ರೆಗಳ ಬಗ್ಗೆ ತಾತ್ಸಾರ ಬೇಡ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.


Read More »

ಗೆಜ್ಜೆಗಿರಿಯ ಮೂಲಕ ಬಿಲ್ಲವ ಸಮಾಜಕ್ಕೆ ಸಂಘಟಾನಾತ್ಮಕ ಬಲ ತುಂಬಲು ಹೊರಟ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಗೆ ಅಭಿನಂದನೆ


Share       ಬಿಲ್ಲವ ಸಮಾಜ ಸೇವಾ ಸಂಘ(ರಿ) ಕುಂದಾಪುರ ಇದರ ಅಧ್ಯಕ್ಷರಾದ ಅಶೋಕ್ ಪೂಜಾರಿ ಬಿಜಾಡಿ ಹಾಗೂ ಸಂಘದ ಪಧಾಧಿಕಾರಿಗಳು  ಬ್ರಹ್ಮ ಶ್ರೀ ನಾರಾಯಣ ಗುರುಗಳ ವಿದ್ಯೆಯಿಂದ ಸ್ವತಂತ್ರರಾಗಿರಿ ಸಂಘಟನೆಯಿಂದ  ಬಲಯುತರಾಗಿ ಎಂಬ ತತ್ವದಂತೆ  ಬಿಲ್ಲವ


Read More »

ರಕ್ತಹೀನತೆಯಿಂದ ಬಳಲುತ್ತಿರುವವರು ಹುರುಳಿ ಸೇವನೆ ಮಾಡಿ


Share       ಹುರುಳಿ ನಾಲಿಗೆಗೆ ರುಚಿ ನೀಡುವುದರ ಜೊತೆಗೆ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಏಕೆಂದರೆ ಇದು ಪೌಷ್ಠಿಕಾಂಶಗಳಿಂದ ಸಮೃದ್ಧವಾಗಿದ್ದು, ಪ್ರೋಟೀನ್, ಫೈಬರ್, ಜೀವಸತ್ವಗಳು ಮತ್ತು ಖನಿಜಗಳ ಭಂಡಾರವಾಗಿದೆ. ಇದು ದೇಹಕ್ಕೆ ಅಗತ್ಯ ಪ್ರಯೋಜನಗಳನ್ನು ನೀಡುವ ಧಾನ್ಯವಾಗಿದೆ.


Read More »

ಬಂಟ್ವಾಳ ತಾಲೂಕು ಬಿಲ್ಲವ ಸಂಘದಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ


Share       ಬಂಟ್ವಾಳ : ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಆಡಳಿತ ಸಮಿತಿಯ ಪದಾಧಿಕಾರಿಗಳು ಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸಕ್ಕೆ ಆಮಂತ್ರಿಸಿದರು. ಗೆಜ್ಜೆಗಿರಿ ಕ್ಷೇತ್ರಾಡಳಿತ


Read More »

ಫುಡ್ ಫೆಸ್ಟ್ ನಿಂದ ಬಂದ ಹಣ ಬಡವರ್ಗಕ್ಜೆ ಮೀಸಲಿಡುತ್ತಿರುವ ಬಿರುವೆರ್ ಕುಡ್ಲ; 3 ಲಕ್ಷ ಮೌಲ್ಯದ ಕೃತಕ ಅಂಗಾಂಗ ಸಲಕರಣೆ ವಿತರಣೆ


Share       ಮಂಗಳೂರು: ಅವರೆಲ್ಲಾ ತಿಂಗಳ ಸಂಬಳಕ್ಕಾಗಿ ದುಡಿಯುವ ಯುವಕರು. ಆದ್ರೆ ದುಡಿದ ಹಣದಲ್ಲಿ ಸಮಾಜ ಸೇವೆಗಾಗಿ ಮೀಸಲಿಟ್ಟು ಸೇವಾ ಕಾರ್ಯ ನಡೆಸುತ್ತಿರುವ ಆ ತಂಡ ಮನೆಯಿಲ್ಲದವರಿಗೆ ಮನೆ,ಅನಾರೋಗ್ಯಕ್ಕೀಡಾದವರಿಗೆ ಚಿಕಿತ್ಸೆಗೆ ಹಣಕಾಸಿನ ನೆರವು,ದಿನಸಿ ಕಿಟ್ ,ಆಂಬುಲೆನ್ಸ್


Read More »