TOP STORIES:

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್ ಬಾಗ್ ನೇತೃತ್ವದಲ್ಲಿ ಲೇಡಿಹಿಲ್ ಬ್ರಹ್ಮಶ್ರೀ ನಾರಾಯಣ ಗುರು ಸರ್ಕಲ್ ನಲ್ಲಿ ನಡೆಯಿತು.

ಮೇಜರ್ ದಾಮೋದರ್ ಸುವರ್ಣ ಯೆಯ್ಯಾಡಿ ಇವರು
ರಾಷ್ಟ್ರ ಧ್ವಜಾರೋಹಣ ಗೈದು ದೇಶದ ಸ್ವಾತಂತ್ರ್ಯ ತ್ಯಾಗ ಬಲಿದಾನದ ಮೂಲಕ ಲಭಿಸಿದೆ.ಕಾನೂನು ಪರಿಪಾಲನೆ ಜತೆಗೆ ಸ್ವಾತಂತ್ರ್ಯವನ್ನು ಜವಾಬ್ದಾರಿಯುತವಾಗಿ ಅನುಭವಿಸಬೇಕು. ದೇಶದ ಏಳಿಗೆಗಾಗಿ ಕೊಡುಗೆ ನೀಡಬೇಕೆಂದರು.

ಸಹನಾ ಕುಂದರ್ ಸೂಡಾ ಮಾತನಾಡಿ, ದೇಶದಲ್ಲಿ ನಮ್ಮ ಯುವ ಸಮೂಹಕ್ಕೆ ಸ್ವಾತಂತ್ರದ ಅರ್ಥಪೂರ್ಣ ಆಚರಣೆ ಹಾಗೂ ಮಹಿಳಾ ಸಮಾಜದ ಮೇಲೆ ನಡೆಯುತ್ತಿರುವ ಅನಾಚಾರವನ್ನು ತಡೆಗಟ್ಟಲು ಬೇಕಾದ ಸೂಕ್ತ ಮಾರ್ಗದರ್ಶನದ ಅಗತ್ಯವಿದ್ದು ಇದನ್ನು ನಾವೆಲ್ಲಾ ಪರಿಗಣಿಸಿ ಜೀವನ ನಡೆಸಬೇಕು ಎಂದರು.

ಬಿರುವೆರ್ ಕುಡ್ಲದ ಯುವಕರ ಸಮೂಹವು ಕಳೆದ ಹತ್ತು ವರ್ಷಗಳಿಂದ ಯಾವುದೇ ಜಾತಿ ಮತ ವನ್ನು ನೋಡದೆ ಬಡ ವರ್ಗಕ್ಕೆ ಆರ್ಥಕ ನೆರವು ಹಾಗೂ ಅರ್ಹ ಬಡ ಕುಟುಂಬಕ್ಕೆ ಮನೆ ಕಟ್ಟಿ ಕೊಡುತ್ತಿರುವ ಪುಣ್ಯದ ಕೆಲಸವನ್ನು ಮಾಡುತ್ತಾ ಬರುತ್ತಿದೆ. ಇದರ ಜತೆಗೆ ಬಿರುವೆರ್ ಕುಡ್ಲವು ಜನಪರ ಸಮಾಜ ಸೇವಾ ಕಾರ್ಯ ನಡೆಸುತ್ತಾ ಬರುತ್ತಿದೆ.

ಈ ಸಂಸ್ಥೆ ಅಸ್ಥಿತ್ವಕ್ಕೆ ಬಂದಾಗಿನಿಂದ ಸುಮಾರು 10 ಕೋ.ರೂಗಳಷ್ಟು ನಿಧಿಯನ್ನು ಅಶಕ್ತರ ಚಿಕಿತ್ಸೆಗೆ, ಶಿಕ್ಷಣಕ್ಕೆ, ವಿವಿಧ ಸವಲತ್ತು ವಿತರಣೆಗೆ ನೀಡಿದೆ.

ಆಂಬುಲೆನ್ಸ್ ಸೇವೆ,ಕೊರೊನಾ ಸಂದರ್ಭ ನೆರವು ಹಾಗೂ ಇದೀಗ 9ನೇ ಮನೆ ನಿರ್ಮಾಣ ಮಾಡಿ ಬಡ ವರ್ಗಕ್ಕೆ ಶೀಘ್ರ ಹಸ್ತಾಂತರ ಮಾಡಲಿದೆ.ಇದೆಲ್ಲಾ ಇತರ ಸಂಘಟನೆಗಳಿಗೆ ಮಾದರಿಯಾಗಿದೆ.

ಪ್ರಮೋದ್ ಬಳ್ಳಾಲ್ ಭಾಗ್, ಲತೀಶ್ ಪೂಜಾರಿ ಬಳ್ಳಾಲ್ ಭಾಗ್,ವಿದ್ಯಾ ರಾಕೇಶ್ ಪ್ರವೀಣ್ ಎಸ್ ಸುವರ್ಣ ಬಗಂಬಿಲ
ಧನ್ ರಾಜ್ ಪೂಜಾರಿ ಚಿಲಿಂಬಿ, ಜಿತೇಶ್ ಜೈನ್,ದರ್ಶನ್ ಜೈನ್,ಜೀವನ್ ತಲ್ವಾರ್ ಸತೀಶ್ ಪೂಜಾರಿ ಅಶೋಕ ನಗರ,
ರಾಮ್ ಎಕ್ಕೂರು,ರಾಕೇಶ್ ಚಿಲಿಂಬಿ, ಮನೋಜ್ ಶೆಟ್ಟಿ ಚಿಲಿಂಬಿ, ರೇನಿತ್ ರಾಜ್ ,ಹರೀಶ್ ಹೊಯ್ಗೆ ಬೈಲ್
ಗಿರೀಶ್ ಬತ್ತೇರಿ,ಗೌತಮ್ ಬತ್ತೇರಿ, ಪ್ರಜ್ವಲ್ ಶೆಟ್ಟಿ ಕಾಪು,
ಸುನಿಲ್ ಶೆಟ್ಟಿ ಬಳ್ಳಾಲ್ ಭಾಗ್,ರಮೇಶ್ ಬಿಜೈ,
ಕೃಷ್ಣಪ್ಪ ನಾಯಕ್,ಗಿರಿರಾಜ್ ಕೋಟ್ಯಾನ್
ವಿಶ್ವನಾಥ್ ಭವಾನಿ, ಕಿಶೋರ್ ಬಾಬು,
ಯತೀಶ್ ಬಳ್ಳಾಲ್ ಭಾಗ್,ಕಿರಣ್ ಬಂಟ್ವಾಳ, ಕಿಶೋರ್ ಉಡುಪಿ,ರಾಜೇಶ್ ಬೆಳ್ತಂಗಡಿ,
ಅಶೋಕ ಕಾಂಚನ್(ಕ್ವಾಲಿಟಿ ಬೇಕರಿ)
ಲತೀಶ್ ವಾಮಂಜೂರ್, ಪ್ರಶಾಂತ್ ಬಜ್ಪೆ
ರೋಹಿದಾಸ್ ಕದ್ರಿ,ರಾಜೇಶ್ ಉರ್ವ,
ಮಹೇಶ್ ಅಶೋಕ ನಗರ,ಗಣೇಶ್ ಆಕಾಶ್ ಭವನ
ಪ್ರವೀಣ್ ಅಂಬು,ದಿನಿಲ್ ಅಶೋಕ ನಗರ ಉಪಸ್ಥಿತರಿದ್ದರು.


Related Posts

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »