TOP STORIES:

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್ ಬಾಗ್ ನೇತೃತ್ವದಲ್ಲಿ ಲೇಡಿಹಿಲ್ ಬ್ರಹ್ಮಶ್ರೀ ನಾರಾಯಣ ಗುರು ಸರ್ಕಲ್ ನಲ್ಲಿ ನಡೆಯಿತು.

ಮೇಜರ್ ದಾಮೋದರ್ ಸುವರ್ಣ ಯೆಯ್ಯಾಡಿ ಇವರು
ರಾಷ್ಟ್ರ ಧ್ವಜಾರೋಹಣ ಗೈದು ದೇಶದ ಸ್ವಾತಂತ್ರ್ಯ ತ್ಯಾಗ ಬಲಿದಾನದ ಮೂಲಕ ಲಭಿಸಿದೆ.ಕಾನೂನು ಪರಿಪಾಲನೆ ಜತೆಗೆ ಸ್ವಾತಂತ್ರ್ಯವನ್ನು ಜವಾಬ್ದಾರಿಯುತವಾಗಿ ಅನುಭವಿಸಬೇಕು. ದೇಶದ ಏಳಿಗೆಗಾಗಿ ಕೊಡುಗೆ ನೀಡಬೇಕೆಂದರು.

ಸಹನಾ ಕುಂದರ್ ಸೂಡಾ ಮಾತನಾಡಿ, ದೇಶದಲ್ಲಿ ನಮ್ಮ ಯುವ ಸಮೂಹಕ್ಕೆ ಸ್ವಾತಂತ್ರದ ಅರ್ಥಪೂರ್ಣ ಆಚರಣೆ ಹಾಗೂ ಮಹಿಳಾ ಸಮಾಜದ ಮೇಲೆ ನಡೆಯುತ್ತಿರುವ ಅನಾಚಾರವನ್ನು ತಡೆಗಟ್ಟಲು ಬೇಕಾದ ಸೂಕ್ತ ಮಾರ್ಗದರ್ಶನದ ಅಗತ್ಯವಿದ್ದು ಇದನ್ನು ನಾವೆಲ್ಲಾ ಪರಿಗಣಿಸಿ ಜೀವನ ನಡೆಸಬೇಕು ಎಂದರು.

ಬಿರುವೆರ್ ಕುಡ್ಲದ ಯುವಕರ ಸಮೂಹವು ಕಳೆದ ಹತ್ತು ವರ್ಷಗಳಿಂದ ಯಾವುದೇ ಜಾತಿ ಮತ ವನ್ನು ನೋಡದೆ ಬಡ ವರ್ಗಕ್ಕೆ ಆರ್ಥಕ ನೆರವು ಹಾಗೂ ಅರ್ಹ ಬಡ ಕುಟುಂಬಕ್ಕೆ ಮನೆ ಕಟ್ಟಿ ಕೊಡುತ್ತಿರುವ ಪುಣ್ಯದ ಕೆಲಸವನ್ನು ಮಾಡುತ್ತಾ ಬರುತ್ತಿದೆ. ಇದರ ಜತೆಗೆ ಬಿರುವೆರ್ ಕುಡ್ಲವು ಜನಪರ ಸಮಾಜ ಸೇವಾ ಕಾರ್ಯ ನಡೆಸುತ್ತಾ ಬರುತ್ತಿದೆ.

ಈ ಸಂಸ್ಥೆ ಅಸ್ಥಿತ್ವಕ್ಕೆ ಬಂದಾಗಿನಿಂದ ಸುಮಾರು 10 ಕೋ.ರೂಗಳಷ್ಟು ನಿಧಿಯನ್ನು ಅಶಕ್ತರ ಚಿಕಿತ್ಸೆಗೆ, ಶಿಕ್ಷಣಕ್ಕೆ, ವಿವಿಧ ಸವಲತ್ತು ವಿತರಣೆಗೆ ನೀಡಿದೆ.

ಆಂಬುಲೆನ್ಸ್ ಸೇವೆ,ಕೊರೊನಾ ಸಂದರ್ಭ ನೆರವು ಹಾಗೂ ಇದೀಗ 9ನೇ ಮನೆ ನಿರ್ಮಾಣ ಮಾಡಿ ಬಡ ವರ್ಗಕ್ಕೆ ಶೀಘ್ರ ಹಸ್ತಾಂತರ ಮಾಡಲಿದೆ.ಇದೆಲ್ಲಾ ಇತರ ಸಂಘಟನೆಗಳಿಗೆ ಮಾದರಿಯಾಗಿದೆ.

ಪ್ರಮೋದ್ ಬಳ್ಳಾಲ್ ಭಾಗ್, ಲತೀಶ್ ಪೂಜಾರಿ ಬಳ್ಳಾಲ್ ಭಾಗ್,ವಿದ್ಯಾ ರಾಕೇಶ್ ಪ್ರವೀಣ್ ಎಸ್ ಸುವರ್ಣ ಬಗಂಬಿಲ
ಧನ್ ರಾಜ್ ಪೂಜಾರಿ ಚಿಲಿಂಬಿ, ಜಿತೇಶ್ ಜೈನ್,ದರ್ಶನ್ ಜೈನ್,ಜೀವನ್ ತಲ್ವಾರ್ ಸತೀಶ್ ಪೂಜಾರಿ ಅಶೋಕ ನಗರ,
ರಾಮ್ ಎಕ್ಕೂರು,ರಾಕೇಶ್ ಚಿಲಿಂಬಿ, ಮನೋಜ್ ಶೆಟ್ಟಿ ಚಿಲಿಂಬಿ, ರೇನಿತ್ ರಾಜ್ ,ಹರೀಶ್ ಹೊಯ್ಗೆ ಬೈಲ್
ಗಿರೀಶ್ ಬತ್ತೇರಿ,ಗೌತಮ್ ಬತ್ತೇರಿ, ಪ್ರಜ್ವಲ್ ಶೆಟ್ಟಿ ಕಾಪು,
ಸುನಿಲ್ ಶೆಟ್ಟಿ ಬಳ್ಳಾಲ್ ಭಾಗ್,ರಮೇಶ್ ಬಿಜೈ,
ಕೃಷ್ಣಪ್ಪ ನಾಯಕ್,ಗಿರಿರಾಜ್ ಕೋಟ್ಯಾನ್
ವಿಶ್ವನಾಥ್ ಭವಾನಿ, ಕಿಶೋರ್ ಬಾಬು,
ಯತೀಶ್ ಬಳ್ಳಾಲ್ ಭಾಗ್,ಕಿರಣ್ ಬಂಟ್ವಾಳ, ಕಿಶೋರ್ ಉಡುಪಿ,ರಾಜೇಶ್ ಬೆಳ್ತಂಗಡಿ,
ಅಶೋಕ ಕಾಂಚನ್(ಕ್ವಾಲಿಟಿ ಬೇಕರಿ)
ಲತೀಶ್ ವಾಮಂಜೂರ್, ಪ್ರಶಾಂತ್ ಬಜ್ಪೆ
ರೋಹಿದಾಸ್ ಕದ್ರಿ,ರಾಜೇಶ್ ಉರ್ವ,
ಮಹೇಶ್ ಅಶೋಕ ನಗರ,ಗಣೇಶ್ ಆಕಾಶ್ ಭವನ
ಪ್ರವೀಣ್ ಅಂಬು,ದಿನಿಲ್ ಅಶೋಕ ನಗರ ಉಪಸ್ಥಿತರಿದ್ದರು.


Related Posts

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »

ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ


Share         ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ ಉಡುಪಿ: ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯದ ಜಾರಿ ಆದೇಶವನ್ನು ಕಾರ್ಯಗತಗೊಳಿಸುವ ನೆಪದಲ್ಲಿ ಪೊಲೀಸರು ಮಹಿಳೆಯರಿದ್ದ ಮನೆಗೆ ಬೆಳ್ಳಂ


Read More »